AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿಯ ಸುಳಿವು ನೀಡಿದ ಐಪಿಎಲ್​ನ ಅತ್ಯಂತ ದುಬಾರಿ ಪ್ಲೇಯರ್ ಮಿಚೆಲ್ ಸ್ಟಾರ್ಕ್..!

Mitchell Starc: ಒಂದೆಡೆ ಕೆಕೆಆರ್ ತಂಡದ ಆಟಗಾರರು ಟ್ರೋಫಿ ಗೆಲುವಿನ ಸಂಭ್ರಮದಲ್ಲಿದ್ದರೆ, ಇನ್ನೊಂದೆಡೆ ತಂಡದ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್‌ ನಿವೃತ್ತಿಯ ಸುಳಿವು ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಇದು ಕೆಕೆಆರ್ ತಂಡಕ್ಕೆ ಮಾತ್ರವಲ್ಲದೆ, ಅವರ ತವರು ತಂಡವಾದ ಆಸ್ಟ್ರೇಲಿಯಾಕ್ಕೂ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಪೃಥ್ವಿಶಂಕರ
|

Updated on:May 27, 2024 | 4:13 PM

Share
ಐಪಿಎಲ್ 2024 ರ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಗೌತಮ್ ಗಂಭೀರ್ ನೇತೃತ್ವದಲ್ಲಿ ಕೆಕೆಆರ್‌ಗೆ ಇದು ಮೂರನೇ ಟ್ರೋಫಿಯಾಗಿದೆ. ಕೋಲ್ಕತ್ತಾ ಈ ಹಿಂದೆ ಗೌತಮ್ ಗಂಭೀರ್ ನಾಯಕತ್ವದಲ್ಲಿ ಐಪಿಎಲ್ 2012 ಮತ್ತು ಐಪಿಎಲ್ 2014 ರಲ್ಲಿ ಟ್ರೋಫಿ ಗೆದ್ದಿತ್ತು.

ಐಪಿಎಲ್ 2024 ರ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಗೌತಮ್ ಗಂಭೀರ್ ನೇತೃತ್ವದಲ್ಲಿ ಕೆಕೆಆರ್‌ಗೆ ಇದು ಮೂರನೇ ಟ್ರೋಫಿಯಾಗಿದೆ. ಕೋಲ್ಕತ್ತಾ ಈ ಹಿಂದೆ ಗೌತಮ್ ಗಂಭೀರ್ ನಾಯಕತ್ವದಲ್ಲಿ ಐಪಿಎಲ್ 2012 ಮತ್ತು ಐಪಿಎಲ್ 2014 ರಲ್ಲಿ ಟ್ರೋಫಿ ಗೆದ್ದಿತ್ತು.

1 / 6
ಒಂದೆಡೆ ಕೆಕೆಆರ್ ತಂಡದ ಆಟಗಾರರು ಟ್ರೋಫಿ ಗೆಲುವಿನ ಸಂಭ್ರಮದಲ್ಲಿದ್ದರೆ, ಇನ್ನೊಂದೆಡೆ ತಂಡದ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್‌ ನಿವೃತ್ತಿಯ ಸುಳಿವು ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಇದು ಕೆಕೆಆರ್ ತಂಡಕ್ಕೆ ಮಾತ್ರವಲ್ಲದೆ, ಅವರ ತವರು ತಂಡವಾದ ಆಸ್ಟ್ರೇಲಿಯಾಕ್ಕೂ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಒಂದೆಡೆ ಕೆಕೆಆರ್ ತಂಡದ ಆಟಗಾರರು ಟ್ರೋಫಿ ಗೆಲುವಿನ ಸಂಭ್ರಮದಲ್ಲಿದ್ದರೆ, ಇನ್ನೊಂದೆಡೆ ತಂಡದ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್‌ ನಿವೃತ್ತಿಯ ಸುಳಿವು ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಇದು ಕೆಕೆಆರ್ ತಂಡಕ್ಕೆ ಮಾತ್ರವಲ್ಲದೆ, ಅವರ ತವರು ತಂಡವಾದ ಆಸ್ಟ್ರೇಲಿಯಾಕ್ಕೂ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

2 / 6
ವಾಸ್ತವವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಬಾರಿಯ ಚಾಂಪಿಯನ್ ಆಗುವಲ್ಲಿ ತಂಡದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ದೊಡ್ಡ ಕೊಡುಗೆ ನೀಡಿದ್ದಾರೆ. ಅದರಲ್ಲೂ ಫೈನಲ್‌ ಪಂದ್ಯದಲ್ಲಿ ತಮ್ಮ ಅನುಭವವನ್ನು ಧಾರೆ ಎರೆದಿದ್ದ ಸ್ಟಾರ್ಕ್ 3 ಓವರ್‌ಗಳಲ್ಲಿ ಕೇವಲ 14 ರನ್‌ಗಳಿಗೆ 2 ವಿಕೆಟ್ ಪಡೆದಿದ್ದರು.

ವಾಸ್ತವವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಬಾರಿಯ ಚಾಂಪಿಯನ್ ಆಗುವಲ್ಲಿ ತಂಡದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ದೊಡ್ಡ ಕೊಡುಗೆ ನೀಡಿದ್ದಾರೆ. ಅದರಲ್ಲೂ ಫೈನಲ್‌ ಪಂದ್ಯದಲ್ಲಿ ತಮ್ಮ ಅನುಭವವನ್ನು ಧಾರೆ ಎರೆದಿದ್ದ ಸ್ಟಾರ್ಕ್ 3 ಓವರ್‌ಗಳಲ್ಲಿ ಕೇವಲ 14 ರನ್‌ಗಳಿಗೆ 2 ವಿಕೆಟ್ ಪಡೆದಿದ್ದರು.

3 / 6
ಕೆಕೆಆರ್ ತಂಡ ಚಾಂಪಿಯನ್ ಆದ ನಂತರ ಮಾತನಾಡಿದ ಮಿಚೆಲ್ ಸ್ಟಾರ್ಕ್, ‘ನಾನು ನನ್ನ ವೃತ್ತಿಜೀವನದ ಅಂತ್ಯದ ಸಮೀಪದಲ್ಲಿದ್ದೇನೆ. ನಾನು ಶೀಘ್ರದಲ್ಲೇ ಒಂದು ಸ್ವರೂಪದಿಂದ ನಿವೃತ್ತಿ ಹೊಂದಬಹುದು. ಇನ್ನು ಐಪಿಎಲ್ ಆಡುವುದನ್ನು ನಾನು ತುಂಬಾ ಎಂಜಾಯ್ ಮಾಡಿದ್ದೇನೆ ಎಂದರು.

ಕೆಕೆಆರ್ ತಂಡ ಚಾಂಪಿಯನ್ ಆದ ನಂತರ ಮಾತನಾಡಿದ ಮಿಚೆಲ್ ಸ್ಟಾರ್ಕ್, ‘ನಾನು ನನ್ನ ವೃತ್ತಿಜೀವನದ ಅಂತ್ಯದ ಸಮೀಪದಲ್ಲಿದ್ದೇನೆ. ನಾನು ಶೀಘ್ರದಲ್ಲೇ ಒಂದು ಸ್ವರೂಪದಿಂದ ನಿವೃತ್ತಿ ಹೊಂದಬಹುದು. ಇನ್ನು ಐಪಿಎಲ್ ಆಡುವುದನ್ನು ನಾನು ತುಂಬಾ ಎಂಜಾಯ್ ಮಾಡಿದ್ದೇನೆ ಎಂದರು.

4 / 6
ಮುಂದುವರೆದು ಮಾತನಾಡಿದ ಅವರು, ‘ಕೋಲ್ಕತ್ತಾ ಮತ್ತೆ ನನ್ನನ್ನು ತಂಡದಲ್ಲಿ ಉಳಿಸಿಕೊಂಡರೆ, ನನಗೆ ತುಂಬಾ ಸಂತೋಷವಾಗುತ್ತದೆ. ನಾನು ಮತ್ತೆ ಕೋಲ್ಕತ್ತಾ ಪರ ಆಡಲು ಬಯಸುತ್ತೇನೆ. ಕೆಕೆಆರ್ ಜೊತೆ ಆಡಲು ತುಂಬಾ ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ‘ಕೋಲ್ಕತ್ತಾ ಮತ್ತೆ ನನ್ನನ್ನು ತಂಡದಲ್ಲಿ ಉಳಿಸಿಕೊಂಡರೆ, ನನಗೆ ತುಂಬಾ ಸಂತೋಷವಾಗುತ್ತದೆ. ನಾನು ಮತ್ತೆ ಕೋಲ್ಕತ್ತಾ ಪರ ಆಡಲು ಬಯಸುತ್ತೇನೆ. ಕೆಕೆಆರ್ ಜೊತೆ ಆಡಲು ತುಂಬಾ ಉತ್ಸುಕನಾಗಿದ್ದೇನೆ ಎಂದಿದ್ದಾರೆ.

5 / 6
ಈ ಐಪಿಎಲ್​ನಲ್ಲಿ ಸ್ಟಾರ್ಕ್ ಒಟ್ಟು 14 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 26.12 ರ ಸರಾಸರಿಯಲ್ಲಿ 17 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಅವಧಿಯಲ್ಲಿ 33 ರನ್‌ಗಳಿಗೆ 4 ವಿಕೆಟ್‌ ಕಬಳಿಸಿದ್ದು ಅವರ ಅತ್ಯುತ್ತಮ ಸಾಧನೆಯಾಗಿದೆ.

ಈ ಐಪಿಎಲ್​ನಲ್ಲಿ ಸ್ಟಾರ್ಕ್ ಒಟ್ಟು 14 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 26.12 ರ ಸರಾಸರಿಯಲ್ಲಿ 17 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಅವಧಿಯಲ್ಲಿ 33 ರನ್‌ಗಳಿಗೆ 4 ವಿಕೆಟ್‌ ಕಬಳಿಸಿದ್ದು ಅವರ ಅತ್ಯುತ್ತಮ ಸಾಧನೆಯಾಗಿದೆ.

6 / 6

Published On - 4:12 pm, Mon, 27 May 24

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?