Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Ranking: ನಂ.1 ಪಟ್ಟಕ್ಕೇರುವ ತವಕದಲ್ಲಿ ಪಾಕಿಸ್ತಾನ! ಭಾರತಕ್ಕೆ ಯಾವ ಸ್ಥಾನ?

ICC ODI Ranking: ನೂತನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ 118 ರೇಟಿಂಗ್‌ ಪಾಯಿಂಟ್ ಸಂಪಾಧಿಸಿರುವ ಪಾಕಿಸ್ತಾನ ಪ್ರಸ್ತುತ 2ನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಕೂಡ ಇಷ್ಟೇ ಸಂಖ್ಯೆಯ ರೇಟಿಂಗ್‌ ಪಾಯಿಂಟ್ ಹೊಂದಿದೆ. ಆದರೆ ಅದು ಪಾಯಿಂಟ್​ಗಳ ವಿಚಾರದಲ್ಲಿ ಮುಂದಿದೆ. ಇದೀಗ ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಪಂದ್ಯವನ್ನು ಪಾಕ್ ಗೆದ್ದರೆ, ಅದು ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ನಂ.1 ಸ್ಥಾನವನ್ನು ಅಲಂಕರಿಸಲಿದೆ.

ಪೃಥ್ವಿಶಂಕರ
|

Updated on: Aug 26, 2023 | 7:43 AM

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದು ಬೀಗಿದ ಪಾಕಿಸ್ತಾನದ ಪುರುಷರ ಕ್ರಿಕೆಟ್ ತಂಡ ಐಸಿಸಿ ಏಕದಿನ ತಂಡಗಳ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಲು ಇನ್ನೊಂದು ಹೆಜ್ಜೆ ಹಿಂದೆ ಇದೆ.

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದು ಬೀಗಿದ ಪಾಕಿಸ್ತಾನದ ಪುರುಷರ ಕ್ರಿಕೆಟ್ ತಂಡ ಐಸಿಸಿ ಏಕದಿನ ತಂಡಗಳ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಲು ಇನ್ನೊಂದು ಹೆಜ್ಜೆ ಹಿಂದೆ ಇದೆ.

1 / 9
ನೂತನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ 118 ರೇಟಿಂಗ್‌ ಪಾಯಿಂಟ್ ಸಂಪಾಧಿಸಿರುವ ಪಾಕಿಸ್ತಾನ ಪ್ರಸ್ತುತ 2ನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಕೂಡ ಇಷ್ಟೇ ಸಂಖ್ಯೆಯ ರೇಟಿಂಗ್‌ ಪಾಯಿಂಟ್ ಹೊಂದಿದೆ. ಆದರೆ ಅದು ಪಾಯಿಂಟ್​ಗಳ ವಿಚಾರದಲ್ಲಿ ಮುಂದಿದೆ.

ನೂತನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ 118 ರೇಟಿಂಗ್‌ ಪಾಯಿಂಟ್ ಸಂಪಾಧಿಸಿರುವ ಪಾಕಿಸ್ತಾನ ಪ್ರಸ್ತುತ 2ನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಕೂಡ ಇಷ್ಟೇ ಸಂಖ್ಯೆಯ ರೇಟಿಂಗ್‌ ಪಾಯಿಂಟ್ ಹೊಂದಿದೆ. ಆದರೆ ಅದು ಪಾಯಿಂಟ್​ಗಳ ವಿಚಾರದಲ್ಲಿ ಮುಂದಿದೆ.

2 / 9
ಇದೀಗ ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಪಂದ್ಯವನ್ನು ಪಾಕ್ ಗೆದ್ದರೆ, ಅದು ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ನಂ.1 ಸ್ಥಾನವನ್ನು ಅಲಂಕರಿಸಲಿದೆ.

ಇದೀಗ ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಪಂದ್ಯವನ್ನು ಪಾಕ್ ಗೆದ್ದರೆ, ಅದು ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ನಂ.1 ಸ್ಥಾನವನ್ನು ಅಲಂಕರಿಸಲಿದೆ.

3 / 9
ಆದಾಗ್ಯೂ, ಏಕದಿನ ವಿಶ್ವಕಪ್​ಗೆ ತಯಾರಿ ನಡೆಸಲು ಸೆಪ್ಟೆಂಬರ್‌ನಲ್ಲಿ ಒಟ್ಟು ಎಂಟು ಏಕದಿನ ಪಂದ್ಯಗಳನ್ನು ಆಡಲು ಆಸ್ಟ್ರೇಲಿಯಾ ಸಜ್ಜಾಗಿರುವುದರಿಂದ ಅದು ಶೀಘ್ರದಲ್ಲೇ ಮತ್ತೆ ಅಗ್ರ ಸ್ಥಾನಕ್ಕೇರುವ ಅವಕಾಶ ಪಡೆದಿದೆ. ಈ ಎಂಟು ಪಂದ್ಯಗಳ ಪೈಕಿ ಆಸ್ಟ್ರೇಲಿಯಾ, ಐದು ಪಂದ್ಯಗಳ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸಿದರೆ, ಆ ನಂತರ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತವನ್ನು ಎದುರಿಸಲಿದೆ.

