AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಭರ್ಜರಿ ಸಿಕ್ಸ್, 13 ಫೋರ್: ದಾಖಲೆಯ ಸೆಂಚುರಿ ಸಿಡಿಸಿದ ಕರುಣ್ ನಾಯರ್

Maharaja Trophy 2024: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೈಸೂರು ವಾರಿಯರ್ಸ್ ತಂಡವು ಕರುಣ್ ನಾಯರ್ ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. ದ್ವಿತೀಯ ಇನಿಂಗ್ಸ್​ ವೇಳೆ ಮಳೆ ಬಂದಿದ್ದರಿಂದ ಮಂಗಳೂರು ಡ್ರಾಗನ್ಸ್ ತಂಡಕ್ಕೆ 14 ಓವರ್​ಗಳಲ್ಲಿ 166 ರನ್​ಗಳ ಗುರಿ ನೀಡಲಾಗಿತ್ತು. ಈ ಗುರಿಯನ್ನು ಬೆನತ್ತಿದ ಮಂಗಳೂರು ಡ್ರಾಗನ್ಸ್ ತಂಡವು 138 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Aug 20, 2024 | 7:32 AM

Share
ಮಹಾರಾಜ ಟ್ರೋಫಿ ಟಿ20 ಟೂರ್ನಿಯ 10ನೇ ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಕರುಣ್ ನಾಯರ್ ಹೊಸ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಡ್ರಾಗನ್ಸ್ ತಂಡವು ಮೈಸೂರು ವಾರಿಯರ್ಸ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

ಮಹಾರಾಜ ಟ್ರೋಫಿ ಟಿ20 ಟೂರ್ನಿಯ 10ನೇ ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಕರುಣ್ ನಾಯರ್ ಹೊಸ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಡ್ರಾಗನ್ಸ್ ತಂಡವು ಮೈಸೂರು ವಾರಿಯರ್ಸ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಮೈಸೂರು ವಾರಿಯರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಓಪನರ್​ಗಳಾದ ಅಜಿತ್ ಕಾರ್ತಿಕ್ (11) ಹಾಗೂ ಎಸ್​ಯು ಕಾರ್ತಿಕ್ (23) ಬೇಗನೆ ವಿಕೆಟ್ ಒಪ್ಪಿಸಿದರು. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಕರುಣ್ ನಾಯರ್ ಭರ್ಜರಿ ಬ್ಯಾಟಿಂಗ್ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಮೈಸೂರು ವಾರಿಯರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಓಪನರ್​ಗಳಾದ ಅಜಿತ್ ಕಾರ್ತಿಕ್ (11) ಹಾಗೂ ಎಸ್​ಯು ಕಾರ್ತಿಕ್ (23) ಬೇಗನೆ ವಿಕೆಟ್ ಒಪ್ಪಿಸಿದರು. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಕರುಣ್ ನಾಯರ್ ಭರ್ಜರಿ ಬ್ಯಾಟಿಂಗ್ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

2 / 5
ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ ಕರುಣ್ ನಾಯರ್ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇನ್ನು ಅರ್ಧಶತಕ ಬಳಿಕ ಆರ್ಭಟ ಮುಂದುವರೆಸಿದ ಕರುಣ್ ಮಂಗಳೂರು ಡ್ರಾಗನ್ಸ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 43 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದೊಂದಿಗೆ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಕರುಣ್ ನಾಯರ್ ತಮ್ಮದಾಗಿಸಿಕೊಂಡರು.

ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ ಕರುಣ್ ನಾಯರ್ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇನ್ನು ಅರ್ಧಶತಕ ಬಳಿಕ ಆರ್ಭಟ ಮುಂದುವರೆಸಿದ ಕರುಣ್ ಮಂಗಳೂರು ಡ್ರಾಗನ್ಸ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 43 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದೊಂದಿಗೆ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಕರುಣ್ ನಾಯರ್ ತಮ್ಮದಾಗಿಸಿಕೊಂಡರು.

3 / 5
ಇದಕ್ಕೂ ಮುನ್ನ ಈ ದಾಖಲೆ ರೋಹನ್ ಪಾಟೀಲ್ ಹೆಸರಿನಲ್ಲಿತ್ತು. 2022ರ ಮಹಾರಾಜ ಟ್ರೋಫಿಯಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ರೋಹನ್ ಕೇವಲ 47 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 112 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಈ ದಾಖಲೆ ರೋಹನ್ ಪಾಟೀಲ್ ಹೆಸರಿನಲ್ಲಿತ್ತು. 2022ರ ಮಹಾರಾಜ ಟ್ರೋಫಿಯಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ರೋಹನ್ ಕೇವಲ 47 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 112 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಮಂಗಳೂರು ಡ್ರಾಗನ್ಸ್ ವಿರುದ್ಧದ ಪಂದ್ಯದಲ್ಲಿ 48 ಎಸೆತಗಳನ್ನು ಎದುರಿಸಿದ ಕರುಣ್ ನಾಯರ್ 9 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ ಅಜೇಯ 124 ರನ್​ ಚಚ್ಚಿದ್ದಾರೆ. ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಬ್ಯಾಟರ್​ ಎಂಬ ದಾಖಲೆಯನ್ನು ಕರುಣ್ ನಾಯರ್ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಮಂಗಳೂರು ಡ್ರಾಗನ್ಸ್ ವಿರುದ್ಧದ ಪಂದ್ಯದಲ್ಲಿ 48 ಎಸೆತಗಳನ್ನು ಎದುರಿಸಿದ ಕರುಣ್ ನಾಯರ್ 9 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ ಅಜೇಯ 124 ರನ್​ ಚಚ್ಚಿದ್ದಾರೆ. ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಬ್ಯಾಟರ್​ ಎಂಬ ದಾಖಲೆಯನ್ನು ಕರುಣ್ ನಾಯರ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