AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New Zealand: ಮಯಾಂಕ್ ಮೇಲೆ ಹೆಚ್ಚಿದ ನಿರೀಕ್ಷೆ: ಕುತೂಹಲ ಕೆರಳಿಸಿದ ಎರಡನೇ ದಿನದಾಟ

Mayank Agarwal: ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಆಟಗಾರರು ಸಾಲುಸಾಲಾಗಿ ವಿಕೆಟ್ ಕಳೆದುಕೊಳ್ಳುತ್ತಾ ಇದ್ದರೆ ಅತ್ತ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಮಾತ್ರ ಅಮೋಘ ಶತಕ ಸಿಡಿಸಿ ಮಿಂಚಿದರು.

TV9 Web
| Updated By: Vinay Bhat|

Updated on: Dec 04, 2021 | 7:19 AM

Share
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುರುವಾಗಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಮಯಾಂಕ್ ಅಗರ್ವಾಲ್ ಅವರ ಹೋರಾಟದ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುರುವಾಗಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಮಯಾಂಕ್ ಅಗರ್ವಾಲ್ ಅವರ ಹೋರಾಟದ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿದೆ.

1 / 9
246 ಎಸೆತಗಳಲ್ಲಿ 14 ಬೌಂಡರಿ, 4 ಸಿಕ್ಸರ್ ಸಿಡಿಸಿ ಅಜೇಯ 120 ರನ್ ಸಿಡಿಸಿರುವ ಮಯಾಂಕ್ ಮೇಲೆ ಸಾಕಷ್ಟು ನಂಬಿಕೆ ಇಡಲಾಗಿದ್ದು, ಇಂದಿನ ಎರಡನೇ ದಿನದಾಟ ಕುತೂಹಲ ಕೆರಳಿಸಿದೆ. ಇವರ ಜೊತೆ ವೃದ್ದಿಮಾನ್ ಸಾಹ ಕೂಡ ಇದ್ದು ತಂಡಕ್ಕೆ ಆಸರೆಯಾಗಬೇಕಿದೆ.

246 ಎಸೆತಗಳಲ್ಲಿ 14 ಬೌಂಡರಿ, 4 ಸಿಕ್ಸರ್ ಸಿಡಿಸಿ ಅಜೇಯ 120 ರನ್ ಸಿಡಿಸಿರುವ ಮಯಾಂಕ್ ಮೇಲೆ ಸಾಕಷ್ಟು ನಂಬಿಕೆ ಇಡಲಾಗಿದ್ದು, ಇಂದಿನ ಎರಡನೇ ದಿನದಾಟ ಕುತೂಹಲ ಕೆರಳಿಸಿದೆ. ಇವರ ಜೊತೆ ವೃದ್ದಿಮಾನ್ ಸಾಹ ಕೂಡ ಇದ್ದು ತಂಡಕ್ಕೆ ಆಸರೆಯಾಗಬೇಕಿದೆ.

2 / 9
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಆರಂಭಿಕರಾಗಿ ಕಣಕ್ಕೆ ಇಳಿದ ಶುಭ್ಮನ್ ಗಿಲ್(44) ಹಾಗೂ ಮಯಾಂಕ್ ಅಗರ್ವಾಲ್ ಜೋಡಿ 81 ರನ್ ಗಳಿಸುವ ಮೂಲಕ ಉತ್ತಮ ಆರಂಭ ತಂದುಕೊಟ್ಟಿದ್ದರು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಆರಂಭಿಕರಾಗಿ ಕಣಕ್ಕೆ ಇಳಿದ ಶುಭ್ಮನ್ ಗಿಲ್(44) ಹಾಗೂ ಮಯಾಂಕ್ ಅಗರ್ವಾಲ್ ಜೋಡಿ 81 ರನ್ ಗಳಿಸುವ ಮೂಲಕ ಉತ್ತಮ ಆರಂಭ ತಂದುಕೊಟ್ಟಿದ್ದರು.

