Maharaja T20 Trophy: ಮಹಾರಾಜ ಟಿ20 ಲೀಗ್​ನ 6 ತಂಡಗಳು ಪ್ರಕಟ

Edited By:

Updated on: Jul 31, 2022 | 10:52 AM

Maharaja T20 Trophy: ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

1 / 10
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಆಗಸ್ಟ್ 7 ರಿಂದ ಮೈಸೂರಿನಲ್ಲಿ ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಈಗಾಗಲೇ ಈ ತಂಡಗಳನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಆಯೋಜಿಸುತ್ತಿರುವ ಹೊಸ ಟಿ20 ಲೀಗ್ ಆಗಸ್ಟ್ 7 ರಿಂದ ಮೈಸೂರಿನಲ್ಲಿ ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದ್ದು, ಈಗಾಗಲೇ ಈ ತಂಡಗಳನ್ನು ಆಯ್ಕೆ ಮಾಡಲಾಗಿದೆ.

2 / 10

ಅದರಂತೆ ಶಿವಮೊಗ್ಗ ಸ್ಟೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಯುನೈಟೆಡ್, ಬೆಂಗಳೂರು ಬ್ಲಾಸ್ಟರ್ಸ್​, ಮೈಸೂರು ವಾರಿಯರ್ಸ್ ಮತ್ತು ಗುಲ್ಬಾರ್ಗ ಮಿಸ್ಟಿಕ್ಸ್​ ತಂಡಗಳು ಮಹಾರಾಜ ಟ್ರೋಫಿಗಾಗಿ ಸೆಣಸಲಿದೆ.

3 / 10

ಈಗಾಗಲೇ ಸ್ಟಾರ್ ಆಟಗಾರರನ್ನು ಒಳಗೊಂಡ 6 ತಂಡಗಳನ್ನು ಘೋಷಿಸಲಾಗಿದ್ದು, ಪ್ರತಿ ತಂಡಗಳ ಆಟಗಾರರ ಪಟ್ಟಿ ಈ ಕೆಳಗಿನಂತಿವೆ.

4 / 10

ಬೆಂಗಳೂರು ಬ್ಲಾಸ್ಟರ್ಸ್: ಮಯಾಂಕ್ ಅಗರ್ವಾಲ್, ಜಗದೀಶ್ ಸುಚಿತ್, ರೋನಿತ್ ಮೋರೆ, ಅನಿರುಧಾ ಜೋಶಿ, ಪ್ರದೀಪ್ ಟಿ, ಕ್ರಾಂತಿ ಕುಮಾರ್, ಚೇತನ್ ಎಲ್‌ಆರ್, ಅನೀಶ್ ಕೆವಿ, ಸೀನ್ ಇಶಾನ್ ಜೋಸೆಫ್, ಕುಹುಶ್ ಮರಾಠೆ, ತನಯ್ ವಾಲ್ಮಿಕ್, ಕುಮಾರ್ ಎಲ್‌ಆರ್, ರಕ್ಷಿತ್ ಎಸ್, ರಿಷಿ ಬೋಪಣ್ಣ, ಸಂತೋಕ್ ಸಿಂಗ್, ಸೂರಜ್ ಅಹುಜಾ, ಪಾರಸ್ ಗುರ್ಬಕ್ಸ್ ಆರ್ಯ, ಲೋಚನ್ ಎಸ್ ಗೌಡ

5 / 10

ಗುಲ್ಬರ್ಗ ಮಿಸ್ಟಿಕ್ಸ್: ಮನೀಶ್ ಪಾಂಡೆ, ದೇವದತ್ ಪಡಿಕ್ಕಲ್, ಸಿಎ ಕಾರ್ತಿಕ್, ಮನೋಜ್ ಭಾಂಡ್ಗೆ, ಶ್ರೀಜಿತ್ ಕೆಎಲ್, ಮೋಹಿತ್ ಬಿಎ, ರೋಹನ್ ಪಾಟೀಲ್, ಧನಿಶ್ ಗೌಡ, ಮೊಹಮ್ಮದ್ ಅಕಿಬ್ ಜಾವೇದ್, ಶ್ರೀಶ ಆಚಾರ್, ಜೇಶ್ವಂತ್ ಆಚಾರ್ಯ, ಆರೋನ್ ಕ್ರಿಸ್ಟಿ, ವಿ ಕಾವೇರಪ್ಪ, ಕೃತಿಕ್ ಕೃಷ್ಣ, ಅಭಿಲಾಷ್ ಶೆಟ್ಟಿ, ಕುಶಾಲ್ ವಾಧ್ವಾನಿ, ಪ್ರಣವ್ ಭಾಟಿಯಾ

