AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹೀಗೂ ಸೋಲ್ತಾರಾ? ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಅಪಸ್ವರ

India vs England Test: ಫೆಬ್ರವರಿ 2 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದ್ದು, ಈ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡುವ ನಿರೀಕ್ಷೆಯಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jan 29, 2024 | 10:53 AM

Share
ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೇವಲ 28 ರನ್​ಗಳಿಂದ ಟೀಮ್ ಇಂಡಿಯಾ  ಕೈಚೆಲ್ಲಿಕೊಂಡಿದೆ. ಈ ಸೋಲಿನ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ (Rohit Sharma) ಅವರ ನಾಯಕತ್ವದ ಬಗ್ಗೆ ಅಪಸ್ವರಗಳು ಕೇಳಿಬರಲಾಂಭಿಸಿದೆ.

ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೇವಲ 28 ರನ್​ಗಳಿಂದ ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿದೆ. ಈ ಸೋಲಿನ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ (Rohit Sharma) ಅವರ ನಾಯಕತ್ವದ ಬಗ್ಗೆ ಅಪಸ್ವರಗಳು ಕೇಳಿಬರಲಾಂಭಿಸಿದೆ.

1 / 8
ಏಕೆಂದರೆ ಈ ಪಂದ್ಯದ ಮೊದಲ ದಿನದಾಟದಿಂದಲೇ ಟೀಮ್ ಇಂಡಿಯಾ ಮೇಲುಗೈ ಸಾಧಿಸಿತ್ತು. ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ 246 ರನ್ ಬಾರಿಸಿದರೆ, ಭಾರತ ತಂಡ 436 ರನ್ ಪೇರಿಸಿತು. ಈ ಮೂಲಕ ಟೀಮ್ ಇಂಡಿಯಾ 190 ರನ್​ಗಳ ಮುನ್ನಡೆ ಸಾಧಿಸಿತ್ತು.

ಏಕೆಂದರೆ ಈ ಪಂದ್ಯದ ಮೊದಲ ದಿನದಾಟದಿಂದಲೇ ಟೀಮ್ ಇಂಡಿಯಾ ಮೇಲುಗೈ ಸಾಧಿಸಿತ್ತು. ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ 246 ರನ್ ಬಾರಿಸಿದರೆ, ಭಾರತ ತಂಡ 436 ರನ್ ಪೇರಿಸಿತು. ಈ ಮೂಲಕ ಟೀಮ್ ಇಂಡಿಯಾ 190 ರನ್​ಗಳ ಮುನ್ನಡೆ ಸಾಧಿಸಿತ್ತು.

2 / 8
ಇನ್ನು ದ್ವಿತೀಯ ಇನಿಂಗ್ಸ್​ ಆರಂಭಿಸಿದ ಇಂಗ್ಲೆಂಡ್ ತಂಡವು ಕೇವಲ 163 ರನ್​ಗಳಿಗೆ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಅಂದರೆ 27 ರನ್​ಗಳ ಹಿನ್ನಡೆ ಇರುವಾಗಲೇ ಆಂಗ್ಲರು ಐದು ವಿಕೆಟ್​ಗಳನ್ನು ಕಳೆದುಕೊಂಡಿದ್ದರು. ಆದರೆ ಆ ಬಳಿಕ ಒಲೀ ಪೋಪ್ ಮತ್ತು ಬೆನ್ ಫೋಕ್ಸ್ 6ನೇ ವಿಕೆಟ್‌ಗೆ 112 ರನ್‌ಗಳ ಜೊತೆಯಾಟವಾಡಿದರು. ಇನ್ನು 7ನೇ ವಿಕೆಟ್​ನಲ್ಲೂ ಅರ್ಧಶತಕದ ಪಾಲುದಾರಿಕೆ ನೀಡುವಲ್ಲಿ ಪೋಪ್-ರೆಹಾನ್ ಯಶಸ್ವಿಯಾದರು. ಈ ಮೂಲಕ ಟೀಮ್ ಇಂಡಿಯಾಗೆ 231 ರನ್​ಗಳ ಟಾರ್ಗೆಟ್ ನೀಡಿದ್ದರು.

