AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

144 ರನ್​ಗಳ ಗುರಿ: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಪ್ರಿಟೋರಿಯಸ್

Lhuan-dre Pretorius Record: ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ 20 ವರ್ಷದ ಲುಹಾನ್-ಡ್ರೆ ಪ್ರಿಟೋರಿಯಸ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಆ್ಯಡಂ ಗಿಲ್ ಕ್ರಿಸ್ಟ್​ ಅವರ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Jul 09, 2026 | 11:20 AM

Share
ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ 23ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿದ ಬ್ಯಾಟರ್​ ಸೌತ್ ಆಫ್ರಿಕಾದ ಲುಹಾನ್-ಡ್ರೆ ಪ್ರಿಟೋರಿಯಸ್. ಅದು ಕೂಡ ಅತ್ಯಲ್ಪ ಮೊತ್ತವನ್ನು ಚೇಸ್ ಮಾಡುವ ವೇಳೆ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. (PC: MLC)

ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ 23ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿದ ಬ್ಯಾಟರ್​ ಸೌತ್ ಆಫ್ರಿಕಾದ ಲುಹಾನ್-ಡ್ರೆ ಪ್ರಿಟೋರಿಯಸ್. ಅದು ಕೂಡ ಅತ್ಯಲ್ಪ ಮೊತ್ತವನ್ನು ಚೇಸ್ ಮಾಡುವ ವೇಳೆ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. (PC: MLC)

1 / 6
ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್​ ಹಾಗೂ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 143 ರನ್​ ಕಲೆಹಾಕಿತು. (PC: MLC)

ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್​ ಹಾಗೂ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 143 ರನ್​ ಕಲೆಹಾಕಿತು. (PC: MLC)

2 / 6
144 ರನ್​​ಗಳ ಸುಲಭ ಗುರಿ ಪಡೆದ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಕ್ಕೆ ಯುವ ಆರಂಭಿಕ ಬ್ಯಾಟರ್ ಲುಹಾನ್-ಡ್ರೆ ಪ್ರಿಟೋರಿಯಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಎಂಐ ನ್ಯೂಯಾರ್ಕ್​ ಬೌಲರ್​ಗಳ ಬೆಂಡೆತ್ತಿದ ಪ್ರಿಟೋರಿಯಸ್ 52 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 10 ಫೋರ್​ಗಳೊಂದಿಗೆ ಶತಕ ಪೂರೈಸಿದ್ದರು. (PC: MLC)

144 ರನ್​​ಗಳ ಸುಲಭ ಗುರಿ ಪಡೆದ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಕ್ಕೆ ಯುವ ಆರಂಭಿಕ ಬ್ಯಾಟರ್ ಲುಹಾನ್-ಡ್ರೆ ಪ್ರಿಟೋರಿಯಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಎಂಐ ನ್ಯೂಯಾರ್ಕ್​ ಬೌಲರ್​ಗಳ ಬೆಂಡೆತ್ತಿದ ಪ್ರಿಟೋರಿಯಸ್ 52 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 10 ಫೋರ್​ಗಳೊಂದಿಗೆ ಶತಕ ಪೂರೈಸಿದ್ದರು. (PC: MLC)

3 / 6
ಈ ಶತಕದೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಲ್ಪ ಮೊತ್ತ ಬೆನ್ನತ್ತುವಾಗ ಸೆಂಚುರಿ ಸಿಡಿಸಿದ ಬ್ಯಾಟರ್​ ಎಂಬ ವಿಶ್ವ ದಾಖಲೆ 20 ವರ್ಷದ ಲುಹಾನ್-ಡ್ರೆ ಪ್ರಿಟೋರಿಯಸ್ ಪಾಲಾಗಿದೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆ್ಯಡಂ ಗಿಲ್​ಕ್ರಿಸ್ಟ್ ಹೆಸರಿನಲ್ಲಿತ್ತು. (PC: MLC)

ಈ ಶತಕದೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಲ್ಪ ಮೊತ್ತ ಬೆನ್ನತ್ತುವಾಗ ಸೆಂಚುರಿ ಸಿಡಿಸಿದ ಬ್ಯಾಟರ್​ ಎಂಬ ವಿಶ್ವ ದಾಖಲೆ 20 ವರ್ಷದ ಲುಹಾನ್-ಡ್ರೆ ಪ್ರಿಟೋರಿಯಸ್ ಪಾಲಾಗಿದೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆ್ಯಡಂ ಗಿಲ್​ಕ್ರಿಸ್ಟ್ ಹೆಸರಿನಲ್ಲಿತ್ತು. (PC: MLC)

4 / 6
 2008 ರ ಐಪಿಎಲ್ ಸೀಸನ್‌ನಲ್ಲಿ ಡೆಕ್ಕನ್ ಚಾರ್ಜರ್ಸ್ ಪರ ಕಣಕ್ಕಿಳಿದಿದ್ದ ಆ್ಯಡಂ ಗಿಲ್​ಕ್ರಿಸ್ಟ್​, ಮುಂಬೈ ಇಂಡಿಯನ್ಸ್ ನೀಡಿದ್ದ 155 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟುವಾಗ ಕೇವಲ 47 ಎಸೆತಗಳಲ್ಲಿ 109* ರನ್ ಚಚ್ಚಿ ಈ ವಿಶ್ವ ದಾಖಲೆ ಬರೆದಿದ್ದರು. (PC: IPL)

 2008 ರ ಐಪಿಎಲ್ ಸೀಸನ್‌ನಲ್ಲಿ ಡೆಕ್ಕನ್ ಚಾರ್ಜರ್ಸ್ ಪರ ಕಣಕ್ಕಿಳಿದಿದ್ದ ಆ್ಯಡಂ ಗಿಲ್​ಕ್ರಿಸ್ಟ್​, ಮುಂಬೈ ಇಂಡಿಯನ್ಸ್ ನೀಡಿದ್ದ 155 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟುವಾಗ ಕೇವಲ 47 ಎಸೆತಗಳಲ್ಲಿ 109* ರನ್ ಚಚ್ಚಿ ಈ ವಿಶ್ವ ದಾಖಲೆ ಬರೆದಿದ್ದರು. (PC: IPL)

5 / 6
ಇದೀಗ ಲುಹಾನ್-ಡ್ರೆ ಪ್ರಿಟೋರಿಯಸ್ ಕೇವಲ 144 ರನ್ ಗುರಿ ಬೆನ್ನತ್ತುವಾಗ ಸೆಂಚುರಿ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪ್ರಿಟೋರಿಯಸ್ ಬರೆದ ಈ ಇತಿಹಾಸದೊಂದಿಗೆ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡವು 15.4 ಓವರ್​ಗಳಲ್ಲಿ 146 ರನ್​ ಬಾರಿಸಿ ಈ ಪಂದ್ಯದಲ್ಲಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. (PC: MLC)

ಇದೀಗ ಲುಹಾನ್-ಡ್ರೆ ಪ್ರಿಟೋರಿಯಸ್ ಕೇವಲ 144 ರನ್ ಗುರಿ ಬೆನ್ನತ್ತುವಾಗ ಸೆಂಚುರಿ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪ್ರಿಟೋರಿಯಸ್ ಬರೆದ ಈ ಇತಿಹಾಸದೊಂದಿಗೆ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡವು 15.4 ಓವರ್​ಗಳಲ್ಲಿ 146 ರನ್​ ಬಾರಿಸಿ ಈ ಪಂದ್ಯದಲ್ಲಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. (PC: MLC)

6 / 6

Published On - 11:20 am, Thu, 9 July 26

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!