AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಗ್ಲರ ನಾಡಲ್ಲಿ ಸ್ಪಿನ್ ಮೋಡಿ ಮುಂದುವರೆಸಿದ ಮಾನವ್ ಸುತಾರ್

ಮಾನವ್ ಸುತಾರ್ ಭಾರತ ಟೆಸ್ಟ್ ತಂಡದಲ್ಲಿ ಮಿಂಚುತ್ತಿದ್ದಾರೆ. ಈಗ ಇಂಗ್ಲೆಂಡ್ ಕೌಂಟಿ ಕ್ರಿಕೆಟ್‌ನಲ್ಲಿ ವಾರ್ವಿಕ್‌ಷೈರ್ ಪರ ಆಡುತ್ತಾ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಹ್ಯಾಂಪ್‌ಶೈರ್ ವಿರುದ್ಧ 3 ವಿಕೆಟ್ ಪಡೆದು ಬೌಲಿಂಗ್‌ ವೈಭವ ಮೆರೆದಿದ್ದು, ವೇಗದ ಬೌಲರ್‌ಗಳಿಗೆ ಅನುಕೂಲಕರ ಪರಿಸ್ಥಿತಿಯಲ್ಲೂ ಸ್ಥಿರವಾಗಿ ವಿಕೆಟ್ ಕಬಳಿಸುತ್ತಿದ್ದಾರೆ. ಇವರ ಬಹುಮುಖ ಪ್ರತಿಭೆ ಭಾರತೀಯ ಕ್ರಿಕೆಟ್‌ಗೆ ಆಶಾಕಿರಣ.

ಪೃಥ್ವಿಶಂಕರ
|

Updated on: Sep 04, 2026 | 7:44 PM

Share
ಯುವ ಸ್ಪಿನ್ನರ್ ಮಾನವ್ ಸುತಾರ್ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಪಡೆದ ಕೆಲವೇ ದಿನಗಳಲ್ಲಿ ತನ್ನ ಪ್ರತಿಭೆಯ ಮೂಲಕ ತಂಡದಲ್ಲಿ ಖಾಯಂ ಸ್ಥಾನ ಹುಡುಕಿಕೊಂಡಿದ್ದಾರೆ. ಕಳೆದ ಮೂರು ತಿಂಗಳುಗಳಲ್ಲಿ ಕೇವಲ ಮೂರು ಟೆಸ್ಟ್ ಪಂದ್ಯಗಳಲ್ಲಿ, ಸುತಾರ್ ಎಷ್ಟು ಅದ್ಭುತ ಪ್ರದರ್ಶನ ನೀಡಿದ್ದಾರೆ ಎಂದರೆ ಅವರನ್ನು ತಂಡದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ(PC-PTI).

ಯುವ ಸ್ಪಿನ್ನರ್ ಮಾನವ್ ಸುತಾರ್ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಪಡೆದ ಕೆಲವೇ ದಿನಗಳಲ್ಲಿ ತನ್ನ ಪ್ರತಿಭೆಯ ಮೂಲಕ ತಂಡದಲ್ಲಿ ಖಾಯಂ ಸ್ಥಾನ ಹುಡುಕಿಕೊಂಡಿದ್ದಾರೆ. ಕಳೆದ ಮೂರು ತಿಂಗಳುಗಳಲ್ಲಿ ಕೇವಲ ಮೂರು ಟೆಸ್ಟ್ ಪಂದ್ಯಗಳಲ್ಲಿ, ಸುತಾರ್ ಎಷ್ಟು ಅದ್ಭುತ ಪ್ರದರ್ಶನ ನೀಡಿದ್ದಾರೆ ಎಂದರೆ ಅವರನ್ನು ತಂಡದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ(PC-PTI).

1 / 5
ಹೀಗಿರುವಾಗ ಟೀಂ ಇಂಡಿಯಾದಿಂದ ವಿರಾಮ ಸಿಕ್ಕಾಗಲೆಲ್ಲ ವಿದೇಶಿ ತಂಡಗಳ ಪರ ಆಡುವುದನ್ನು ಮುಂದುವರೆಸುತ್ತಿರುವ ಮಾನವ್ ಸುತಾರ್ ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟ್​ನಲ್ಲಿ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಇಂಗ್ಲಿಷ್ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ವಾರ್ವಿಕ್‌ಷೈರ್ ಪರ ಆಡುತ್ತಿರುವ ಸುತಾರ್, ಹ್ಯಾಂಪ್‌ಶೈರ್ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದು ಮಿಂಚಿದರು(PC-PTI).

