AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy: ಲೀಗ್ ಹಂತ ಮುಕ್ತಾಯ; ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ ಮೈಸೂರು

Maharaja T20 Trophy: ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟಿ20 ಟ್ರೋಫಿಯ ಲೀಗ್ ಹಂತ ಆಗಸ್ಟ್ 25ರಂದು ಮುಕ್ತಾಯಗೊಂಡಿದೆ. ಹುಬ್ಬಳ್ಳಿ ಟೈಗರ್ಸ್ 14 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಮಂಗಳೂರು ಡ್ರಾಗನ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ಪ್ಲೇ ಆಫ್ ತಲುಪಿವೆ. ಬೆಂಗಳೂರು ಬ್ಲಾಸ್ಟರ್ಸ್ ಕೂಡ ಪ್ಲೇ ಆಫ್​ಗೆ ಅರ್ಹತೆ ಪಡೆದಿದೆ. ಮೈಸೂರು ವಾರಿಯರ್ಸ್ ಮತ್ತು ಶಿವಮೊಗ್ಗ ಲಯನ್ಸ್ ಲೀಗ್ ಹಂತದಿಂದ ಹೊರಬಿದ್ದಿವೆ.

ಪೃಥ್ವಿಶಂಕರ
|

Updated on: Aug 25, 2025 | 10:04 PM

Share
ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಾರಾಜ ಟಿ20 ಟ್ರೋಫಿಯ ಲೀಗ್ ಹಂತ ಮುಕ್ತಾಯವಾಗಿದೆ. ಆಗಸ್ಟ್ 11 ರಿಂದ ಆರಂಭವಾಗಿದ್ದ ಈ ಟೂರ್ನಿಯ ಲೀಗ್ ಹಂತ ಇಂದು ಅಂದರೆ ಆಗಸ್ಟ್ 25 ರಂದು ಅಂತ್ಯಗೊಂಡಿದೆ. ಇದರೊಂದಿಗೆ ನಾಲ್ಕು ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆದರೆ, ಉಳಿದೆರಡು ತಂಡಗಳು ಲೀಗ್​ನಿಂದ ಹೊರಬಿದ್ದಿವೆ. ಇದರಲ್ಲಿ ಹಾಲಿ ಚಾಂಪಿಯನ್ ಮೈಸೂರು ಕೂಡ ಒಂದಾಗಿದೆ.

ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಾರಾಜ ಟಿ20 ಟ್ರೋಫಿಯ ಲೀಗ್ ಹಂತ ಮುಕ್ತಾಯವಾಗಿದೆ. ಆಗಸ್ಟ್ 11 ರಿಂದ ಆರಂಭವಾಗಿದ್ದ ಈ ಟೂರ್ನಿಯ ಲೀಗ್ ಹಂತ ಇಂದು ಅಂದರೆ ಆಗಸ್ಟ್ 25 ರಂದು ಅಂತ್ಯಗೊಂಡಿದೆ. ಇದರೊಂದಿಗೆ ನಾಲ್ಕು ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆದರೆ, ಉಳಿದೆರಡು ತಂಡಗಳು ಲೀಗ್​ನಿಂದ ಹೊರಬಿದ್ದಿವೆ. ಇದರಲ್ಲಿ ಹಾಲಿ ಚಾಂಪಿಯನ್ ಮೈಸೂರು ಕೂಡ ಒಂದಾಗಿದೆ.

1 / 7
ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಹುಬ್ಬಳ್ಳಿ ಟೈಗರ್ಸ್​ ತಂಡ ಆಡಿದ 10 ಪಂದ್ಯಗಳಲ್ಲಿ 7 ರಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋತು 14 ಅಂಕಗಳೊಂದಿಗೆ ಪ್ಲೇ ಆಫ್​ಗೆ ಅರ್ಹತೆ ಪಡೆದುಕೊಂಡಿದೆ.

ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಹುಬ್ಬಳ್ಳಿ ಟೈಗರ್ಸ್​ ತಂಡ ಆಡಿದ 10 ಪಂದ್ಯಗಳಲ್ಲಿ 7 ರಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋತು 14 ಅಂಕಗಳೊಂದಿಗೆ ಪ್ಲೇ ಆಫ್​ಗೆ ಅರ್ಹತೆ ಪಡೆದುಕೊಂಡಿದೆ.