3 / 9
ಅತ್ಯುತ್ತಮ ಬ್ಯಾಟ್ ಮಾಡುತ್ತಿದ್ದ ಗಿಲ್ (44) ಅವರು ಔಟ್ ಆದ ಬೆನ್ನಲ್ಲೆ ಚೇತೇಶ್ವರ್ ಪೂಜಾರ ಹಾಗೂ ನಾಯಕ ವಿರಾಟ್ ಕೊಹ್ಲಿ ಅಜಾಝ್ ಪಟೇಲ್ಗೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಕೇವಲ ಶೂನ್ಯ ರನ್ ಅಂತರದಲ್ಲಿಯೇ ಗಿಲ್, ಪೂಜಾರ ಹಾಗೂ ಕೊಹ್ಲಿ ಅವರ ವಿಕೆಟ್ಗಳನ್ನು ಕಳೆದುಕೊಂಡಿರುವ ಭಾರತ ಸಂಕಷ್ಟಕ್ಕೆ ಸಿಲುಕಿದೆ.

ಅತ್ಯುತ್ತಮ ಬ್ಯಾಟ್ ಮಾಡುತ್ತಿದ್ದ ಗಿಲ್ (44) ಅವರು ಔಟ್ ಆದ ಬೆನ್ನಲ್ಲೆ ಚೇತೇಶ್ವರ್ ಪೂಜಾರ ಹಾಗೂ ನಾಯಕ ವಿರಾಟ್ ಕೊಹ್ಲಿ ಅಜಾಝ್ ಪಟೇಲ್ಗೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಕೇವಲ ಶೂನ್ಯ ರನ್ ಅಂತರದಲ್ಲಿಯೇ ಗಿಲ್, ಪೂಜಾರ ಹಾಗೂ ಕೊಹ್ಲಿ ಅವರ ವಿಕೆಟ್ಗಳನ್ನು ಕಳೆದುಕೊಂಡಿರುವ ಭಾರತ ಸಂಕಷ್ಟಕ್ಕೆ ಸಿಲುಕಿದೆ.

4 / 9
ನಂತರ ಕಣಕ್ಕಿಳಿದ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದ ಹೀರೋ ಶ್ರೇಯಸ್ ಅಯ್ಯರ್ 18 ರನ್ ಗಳಿಸಿ ಅಜಾಜ್ ಪಟೇಲ್ ಅವರಿಗೇ ವಿಕೆಟ್ ನೀಡಿದರು. ಆದರೆ, ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 80 ರನ್ ಸೇರಿಸಿದರು.

ನಂತರ ಕಣಕ್ಕಿಳಿದ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದ ಹೀರೋ ಶ್ರೇಯಸ್ ಅಯ್ಯರ್ 18 ರನ್ ಗಳಿಸಿ ಅಜಾಜ್ ಪಟೇಲ್ ಅವರಿಗೇ ವಿಕೆಟ್ ನೀಡಿದರು. ಆದರೆ, ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 80 ರನ್ ಸೇರಿಸಿದರು.

5 / 9
ಹೀಗೆ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಆಟಗಾರರು ಸಾಲುಸಾಲಾಗಿ ವಿಕೆಟ್ ಕಳೆದುಕೊಳ್ಳುತ್ತಾ ಇದ್ದರೆ ಅತ್ತ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಮಾತ್ರ ಅಮೋಘ ಶತಕ ಸಿಡಿಸಿ ಮಿಂಚಿದರು.

ಹೀಗೆ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಆಟಗಾರರು ಸಾಲುಸಾಲಾಗಿ ವಿಕೆಟ್ ಕಳೆದುಕೊಳ್ಳುತ್ತಾ ಇದ್ದರೆ ಅತ್ತ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಮಾತ್ರ ಅಮೋಘ ಶತಕ ಸಿಡಿಸಿ ಮಿಂಚಿದರು.

