AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬ್ಯಾಟ್ ಗಿಫ್ಟ್ ನೀಡಿದ ಬಾಂಗ್ಲಾ ಆಟಗಾರ..!

Mehidy Hasan Miraz: ಮೆಹದಿ ಹಸನ್ ಮಿರಾಝ್ ಬಾಂಗ್ಲಾದೇಶ್ ಪರ ಈವರೆಗೆ 47 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಶತಕ ಹಾಗೂ 8 ಅರ್ಧಶತಕಗಳೊಂದಿಗೆ ಒಟ್ಟು 1689 ರನ್ ಕಲೆಹಾಕಿದ್ದಾರೆ. ಹಾಗೆಯೇ 183 ವಿಕೆಟ್​ಗಳನ್ನು ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಇನ್ನು 97 ಏಕದಿನ ಪಂದ್ಯಗಳಿಂದ 106 ವಿಕೆಟ್ ಪಡೆದಿರುವ ಮೆಹಿದಿ, ಒನ್​ಡೇ ನಲ್ಲಿ 1331 ರನ್​ ಕಲೆಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 03, 2024 | 4:03 PM

Share
ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದ ಬಳಿಕ ಶಕೀಬ್ ಅಲ್ ಹಸನ್​ಗೆ ವಿರಾಟ್ ಕೊಹ್ಲಿ ಬ್ಯಾಟ್ ಗಿಫ್ಟ್ ನೀಡಿದ್ದರು. ಟೆಸ್ಟ್​ ಕ್ರಿಕೆಟ್​ ಕೆರಿಯರ್​ಗೆ ನಿವೃತ್ತಿ ಘೋಷಿಸಿರುವ ಶಕೀಬ್​ಗೆ ತಮ್ಮ ಸಹಿ ಹೊಂದಿರುವ ಬ್ಯಾಟ್​ನ್ನು ಉಡುಗೊರೆಯಾಗಿ ನೀಡಿ ಕೊಹ್ಲಿ ಬೀಳ್ಕೊಟ್ಟಿದ್ದರು. ಇದರ ಬೆನ್ನಲ್ಲೇ ಮೆಹಿದಿ ಹಸನ್ ಮಿರಾಝ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬ್ಯಾಟ್​ಗಳನ್ನು ನೀಡಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದ ಬಳಿಕ ಶಕೀಬ್ ಅಲ್ ಹಸನ್​ಗೆ ವಿರಾಟ್ ಕೊಹ್ಲಿ ಬ್ಯಾಟ್ ಗಿಫ್ಟ್ ನೀಡಿದ್ದರು. ಟೆಸ್ಟ್​ ಕ್ರಿಕೆಟ್​ ಕೆರಿಯರ್​ಗೆ ನಿವೃತ್ತಿ ಘೋಷಿಸಿರುವ ಶಕೀಬ್​ಗೆ ತಮ್ಮ ಸಹಿ ಹೊಂದಿರುವ ಬ್ಯಾಟ್​ನ್ನು ಉಡುಗೊರೆಯಾಗಿ ನೀಡಿ ಕೊಹ್ಲಿ ಬೀಳ್ಕೊಟ್ಟಿದ್ದರು. ಇದರ ಬೆನ್ನಲ್ಲೇ ಮೆಹಿದಿ ಹಸನ್ ಮಿರಾಝ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬ್ಯಾಟ್​ಗಳನ್ನು ನೀಡಿದ್ದಾರೆ.

1 / 5
ಬಾಂಗ್ಲಾದೇಶ್ ತಂಡದ ಯುವ ಆಲ್​ರೌಂಡರ್ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬ್ಯಾಟ್​ಗಳನ್ನು ಗಿಫ್ಟ್ ನೀಡಲು ಮುಖ್ಯ ಕಾರಣ ಹೊಸ ಉದ್ಯಮ ಆರಂಭಿಸಿರುವುದು. ಅಂದರೆ ಮೆಹಿದಿ ಹಸನ್ ಮಿರಾಝ್ ಬಾಂಗ್ಲಾದೇಶದಲ್ಲಿ MKS ಹೆಸರಿನ ಬ್ಯಾಟ್ ನಿರ್ಮಾಣ ಕಂಪೆನಿಯನ್ನು ಆರಂಭಿಸಿದ್ದಾರೆ.

