AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

48 ಗಂಟೆಗಳ ಮುಂಚೆ ಆಯ್ಕೆ… ಮಯಾಂಕ್ ಅಗರ್ವಾಲ್ ಕೈ ಹಿಡಿಯಲಿದೆಯಾ RCB

Mayank Agarwal: ಈ ಬಾರಿ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕೇವಲ 4 ಪಂದ್ಯಗಳನ್ನಾಡಿರುವ ಮಯಾಂಕ್ ಅಗರ್ವಾಲ್ ಒಟ್ಟು 95 ರನ್ ಕಲೆಹಾಕಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಯಾಂಕ್ ಅಗರ್ವಾಲ್ ತನ್ನದೇಯಾದ ಕೊಡುಗೆಯನ್ನು ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 12, 2025 | 8:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟ ಪ್ಲೇಯರ್ಸ್​ಗಳಲ್ಲಿ ಮಯಾಂಕ್ ಅಗರ್ವಾಲ್ (Mayank Agarwal) ಕೂಡ ಒಬ್ಬರು. ಈ ಬಾರಿಯ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ ಆರ್​ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಗಾಯಗೊಂಡ ಪರಿಣಾಮ ಮಯಾಂಕ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದರು.

1 / 5
ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

ಈ ಆಯ್ಕೆಯೊಂದಿಗೆ ಮಯಾಂಕ್ ಅಗರ್ವಾಲ್ ಅವರು ಚಾಂಪಿಯನ್ ತಂಡದ ಭಾಗವಾಗಿದ್ದರು. ಅದರಲ್ಲೂ ಕೊನೆಯ 4 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕನ್ನಡಿಗ ಆರ್​ಸಿಬಿ ತಂಡ ಟ್ರೋಫಿ ಗೆಲ್ಲುವಲ್ಲಿ ತನ್ನದೇಯಾದ ಕೊಡುಗೆಯನ್ನು ಸಹ ನೀಡಿದ್ದರು. ಇದಾಗ್ಯೂ ಮಯಾಂಕ್ ಅವರನ್ನು ಆರ್​ಸಿಬಿ ಮುಂದಿನ ಸೀಸನ್​ಗೆ ಉಳಿಸಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

ಏಕೆಂದರೆ ಐಪಿಎಲ್​ ನಿಯಮದ ಪ್ರಕಾರ, ಕೊನೆಯ ಪಂದ್ಯಗಳ ವೇಳೆ ಅಂದರೆ ಐಪಿಎಲ್ ಸ್ಥಗಿತಗೊಂಡು ಮರು ಆಯೋಜನೆಗೊಂಡಾಗ ಬದಲಿ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡವರನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳುವಂತಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದು, ಐಪಿಎಲ್ ಸ್ಥಗಿತಗೊಳ್ಳುವ 48 ಗಂಟೆಗಳ ಮುಂಚೆ.

3 / 5
ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಅಂದರೆ ಭಾರತ-ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ಐಪಿಎಲ್ ಸ್ಥಗಿತಗೊಳ್ಳುವ 2 ದಿನಗಳ ಮೊದಲೇ ಮಯಾಂಕ್ ಅಗರ್ವಾಲ್ ಆರ್​​ಸಿಬಿ ತಂಡವನ್ನು ಸೇರಿಕೊಂಡಿದ್ದರು. ಹೀಗಾಗಿ ಅವರನ್ನು ರಿಟೈನ್​​ ಮಾಡಿಕೊಳ್ಳಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಅವಕಾಶವಿದೆ. ಅದರಂತೆ ಐಪಿಎಲ್ 2026 ರಲ್ಲೂ ಕನ್ನಡಿಗ ಆರ್​ಸಿಬಿ ತಂಡದಲ್ಲೇ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಇದಾಗ್ಯೂ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಟಿಮ್ ಸೈಫರ್ಟ್ ಹಾಗೂ ಬ್ಲೆಸಿಂಗ್ ಮುಝರಬಾನಿಯನ್ನು ಉಳಿಸಿಕೊಳ್ಳುವಂತಿಲ್ಲ. ಏಕೆಂದರೆ ಈ ಇಬ್ಬರು ಆಟಗಾರರು ಐಪಿಎಲ್​ನ ಕೊನೆಯ ಹಂತದಲ್ಲಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಬದಲಿ ಆಟಗಾರರಾಗಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾದ ಮೂವರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಆರ್​ಸಿಬಿ ಬಳಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5

Published On - 8:54 am, Thu, 12 June 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