ಹೀಗಿರುವಾಗ ಟೀಂ ಇಂಡಿಯಾದಿಂದ ವಿರಾಮ ಸಿಕ್ಕಾಗಲೆಲ್ಲ ವಿದೇಶಿ ತಂಡಗಳ ಪರ ಆಡುವುದನ್ನು ಮುಂದುವರೆಸುತ್ತಿರುವ ಮಾನವ್ ಸುತಾರ್ ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟ್​ನಲ್ಲಿ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಇಂಗ್ಲಿಷ್ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ವಾರ್ವಿಕ್‌ಷೈರ್ ಪರ ಆಡುತ್ತಿರುವ ಸುತಾರ್, ಹ್ಯಾಂಪ್‌ಶೈರ್ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದು ಮಿಂಚಿದರು(PC-PTI).

2 / 5
ಇತ್ತೀಚಿನ ಶ್ರೀಲಂಕಾ ಪ್ರವಾಸದಲ್ಲಿ ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದಿದ್ದ ಸುತಾರ್, ಇದೀಗ ಇಂಗ್ಲೆಂಡ್‌ನಲ್ಲಿ ವೇಗದ ಬೌಲರ್‌ಗಳಿಗೆ ಅನುಕೂಲಕರ ಪರಿಸ್ಥಿತಿಯಲ್ಲೂ ತಮ್ಮ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಪಂದ್ಯದ ಎರಡನೇ ದಿನದಂದು, ಮಾನವ್ ಸುತಾರ್ ಹ್ಯಾಂಪ್‌ಶೈರ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದಿದ್ದರು. ಅದಾದ ಬಳಿಕ ಮೂರನೇ ದಿನದಂದು 16 ಓವರ್‌ಗಳನ್ನು ಬೌಲ್ ಮಾಡಿ ಮೂರು ವಿಕೆಟ್‌ಗಳನ್ನು ಪೂರೈಸಿದರು(PC-PTI).

ಇತ್ತೀಚಿನ ಶ್ರೀಲಂಕಾ ಪ್ರವಾಸದಲ್ಲಿ ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದಿದ್ದ ಸುತಾರ್, ಇದೀಗ ಇಂಗ್ಲೆಂಡ್‌ನಲ್ಲಿ ವೇಗದ ಬೌಲರ್‌ಗಳಿಗೆ ಅನುಕೂಲಕರ ಪರಿಸ್ಥಿತಿಯಲ್ಲೂ ತಮ್ಮ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಪಂದ್ಯದ ಎರಡನೇ ದಿನದಂದು, ಮಾನವ್ ಸುತಾರ್ ಹ್ಯಾಂಪ್‌ಶೈರ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದಿದ್ದರು. ಅದಾದ ಬಳಿಕ ಮೂರನೇ ದಿನದಂದು 16 ಓವರ್‌ಗಳನ್ನು ಬೌಲ್ ಮಾಡಿ ಮೂರು ವಿಕೆಟ್‌ಗಳನ್ನು ಪೂರೈಸಿದರು(PC-PTI).

3 / 5
ಈ ಇನ್ನಿಂಗ್ಸ್‌ನಲ್ಲಿ ಮಾನವ್ ಸುತಾರ್ ಹ್ಯಾಂಪ್‌ಶೈರ್ ಓಪನರ್ ನಿಕ್ ಗುಬ್ಬಿನ್ಸ್ ಅವರನ್ನು ಬೌಲ್ಡ್ ಮಾಡಿದರೆ, ನಂತರ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಎಡ್ಡಿ ಜ್ಯಾಕ್ ಅವರನ್ನು ಎಲ್ಬಿಡಬ್ಲ್ಯೂ ಔಟ್ ಮಾಡಿದರು. ಮೂರನೇ ವಿಕೆಟ್ ಜೇಮ್ಸ್ ಫುಲ್ಲರ್ ರೂಪದಲ್ಲಿ ಬಂದಿತು. ಸುತಾರ್ ಅವರ ಮಾರಕ ಬೌಲಿಂಗ್​ನಿಂದ ವಾರ್ವಿಕ್‌ಶೈರ್, ಹ್ಯಾಂಪ್‌ಶೈರ್ ತಂಡವನ್ನು ಕೇವಲ 115 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ ವಾರ್ವಿಕ್, ಹ್ಯಾಂಪ್‌ಶೈರ್ ಮೇಲೆ ಫಾಲೋಆನ್ ಹೇರಿತು(PC-PTI).