ಬಾಂಗ್ಲಾದೇಶ್ ತಂಡದ ಯುವ ಆಲ್​ರೌಂಡರ್ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬ್ಯಾಟ್​ಗಳನ್ನು ಗಿಫ್ಟ್ ನೀಡಲು ಮುಖ್ಯ ಕಾರಣ ಹೊಸ ಉದ್ಯಮ ಆರಂಭಿಸಿರುವುದು. ಅಂದರೆ ಮೆಹಿದಿ ಹಸನ್ ಮಿರಾಝ್ ಬಾಂಗ್ಲಾದೇಶದಲ್ಲಿ MKS ಹೆಸರಿನ ಬ್ಯಾಟ್ ನಿರ್ಮಾಣ ಕಂಪೆನಿಯನ್ನು ಆರಂಭಿಸಿದ್ದಾರೆ.

2 / 5
ಭಾರತದ ವಿರುದ್ಧದ ಟೆಸ್ಟ್ ಸರಣಿಗಾಗಿ ತನ್ನ ಕಂಪೆನಿಯ ಬ್ಯಾಟ್​ಗಳೊಂದಿಗೆ ಆಗಮಿಸಿದ್ದ ಮೆಹಿದಿ ಹಸನ್ ಅದನ್ನು ವಿರಾಟ್ ಕೊಹ್ಲಿಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ಗಿಫ್ಟ್ ಸ್ವೀಕರಿಸಿದ ಬಳಿಕ ಮಾತನಾಡಿದ ಕೊಹ್ಲಿ, ಬ್ಯಾಟ್ ತುಂಬಾ ಚೆನ್ನಾಗಿದೆ. ಇದೇ ಕ್ವಾಲಿಟಿಯಲ್ಲಿ ಉತ್ತಮ ಬ್ಯಾಟ್​ಗಳನ್ನು ನಿರ್ಮಿಸಿ ಎಂದು ವಿಶಸ್ ತಿಳಿಸಿದ್ದಾರೆ.

ಭಾರತದ ವಿರುದ್ಧದ ಟೆಸ್ಟ್ ಸರಣಿಗಾಗಿ ತನ್ನ ಕಂಪೆನಿಯ ಬ್ಯಾಟ್​ಗಳೊಂದಿಗೆ ಆಗಮಿಸಿದ್ದ ಮೆಹಿದಿ ಹಸನ್ ಅದನ್ನು ವಿರಾಟ್ ಕೊಹ್ಲಿಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ಗಿಫ್ಟ್ ಸ್ವೀಕರಿಸಿದ ಬಳಿಕ ಮಾತನಾಡಿದ ಕೊಹ್ಲಿ, ಬ್ಯಾಟ್ ತುಂಬಾ ಚೆನ್ನಾಗಿದೆ. ಇದೇ ಕ್ವಾಲಿಟಿಯಲ್ಲಿ ಉತ್ತಮ ಬ್ಯಾಟ್​ಗಳನ್ನು ನಿರ್ಮಿಸಿ ಎಂದು ವಿಶಸ್ ತಿಳಿಸಿದ್ದಾರೆ.

3 / 5
ಇನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೂ ಮೆಹಿದಿ ಹಸನ್ ಮಿರಾಝ್ MKS  ಹೆಸರಿನ ವಿಶೇಷ ಬ್ಯಾಟ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಹಿಟ್​ಮ್ಯಾನ್, ಮೆಹಿದಿ ನನಗೆ ತುಂಬಾ ದಿನಗಳಿಂದ ಪರಿಚಯ. ಈಗ ಹೊಸ ಉದ್ಯಮ ಆರಂಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಈ ಕಂಪೆನಿಯು ಅತ್ಯುನ್ನತ ಎತ್ತರಕ್ಕೇರಲಿ ಎಂದು ಆಶಿಸುತ್ತೇನೆ ಎಂದು ಹಾರೈಸಿದ್ದಾರೆ.

