AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಪ್ರೇಮಿಗಳ ಗಮನಕ್ಕೆ: ದಾಖಲೆಯೊಂದಿಗೆ ರಾಜಧಾನಿ ಎಕ್ಸ್​ಪ್ರೆಸ್ ಆಗಮನ

Mayank Yadav: ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ 150 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ರಾಜಧಾನಿ ಎಕ್ಸ್​ಪ್ರೆಸ್ ಎಂಬ ಬಿರುದು ಪಡೆದಿರುವ ಮಯಾಂಕ್ ಯಾದವ್ ಇದೀಗ ಟೀಮ್ ಇಂಡಿಯಾ ಪರ ವೇಗದ ಅಸ್ತ್ರದ ಪ್ರಯೋಗಕ್ಕೆ ಇಳಿದಿದ್ದಾರೆ. ಅಲ್ಲದೆ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದ ಮೊದಲ ಓವರ್ ಅನ್ನು ಮೇಡನ್ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 07, 2024 | 7:53 AM

Share
ಗ್ವಾಲಿಯರ್​ನ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಯುವ ವೇಗಿ ಮಯಾಂಕ್ ಯಾದವ್ (Mayank Yadav) ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಅದು ಸಹ ದಾಖಲೆಯೊಂದಿಗೆ ಎಂಬುದು ವಿಶೇಷ.

ಗ್ವಾಲಿಯರ್​ನ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಯುವ ವೇಗಿ ಮಯಾಂಕ್ ಯಾದವ್ (Mayank Yadav) ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಅದು ಸಹ ದಾಖಲೆಯೊಂದಿಗೆ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 14 ರನ್​ಗಳಿಗೆ ಬಾಂಗ್ಲಾದೇಶ್ ತಂಡವು 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 14 ರನ್​ಗಳಿಗೆ ಬಾಂಗ್ಲಾದೇಶ್ ತಂಡವು 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

2 / 7
ಇನ್ನು ಪವರ್​ಪ್ಲೇನಲ್ಲಿ ಉತ್ತಮ ಸ್ಕೋರ್​ಗಳಿಸುವ ಇರಾದೆಯಲ್ಲಿದ್ದ ಬಾಂಗ್ಲಾ ತಂಡಕ್ಕೆ ಸೂರ್ಯಕುಮಾರ್ ಕೌಂಟರ್ ಅಟ್ಯಾಕ್ ನೀಡಿದ್ದರು. ಅದು ಸಹ ಯುವ ವೇಗಿಯನ್ನು 6ನೇ ಓವರ್​ನಲ್ಲಿ ಕರೆ ತರುವ ಮೂಲಕ. ಈ ಓವರ್​ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ ಮಯಾಂಕ್ ಮಾದವ್ ನೀಡಿದ್ದು 0 ರನ್​.

ಇನ್ನು ಪವರ್​ಪ್ಲೇನಲ್ಲಿ ಉತ್ತಮ ಸ್ಕೋರ್​ಗಳಿಸುವ ಇರಾದೆಯಲ್ಲಿದ್ದ ಬಾಂಗ್ಲಾ ತಂಡಕ್ಕೆ ಸೂರ್ಯಕುಮಾರ್ ಕೌಂಟರ್ ಅಟ್ಯಾಕ್ ನೀಡಿದ್ದರು. ಅದು ಸಹ ಯುವ ವೇಗಿಯನ್ನು 6ನೇ ಓವರ್​ನಲ್ಲಿ ಕರೆ ತರುವ ಮೂಲಕ. ಈ ಓವರ್​ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ ಮಯಾಂಕ್ ಮಾದವ್ ನೀಡಿದ್ದು 0 ರನ್​.

3 / 7
ಅಂತಾರಾಷ್ಟ್ರೀಯ ಕ್ರಿಕೆಟ್​ನ ಮೊದಲ ಓವರ್​ ಅನ್ನು ಮೇಡನ್ ಮಾಡುವ ಮೂಲಕ ಶುಭಾರಂಭ ಮಾಡಿದ ಮಯಾಂಕ್ ಯಾದವ್ 2ನೇ ಓವರ್​ನಲ್ಲಿ ನೀಡಿದ್ದು ಕೇವಲ 3 ರನ್​ ಮಾತ್ರ. ಅಲ್ಲದೆ ಮಹಮ್ಮದುಲ್ಲಾ (1) ರನ್ನು ಔಟ್ ಮಾಡಿ ಚೊಚ್ಚಲ ವಿಕೆಟ್​ನ್ನು ಸಹ ತಮ್ಮದಾಗಿಸಿಕೊಂಡರು.

