AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸ್ಟಾರ್ಕ್​ ಸ್ಪಾರ್ಕ್​: RCB-CSK ನಡುವೆ ಬಿಡ್ ವಾರ್ ಸಾಧ್ಯತೆ

Mitchell Starc: 2014 ಮತ್ತು 2015 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸ್ಟಾರ್ಕ್ 34 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಈ ಬಾರಿ ಕೂಡ ಆರ್​ಸಿಬಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುವುದಂತು ದಿಟ. ಆದರೆ ಈ ಪ್ರಯತ್ನಕ್ಕೆ ಸಿಎಸ್​ಕೆ ಅಡ್ಡಿಯಾಗಲಿದೆಯಾ ಕಾದು ನೋಡಬೇಕಿದೆ.

TV9 Web
| Edited By: |

Updated on:Dec 05, 2023 | 8:38 PM

Share
ಐಪಿಎಲ್ ಸೀಸನ್​ 17 ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿರುವ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಹೆಸರು ಮುಂಚೂಣಿಯಲ್ಲಿದೆ. ವಿಶ್ವದ ಅತ್ಯುತ್ತಮ ಎಡಗೈ ವೇಗಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಸ್ಟಾರ್ಕ್​ 8 ವರ್ಷಗಳ ಬಳಿಕ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಐಪಿಎಲ್ ಸೀಸನ್​ 17 ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿರುವ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಹೆಸರು ಮುಂಚೂಣಿಯಲ್ಲಿದೆ. ವಿಶ್ವದ ಅತ್ಯುತ್ತಮ ಎಡಗೈ ವೇಗಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಸ್ಟಾರ್ಕ್​ 8 ವರ್ಷಗಳ ಬಳಿಕ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.

1 / 6
ಅದರಂತೆ ಇದೀಗ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿಗಾಗಿ ಮಿಚೆಲ್ ಸ್ಟಾರ್ಕ್​ ಹೆಸರು ನೀಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಫ್ರಾಂಚೈಸ್​​ಗಳು ಸ್ಟಾರ್ಕ್​ ಅವರೊಂದಿಗೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

ಅದರಂತೆ ಇದೀಗ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿಗಾಗಿ ಮಿಚೆಲ್ ಸ್ಟಾರ್ಕ್​ ಹೆಸರು ನೀಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಫ್ರಾಂಚೈಸ್​​ಗಳು ಸ್ಟಾರ್ಕ್​ ಅವರೊಂದಿಗೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

2 / 6
ಈ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಇರುವುದು ವಿಶೇಷ. ಅಂದರೆ ಸ್ಟಾರ್ಕ್​ ಅವರ ಲಭ್ಯತೆಯ ಬಗ್ಗೆ ಆರ್​ಸಿಬಿ ಫ್ರಾಂಚೈಸ್​ ಖಚಿತತೆ ಪಡೆದುಕೊಂಡಿದೆ. ಹೀಗಾಗಿ ಮುಂಬರುವ ಐಪಿಎಲ್​ ಹರಾಜಿನಲ್ಲಿ ಆಸ್ಟ್ರೇಲಿಯಾದ ಎಡಗೈ ವೇಗಿಯ ಖರೀದಿಗೆ ಆರ್​ಸಿಬಿ ಆಸಕ್ತಿವಹಿಸಲಿದೆ.

ಈ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಇರುವುದು ವಿಶೇಷ. ಅಂದರೆ ಸ್ಟಾರ್ಕ್​ ಅವರ ಲಭ್ಯತೆಯ ಬಗ್ಗೆ ಆರ್​ಸಿಬಿ ಫ್ರಾಂಚೈಸ್​ ಖಚಿತತೆ ಪಡೆದುಕೊಂಡಿದೆ. ಹೀಗಾಗಿ ಮುಂಬರುವ ಐಪಿಎಲ್​ ಹರಾಜಿನಲ್ಲಿ ಆಸ್ಟ್ರೇಲಿಯಾದ ಎಡಗೈ ವೇಗಿಯ ಖರೀದಿಗೆ ಆರ್​ಸಿಬಿ ಆಸಕ್ತಿವಹಿಸಲಿದೆ.

3 / 6
ಆದರೆ ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡ ಆಸ್ಟ್ರೇಲಿಯನ್ ವೇಗಿಯನ್ನು ಖರೀದಿಸಲು ಪ್ಲ್ಯಾನ್ ರೂಪಿಸುತ್ತಿದೆ. ಏಕೆಂದರೆ ಪ್ರಸ್ತುತ ಸಿಎಸ್​ಕೆ ತಂಡದಲ್ಲಿ ಯಾವುದೇ ಅನುಭವಿ ವೇಗದ ಬೌಲರ್ ಇಲ್ಲ. ಅಲ್ಲದೆ 31.40 ಕೋಟಿ ರೂ. ಪರ್ಸ್ ಮೊತ್ತವನ್ನು ಹೊಂದಿರುವ ಸಿಎಸ್​ಕೆಯ ಮೊದಲ ಆದ್ಯತೆ ವೇಗದ ಬೌಲರ್ ಆಗಿರಲಿರಲಿದ್ದಾರೆ. ಹೀಗಾಗಿ ಮೊದಲ ಸುತ್ತಿನಲ್ಲೇ ಚೆನ್ನೈ ಫ್ರಾಂಚೈಸ್​ಯು ಮಿಚೆಲ್ ಸ್ಟಾರ್ಕ್​ ಅನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನ ನಡೆಸಲಿದೆ.

ಆದರೆ ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡ ಆಸ್ಟ್ರೇಲಿಯನ್ ವೇಗಿಯನ್ನು ಖರೀದಿಸಲು ಪ್ಲ್ಯಾನ್ ರೂಪಿಸುತ್ತಿದೆ. ಏಕೆಂದರೆ ಪ್ರಸ್ತುತ ಸಿಎಸ್​ಕೆ ತಂಡದಲ್ಲಿ ಯಾವುದೇ ಅನುಭವಿ ವೇಗದ ಬೌಲರ್ ಇಲ್ಲ. ಅಲ್ಲದೆ 31.40 ಕೋಟಿ ರೂ. ಪರ್ಸ್ ಮೊತ್ತವನ್ನು ಹೊಂದಿರುವ ಸಿಎಸ್​ಕೆಯ ಮೊದಲ ಆದ್ಯತೆ ವೇಗದ ಬೌಲರ್ ಆಗಿರಲಿರಲಿದ್ದಾರೆ. ಹೀಗಾಗಿ ಮೊದಲ ಸುತ್ತಿನಲ್ಲೇ ಚೆನ್ನೈ ಫ್ರಾಂಚೈಸ್​ಯು ಮಿಚೆಲ್ ಸ್ಟಾರ್ಕ್​ ಅನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನ ನಡೆಸಲಿದೆ.

4 / 6
ಇತ್ತ ಆರ್​ಸಿಬಿ ತಂಡವು ತನ್ನ ಮಾಜಿ ವೇಗಿಯನ್ನು ಬಿಟ್ಟು ಕೊಡುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇತ್ತ ಆರ್​ಸಿಬಿ ತಂಡವು ತನ್ನ ಮಾಜಿ ವೇಗಿಯನ್ನು ಬಿಟ್ಟು ಕೊಡುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

5 / 6
ಅಂದಹಾಗೆ ಮಿಚೆಲ್ ಸ್ಟಾರ್ಕ್​ ಐಪಿಎಲ್​ನಲ್ಲಿ ಕೇವಲ 2 ಸೀಸನ್ ಮಾತ್ರ ಆಡಿದ್ದಾರೆ. ಅದು ಕೂಡ ಆರ್​ಸಿಬಿ ಪರ ಮಾತ್ರ. 2014 ಮತ್ತು 2015 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸ್ಟಾರ್ಕ್ 34 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಈ ಬಾರಿ ಕೂಡ ಆರ್​ಸಿಬಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುವುದಂತು ದಿಟ. ಆದರೆ ಈ ಪ್ರಯತ್ನಕ್ಕೆ ಸಿಎಸ್​ಕೆ ಅಡ್ಡಿಯಾಗಲಿದೆಯಾ ಕಾದು ನೋಡಬೇಕಿದೆ.

ಅಂದಹಾಗೆ ಮಿಚೆಲ್ ಸ್ಟಾರ್ಕ್​ ಐಪಿಎಲ್​ನಲ್ಲಿ ಕೇವಲ 2 ಸೀಸನ್ ಮಾತ್ರ ಆಡಿದ್ದಾರೆ. ಅದು ಕೂಡ ಆರ್​ಸಿಬಿ ಪರ ಮಾತ್ರ. 2014 ಮತ್ತು 2015 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸ್ಟಾರ್ಕ್ 34 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಈ ಬಾರಿ ಕೂಡ ಆರ್​ಸಿಬಿ ಮಿಚೆಲ್ ಸ್ಟಾರ್ಕ್​ ಖರೀದಿಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುವುದಂತು ದಿಟ. ಆದರೆ ಈ ಪ್ರಯತ್ನಕ್ಕೆ ಸಿಎಸ್​ಕೆ ಅಡ್ಡಿಯಾಗಲಿದೆಯಾ ಕಾದು ನೋಡಬೇಕಿದೆ.

6 / 6

Published On - 8:37 pm, Tue, 5 December 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