ಇನ್ನು ದ್ವಿತೀಯ ಇನಿಂಗ್ಸ್​ ಆರಂಭಿಸಿದ ಇಂಗ್ಲೆಂಡ್ ತಂಡವು ಕೇವಲ 163 ರನ್​ಗಳಿಗೆ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಅಂದರೆ 27 ರನ್​ಗಳ ಹಿನ್ನಡೆ ಇರುವಾಗಲೇ ಆಂಗ್ಲರು ಐದು ವಿಕೆಟ್​ಗಳನ್ನು ಕಳೆದುಕೊಂಡಿದ್ದರು. ಆದರೆ ಆ ಬಳಿಕ ಒಲೀ ಪೋಪ್ ಮತ್ತು ಬೆನ್ ಫೋಕ್ಸ್ 6ನೇ ವಿಕೆಟ್‌ಗೆ 112 ರನ್‌ಗಳ ಜೊತೆಯಾಟವಾಡಿದರು. ಇನ್ನು 7ನೇ ವಿಕೆಟ್​ನಲ್ಲೂ ಅರ್ಧಶತಕದ ಪಾಲುದಾರಿಕೆ ನೀಡುವಲ್ಲಿ ಪೋಪ್-ರೆಹಾನ್ ಯಶಸ್ವಿಯಾದರು. ಈ ಮೂಲಕ ಟೀಮ್ ಇಂಡಿಯಾಗೆ 231 ರನ್​ಗಳ ಟಾರ್ಗೆಟ್ ನೀಡಿದ್ದರು.

3 / 8
ಅಂದರೆ ಇಲ್ಲಿ ಒಲೀ ಪೋಪ್ (196) ಅವರನ್ನು ಹೊರತುಪಡಿಸಿ ಉಳಿದ ನಾಲ್ವರ ವಿಕೆಟ್ ಪಡೆಯುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ವಿಫಲರಾಗಿದ್ದರು. ಇದಕ್ಕೆ ಮುಖ್ಯ ಕಾರಣ ರೋಹಿತ್ ಶರ್ಮಾ ಅವರ ಕಳಪೆ ನಾಯಕತ್ವ ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಂದರೆ ಇಲ್ಲಿ ಒಲೀ ಪೋಪ್ (196) ಅವರನ್ನು ಹೊರತುಪಡಿಸಿ ಉಳಿದ ನಾಲ್ವರ ವಿಕೆಟ್ ಪಡೆಯುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ವಿಫಲರಾಗಿದ್ದರು. ಇದಕ್ಕೆ ಮುಖ್ಯ ಕಾರಣ ರೋಹಿತ್ ಶರ್ಮಾ ಅವರ ಕಳಪೆ ನಾಯಕತ್ವ ಎಂಬ ಮಾತುಗಳು ಕೇಳಿ ಬರುತ್ತಿವೆ.

4 / 8
ಇಂಗ್ಲೆಂಡ್ ಆಟಗಾರರು ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ್ದರೂ ರೋಹಿತ್ ಶರ್ಮಾ ಫೀಲ್ಡಿಂಗ್​ನಲ್ಲಿ ಮಹತ್ವದ ಬದಲಾವಣೆ ಮಾಡಿರಲಿಲ್ಲ. ಪೋಪ್‌ ಸ್ವೀಪ್‌ ಅಥವಾ ರಿವರ್ಸ್ ಸ್ವೀಪ್‌ಗಳನ್ನು ಬಾರಿಸುತ್ತಿದ್ದರೂ ಅದಕ್ಕೆ ತಕ್ಕದಂತಹ ಪ್ರತಿತಂತ್ರವನ್ನು ರೂಪಿಸುವಲ್ಲಿ ಟೀಮ್ ಇಂಡಿಯಾ ನಾಯಕ ವಿಫಲರಾದರು. ಪರಿಣಾಮ ಪೋಪ್ ಸುಲಭವಾಗಿ ರನ್​ಗಳಿಸುತ್ತಾ ಸಾಗಿದರು.