2 / 7
ಎರಡನೇ ಸ್ಥಾನದಲ್ಲಿರುವ ಮಂಗಳೂರು ಡ್ರಾಗನ್ಸ್ ತಂಡ ಲೀಗ್ ಹಂತದ ಕೊನೆಯ ಪಂದ್ಯವನ್ನಾಡುತ್ತಿದ್ದು, ಈ ಪಂದ್ಯವನ್ನು ಸೋತರೂ ಪ್ಲೇ ಆಫ್​ಗೇರಲಿದೆ. ಪ್ರಸ್ತುತ ತಂಡ ಆಡಿದ 9 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು, 2 ರಲ್ಲಿ ಸೋತಿದ್ದು, 13 ಅಂಕ ಪಡೆದುಕೊಂಡಿದೆ.

ಎರಡನೇ ಸ್ಥಾನದಲ್ಲಿರುವ ಮಂಗಳೂರು ಡ್ರಾಗನ್ಸ್ ತಂಡ ಲೀಗ್ ಹಂತದ ಕೊನೆಯ ಪಂದ್ಯವನ್ನಾಡುತ್ತಿದ್ದು, ಈ ಪಂದ್ಯವನ್ನು ಸೋತರೂ ಪ್ಲೇ ಆಫ್​ಗೇರಲಿದೆ. ಪ್ರಸ್ತುತ ತಂಡ ಆಡಿದ 9 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು, 2 ರಲ್ಲಿ ಸೋತಿದ್ದು, 13 ಅಂಕ ಪಡೆದುಕೊಂಡಿದೆ.

3 / 7
ಮೂರನೇ ಸ್ಥಾನದಲ್ಲಿರುವ ಗುಲ್ಬರ್ಗಾ ಮಿಸ್ಟಿಕ್ಸ್ ಕೂಡ ಲೀಗ್ ಹಂತದ ಕೊನೆಯ ಪಂದ್ಯವನ್ನಾಡುತ್ತಿದ್ದು, ಈ ಪಂದ್ಯವನ್ನು ಸೋತರೂ ಪ್ಲೇ ಆಫ್​ಗೇರಲಿದೆ. ಪ್ರಸ್ತುತ ತಂಡ ಆಡಿದ 9 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು, 3 ರಲ್ಲಿ ಸೋತಿದ್ದು, 12 ಅಂಕ ಪಡೆದುಕೊಂಡಿದೆ.

ಮೂರನೇ ಸ್ಥಾನದಲ್ಲಿರುವ ಗುಲ್ಬರ್ಗಾ ಮಿಸ್ಟಿಕ್ಸ್ ಕೂಡ ಲೀಗ್ ಹಂತದ ಕೊನೆಯ ಪಂದ್ಯವನ್ನಾಡುತ್ತಿದ್ದು, ಈ ಪಂದ್ಯವನ್ನು ಸೋತರೂ ಪ್ಲೇ ಆಫ್​ಗೇರಲಿದೆ. ಪ್ರಸ್ತುತ ತಂಡ ಆಡಿದ 9 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು, 3 ರಲ್ಲಿ ಸೋತಿದ್ದು, 12 ಅಂಕ ಪಡೆದುಕೊಂಡಿದೆ.

4 / 7
ನಾಲ್ಕನೇ ಹಾಗೂ ಕೊನೆಯ ತಂಡವಾಗಿ ಪ್ಲೇಆಫ್​ಗೇರಿರುವ ಬೆಂಗಳೂರು ಬ್ಲಾಸ್ಟರ್ಸ್​ ತಂಡ ಆಡಿದ 10 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದಿದ್ದು, ಉಳಿದ 5 ಪಂದ್ಯಗಳಲ್ಲಿ ಸೋಲುಕಂಡಿದೆ. ಇದರೊಂದಿಗೆ 10 ಅಂಕ ಪಡೆದುಕೊಂಡಿದೆ.

