AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಮನೀಶ್ ಪಾಂಡೆ

Manish Pandey Records: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಸತತ 19 ಸೀಸನ್​​ಗಳಲ್ಲಿ ಕಾಣಿಸಿಕೊಂಡಿರುವುದು ಕೇವಲ 4 ಆಟಗಾರರು ಮಾತ್ರ. ಈ ಸಾಧನೆ ಮಾಡಿದವರೆಂದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಹೇಂದ್ರ ಸಿಂಗ್ ಧೋನಿ ಹಾಗೂ ಮನೀಶ್ ಪಾಂಡೆ. ಇವರಲ್ಲಿ 19 ಸೀಸನ್​ಗಳಲ್ಲೂ ಬ್ಯಾಟ್ ಮಾಡಿರುವುದು ಮೂವರು ಮಾತ್ರ. ಅಂದರೆ ಈ ಬಾರಿಯ ಐಪಿಎಲ್​​ನಲ್ಲಿ ಧೋನಿ ಕಣಕ್ಕಿಳಿದಿಲ್ಲ.

ಝಾಹಿರ್ ಯೂಸುಫ್
|

Updated on: May 21, 2026 | 7:52 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ಬ್ಯಾಟ್ ಬೀಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮನೀಶ್ ಪಾಂಡೆ (Manish Pandey) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ಬ್ಯಾಟ್ ಬೀಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮನೀಶ್ ಪಾಂಡೆ (Manish Pandey) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. (PC: IPL)

1 / 5
ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 147 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಂದ ಕೆಕೆಆರ್ ಆರಂಭಿಕ ದಾಂಡಿಗ ಫಿನ್ ಅಲೆನ್ ಮೊದಲ ಓವರ್​ನಲ್ಲೇ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮನೀಶ್ ಪಾಂಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರು. (PC: IPL)

ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 147 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಂದ ಕೆಕೆಆರ್ ಆರಂಭಿಕ ದಾಂಡಿಗ ಫಿನ್ ಅಲೆನ್ ಮೊದಲ ಓವರ್​ನಲ್ಲೇ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮನೀಶ್ ಪಾಂಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರು. (PC: IPL)

2 / 5
ಈ ಬ್ಯಾಟಿಂಗ್​ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಸತತ 19 ಸೀಸನ್​​ಗಳಲ್ಲಿ ಬ್ಯಾಟ್ ಮಾಡಿದ ಮೂರನೇ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು. ಅಂದರೆ ಈ ಮೂವರು ಆಟಗಾರರು ಕಳೆದ 19 ಸೀಸನ್​ಗಳಲ್ಲೂ ಬ್ಯಾಟ್ ಬೀಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. (PC: IPL)

ಈ ಬ್ಯಾಟಿಂಗ್​ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಸತತ 19 ಸೀಸನ್​​ಗಳಲ್ಲಿ ಬ್ಯಾಟ್ ಮಾಡಿದ ಮೂರನೇ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು. ಅಂದರೆ ಈ ಮೂವರು ಆಟಗಾರರು ಕಳೆದ 19 ಸೀಸನ್​ಗಳಲ್ಲೂ ಬ್ಯಾಟ್ ಬೀಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. (PC: IPL)

3 / 5
2008 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಮನೀಶ್ ಪಾಂಡೆ ಆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪುಣೆ ವಾರಿಯರ್ಸ್, ಸನ್​ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಮುಂದುವರೆದಿರುವ ಪಾಂಡೆ ಸತತ 19 ಸೀಸನ್​​ಗಳಲ್ಲಿ ಬ್ಯಾಟ್ ಬೀಸಿದ ಐತಿಹಾಸಿಕ ಸಾಧನೆ ಮಾಡಿದ್ದಾರೆ. (PC: IPL)

2008 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಮನೀಶ್ ಪಾಂಡೆ ಆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪುಣೆ ವಾರಿಯರ್ಸ್, ಸನ್​ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಮುಂದುವರೆದಿರುವ ಪಾಂಡೆ ಸತತ 19 ಸೀಸನ್​​ಗಳಲ್ಲಿ ಬ್ಯಾಟ್ ಬೀಸಿದ ಐತಿಹಾಸಿಕ ಸಾಧನೆ ಮಾಡಿದ್ದಾರೆ. (PC: IPL)

4 / 5
ಇನ್ನು ಈ ಐತಿಹಾಸಿಕ ಸಾಧನೆಯೊಂಧಿಗೆ ಈ ಪಂದ್ಯದಲ್ಲಿ 33 ಎಸೆತಗಳಲ್ಲಿ ಮನೀಶ್ ಪಾಂಡೆ 45 ರನ್ ಬಾರಿಸಿದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಜವಾಬ್ದಾರಿಯುತ 45 ರನ್​ಗಳ ಬ್ಯಾಟಿಂಗ್​ ಫಲವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದ್ದಾರೆ. (PC: IPL)

ಇನ್ನು ಈ ಐತಿಹಾಸಿಕ ಸಾಧನೆಯೊಂಧಿಗೆ ಈ ಪಂದ್ಯದಲ್ಲಿ 33 ಎಸೆತಗಳಲ್ಲಿ ಮನೀಶ್ ಪಾಂಡೆ 45 ರನ್ ಬಾರಿಸಿದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಜವಾಬ್ದಾರಿಯುತ 45 ರನ್​ಗಳ ಬ್ಯಾಟಿಂಗ್​ ಫಲವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದ್ದಾರೆ. (PC: IPL)

5 / 5
Follow Us
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