AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಮಹಾರಾಜ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದ 3 ತಂಡಗಳು

Maharaja Trophy Winners List: ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸುತ್ತಿರುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಮೂರನೇ ಚಾಂಪಿಯನ್ ಆಗಿ ಮೈಸೂರು ವಾರಿಯರ್ಸ್ ತಂಡ ಹೊರಹೊಮ್ಮಿದೆ. ಇದಕ್ಕೂ ಮುನ್ನ ಮಹಾರಾಜ ಟ್ರೋಫಿಯನ್ನು ಎತ್ತಿ ಹಿಡಿದ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: Sep 02, 2024 | 10:16 AM

Share
ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಮೂರನೇ ಸೀಸನ್​ ಮುಕ್ತಾಯಗೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಮಣಿಸಿ ಮೈಸೂರು ವಾರಿಯರ್ಸ್ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು.

ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಮೂರನೇ ಸೀಸನ್​ ಮುಕ್ತಾಯಗೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಮಣಿಸಿ ಮೈಸೂರು ವಾರಿಯರ್ಸ್ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಮೈಸೂರು ವಾರಿಯರ್ಸ್ ಪರ ಆರಂಭಿಕ ಆಟಗಾರ ಎಸ್​ಯು ಕಾರ್ತಿಕ್ 44 ಎಸೆತಗಳಲ್ಲಿ 71 ರನ್ ಸಿಡಿಸಿದರೆ, ನಾಯಕ ಕರುಣ್ ನಾಯರ್ 45 ಎಸೆತಗಳಲ್ಲಿ 66 ರನ್ ಬಾರಿಸಿದರು. ಇನ್ನು ಮನೋಜ್ ಭಾಂಡಗೆ 13 ಎಸೆತಗಳಲ್ಲಿ 44 ರನ್ ಚಚ್ಚಿದ್ದರು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ  4 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ತಂಡವು 20 ಓವರ್​ಗಳಲ್ಲಿ 168 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 45 ರನ್​ಗಳ ಜಯ ಸಾಧಿಸಿದೆ.

ಅದರಂತೆ ಇನಿಂಗ್ಸ್ ಆರಂಭಿಸಿದ ಮೈಸೂರು ವಾರಿಯರ್ಸ್ ಪರ ಆರಂಭಿಕ ಆಟಗಾರ ಎಸ್​ಯು ಕಾರ್ತಿಕ್ 44 ಎಸೆತಗಳಲ್ಲಿ 71 ರನ್ ಸಿಡಿಸಿದರೆ, ನಾಯಕ ಕರುಣ್ ನಾಯರ್ 45 ಎಸೆತಗಳಲ್ಲಿ 66 ರನ್ ಬಾರಿಸಿದರು. ಇನ್ನು ಮನೋಜ್ ಭಾಂಡಗೆ 13 ಎಸೆತಗಳಲ್ಲಿ 44 ರನ್ ಚಚ್ಚಿದ್ದರು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ತಂಡವು 20 ಓವರ್​ಗಳಲ್ಲಿ 168 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 45 ರನ್​ಗಳ ಜಯ ಸಾಧಿಸಿದೆ.

2 / 6
ವಿಶೇಷ ಎಂದರೆ ಮಹಾರಾಜ ಟ್ರೋಫಿ ಟೂರ್ನಿಯ ಮೂರು ಸೀಸನ್​ಗಳಲ್ಲೂ ಮೂರು ತಂಡಗಳು ಚಾಂಪಿಯನ್ ಪಟ್ಟಕ್ಕೇರಿದೆ. ಆ ತಂಡಗಳಾವುವು? ಫೈನಲ್​ನಲ್ಲಿ ಗೆದ್ದ ತಂಡ ಯಾವುದು? ಸೋತವರು ಯಾರು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ವಿಶೇಷ ಎಂದರೆ ಮಹಾರಾಜ ಟ್ರೋಫಿ ಟೂರ್ನಿಯ ಮೂರು ಸೀಸನ್​ಗಳಲ್ಲೂ ಮೂರು ತಂಡಗಳು ಚಾಂಪಿಯನ್ ಪಟ್ಟಕ್ಕೇರಿದೆ. ಆ ತಂಡಗಳಾವುವು? ಫೈನಲ್​ನಲ್ಲಿ ಗೆದ್ದ ತಂಡ ಯಾವುದು? ಸೋತವರು ಯಾರು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

3 / 6
ಗುಲ್ಬರ್ಗ ಮಿಸ್ಟಿಕ್ಸ್ ಚಾಂಪಿಯನ್ಸ್​: 2022ರಲ್ಲಿ ನಡೆದ ಚೊಚ್ಚಲ ಮಹಾರಾಜ ಟ್ರೋಫಿ ಫೈನಲ್ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ 209 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಮನೀಶ್ ಪಾಂಡೆ ನಾಯಕತ್ವದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಚೊಚ್ಚಲ ಮಹಾರಾಜ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.