ನಾಲ್ಕನೇ ಹಾಗೂ ಕೊನೆಯ ತಂಡವಾಗಿ ಪ್ಲೇಆಫ್​ಗೇರಿರುವ ಬೆಂಗಳೂರು ಬ್ಲಾಸ್ಟರ್ಸ್​ ತಂಡ ಆಡಿದ 10 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದಿದ್ದು, ಉಳಿದ 5 ಪಂದ್ಯಗಳಲ್ಲಿ ಸೋಲುಕಂಡಿದೆ. ಇದರೊಂದಿಗೆ 10 ಅಂಕ ಪಡೆದುಕೊಂಡಿದೆ.

5 / 7
ಕಳೆದ ಬಾರಿಯ ಚಾಂಪಿಯನ್ ಮೈಸೂರು ವಾರಿಯರ್ಸ್​ ಮೇಲೆ ಈ ಬಾರಿ ಸಾಕಷ್ಟು ನಿರೀಕ್ಷೆಗಳಿದ್ದವು. ಅದರಂತೆ ತಂಡದಲ್ಲಿ ಸಾಕಷ್ಟು ಬಲಿಷ್ಠ ಆಟಗಾರರಿದ್ದರು. ಆದಾಗ್ಯೂ ಕರುಣ್ ನಾಯರ್ ಅನುಪಸ್ಥಿತಿಯಲ್ಲಿ ಮೈಸೂರು ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿದ 10 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆದ್ದು 6 ಅಂಕ ಕಲೆಹಾಕಿತು.

ಕಳೆದ ಬಾರಿಯ ಚಾಂಪಿಯನ್ ಮೈಸೂರು ವಾರಿಯರ್ಸ್​ ಮೇಲೆ ಈ ಬಾರಿ ಸಾಕಷ್ಟು ನಿರೀಕ್ಷೆಗಳಿದ್ದವು. ಅದರಂತೆ ತಂಡದಲ್ಲಿ ಸಾಕಷ್ಟು ಬಲಿಷ್ಠ ಆಟಗಾರರಿದ್ದರು. ಆದಾಗ್ಯೂ ಕರುಣ್ ನಾಯರ್ ಅನುಪಸ್ಥಿತಿಯಲ್ಲಿ ಮೈಸೂರು ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿದ 10 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆದ್ದು 6 ಅಂಕ ಕಲೆಹಾಕಿತು.

6 / 7
ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಶಿವಮೊಗ್ಗ ಲಯನ್ಸ್ ತಂಡವು ಕಳೆದ ಬಾರಿಯಂತೆ ಈ ಬಾರಿಯೂ ಕಳಪೆ ಪ್ರದರ್ಶನ ನೀಡಿದ್ದು, ಆಡಿದ 10 ಪಂದ್ಯಗಳಲ್ಲಿ ಕೇವಲ 1 ಪಂದ್ಯವನ್ನು ಗೆದ್ದು, ಉಳಿದ 8 ಪಂದ್ಯಗಳಲ್ಲಿ ಹೀನಾಯವಾಗಿ ಸೋತಿತು. ಏಕೈಕ ಪಂದ್ಯ ಮಾತ್ರ ಮಳೆಯಿಂದ ರದ್ದಾಗಿತ್ತು.

ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಶಿವಮೊಗ್ಗ ಲಯನ್ಸ್ ತಂಡವು ಕಳೆದ ಬಾರಿಯಂತೆ ಈ ಬಾರಿಯೂ ಕಳಪೆ ಪ್ರದರ್ಶನ ನೀಡಿದ್ದು, ಆಡಿದ 10 ಪಂದ್ಯಗಳಲ್ಲಿ ಕೇವಲ 1 ಪಂದ್ಯವನ್ನು ಗೆದ್ದು, ಉಳಿದ 8 ಪಂದ್ಯಗಳಲ್ಲಿ ಹೀನಾಯವಾಗಿ ಸೋತಿತು. ಏಕೈಕ ಪಂದ್ಯ ಮಾತ್ರ ಮಳೆಯಿಂದ ರದ್ದಾಗಿತ್ತು.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