AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Matheesha Pathirana: ಅತೀ ವೇಗದಲ್ಲಿ ಚೆಂಡೆಸೆದು ದಾಖಲೆ ಬರೆದ ಮಥೀಶ ಪತಿರಾಣ

Matheesha Pathirana: ಯುಎಇನಲ್ಲಿ ನಡೆಯುತ್ತಿರುವ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಶ್ರೀಲಂಕಾದ ಯುವ ವೇಗದ ಬೌಲರ್​ ಮಥೀಶ ಪತಿರಾಣ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶಾರ್ಜಾ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಅತೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಪತಿರಾಣ ಸಂಚಲನ ಸೃಷ್ಟಿಸಿದ್ದಾರೆ.

TV9 Web
| Edited By: |

Updated on: Feb 12, 2024 | 10:58 AM

Share
ಶಾರ್ಜಾದಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್​ ಟಿ20 ಟೂರ್ನಿಯ 30ನೇ ಪಂದ್ಯದಲ್ಲಿ ಮಥೀಶ ಪತಿರಾಣ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತೀ ವೇಗದಲ್ಲಿ ಚೆಂಡೆಸುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಮತ್ತು ಡೆಸರ್ಟ್ ವೈಪರ್ಸ್ ತಂಡಗಳು ಮುಖಾಮುಖಿಯಾಗಿತ್ತು.

ಶಾರ್ಜಾದಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್​ ಟಿ20 ಟೂರ್ನಿಯ 30ನೇ ಪಂದ್ಯದಲ್ಲಿ ಮಥೀಶ ಪತಿರಾಣ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತೀ ವೇಗದಲ್ಲಿ ಚೆಂಡೆಸುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಮತ್ತು ಡೆಸರ್ಟ್ ವೈಪರ್ಸ್ ತಂಡಗಳು ಮುಖಾಮುಖಿಯಾಗಿತ್ತು.

1 / 6
ಟಾಸ್ ಗೆದ್ದ ಡೆಸರ್ಟ್ ವೈಪರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಶಾರ್ಜಾ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಡೆಸರ್ಟ್ ವೈಪರ್ಸ್ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಅದರಲ್ಲೂ ಪತಿರಾಣರ ವೇಗದ ಎಸೆತಗಳನ್ನು ಎದುರಿಸಲು ತಿಣುಕಾಡಿದರು.

ಟಾಸ್ ಗೆದ್ದ ಡೆಸರ್ಟ್ ವೈಪರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಶಾರ್ಜಾ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಡೆಸರ್ಟ್ ವೈಪರ್ಸ್ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಅದರಲ್ಲೂ ಪತಿರಾಣರ ವೇಗದ ಎಸೆತಗಳನ್ನು ಎದುರಿಸಲು ತಿಣುಕಾಡಿದರು.

2 / 6
145 ರಿಂದ 150 ರ ಅಸುಪಾಸಿನ ವೇಗದ ಚೆಂಡೆಸೆಯುವ ಮೂಲಕ ಮಥೀಶ ಪತಿರಾಣ ಶಾರ್ಜಾ ವಾರಿಯರ್ಸ್ ಬ್ಯಾಟರ್​ಗಳನ್ನು ಕಾಡಿದರು. ಅದರಲ್ಲೂ ತಮ್ಮ ಮೊದಲ ಓವರ್​ನಲ್ಲಿ 3ನೇ ಎಸೆತವನ್ನು 152.1 kmph ವೇಗದಲ್ಲಿ ಎಸೆದರು. ಈ ಮೂಲಕ ಇಂಟರ್​ನ್ಯಾಷನಲ್​ ಲೀಗ್ ಟಿ20 ಯಲ್ಲಿ ಅತ್ಯಂತ ವೇಗದ ಚೆಂಡೆಸೆದ ದಾಖಲೆಯನ್ನು ಮಥೀಶ ಪತಿರಾಣ ತಮ್ಮದಾಗಿಸಿಕೊಂಡರು.

145 ರಿಂದ 150 ರ ಅಸುಪಾಸಿನ ವೇಗದ ಚೆಂಡೆಸೆಯುವ ಮೂಲಕ ಮಥೀಶ ಪತಿರಾಣ ಶಾರ್ಜಾ ವಾರಿಯರ್ಸ್ ಬ್ಯಾಟರ್​ಗಳನ್ನು ಕಾಡಿದರು. ಅದರಲ್ಲೂ ತಮ್ಮ ಮೊದಲ ಓವರ್​ನಲ್ಲಿ 3ನೇ ಎಸೆತವನ್ನು 152.1 kmph ವೇಗದಲ್ಲಿ ಎಸೆದರು. ಈ ಮೂಲಕ ಇಂಟರ್​ನ್ಯಾಷನಲ್​ ಲೀಗ್ ಟಿ20 ಯಲ್ಲಿ ಅತ್ಯಂತ ವೇಗದ ಚೆಂಡೆಸೆದ ದಾಖಲೆಯನ್ನು ಮಥೀಶ ಪತಿರಾಣ ತಮ್ಮದಾಗಿಸಿಕೊಂಡರು.