ಅಂತಾರಾಷ್ಟ್ರೀಯ ಕ್ರಿಕೆಟ್​ನ ಮೊದಲ ಓವರ್​ ಅನ್ನು ಮೇಡನ್ ಮಾಡುವ ಮೂಲಕ ಶುಭಾರಂಭ ಮಾಡಿದ ಮಯಾಂಕ್ ಯಾದವ್ 2ನೇ ಓವರ್​ನಲ್ಲಿ ನೀಡಿದ್ದು ಕೇವಲ 3 ರನ್​ ಮಾತ್ರ. ಅಲ್ಲದೆ ಮಹಮ್ಮದುಲ್ಲಾ (1) ರನ್ನು ಔಟ್ ಮಾಡಿ ಚೊಚ್ಚಲ ವಿಕೆಟ್​ನ್ನು ಸಹ ತಮ್ಮದಾಗಿಸಿಕೊಂಡರು.

4 / 7
ಅಲ್ಲದೆ ಈ ಪಂದ್ಯದಲ್ಲಿ 147 kph ವೇಗದದಲ್ಲಿ ಚೆಂಡೆಸೆದ ಮಯಾಂಕ್ ಯಾದವ್ 4 ಓವರ್​ಗಳಲ್ಲಿ ಕೇವಲ 21 ರನ್ ನೀಡಿ 1 ವಿಕೆಟ್​ನೊಂದಿಗೆ ತಮ್ಮ ಚೊಚ್ಚಲ ಪಂದ್ಯವನ್ನು ಕೊನೆಗೊಳಿಸಿದರು. ಈ ಮೂಲಕ ಮೊದಲ ಪಂದ್ಯದಲ್ಲೇ ಯುವ ವೇಗಿ ತನ್ನ ವೇಗದ ಅಸ್ತ್ರದೊಂದಿಗೆ ಗಮನ ಸೆಳೆದಿದ್ದಾರೆ.

ಅಲ್ಲದೆ ಈ ಪಂದ್ಯದಲ್ಲಿ 147 kph ವೇಗದದಲ್ಲಿ ಚೆಂಡೆಸೆದ ಮಯಾಂಕ್ ಯಾದವ್ 4 ಓವರ್​ಗಳಲ್ಲಿ ಕೇವಲ 21 ರನ್ ನೀಡಿ 1 ವಿಕೆಟ್​ನೊಂದಿಗೆ ತಮ್ಮ ಚೊಚ್ಚಲ ಪಂದ್ಯವನ್ನು ಕೊನೆಗೊಳಿಸಿದರು. ಈ ಮೂಲಕ ಮೊದಲ ಪಂದ್ಯದಲ್ಲೇ ಯುವ ವೇಗಿ ತನ್ನ ವೇಗದ ಅಸ್ತ್ರದೊಂದಿಗೆ ಗಮನ ಸೆಳೆದಿದ್ದಾರೆ.

5 / 7
ಅದರಲ್ಲೂ ಟಿ20 ಕ್ರಿಕೆಟ್​ನ ಚೊಚ್ಚಲ ಪಂದ್ಯದಲ್ಲೇ ಮೇಡನ್ ಓವರ್ ಎಸೆದ ಭಾರತದ ಮೂರನೇ ವೇಗಿ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಇಂತಹದೊಂದು ದಾಖಲೆಯನ್ನು ಅಜಿತ್ ಅಗರ್ಕರ್ (2006) ಹಾಗೂ ಅರ್ಷದೀಪ್ ಸಿಂಗ್ (2022) ಮಾತ್ರ ನಿರ್ಮಿಸಿದ್ದರು. ಇದೀಗ ಮೊದಲ ಟಿ20 ಪಂದ್ಯದ ಮೊದಲ ಓವರ್​ನಲ್ಲಿ ಯಾವುದೇ ರನ್ ನೀಡದ ಟೀಮ್ ಇಂಡಿಯಾದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಮಯಾಂಕ್​​ ಪಾತ್ರರಾಗಿದ್ದಾರೆ.

ಅದರಲ್ಲೂ ಟಿ20 ಕ್ರಿಕೆಟ್​ನ ಚೊಚ್ಚಲ ಪಂದ್ಯದಲ್ಲೇ ಮೇಡನ್ ಓವರ್ ಎಸೆದ ಭಾರತದ ಮೂರನೇ ವೇಗಿ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಇಂತಹದೊಂದು ದಾಖಲೆಯನ್ನು ಅಜಿತ್ ಅಗರ್ಕರ್ (2006) ಹಾಗೂ ಅರ್ಷದೀಪ್ ಸಿಂಗ್ (2022) ಮಾತ್ರ ನಿರ್ಮಿಸಿದ್ದರು. ಇದೀಗ ಮೊದಲ ಟಿ20 ಪಂದ್ಯದ ಮೊದಲ ಓವರ್​ನಲ್ಲಿ ಯಾವುದೇ ರನ್ ನೀಡದ ಟೀಮ್ ಇಂಡಿಯಾದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಮಯಾಂಕ್​​ ಪಾತ್ರರಾಗಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 19.5 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಯಿತು. 128 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 11.5 ಓವರ್​ಗಳಲ್ಲಿ 132 ರನ್​ ಚಚ್ಚಿ, 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 19.5 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಯಿತು. 128 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 11.5 ಓವರ್​ಗಳಲ್ಲಿ 132 ರನ್​ ಚಚ್ಚಿ, 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

7 / 7
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