ಇನ್ನು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೂ ಮೆಹಿದಿ ಹಸನ್ ಮಿರಾಝ್ MKS ಹೆಸರಿನ ವಿಶೇಷ ಬ್ಯಾಟ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಹಿಟ್​ಮ್ಯಾನ್, ಮೆಹಿದಿ ನನಗೆ ತುಂಬಾ ದಿನಗಳಿಂದ ಪರಿಚಯ. ಈಗ ಹೊಸ ಉದ್ಯಮ ಆರಂಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಈ ಕಂಪೆನಿಯು ಅತ್ಯುನ್ನತ ಎತ್ತರಕ್ಕೇರಲಿ ಎಂದು ಆಶಿಸುತ್ತೇನೆ ಎಂದು ಹಾರೈಸಿದ್ದಾರೆ.

4 / 5
26 ವರ್ಷದ ಮೆಹಿದಿ ಹಸನ್ ಮಿರಾಝ್ ಬಾಂಗ್ಲಾದೇಶ್ ಪರ ಈವರೆಗೆ 47 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಶತಕ ಹಾಗೂ 8 ಅರ್ಧಶತಕಗಳೊಂದಿಗೆ ಒಟ್ಟು 1689 ರನ್ ಕಲೆಹಾಕಿದ್ದಾರೆ. ಹಾಗೆಯೇ 183 ವಿಕೆಟ್​ಗಳನ್ನು ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಇನ್ನು 97 ಏಕದಿನ ಪಂದ್ಯಗಳಿಂದ 106 ವಿಕೆಟ್ ಪಡೆದಿರುವ ಮೆಹಿದಿ, ಒನ್​ಡೇ ನಲ್ಲಿ 1331 ರನ್​ ಕಲೆಹಾಕಿದ್ದಾರೆ. ಇದೀಗ ಕ್ರಿಕೆಟ್​ನೊಂದಿಗೆ ಬ್ಯಾಟ್ ಉದ್ಯಮಕ್ಕೂ ಯುವ ಆಟಗಾರ ಕಾಲಿಟ್ಟಿದ್ದು, ತನ್ನ ಕಂಪೆನಿಯ ಬ್ಯಾಟ್​ಗಳನ್ನು ಟೀಮ್ ಇಂಡಿಯಾ ದಿಗ್ಗಜರಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

26 ವರ್ಷದ ಮೆಹಿದಿ ಹಸನ್ ಮಿರಾಝ್ ಬಾಂಗ್ಲಾದೇಶ್ ಪರ ಈವರೆಗೆ 47 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಶತಕ ಹಾಗೂ 8 ಅರ್ಧಶತಕಗಳೊಂದಿಗೆ ಒಟ್ಟು 1689 ರನ್ ಕಲೆಹಾಕಿದ್ದಾರೆ. ಹಾಗೆಯೇ 183 ವಿಕೆಟ್​ಗಳನ್ನು ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಇನ್ನು 97 ಏಕದಿನ ಪಂದ್ಯಗಳಿಂದ 106 ವಿಕೆಟ್ ಪಡೆದಿರುವ ಮೆಹಿದಿ, ಒನ್​ಡೇ ನಲ್ಲಿ 1331 ರನ್​ ಕಲೆಹಾಕಿದ್ದಾರೆ. ಇದೀಗ ಕ್ರಿಕೆಟ್​ನೊಂದಿಗೆ ಬ್ಯಾಟ್ ಉದ್ಯಮಕ್ಕೂ ಯುವ ಆಟಗಾರ ಕಾಲಿಟ್ಟಿದ್ದು, ತನ್ನ ಕಂಪೆನಿಯ ಬ್ಯಾಟ್​ಗಳನ್ನು ಟೀಮ್ ಇಂಡಿಯಾ ದಿಗ್ಗಜರಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

5 / 5
Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು