AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸ್ಟಾರ್ಕ್​ ಸ್ಪಾರ್ಕ್​: RCB-CSK ನಡುವೆ ಬಿಡ್ ವಾರ್ ಸಾಧ್ಯತೆ

Mitchell Starc: 2014 ಮತ್ತು 2015 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸ್ಟಾರ್ಕ್ 34 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಈ ಬಾರಿ ಕೂಡ ಆರ್​ಸಿಬಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುವುದಂತು ದಿಟ. ಆದರೆ ಈ ಪ್ರಯತ್ನಕ್ಕೆ ಸಿಎಸ್​ಕೆ ಅಡ್ಡಿಯಾಗಲಿದೆಯಾ ಕಾದು ನೋಡಬೇಕಿದೆ.

TV9 Web
| Edited By: |

Updated on:Dec 05, 2023 | 8:38 PM

Share
ಐಪಿಎಲ್ ಸೀಸನ್​ 17 ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿರುವ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಹೆಸರು ಮುಂಚೂಣಿಯಲ್ಲಿದೆ. ವಿಶ್ವದ ಅತ್ಯುತ್ತಮ ಎಡಗೈ ವೇಗಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಸ್ಟಾರ್ಕ್​ 8 ವರ್ಷಗಳ ಬಳಿಕ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಐಪಿಎಲ್ ಸೀಸನ್​ 17 ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿರುವ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಹೆಸರು ಮುಂಚೂಣಿಯಲ್ಲಿದೆ. ವಿಶ್ವದ ಅತ್ಯುತ್ತಮ ಎಡಗೈ ವೇಗಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಸ್ಟಾರ್ಕ್​ 8 ವರ್ಷಗಳ ಬಳಿಕ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.

1 / 6
ಅದರಂತೆ ಇದೀಗ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿಗಾಗಿ ಮಿಚೆಲ್ ಸ್ಟಾರ್ಕ್​ ಹೆಸರು ನೀಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಫ್ರಾಂಚೈಸ್​​ಗಳು ಸ್ಟಾರ್ಕ್​ ಅವರೊಂದಿಗೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

ಅದರಂತೆ ಇದೀಗ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿಗಾಗಿ ಮಿಚೆಲ್ ಸ್ಟಾರ್ಕ್​ ಹೆಸರು ನೀಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಫ್ರಾಂಚೈಸ್​​ಗಳು ಸ್ಟಾರ್ಕ್​ ಅವರೊಂದಿಗೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

2 / 6
ಈ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಇರುವುದು ವಿಶೇಷ. ಅಂದರೆ ಸ್ಟಾರ್ಕ್​ ಅವರ ಲಭ್ಯತೆಯ ಬಗ್ಗೆ ಆರ್​ಸಿಬಿ ಫ್ರಾಂಚೈಸ್​ ಖಚಿತತೆ ಪಡೆದುಕೊಂಡಿದೆ. ಹೀಗಾಗಿ ಮುಂಬರುವ ಐಪಿಎಲ್​ ಹರಾಜಿನಲ್ಲಿ ಆಸ್ಟ್ರೇಲಿಯಾದ ಎಡಗೈ ವೇಗಿಯ ಖರೀದಿಗೆ ಆರ್​ಸಿಬಿ ಆಸಕ್ತಿವಹಿಸಲಿದೆ.

ಈ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಇರುವುದು ವಿಶೇಷ. ಅಂದರೆ ಸ್ಟಾರ್ಕ್​ ಅವರ ಲಭ್ಯತೆಯ ಬಗ್ಗೆ ಆರ್​ಸಿಬಿ ಫ್ರಾಂಚೈಸ್​ ಖಚಿತತೆ ಪಡೆದುಕೊಂಡಿದೆ. ಹೀಗಾಗಿ ಮುಂಬರುವ ಐಪಿಎಲ್​ ಹರಾಜಿನಲ್ಲಿ ಆಸ್ಟ್ರೇಲಿಯಾದ ಎಡಗೈ ವೇಗಿಯ ಖರೀದಿಗೆ ಆರ್​ಸಿಬಿ ಆಸಕ್ತಿವಹಿಸಲಿದೆ.