ಇಂಗ್ಲೆಂಡ್ ಆಟಗಾರರು ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ್ದರೂ ರೋಹಿತ್ ಶರ್ಮಾ ಫೀಲ್ಡಿಂಗ್​ನಲ್ಲಿ ಮಹತ್ವದ ಬದಲಾವಣೆ ಮಾಡಿರಲಿಲ್ಲ. ಪೋಪ್‌ ಸ್ವೀಪ್‌ ಅಥವಾ ರಿವರ್ಸ್ ಸ್ವೀಪ್‌ಗಳನ್ನು ಬಾರಿಸುತ್ತಿದ್ದರೂ ಅದಕ್ಕೆ ತಕ್ಕದಂತಹ ಪ್ರತಿತಂತ್ರವನ್ನು ರೂಪಿಸುವಲ್ಲಿ ಟೀಮ್ ಇಂಡಿಯಾ ನಾಯಕ ವಿಫಲರಾದರು. ಪರಿಣಾಮ ಪೋಪ್ ಸುಲಭವಾಗಿ ರನ್​ಗಳಿಸುತ್ತಾ ಸಾಗಿದರು.

5 / 8
ಇತ್ತ 163 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡರೂ ಕೊನೆಯ ಐದು ವಿಕೆಟ್​ಗಳೊಂದಿಗೆ ಇಂಗ್ಲೆಂಡ್ ತಂಡ 257 ರನ್ ಪೇರಿಸಿತು. ಅದು ಕೂಡ ಬೌಲರ್​ಗಳ ನೆರವಿನಿಂದ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿಯೇ ರೋಹಿತ್ ಶರ್ಮಾ ಅವರದ್ದು ಸಾಧಾರಣ ನಾಯಕತ್ವ, ಅದರಲ್ಲೇನು ವಿಶೇಷವಿರಲಿಲ್ಲ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಅಭಿಪ್ರಾಯಪಟ್ಟಿದ್ದಾರೆ.

ಇತ್ತ 163 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡರೂ ಕೊನೆಯ ಐದು ವಿಕೆಟ್​ಗಳೊಂದಿಗೆ ಇಂಗ್ಲೆಂಡ್ ತಂಡ 257 ರನ್ ಪೇರಿಸಿತು. ಅದು ಕೂಡ ಬೌಲರ್​ಗಳ ನೆರವಿನಿಂದ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿಯೇ ರೋಹಿತ್ ಶರ್ಮಾ ಅವರದ್ದು ಸಾಧಾರಣ ನಾಯಕತ್ವ, ಅದರಲ್ಲೇನು ವಿಶೇಷವಿರಲಿಲ್ಲ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಅಭಿಪ್ರಾಯಪಟ್ಟಿದ್ದಾರೆ.

6 / 8
ಇಂಗ್ಲೆಂಡ್ ತಂಡವು ಆಕ್ರಮಣಕಾರಿಯಾಗಿ ಆಡುತ್ತಿದ್ದರೂ ರೋಹಿತ್ ಶರ್ಮಾ ಕಡೆಯಿಂದ ಬೌಲರ್​ಗಳಿಗೆ ಬೇಕಾದ ಬೆಂಬಲ ದೊರೆತಿರಲಿಲ್ಲ. ಸ್ವೀಪ್ ಶಾಟ್ ಆಡುವ ಆಟಗಾರರಿಗೆ ಶ್ರೇಷ್ಠ ಸ್ಪಿನ್ನರ್ ಶೇನ್ ವಾರ್ನ್​ ವಿಕೆಟ್ ಸುತ್ತಲೂ ಫೀಲ್ಡಿಂಗ್ ನಿಲ್ಲಿಸಿ ರಣತಂತ್ರ ಹೆಣೆಯುತ್ತಾರೆ. ಅಂತಹ ಯಾವುದೇ ಪ್ರಯೋಗಗಳೂ ಭಾರತದ ನಾಯಕನ ಕಡೆಯಿಂದ ಕಂಡು ಬಂದಿರಲಿಲ್ಲ. ಹೀಗಾಗಿಯೇ ಟೆಸ್ಟ್​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದ ಗುಣಗಳು ಸಾಧಾರಣ ಮಟ್ಟದಲ್ಲಿದೆ ಎಂದೆನಿಸುತ್ತದೆ ಎಂದು ಮೈಕಲ್ ವಾನ್ ತಿಳಿಸಿದ್ದಾರೆ.

