AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

W,W,W..ಆಂಗ್ಲರ ನೆಲದಲ್ಲೂ ಮಿಂಚಿದ ಮಾನವ್ ಸುತಾರ್

Manav Suthar's Brilliance: ಮಾನವ್ ಸುತಾರ್ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ನಲ್ಲಿ ಮಿಂಚಿದ ನಂತರ ಇಂಗ್ಲೆಂಡ್ ಕೌಂಟಿ ಕ್ರಿಕೆಟ್‌ನಲ್ಲಿ ವಾರ್ವಿಕ್‌ಷೈರ್ ಪರ ಆಡುವ ಮೂಲಕ ತಮ್ಮ ಪ್ರತಿಭೆಯನ್ನು ಮುಂದುವರಿಸಿದ್ದಾರೆ. ಯಾರ್ಕ್‌ಷೈರ್ ವಿರುದ್ಧದ ಮೊದಲ ಪಂದ್ಯದಲ್ಲಿ 3 ವಿಕೆಟ್ ಪಡೆದು ಯಶಸ್ಸು ಕಂಡಿದ್ದಾರೆ. ಈ ಯುವ ಸ್ಪಿನ್ನರ್ ಸದ್ಯ ಎರಡು ಕೌಂಟಿ ಪಂದ್ಯಗಳ ಒಪ್ಪಂದಕ್ಕೆ ಸಹಿ ಹಾಕಿದ್ದು, ಭವಿಷ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಪೃಥ್ವಿಶಂಕರ
|

Updated on: Jun 13, 2026 | 8:37 PM

Share
ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ್ದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್‌ನಲ್ಲೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಇಂಗ್ಲಿಷ್ ಕೌಂಟಿ ಕ್ರಿಕೆಟ್ ಆಡುತ್ತಿರುವ ಸುತಾರ್, ವಾರ್ವಿಕ್‌ಷೈರ್ ತಂಡದ ಪರ 3 ವಿಕೆಟ್ ಪಡೆದು ಮಿಂಚಿದರು (PC-PTI).

ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ್ದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್‌ನಲ್ಲೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಇಂಗ್ಲಿಷ್ ಕೌಂಟಿ ಕ್ರಿಕೆಟ್ ಆಡುತ್ತಿರುವ ಸುತಾರ್, ವಾರ್ವಿಕ್‌ಷೈರ್ ತಂಡದ ಪರ 3 ವಿಕೆಟ್ ಪಡೆದು ಮಿಂಚಿದರು (PC-PTI).

1 / 5
ವಾಸ್ತವವಾಗಿ ಜೂನ್ 6 ರಂದು ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಪರ ಪಾದಾರ್ಪಣೆ ಮಾಡಿದ ಸುತಾರ್, ಈ ಪಂದ್ಯದಲ್ಲಿ ಏಳು ವಿಕೆಟ್‌ಗಳನ್ನು ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದರು. ಈ ಅದ್ಭುತ ಪ್ರದರ್ಶನದ ನಂತರ ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಆಡುವ ಅವಕಾಶವೂ ಸಿಕ್ಕಿತು. ಅದರಂತೆ ವಾರ್ವಿಕ್‌ಷೈರ್ ತಂಡದ ಪರ ಸುತಾರ್ ಎರಡು ಪಂದ್ಯಗಳನ್ನು ಆಡಲಿದ್ದಾರೆ (PC-PTI).

ವಾಸ್ತವವಾಗಿ ಜೂನ್ 6 ರಂದು ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಪರ ಪಾದಾರ್ಪಣೆ ಮಾಡಿದ ಸುತಾರ್, ಈ ಪಂದ್ಯದಲ್ಲಿ ಏಳು ವಿಕೆಟ್‌ಗಳನ್ನು ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದರು. ಈ ಅದ್ಭುತ ಪ್ರದರ್ಶನದ ನಂತರ ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಆಡುವ ಅವಕಾಶವೂ ಸಿಕ್ಕಿತು. ಅದರಂತೆ ವಾರ್ವಿಕ್‌ಷೈರ್ ತಂಡದ ಪರ ಸುತಾರ್ ಎರಡು ಪಂದ್ಯಗಳನ್ನು ಆಡಲಿದ್ದಾರೆ (PC-PTI).

2 / 5
ಅದರಂತೆ ವಾರ್ವಿಕ್‌ಷೈರ್ ತಂಡದ ಪರ ಮೊದಲ ಪಂದ್ಯವನ್ನಾಡಿದ ಸುತಾರ್, ಯಾರ್ಕ್‌ಷೈರ್ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 21 ಓವರ್‌ಗಳನ್ನು ಬೌಲಿಂಗ್ ಮಾಡಿ 85 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಪಡೆದರು. ಸುತಾರ್ ಅವರ ಈ ಬೌಲಿಂಗ್‌ನಿಂದಾಗಿ, ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿ ಯಾರ್ಕ್‌ಷೈರ್ ತಂಡ 469 ರನ್‌ಗಳಿಗೆ ಆಲೌಟ್ ಆಯಿತು (PC-PTI).