3 / 6
ಆದರೆ ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡ ಆಸ್ಟ್ರೇಲಿಯನ್ ವೇಗಿಯನ್ನು ಖರೀದಿಸಲು ಪ್ಲ್ಯಾನ್ ರೂಪಿಸುತ್ತಿದೆ. ಏಕೆಂದರೆ ಪ್ರಸ್ತುತ ಸಿಎಸ್​ಕೆ ತಂಡದಲ್ಲಿ ಯಾವುದೇ ಅನುಭವಿ ವೇಗದ ಬೌಲರ್ ಇಲ್ಲ. ಅಲ್ಲದೆ 31.40 ಕೋಟಿ ರೂ. ಪರ್ಸ್ ಮೊತ್ತವನ್ನು ಹೊಂದಿರುವ ಸಿಎಸ್​ಕೆಯ ಮೊದಲ ಆದ್ಯತೆ ವೇಗದ ಬೌಲರ್ ಆಗಿರಲಿರಲಿದ್ದಾರೆ. ಹೀಗಾಗಿ ಮೊದಲ ಸುತ್ತಿನಲ್ಲೇ ಚೆನ್ನೈ ಫ್ರಾಂಚೈಸ್​ಯು ಮಿಚೆಲ್ ಸ್ಟಾರ್ಕ್​ ಅನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನ ನಡೆಸಲಿದೆ.

ಆದರೆ ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡ ಆಸ್ಟ್ರೇಲಿಯನ್ ವೇಗಿಯನ್ನು ಖರೀದಿಸಲು ಪ್ಲ್ಯಾನ್ ರೂಪಿಸುತ್ತಿದೆ. ಏಕೆಂದರೆ ಪ್ರಸ್ತುತ ಸಿಎಸ್​ಕೆ ತಂಡದಲ್ಲಿ ಯಾವುದೇ ಅನುಭವಿ ವೇಗದ ಬೌಲರ್ ಇಲ್ಲ. ಅಲ್ಲದೆ 31.40 ಕೋಟಿ ರೂ. ಪರ್ಸ್ ಮೊತ್ತವನ್ನು ಹೊಂದಿರುವ ಸಿಎಸ್​ಕೆಯ ಮೊದಲ ಆದ್ಯತೆ ವೇಗದ ಬೌಲರ್ ಆಗಿರಲಿರಲಿದ್ದಾರೆ. ಹೀಗಾಗಿ ಮೊದಲ ಸುತ್ತಿನಲ್ಲೇ ಚೆನ್ನೈ ಫ್ರಾಂಚೈಸ್​ಯು ಮಿಚೆಲ್ ಸ್ಟಾರ್ಕ್​ ಅನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನ ನಡೆಸಲಿದೆ.

4 / 6
ಇತ್ತ ಆರ್​ಸಿಬಿ ತಂಡವು ತನ್ನ ಮಾಜಿ ವೇಗಿಯನ್ನು ಬಿಟ್ಟು ಕೊಡುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇತ್ತ ಆರ್​ಸಿಬಿ ತಂಡವು ತನ್ನ ಮಾಜಿ ವೇಗಿಯನ್ನು ಬಿಟ್ಟು ಕೊಡುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

5 / 6
ಅಂದಹಾಗೆ ಮಿಚೆಲ್ ಸ್ಟಾರ್ಕ್​ ಐಪಿಎಲ್​ನಲ್ಲಿ ಕೇವಲ 2 ಸೀಸನ್ ಮಾತ್ರ ಆಡಿದ್ದಾರೆ. ಅದು ಕೂಡ ಆರ್​ಸಿಬಿ ಪರ ಮಾತ್ರ. 2014 ಮತ್ತು 2015 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸ್ಟಾರ್ಕ್ 34 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಈ ಬಾರಿ ಕೂಡ ಆರ್​ಸಿಬಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುವುದಂತು ದಿಟ. ಆದರೆ ಈ ಪ್ರಯತ್ನಕ್ಕೆ ಸಿಎಸ್​ಕೆ ಅಡ್ಡಿಯಾಗಲಿದೆಯಾ ಕಾದು ನೋಡಬೇಕಿದೆ.

ಅಂದಹಾಗೆ ಮಿಚೆಲ್ ಸ್ಟಾರ್ಕ್​ ಐಪಿಎಲ್​ನಲ್ಲಿ ಕೇವಲ 2 ಸೀಸನ್ ಮಾತ್ರ ಆಡಿದ್ದಾರೆ. ಅದು ಕೂಡ ಆರ್​ಸಿಬಿ ಪರ ಮಾತ್ರ. 2014 ಮತ್ತು 2015 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸ್ಟಾರ್ಕ್ 34 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಈ ಬಾರಿ ಕೂಡ ಆರ್​ಸಿಬಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುವುದಂತು ದಿಟ. ಆದರೆ ಈ ಪ್ರಯತ್ನಕ್ಕೆ ಸಿಎಸ್​ಕೆ ಅಡ್ಡಿಯಾಗಲಿದೆಯಾ ಕಾದು ನೋಡಬೇಕಿದೆ.

6 / 6

Published On - 8:37 pm, Tue, 5 December 23

Web contact
Web contact

TV9 Kannada

Read More
Follow Us
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್