ಇಂಗ್ಲೆಂಡ್ ತಂಡವು ಆಕ್ರಮಣಕಾರಿಯಾಗಿ ಆಡುತ್ತಿದ್ದರೂ ರೋಹಿತ್ ಶರ್ಮಾ ಕಡೆಯಿಂದ ಬೌಲರ್​ಗಳಿಗೆ ಬೇಕಾದ ಬೆಂಬಲ ದೊರೆತಿರಲಿಲ್ಲ. ಸ್ವೀಪ್ ಶಾಟ್ ಆಡುವ ಆಟಗಾರರಿಗೆ ಶ್ರೇಷ್ಠ ಸ್ಪಿನ್ನರ್ ಶೇನ್ ವಾರ್ನ್​ ವಿಕೆಟ್ ಸುತ್ತಲೂ ಫೀಲ್ಡಿಂಗ್ ನಿಲ್ಲಿಸಿ ರಣತಂತ್ರ ಹೆಣೆಯುತ್ತಾರೆ. ಅಂತಹ ಯಾವುದೇ ಪ್ರಯೋಗಗಳೂ ಭಾರತದ ನಾಯಕನ ಕಡೆಯಿಂದ ಕಂಡು ಬಂದಿರಲಿಲ್ಲ. ಹೀಗಾಗಿಯೇ ಟೆಸ್ಟ್​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದ ಗುಣಗಳು ಸಾಧಾರಣ ಮಟ್ಟದಲ್ಲಿದೆ ಎಂದೆನಿಸುತ್ತದೆ ಎಂದು ಮೈಕಲ್ ವಾನ್ ತಿಳಿಸಿದ್ದಾರೆ.

7 / 8
ಒಟ್ಟಿನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ರೋಹಿತ್ ಶರ್ಮಾ ಅವರ ಟೆಸ್ಟ್ ನಾಯಕತ್ವದ ಬಗ್ಗೆ ಟೀಕೆಗಳು ಕೇಳಿ ಬರಲಾರಂಭಿಸಿದೆ. ಈ ಎಲ್ಲಾ ಟೀಕೆ ಟಿಪ್ಪಣಿಗಳಿಗೆ ದ್ವಿತೀಯ ಟೆಸ್ಟ್​ ಮೂಲಕ ಹಿಟ್​ಮ್ಯಾನ್ ಉತ್ತರ ನೀಡಲಿದ್ದಾರಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ರೋಹಿತ್ ಶರ್ಮಾ ಅವರ ಟೆಸ್ಟ್ ನಾಯಕತ್ವದ ಬಗ್ಗೆ ಟೀಕೆಗಳು ಕೇಳಿ ಬರಲಾರಂಭಿಸಿದೆ. ಈ ಎಲ್ಲಾ ಟೀಕೆ ಟಿಪ್ಪಣಿಗಳಿಗೆ ದ್ವಿತೀಯ ಟೆಸ್ಟ್​ ಮೂಲಕ ಹಿಟ್​ಮ್ಯಾನ್ ಉತ್ತರ ನೀಡಲಿದ್ದಾರಾ ಕಾದು ನೋಡಬೇಕಿದೆ.

8 / 8
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?