3 / 6
ಇನ್ನು ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಮಥೀಶ ಪತಿರಾಣ 28 ರನ್​ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದರು. ಈ ಭರ್ಜರಿ ಬೌಲಿಂಗ್ ಪರಿಣಾಮ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 121 ರನ್​ಗಳಿಸಲಷ್ಟೇ ಶಕ್ತರಾದರು. ಈ ಸುಲಭ ಗುರಿಯನ್ನು 12.5 ಓವರ್​ಗಳಲ್ಲಿ ಚೇಸ್ ಮಾಡಿ ಡೆಸರ್ಟ್​ ವೈಪರ್ಸ್ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಮಥೀಶ ಪತಿರಾಣ 28 ರನ್​ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದರು. ಈ ಭರ್ಜರಿ ಬೌಲಿಂಗ್ ಪರಿಣಾಮ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 121 ರನ್​ಗಳಿಸಲಷ್ಟೇ ಶಕ್ತರಾದರು. ಈ ಸುಲಭ ಗುರಿಯನ್ನು 12.5 ಓವರ್​ಗಳಲ್ಲಿ ಚೇಸ್ ಮಾಡಿ ಡೆಸರ್ಟ್​ ವೈಪರ್ಸ್ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

4 / 6
ಅಂದಹಾಗೆ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಆಸ್ಟ್ರೇಲಿಯಾದ ಶಾನ್ ಟೈಟ್ ಹೆಸರಿನಲ್ಲಿದೆ. 2011 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ ಟೈಟ್ ಡೆಲ್ಲಿ ಡೇರ್ ಡೆವಿಲ್ಸ್​ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ವಿರುದ್ಧ 157.7 kmph ವೇಗದಲ್ಲಿ ಚೆಂಡೆಸೆದು ದಾಖಲೆ ನಿರ್ಮಿಸಿದ್ದಾರೆ.

ಅಂದಹಾಗೆ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಆಸ್ಟ್ರೇಲಿಯಾದ ಶಾನ್ ಟೈಟ್ ಹೆಸರಿನಲ್ಲಿದೆ. 2011 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ ಟೈಟ್ ಡೆಲ್ಲಿ ಡೇರ್ ಡೆವಿಲ್ಸ್​ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ವಿರುದ್ಧ 157.7 kmph ವೇಗದಲ್ಲಿ ಚೆಂಡೆಸೆದು ದಾಖಲೆ ನಿರ್ಮಿಸಿದ್ದಾರೆ.

5 / 6
ಇದೀಗ 21 ವರ್ಷದ ಮಥೀಶ ಪತಿರಾಣ 152.1 kmph ವೇಗದಲ್ಲಿ ಚೆಂಡೆಸೆದು ಸಂಚಲನ ಸೃಷ್ಟಿಸಿದ್ದಾರೆ. ಈ ಮೂಲಕ ಐಪಿಎಲ್​ಗಾಗಿ ಭರ್ಜರಿ ತಯಾರಿದ್ದಾರೆ. ಅದರಂತೆ ಸಿಎಸ್​ಕೆ ಪರ ಕಣಕ್ಕಿಳಿಯಲಿರುವ ಪತಿರಾಣ ಕಡೆಯಿಂದ ಈ ಬಾರಿ ಬೆಂಕಿ ಬೌಲಿಂಗ್ ಅನ್ನು ನಿರೀಕ್ಷಿಸಬಹುದು.

ಇದೀಗ 21 ವರ್ಷದ ಮಥೀಶ ಪತಿರಾಣ 152.1 kmph ವೇಗದಲ್ಲಿ ಚೆಂಡೆಸೆದು ಸಂಚಲನ ಸೃಷ್ಟಿಸಿದ್ದಾರೆ. ಈ ಮೂಲಕ ಐಪಿಎಲ್​ಗಾಗಿ ಭರ್ಜರಿ ತಯಾರಿದ್ದಾರೆ. ಅದರಂತೆ ಸಿಎಸ್​ಕೆ ಪರ ಕಣಕ್ಕಿಳಿಯಲಿರುವ ಪತಿರಾಣ ಕಡೆಯಿಂದ ಈ ಬಾರಿ ಬೆಂಕಿ ಬೌಲಿಂಗ್ ಅನ್ನು ನಿರೀಕ್ಷಿಸಬಹುದು.

6 / 6
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?