ಅದರಂತೆ ವಾರ್ವಿಕ್‌ಷೈರ್ ತಂಡದ ಪರ ಮೊದಲ ಪಂದ್ಯವನ್ನಾಡಿದ ಸುತಾರ್, ಯಾರ್ಕ್‌ಷೈರ್ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 21 ಓವರ್‌ಗಳನ್ನು ಬೌಲಿಂಗ್ ಮಾಡಿ 85 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಪಡೆದರು. ಸುತಾರ್ ಅವರ ಈ ಬೌಲಿಂಗ್‌ನಿಂದಾಗಿ, ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿ ಯಾರ್ಕ್‌ಷೈರ್ ತಂಡ 469 ರನ್‌ಗಳಿಗೆ ಆಲೌಟ್ ಆಯಿತು (PC-PTI).

3 / 5
ಪಂದ್ಯದ ಮೊದಲ ದಿನದಂದು ಯಾರ್ಕ್‌ಷೈರ್ ಬ್ಯಾಟ್ಸ್‌ಮನ್ ಸ್ಯಾಮ್ ವೈಟ್‌ಮನ್ ಅವರನ್ನು ಔಟ್ ಮಾಡುವ ಮೂಲಕ ಕೌಂಟಿ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ವಿಕೆಟ್ ಪಡೆದಿದ್ದ ಸುತಾರ್, ಮೊದಲ ದಿನದ ಆಟ ಮುಗಿಯುವ ಸ್ವಲ್ಪ ಮೊದಲು ಅಪಾಯಕಾರಿಯಾಗಿ ಕಾಣುತ್ತಿದ್ದ ಆರಂಭಿಕ ಬ್ಯಾಟ್ಸ್‌ಮನ್ ವಿಲಿಯಂ ಲಕ್ಸ್ಟನ್ ಅವರನ್ನು ಎಲ್ಬಿಡಬ್ಲ್ಯೂ ಮೂಲಕ ಔಟ್ ಮಾಡಿದ್ದರು (PC-PTI).

ಪಂದ್ಯದ ಮೊದಲ ದಿನದಂದು ಯಾರ್ಕ್‌ಷೈರ್ ಬ್ಯಾಟ್ಸ್‌ಮನ್ ಸ್ಯಾಮ್ ವೈಟ್‌ಮನ್ ಅವರನ್ನು ಔಟ್ ಮಾಡುವ ಮೂಲಕ ಕೌಂಟಿ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ವಿಕೆಟ್ ಪಡೆದಿದ್ದ ಸುತಾರ್, ಮೊದಲ ದಿನದ ಆಟ ಮುಗಿಯುವ ಸ್ವಲ್ಪ ಮೊದಲು ಅಪಾಯಕಾರಿಯಾಗಿ ಕಾಣುತ್ತಿದ್ದ ಆರಂಭಿಕ ಬ್ಯಾಟ್ಸ್‌ಮನ್ ವಿಲಿಯಂ ಲಕ್ಸ್ಟನ್ ಅವರನ್ನು ಎಲ್ಬಿಡಬ್ಲ್ಯೂ ಮೂಲಕ ಔಟ್ ಮಾಡಿದ್ದರು (PC-PTI).

4 / 5
ನಂತರ, ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿಯೇ ಸುತಾರ್, ಜಾರ್ಜ್ ಹಿಲ್ ಅವರನ್ನು ಔಟ್ ಮಾಡಿದರು. ಮೇಲೆ ಹೇಳಿದಂತೆ ವಾರ್ವಿಕ್‌ಷೈರ್ ತಂಡ ಎರಡು ಕೌಂಟಿ ಚಾಂಪಿಯನ್‌ಶಿಪ್ ಪಂದ್ಯಗಳಿಗೆ ಮಾನವ್ ಸುತಾರ್ ಅವರೊಂದಿಗೆ ಅಲ್ಪಾವಧಿಯ ಒಪ್ಪಂದಕ್ಕೆ ಸಹಿ ಹಾಕಿದೆ. ಇದರರ್ಥ ಅವರು ಈ ಪಂದ್ಯದ ನಂತರ ಸೋಮರ್‌ಸೆಟ್ ವಿರುದ್ಧವೂ ಆಡಬಹುದು (PC-PTI).

ನಂತರ, ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿಯೇ ಸುತಾರ್, ಜಾರ್ಜ್ ಹಿಲ್ ಅವರನ್ನು ಔಟ್ ಮಾಡಿದರು. ಮೇಲೆ ಹೇಳಿದಂತೆ ವಾರ್ವಿಕ್‌ಷೈರ್ ತಂಡ ಎರಡು ಕೌಂಟಿ ಚಾಂಪಿಯನ್‌ಶಿಪ್ ಪಂದ್ಯಗಳಿಗೆ ಮಾನವ್ ಸುತಾರ್ ಅವರೊಂದಿಗೆ ಅಲ್ಪಾವಧಿಯ ಒಪ್ಪಂದಕ್ಕೆ ಸಹಿ ಹಾಕಿದೆ. ಇದರರ್ಥ ಅವರು ಈ ಪಂದ್ಯದ ನಂತರ ಸೋಮರ್‌ಸೆಟ್ ವಿರುದ್ಧವೂ ಆಡಬಹುದು (PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​