ಈ ಇನ್ನಿಂಗ್ಸ್‌ನಲ್ಲಿ ಮಾನವ್ ಸುತಾರ್ ಹ್ಯಾಂಪ್‌ಶೈರ್ ಓಪನರ್ ನಿಕ್ ಗುಬ್ಬಿನ್ಸ್ ಅವರನ್ನು ಬೌಲ್ಡ್ ಮಾಡಿದರೆ, ನಂತರ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಎಡ್ಡಿ ಜ್ಯಾಕ್ ಅವರನ್ನು ಎಲ್ಬಿಡಬ್ಲ್ಯೂ ಔಟ್ ಮಾಡಿದರು. ಮೂರನೇ ವಿಕೆಟ್ ಜೇಮ್ಸ್ ಫುಲ್ಲರ್ ರೂಪದಲ್ಲಿ ಬಂದಿತು. ಸುತಾರ್ ಅವರ ಮಾರಕ ಬೌಲಿಂಗ್​ನಿಂದ ವಾರ್ವಿಕ್‌ಶೈರ್, ಹ್ಯಾಂಪ್‌ಶೈರ್ ತಂಡವನ್ನು ಕೇವಲ 115 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ ವಾರ್ವಿಕ್, ಹ್ಯಾಂಪ್‌ಶೈರ್ ಮೇಲೆ ಫಾಲೋಆನ್ ಹೇರಿತು(PC-PTI).

4 / 5
ವಾರ್ವಿಕ್‌ಷೈರ್ ಪರ ಆಡುತ್ತಿರುವ ಸುತಾರ್ ಮೊದಲಿಗೆ ಎರಡು ಪಂದ್ಯಗಳನ್ನು ಆಡಿದ್ದರು. ಆ ಪಂದ್ಯದಲ್ಲಿ ಒಟ್ಟು 11 ವಿಕೆಟ್‌ಗಳನ್ನು ಕಬಳಿಸಿದ್ದರು. ಆ ನಂತರ ಶ್ರೀಲಂಕಾ ಪ್ರವಾಸವನ್ನು ಮುಗಿಸಿ ಮತ್ತೆ ಇಂಗ್ಲೆಂಡ್‌ಗೆ ಮರಳಿದ ಸುತಾ್​ಗೆ ಇದು ಮೂರನೇ ಪಂದ್ಯವಾಗಿದೆ. ಈ ಮೂರು ಪಂದ್ಯಗಳ ಐದು ಇನ್ನಿಂಗ್ಸ್‌ಗಳಲ್ಲಿ ಮಾನವ್ ಮೂರನೇ ಬಾರಿಗೆ ಒಂದು ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿದ್ದಾರೆ(PC-PTI).

ವಾರ್ವಿಕ್‌ಷೈರ್ ಪರ ಆಡುತ್ತಿರುವ ಸುತಾರ್ ಮೊದಲಿಗೆ ಎರಡು ಪಂದ್ಯಗಳನ್ನು ಆಡಿದ್ದರು. ಆ ಪಂದ್ಯದಲ್ಲಿ ಒಟ್ಟು 11 ವಿಕೆಟ್‌ಗಳನ್ನು ಕಬಳಿಸಿದ್ದರು. ಆ ನಂತರ ಶ್ರೀಲಂಕಾ ಪ್ರವಾಸವನ್ನು ಮುಗಿಸಿ ಮತ್ತೆ ಇಂಗ್ಲೆಂಡ್‌ಗೆ ಮರಳಿದ ಸುತಾ್​ಗೆ ಇದು ಮೂರನೇ ಪಂದ್ಯವಾಗಿದೆ. ಈ ಮೂರು ಪಂದ್ಯಗಳ ಐದು ಇನ್ನಿಂಗ್ಸ್‌ಗಳಲ್ಲಿ ಮಾನವ್ ಮೂರನೇ ಬಾರಿಗೆ ಒಂದು ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿದ್ದಾರೆ(PC-PTI).

5 / 5
Follow Us
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ
ಕೆಪಿಎಸ್​​ಸಿ ಹಗರಣ: ಆರೋಪಿ ಬಸವರಾಜ ಬಗ್ಗೆ ಸ್ಫೋಟ ಅಂಶ ಬಿಚ್ಚಿಟ್ಟ ಖಂಡ್ರೆ
ಕೆಪಿಎಸ್​​ಸಿ ಹಗರಣ: ಆರೋಪಿ ಬಸವರಾಜ ಬಗ್ಗೆ ಸ್ಫೋಟ ಅಂಶ ಬಿಚ್ಚಿಟ್ಟ ಖಂಡ್ರೆ
ಮೋಡ ಬಿತ್ತನೆ ಕಾರ್ಯಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
ಮೋಡ ಬಿತ್ತನೆ ಕಾರ್ಯಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
ಜಗದೊದ್ಧಾರನ ಆಡಿಸಿದಳೆಶೋದೆ ಕೀರ್ತನೆ ಹುಟ್ಟಿದ ತಾಣದಲ್ಲಿ ಜನ್ಮಾಷ್ಟಮಿಸಂಭ್ರಮ
ಜಗದೊದ್ಧಾರನ ಆಡಿಸಿದಳೆಶೋದೆ ಕೀರ್ತನೆ ಹುಟ್ಟಿದ ತಾಣದಲ್ಲಿ ಜನ್ಮಾಷ್ಟಮಿಸಂಭ್ರಮ
ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು!
ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು!
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