AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಮ್ರಾಗೆ 8 ಪಂದ್ಯಗಳಲ್ಲಿ ಮಾಡಲಾಗದ್ದನ್ನು ಒಂದೇ ಪಂದ್ಯದಲ್ಲಿ ಮಾಡಿದ ಮಿಚೆಲ್ ಸ್ಟಾರ್ಕ್

IPL 2026: ಐಪಿಎಲ್ 2026 ರಲ್ಲಿ ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಿದ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್, ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 3 ವಿಕೆಟ್ ಕಬಳಿಸಿ ಅಮೋಘ ಪ್ರದರ್ಶನ ನೀಡಿದರು. ಈ ಆವೃತ್ತಿಯಲ್ಲಿ ಕಳಪೆ ಫಾರ್ಮ್‌ನಲ್ಲಿರುವ ಜಸ್ಪ್ರೀತ್ ಬುಮ್ರಾ ಎಂಟು ಪಂದ್ಯಗಳಲ್ಲಿ ಕೇವಲ ಎರಡು ವಿಕೆಟ್ ಪಡೆದಿದ್ದಾರೆ. ಸ್ಟಾರ್ಕ್ ತಮ್ಮ ಏಕೈಕ ಪಂದ್ಯದಲ್ಲಿ ಬುಮ್ರಾಗಿಂತ ಹೆಚ್ಚು ವಿಕೆಟ್ ಪಡೆದು ಮಿಂಚಿದ್ದಾರೆ.

ಪೃಥ್ವಿಶಂಕರ
|

Updated on: May 02, 2026 | 9:53 PM

Share
ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಮೊದಲಾರ್ಧದ ಐಪಿಎಲ್ ಮುಗಿದ ಬಳಿಕ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ತಂಡವನ್ನು ಕೂಡಿಕೊಂಡಿರುವ ಸ್ಟಾರ್ಕ್​ ಆಡಿದ ಮೊದಲ ಪಂದ್ಯದಲ್ಲಿಯೇ ಅಮೋಘ ಪ್ರದರ್ಶನ ನೀಡಿದರು.

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಮೊದಲಾರ್ಧದ ಐಪಿಎಲ್ ಮುಗಿದ ಬಳಿಕ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ತಂಡವನ್ನು ಕೂಡಿಕೊಂಡಿರುವ ಸ್ಟಾರ್ಕ್​ ಆಡಿದ ಮೊದಲ ಪಂದ್ಯದಲ್ಲಿಯೇ ಅಮೋಘ ಪ್ರದರ್ಶನ ನೀಡಿದರು.

1 / 5
ರಾಜಸ್ಥಾನ ರಾಯಲ್ಸ್ ವಿರುದ್ಧ ಈ ಆವೃತ್ತಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡಿದ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಸ್ಟಾರ್ಕ್ ಈ ಪಂದ್ಯದಲ್ಲಿ ಸ್ವಲ್ಪ ದುಬಾರಿಯಾದರೂ ಕಳೆದ 8 ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾಗೆ ಮಾಡಲು ಸಾಧ್ಯವಾಗದ್ದನ್ನು ಸ್ಟಾರ್ಕ್​ ಒಂದೇ ಪಂದ್ಯದಲ್ಲಿ ಮಾಡಿದರು.

ರಾಜಸ್ಥಾನ ರಾಯಲ್ಸ್ ವಿರುದ್ಧ ಈ ಆವೃತ್ತಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡಿದ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಸ್ಟಾರ್ಕ್ ಈ ಪಂದ್ಯದಲ್ಲಿ ಸ್ವಲ್ಪ ದುಬಾರಿಯಾದರೂ ಕಳೆದ 8 ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾಗೆ ಮಾಡಲು ಸಾಧ್ಯವಾಗದ್ದನ್ನು ಸ್ಟಾರ್ಕ್​ ಒಂದೇ ಪಂದ್ಯದಲ್ಲಿ ಮಾಡಿದರು.

2 / 5
ವಾಸ್ತವವಾಗಿ, ಐಪಿಎಲ್ 2026 ರಲ್ಲಿ ಸ್ಟಾರ್ಕ್ ಕೇವಲ ಒಂದು ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾಗಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಕಳಪೆ ಫಾರ್ಮ್ ಇದಕ್ಕೆ ಕಾರಣ. ಈ ಆವೃತ್ತಿಯಲ್ಲಿ ಬುಮ್ರಾ ವಿಕೆಟ್ ಬರ ಎದುರಿಸುತ್ತಿದ್ದಾರೆ. ಬುಮ್ರಾ ರನ್​ಗಳಿಗೆ ಕಡಿವಾಣ ಹಾಕುತ್ತಿದ್ದರೂ, ವಿಕೆಟ್ ಪಡೆಯಲು ಹೆಣಗಾಡುತ್ತಿದ್ದಾರೆ.

