AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

862 ಓವರ್​ಗಳ ಬಳಿಕ ಸ್ಯಾಂಟ್ನರ್ ಸಾಧನೆ

Mitchell Santner: ನ್ಯೂಝಿಲೆಂಡ್ ತಂಡವು ಭಾರತದ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದುಕೊಂಡಿದೆ. ಈ ಸರಣಿ ಗೆಲುವಿನ ರೂವಾರಿ ನ್ಯೂಝಿಲೆಂಡ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್. ಏಕೆಂದರೆ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 7 ವಿಕೆಟ್ ಕಬಳಿಸಿದ್ದ ಕಿವೀಸ್ ಸ್ಪಿನ್ನರ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಉರುಳಿಸಿದ್ದರು.

ಝಾಹಿರ್ ಯೂಸುಫ್
|

Updated on: Oct 27, 2024 | 11:30 AM

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಚೊಚ್ಚಲ 5 ವಿಕೆಟ್​ಗಳನ್ನು ಕಬಳಿಸಲು ಅತೀ ಹೆಚ್ಚು ಓವರ್​ಗಳನ್ನು ಎಸೆದ ನ್ಯೂಝಿಲೆಂಡ್ ಬೌಲರ್ ಯಾರೆಂದು ಕೇಳಿದರೆ ಇನ್ಮುಂದೆ ಮಿಚೆಲ್ ಸ್ಯಾಂಟ್ನರ್ ಹೆಸರೇಳಬಹುದು. ಏಕೆಂದರೆ ಸ್ಯಾಂಟ್ನರ್ ಟೆಸ್ಟ್​ನಲ್ಲಿ ಮೊದಲ ಐದು ವಿಕೆಟ್​ಗಳ ಗುಚ್ಛ ಪಡೆಯಲು ಎಸೆದಿರುವುದು ಬರೋಬ್ಬರಿ 862.3 ಓವರ್​ಗಳನ್ನು ಎಂದರೆ ನಂಬಲೇಬೇಕು.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಚೊಚ್ಚಲ 5 ವಿಕೆಟ್​ಗಳನ್ನು ಕಬಳಿಸಲು ಅತೀ ಹೆಚ್ಚು ಓವರ್​ಗಳನ್ನು ಎಸೆದ ನ್ಯೂಝಿಲೆಂಡ್ ಬೌಲರ್ ಯಾರೆಂದು ಕೇಳಿದರೆ ಇನ್ಮುಂದೆ ಮಿಚೆಲ್ ಸ್ಯಾಂಟ್ನರ್ ಹೆಸರೇಳಬಹುದು. ಏಕೆಂದರೆ ಸ್ಯಾಂಟ್ನರ್ ಟೆಸ್ಟ್​ನಲ್ಲಿ ಮೊದಲ ಐದು ವಿಕೆಟ್​ಗಳ ಗುಚ್ಛ ಪಡೆಯಲು ಎಸೆದಿರುವುದು ಬರೋಬ್ಬರಿ 862.3 ಓವರ್​ಗಳನ್ನು ಎಂದರೆ ನಂಬಲೇಬೇಕು.

1 / 5
2015 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಮಿಚೆಲ್ ಸ್ಯಾಂಟ್ನರ್ ಕಳೆದ 47 ಇನಿಂಗ್ಸ್​ಗಳಲ್ಲಿ ಒಮ್ಮೆಯೂ 5 ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ. ಆದರೆ ಪುಣೆಯಲ್ಲಿ ನಡೆದ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಯಾಂಟ್ನರ್ ಸ್ಪಿನ್ ಮೋಡಿ ಮಾಡಿದರು.

2015 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಮಿಚೆಲ್ ಸ್ಯಾಂಟ್ನರ್ ಕಳೆದ 47 ಇನಿಂಗ್ಸ್​ಗಳಲ್ಲಿ ಒಮ್ಮೆಯೂ 5 ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ. ಆದರೆ ಪುಣೆಯಲ್ಲಿ ನಡೆದ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಯಾಂಟ್ನರ್ ಸ್ಪಿನ್ ಮೋಡಿ ಮಾಡಿದರು.