6 / 9
ಮಯಾಂಕ್ ಜೊತೆ ವೃದ್ಧಿಮಾನ್ ಸಾಹ ಮುರಿಯದ ಐದನೇ ವಿಕೆಟ್ಗೆ 61 ರನ್ಗಳ ಜೊತೆಯಾಟ ಕಟ್ಟಿ ತಂಡವು ಉತ್ತಮ ಮೊತ್ತ ಪೇರಿಸಲು ನೆರವಾದರು.

ಮಯಾಂಕ್ ಜೊತೆ ವೃದ್ಧಿಮಾನ್ ಸಾಹ ಮುರಿಯದ ಐದನೇ ವಿಕೆಟ್ಗೆ 61 ರನ್ಗಳ ಜೊತೆಯಾಟ ಕಟ್ಟಿ ತಂಡವು ಉತ್ತಮ ಮೊತ್ತ ಪೇರಿಸಲು ನೆರವಾದರು.

7 / 9
ಮಯಾಂಕ್ 120 ರನ್ ಗಳಿಸಿ ಔಟಾಗದೆ ಉಳಿದರು. ಅವರಿಗೆ ತಕ್ಕ ಸಾಥ್ ನೀಡುತ್ತಿರುವ ಸಾಹ 25 ರನ್ ಗಳಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಹೀಗೆ ಮೊದಲನೇ ದಿನದಾಟದಂತ್ಯಕ್ಕೆ ಟೀಮ್ ಇಂಡಿಯಾ 4 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿತು.

ಮಯಾಂಕ್ 120 ರನ್ ಗಳಿಸಿ ಔಟಾಗದೆ ಉಳಿದರು. ಅವರಿಗೆ ತಕ್ಕ ಸಾಥ್ ನೀಡುತ್ತಿರುವ ಸಾಹ 25 ರನ್ ಗಳಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಹೀಗೆ ಮೊದಲನೇ ದಿನದಾಟದಂತ್ಯಕ್ಕೆ ಟೀಮ್ ಇಂಡಿಯಾ 4 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿತು.

8 / 9
ನ್ಯೂಜಿಲೆಂಡ್ ತಂಡದ ಪರ ಬೌಲಿಂಗ್ ಮಾಡಿದ 6 ಬೌಲರ್ಗಳ ಪೈಕಿ ಅಜಾಝ್ ಪಟೇಲ್ ಮಾತ್ರ ವಿಕೆಟ್ ಪಡೆಯುವಲ್ಲಿ ಸಫಲರಾಗಿದ್ದಾರೆ. 29 ಓವರ್ ಬೌಲಿಂಗ್ ಮಾಡಿದ ಅಜಾಜ್ ಪಟೇಲ್ 10 ಮೇಡನ್ ಓವರ್ ಸಹಿತ 73 ರನ್ ನೀಡಿ ಟೀಮ್ ಇಂಡಿಯಾದ 4 ವಿಕೆಟ್ ಪಡೆದರು.

ನ್ಯೂಜಿಲೆಂಡ್ ತಂಡದ ಪರ ಬೌಲಿಂಗ್ ಮಾಡಿದ 6 ಬೌಲರ್ಗಳ ಪೈಕಿ ಅಜಾಝ್ ಪಟೇಲ್ ಮಾತ್ರ ವಿಕೆಟ್ ಪಡೆಯುವಲ್ಲಿ ಸಫಲರಾಗಿದ್ದಾರೆ. 29 ಓವರ್ ಬೌಲಿಂಗ್ ಮಾಡಿದ ಅಜಾಜ್ ಪಟೇಲ್ 10 ಮೇಡನ್ ಓವರ್ ಸಹಿತ 73 ರನ್ ನೀಡಿ ಟೀಮ್ ಇಂಡಿಯಾದ 4 ವಿಕೆಟ್ ಪಡೆದರು.

9 / 9
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!