ವಾಸ್ತವವಾಗಿ, ಐಪಿಎಲ್ 2026 ರಲ್ಲಿ ಸ್ಟಾರ್ಕ್ ಕೇವಲ ಒಂದು ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾಗಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಕಳಪೆ ಫಾರ್ಮ್ ಇದಕ್ಕೆ ಕಾರಣ. ಈ ಆವೃತ್ತಿಯಲ್ಲಿ ಬುಮ್ರಾ ವಿಕೆಟ್ ಬರ ಎದುರಿಸುತ್ತಿದ್ದಾರೆ. ಬುಮ್ರಾ ರನ್​ಗಳಿಗೆ ಕಡಿವಾಣ ಹಾಕುತ್ತಿದ್ದರೂ, ವಿಕೆಟ್ ಪಡೆಯಲು ಹೆಣಗಾಡುತ್ತಿದ್ದಾರೆ.

3 / 5
ಈ ಆವೃತ್ತಿಯಲ್ಲಿ ಬುಮ್ರಾ ಎಂಟು ಪಂದ್ಯಗಳನ್ನು ಆಡಿದ್ದು ಕೇವಲ ಎರಡು ವಿಕೆಟ್‌ಗಳನ್ನು ಮಾತ್ರ ಪಡೆದಿದ್ದಾರೆ. ಅವರು ತಮ್ಮ ಮೊದಲ ಐದು ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಒಟ್ಟಾರೆಯಾಗಿ, ಅವರ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿದೆ. ಈ ಆವೃತ್ತಿಯಲ್ಲಿ ಬುಮ್ರಾ ಅವರ ಬೌಲಿಂಗ್ ಸರಾಸರಿ 132 ತಲುಪಿದದು, ಇದು ಅವರ ಟಿ20 ವೃತ್ತಿಜೀವನದ ಅತ್ಯಂತ ಕೆಟ್ಟ ಸರಾಸರಿಯಾಗಿದೆ.

ಈ ಆವೃತ್ತಿಯಲ್ಲಿ ಬುಮ್ರಾ ಎಂಟು ಪಂದ್ಯಗಳನ್ನು ಆಡಿದ್ದು ಕೇವಲ ಎರಡು ವಿಕೆಟ್‌ಗಳನ್ನು ಮಾತ್ರ ಪಡೆದಿದ್ದಾರೆ. ಅವರು ತಮ್ಮ ಮೊದಲ ಐದು ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಒಟ್ಟಾರೆಯಾಗಿ, ಅವರ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿದೆ. ಈ ಆವೃತ್ತಿಯಲ್ಲಿ ಬುಮ್ರಾ ಅವರ ಬೌಲಿಂಗ್ ಸರಾಸರಿ 132 ತಲುಪಿದದು, ಇದು ಅವರ ಟಿ20 ವೃತ್ತಿಜೀವನದ ಅತ್ಯಂತ ಕೆಟ್ಟ ಸರಾಸರಿಯಾಗಿದೆ.

4 / 5
ಇನ್ನು ರಾಜಸ್ಥಾನ್ ವಿರುದ್ಧ ಮಾರಕ ಬೌಲಿಂಗ್ ಮಾಡಿದ ಸ್ಟಾರ್ಕ್​ ಮೊದಲ ಓವರ್​ನಲ್ಲೇ ಯಶಸ್ವಿ ಜೈಸ್ವಾಲ್ ಅವರ ವಿಕೆಟ್ ಉರುಳಿಸಿದರು. ಆ ನಂತರ 90 ರನ್ ಬಾರಿಸಿದ್ದ ನಾಯಕ ರಿಯಾನ್ ಪರಾಗ್ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಪೆವಿಲಿಯನ್​ಗಟ್ಟುವಲ್ಲಿ ಸ್ಟಾರ್ಕ್​ ಯಶಸ್ವಿಯಾದರು.

ಇನ್ನು ರಾಜಸ್ಥಾನ್ ವಿರುದ್ಧ ಮಾರಕ ಬೌಲಿಂಗ್ ಮಾಡಿದ ಸ್ಟಾರ್ಕ್​ ಮೊದಲ ಓವರ್​ನಲ್ಲೇ ಯಶಸ್ವಿ ಜೈಸ್ವಾಲ್ ಅವರ ವಿಕೆಟ್ ಉರುಳಿಸಿದರು. ಆ ನಂತರ 90 ರನ್ ಬಾರಿಸಿದ್ದ ನಾಯಕ ರಿಯಾನ್ ಪರಾಗ್ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಪೆವಿಲಿಯನ್​ಗಟ್ಟುವಲ್ಲಿ ಸ್ಟಾರ್ಕ್​ ಯಶಸ್ವಿಯಾದರು.

5 / 5
Follow Us
ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ
ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ
ನಟಿ ಸಾರಾ ಅಲಿ ಖಾನ್ ಡೈಲಿ ವ್ಯಾಯಾಮ ಹೀಗಿರುತ್ತೆ: ವಿಡಿಯೋ
ನಟಿ ಸಾರಾ ಅಲಿ ಖಾನ್ ಡೈಲಿ ವ್ಯಾಯಾಮ ಹೀಗಿರುತ್ತೆ: ವಿಡಿಯೋ
ಶೃಂಗೇರಿ ಕ್ಷೇತ್ರ ಮರು ಮತ ಎಣಿಕೆ: ಕೇಂದ್ರದ ಬಳಿ ಹೈಡ್ರಾಮಾ
ಶೃಂಗೇರಿ ಕ್ಷೇತ್ರ ಮರು ಮತ ಎಣಿಕೆ: ಕೇಂದ್ರದ ಬಳಿ ಹೈಡ್ರಾಮಾ
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್