2 / 5
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 19.3 ಓವರ್​ಗಳನ್ನು ಎಸೆದ ಮಿಚೆಲ್ ಸ್ಯಾಂಟ್ನರ್ ಕೇವಲ 53 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದರು. ಈ ಮೂಲಕ ಟೆಸ್ಟ್​ನಲ್ಲಿ ಅತ್ಯಧಿಕ ಓವರ್​ಗಳ ಬಳಿಕ 5 ವಿಕೆಟ್​ಗಳ ಸಾಧನೆ ಮಾಡಿದ ವಿಶ್ವದ 2ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 19.3 ಓವರ್​ಗಳನ್ನು ಎಸೆದ ಮಿಚೆಲ್ ಸ್ಯಾಂಟ್ನರ್ ಕೇವಲ 53 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದರು. ಈ ಮೂಲಕ ಟೆಸ್ಟ್​ನಲ್ಲಿ ಅತ್ಯಧಿಕ ಓವರ್​ಗಳ ಬಳಿಕ 5 ವಿಕೆಟ್​ಗಳ ಸಾಧನೆ ಮಾಡಿದ ವಿಶ್ವದ 2ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

3 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನದ ಬೌಲರ್ ಇಂತಿಕಾಬ್ ಆಲಂ. ಪಾಕ್ ಸ್ಪಿನ್ನರ್ ತಮ್ಮ ಮೊದಲ 5 ವಿಕೆಟ್ ಸಾಧನೆ ಮಾಡಲು ತೆಗೆದುಕೊಂಡ ಒಟ್ಟು ಓವರ್​ಗಳ ಸಂಖ್ಯೆ 877. ಇದೀಗ 862.3 ಓವರ್​ಗಳ ಬಳಿಕ 5 ವಿಕೆಟ್ ಕಬಳಿಸಿ ಮಿಚೆಲ್ ಸ್ಯಾಂಟ್ನರ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನದ ಬೌಲರ್ ಇಂತಿಕಾಬ್ ಆಲಂ. ಪಾಕ್ ಸ್ಪಿನ್ನರ್ ತಮ್ಮ ಮೊದಲ 5 ವಿಕೆಟ್ ಸಾಧನೆ ಮಾಡಲು ತೆಗೆದುಕೊಂಡ ಒಟ್ಟು ಓವರ್​ಗಳ ಸಂಖ್ಯೆ 877. ಇದೀಗ 862.3 ಓವರ್​ಗಳ ಬಳಿಕ 5 ವಿಕೆಟ್ ಕಬಳಿಸಿ ಮಿಚೆಲ್ ಸ್ಯಾಂಟ್ನರ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

4 / 5
ವಿಶೇಷ ಎಂದರೆ ಮೊದಲ 5 ವಿಕೆಟ್ ಕಬಳಿಸಿದ ಬೆನ್ನಲ್ಲೇ ಸ್ಯಾಂಟ್ನರ್ ತಮ್ಮ ಕೆರಿಯರ್​ನ ದ್ವಿತೀಯ 5 ವಿಕೆಟ್​ಗಳ ಗುಚ್ಛವನ್ನೂ ಸಹ ಪಡೆದಿದ್ದಾರೆ. ಅಂದರೆ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 29 ಓವರ್​ಗಳನ್ನು ಎಸೆದ ಕಿವೀಸ್ ಸ್ಪಿನ್ನರ್ 104 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪುಣೆ ಟೆಸ್ಟ್​ನಲ್ಲಿ ಒಟ್ಟು 13 ವಿಕೆಟ್ ಉರುಳಿಸಿ ನ್ಯೂಝಿಲೆಂಡ್ ತಂಡಕ್ಕೆ ಐತಿಹಾಸಿಕ ಸರಣಿ ಗೆಲುವು ತಂದುಕೊಡುವಲ್ಲಿ ಮಿಚೆಲ್ ಸ್ಯಾಂಟ್ನರ್ ಯಶಸ್ವಿಯಾಗಿದ್ದಾರೆ.

ವಿಶೇಷ ಎಂದರೆ ಮೊದಲ 5 ವಿಕೆಟ್ ಕಬಳಿಸಿದ ಬೆನ್ನಲ್ಲೇ ಸ್ಯಾಂಟ್ನರ್ ತಮ್ಮ ಕೆರಿಯರ್​ನ ದ್ವಿತೀಯ 5 ವಿಕೆಟ್​ಗಳ ಗುಚ್ಛವನ್ನೂ ಸಹ ಪಡೆದಿದ್ದಾರೆ. ಅಂದರೆ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 29 ಓವರ್​ಗಳನ್ನು ಎಸೆದ ಕಿವೀಸ್ ಸ್ಪಿನ್ನರ್ 104 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪುಣೆ ಟೆಸ್ಟ್​ನಲ್ಲಿ ಒಟ್ಟು 13 ವಿಕೆಟ್ ಉರುಳಿಸಿ ನ್ಯೂಝಿಲೆಂಡ್ ತಂಡಕ್ಕೆ ಐತಿಹಾಸಿಕ ಸರಣಿ ಗೆಲುವು ತಂದುಕೊಡುವಲ್ಲಿ ಮಿಚೆಲ್ ಸ್ಯಾಂಟ್ನರ್ ಯಶಸ್ವಿಯಾಗಿದ್ದಾರೆ.

5 / 5
Follow us
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್