ಗುಲ್ಬರ್ಗ ಮಿಸ್ಟಿಕ್ಸ್ ಚಾಂಪಿಯನ್ಸ್​: 2022ರಲ್ಲಿ ನಡೆದ ಚೊಚ್ಚಲ ಮಹಾರಾಜ ಟ್ರೋಫಿ ಫೈನಲ್ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ 209 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಮನೀಶ್ ಪಾಂಡೆ ನಾಯಕತ್ವದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಚೊಚ್ಚಲ ಮಹಾರಾಜ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.

4 / 6
ಹುಬ್ಬಳ್ಳಿ ಟೈಗರ್ಸ್​ ಚಾಂಪಿಯನ್ಸ್; 2023ರ ಮಹಾರಾಜ ಟ್ರೋಫಿ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮೈಸೂರು ವಾರಿಯರ್ಸ್ 20 ಓವರ್​ಗಳಲ್ಲಿ 195 ರನ್​ಗಳಿಸಿ 8 ರನ್​ಗಳಿಂದ ಸೋಲೊಪ್ಪಿಕೊಂಡಿತು. ವಿಶೇಷ ಎಂದರೆ 2023 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಮನೀಶ್ ಪಾಂಡೆ ಮುನ್ನಡೆಸಿದ್ದರು.

ಹುಬ್ಬಳ್ಳಿ ಟೈಗರ್ಸ್​ ಚಾಂಪಿಯನ್ಸ್; 2023ರ ಮಹಾರಾಜ ಟ್ರೋಫಿ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮೈಸೂರು ವಾರಿಯರ್ಸ್ 20 ಓವರ್​ಗಳಲ್ಲಿ 195 ರನ್​ಗಳಿಸಿ 8 ರನ್​ಗಳಿಂದ ಸೋಲೊಪ್ಪಿಕೊಂಡಿತು. ವಿಶೇಷ ಎಂದರೆ 2023 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಮನೀಶ್ ಪಾಂಡೆ ಮುನ್ನಡೆಸಿದ್ದರು.

5 / 6
ಮೈಸೂರು ವಾರಿಯರ್ಸ್ ಚಾಂಪಿಯನ್ಸ್​: 2024ರ ಮಹಾರಾಜ ಟ್ರೋಫಿ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಸೋಲಿಸಿ ಮೈಸೂರು ವಾರಿಯರ್ಸ್​ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ 207 ರನ್​ ಕಲೆಹಾಕಿದರೆ, ಬೆಂಗಳೂರು ಬ್ಲಾಸ್ಟರ್ಸ್ 162 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮೈಸೂರು ವಾರಿಯರ್ಸ್ 45 ರನ್​ಗಳ ಜಯ ಸಾಧಿಸಿ ಮಹಾರಾಜ ಟ್ರೋಫಿಯ ಮಹಾರಾಜ ಎನಿಸಿಕೊಂಡಿದೆ.

ಮೈಸೂರು ವಾರಿಯರ್ಸ್ ಚಾಂಪಿಯನ್ಸ್​: 2024ರ ಮಹಾರಾಜ ಟ್ರೋಫಿ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಸೋಲಿಸಿ ಮೈಸೂರು ವಾರಿಯರ್ಸ್​ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ 207 ರನ್​ ಕಲೆಹಾಕಿದರೆ, ಬೆಂಗಳೂರು ಬ್ಲಾಸ್ಟರ್ಸ್ 162 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮೈಸೂರು ವಾರಿಯರ್ಸ್ 45 ರನ್​ಗಳ ಜಯ ಸಾಧಿಸಿ ಮಹಾರಾಜ ಟ್ರೋಫಿಯ ಮಹಾರಾಜ ಎನಿಸಿಕೊಂಡಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