ಆದಾಗ್ಯೂ, ಏಕದಿನ ವಿಶ್ವಕಪ್​ಗೆ ತಯಾರಿ ನಡೆಸಲು ಸೆಪ್ಟೆಂಬರ್‌ನಲ್ಲಿ ಒಟ್ಟು ಎಂಟು ಏಕದಿನ ಪಂದ್ಯಗಳನ್ನು ಆಡಲು ಆಸ್ಟ್ರೇಲಿಯಾ ಸಜ್ಜಾಗಿರುವುದರಿಂದ ಅದು ಶೀಘ್ರದಲ್ಲೇ ಮತ್ತೆ ಅಗ್ರ ಸ್ಥಾನಕ್ಕೇರುವ ಅವಕಾಶ ಪಡೆದಿದೆ. ಈ ಎಂಟು ಪಂದ್ಯಗಳ ಪೈಕಿ ಆಸ್ಟ್ರೇಲಿಯಾ, ಐದು ಪಂದ್ಯಗಳ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸಿದರೆ, ಆ ನಂತರ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತವನ್ನು ಎದುರಿಸಲಿದೆ.

4 / 9
ಇನ್ನು ಮೂರನೇ ಸ್ಥಾನದಲ್ಲಿರುವ ಟೀಂ ಇಂಡಿಯಾ, ರೇಟಿಂಗ್ಸ್ ವಿಚಾರದಲ್ಲಿ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾಕ್ಕಿಂತ ಐದು ಅಂಕಗಳಿಂದ ಹಿಂದಿದೆ.

ಇನ್ನು ಮೂರನೇ ಸ್ಥಾನದಲ್ಲಿರುವ ಟೀಂ ಇಂಡಿಯಾ, ರೇಟಿಂಗ್ಸ್ ವಿಚಾರದಲ್ಲಿ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾಕ್ಕಿಂತ ಐದು ಅಂಕಗಳಿಂದ ಹಿಂದಿದೆ.

5 / 9
ನ್ಯೂಜಿಲೆಂಡ್ 104 ರೇಟಿಂಗ್‌ಗಳೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

ನ್ಯೂಜಿಲೆಂಡ್ 104 ರೇಟಿಂಗ್‌ಗಳೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

6 / 9
 ಪ್ರಸ್ತುತ ವಿಶ್ವ ಚಾಂಪಿಯನ್ಆಗಿರುವ ಇಂಗ್ಲೆಂಡ್ 101 ರೇಟಿಂಗ್ಸ್​ನೊಂದಿಗೆ ಐದನೇ ಸ್ಥಾನದಲ್ಲಿದೆ.

ಪ್ರಸ್ತುತ ವಿಶ್ವ ಚಾಂಪಿಯನ್ಆಗಿರುವ ಇಂಗ್ಲೆಂಡ್ 101 ರೇಟಿಂಗ್ಸ್​ನೊಂದಿಗೆ ಐದನೇ ಸ್ಥಾನದಲ್ಲಿದೆ.

7 / 9
ಆರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ಇದ್ದರೆ. ಭಾರತದ ವಿರುದ್ಧ 1-2 ಅಂತರದಲ್ಲಿ ಏಕದಿನ ಸರಣಿ ಸೋತ ವೆಸ್ಟ್ ಇಂಡೀಸ್ 7ನೇ ಸ್ಥಾನದಲ್ಲಿದೆ.

ಆರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ಇದ್ದರೆ. ಭಾರತದ ವಿರುದ್ಧ 1-2 ಅಂತರದಲ್ಲಿ ಏಕದಿನ ಸರಣಿ ಸೋತ ವೆಸ್ಟ್ ಇಂಡೀಸ್ 7ನೇ ಸ್ಥಾನದಲ್ಲಿದೆ.

8 / 9
ಆ ನಂತರ ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ತಂಡಗಳು ಕ್ರಮವಾಗಿ 8, 9 ಹಾಗೂ 10ನೇ ಸ್ಥಾನವನ್ನು ಪಡೆದುಕೊಂಡಿವೆ.

ಆ ನಂತರ ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ತಂಡಗಳು ಕ್ರಮವಾಗಿ 8, 9 ಹಾಗೂ 10ನೇ ಸ್ಥಾನವನ್ನು ಪಡೆದುಕೊಂಡಿವೆ.

9 / 9
Follow us
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