6 / 10

ಮಂಗಳೂರು ಯುನೈಟೆಡ್: ಅಭಿನವ್ ಮನೋಹರ್, ರವಿಕುಮಾರ್ ಸಮರ್ಥ್, ವೈಶಾಖ್ ವಿಜಯ್ ಕುಮಾರ್, ಅಮಿತ್ ವರ್ಮಾ, ಎಂ ವೆಂಕಟೇಶ್, ಅನೀಶ್ವರ್ ಗೌತಮ್, ಶಿವಕುಮಾರ್ ಕೆ, ನಿಕಿನ್ ಜೋಸ್, ರಘುವೀರ್ ಪಾವಲೂರ್, ಅಮೋಘ್ ಎಸ್, ಚಿನ್ಮಯ್ ಎನ್‌ಎ, ಆದಿತ್ಯ ಸೋಮಣ್ಣ, ಯಶವರ್ಧನ್, ಧೀರಜ್ ಗೌಡ, ಸುಜಯ್ ಸತ್ಯಹರಿ, ರೋಹಿತ್ ಕುಮಾರ್ ಎಸಿ, ಮ್ಯಾಕ್ನೀಲ್ ನೊರೊನ್ಹಾ, ಎಚ್‌ಎಸ್ ಶರತ್

7 / 10

ಹುಬ್ಬಳ್ಳಿ ಟೈಗರ್ಸ್: ಅಭಿಮನ್ಯು ಮಿಥುನ್, ಲವ್​ನೀತ್ ಸಿಸೋಡಿಯಾ, ವಿ ಕೌಶಿಕ್, ಲಿಯಾನ್ ಖಾನ್, ನವೀನ್ ಎಂಜಿ, ಆನಂದ್, ಸಾಗರ್ ಸೋಲಂಕಿ, ಗೌತಮ್ ಸಾಗರ್, ರೋಷನ್ ಎ, ರಾಹುಲ್ ಸಿಂಗ್ ರಾವತ್, ಶಿಶಿರ್ ಭಾವನೆ, ಶರಣ್ ಗೌಡ, ಶಿವಕುಮಾರ್ ಬಿಯು, ತುಷಾರ್ ಸಿಂಗ್, ಆಕ್ಷಣ್ ರಾವ್, ಜಹೂರ್ ಫಾರೂಕಿ, ರೋಹನ್ ನವೀನ್, ಸೌರಭ್ ಶ್ರೀವಾಸ್ತವ

8 / 10

ಮೈಸೂರು ವಾರಿಯರ್ಸ್: ಕರುಣ್ ನಾಯರ್, ಶ್ರೇಯಸ್ ಗೋಪಾಲ್, ಶುಭಾಂಗ್ ಹೆಗಡೆ, ಪವನ್ ದೇಶಪಾಂಡೆ, ವಿದ್ಯಾಧರ್ ಪಾಟೀಲ್, ನಿಹಾಲ್ ಉಳ್ಳಾಲ್, ಪ್ರತೀಕ್ ಜೈನ್, ವರುಣ್ ರಾವ್, ರಾಹುಲ್ ಪ್ರಸನ್ನ, ನಿತಿನ್ ಭಿಲ್ಲೆ, ಆದಿತ್ಯ ಗೋಯಲ್, ಅಭಿಷೇಕ್ ಅಹ್ಲಾವತ್, ಲೋಚನ್ ಅಪ್ಪಣ್ಣ, ಚಿರಂಜೀವಿ, ನಾಗ ಭರತ್, ಭರತ್ ದೂರಿ, ಶಿವರಾಜ್ ಎಸ್, ಮೋನಿಶ್ ರೆಡ್ಡಿ

9 / 10

ಶಿವಮೊಗ್ಗ ಸ್ಟ್ರೈಕರ್ಸ್: ಕೃಷ್ಣಪ್ಪ ಗೌತಮ್, ಕೆಸಿ ಕಾರ್ಯಪ್ಪ, ರೋಹನ್ ಕದಮ್, ಕೆವಿ ಸಿದ್ಧಾರ್ಥ, ದರ್ಶನ್ ಎಂಬಿ, ಶರತ್ ಬಿಆರ್, ರಣವೀರ್ ವಾಧ್ವಾ, ರಾಜೇಂದ್ರ ಡಂಗನವರ್, ಉತ್ತಮ್ ಅಯ್ಯಪ್ಪ, ಚೈತನ್ಯ ಎಸ್, ಶ್ರೇಯಸ್ ಬಿಎಂ, ಕೆಎಸ್ ದೇವಯ್ಯ, ವಿನಯ್ ಸಾಗರ್, ಶ್ರೇಯಸ್ ಎಸ್​ಪಿ, ಪುನಿತ್ ಎಸ್, ಸ್ಟಾಲಿನ್ ಹೂವರ್, ಅವಿನಾಶ್ ಡಿ, ಸ್ಮರಣ್ ಆರ್

10 / 10

ಹೊಸ ಲೀಗ್​ಗೆ ಮೈಸೂರಿನ ಮಹಾರಾಜ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸ್ಮರಣಾರ್ಥ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್‌ ಟೂರ್ನಿ ಎಂದು ಹೆಸರಿಡಲಾಗಿದೆ. ಈ ಟೂರ್ನಿಯು ಆಗಸ್ಟ್‌ 7 ರಿಂದ ಶುರುವಾಗಲಿದ್ದು, ಆಗಸ್ಟ್‌ 26ರ ವರೆಗೆ ನಡೆಯಲಿದೆ. ಮೊದಲ ಲೆಗ್ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ ಒಟ್ಟು 16 ಪಂದ್ಯಗಳು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

Published On - 10:52 am, Sun, 31 July 22

Loading...
Unable to load recommendations.
Follow Us