Moeen Ali: ಯುವರಾಜ್ ಸಿಂಗ್​ರ ಅಪರೂಪದ ದಾಖಲೆ ಸರಿಗಟ್ಟಿದ ಮೊಯೀನ್ ಅಲಿ

BPL 2024: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಕೊಮಿಲ್ಲಾ ವಿಕ್ಟೋರಿಯನ್ಸ್ ಪರ ಆಡುತ್ತಿರುವ ಇಂಗ್ಲೆಂಡ್ ಆಲ್​ರೌಂಡರ್ ಮೊಯೀನ್ ಅಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ 2009 ರಲ್ಲಿ ಯುವರಾಜ್ ಸಿಂಗ್ ಬರೆದಿದ್ದ ಅಪರೂಪದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

| Updated By: ಝಾಹಿರ್ ಯೂಸುಫ್

Updated on: Feb 14, 2024 | 3:08 PM

ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸುವ ಮೂಲಕ ಮೊಯೀನ್ ಅಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಯುವರಾಜ್ ಸಿಂಗ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬರೆದಿದ್ದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸುವ ಮೂಲಕ ಮೊಯೀನ್ ಅಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಯುವರಾಜ್ ಸಿಂಗ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬರೆದಿದ್ದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 7
ಚಟ್ಟೋಗ್ರಾಮ್ ಚಾಲೆಂಜರ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೊಮಿಲ್ಲಾ ವಿಕ್ಟೋರಿಯನ್ಸ್ ಪರ ಕಣಕ್ಕಿಳಿದಿದ್ದ ಮೊಯೀನ್ ಅಲಿ ಆಲ್​ರೌಂಡರ್ ಆಟದೊಂದಿಗೆ ಮಿಂಚಿದರು. ಮೊದಲು ಬ್ಯಾಟ್ ಮಾಡಿದ ಕೊಮಿಲ್ಲಾ ಪರ ವಿಲ್ ಜಾಕ್ಸ್ (108) ಶತಕ ಬಾರಿಸಿದರೆ, ಮೊಯೀನ್ ಅಲಿ (53) ಅರ್ಧಶತಕ ಸಿಡಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಕೊಮಿಲ್ಲಾ ವಿಕ್ಟೋರಿಯನ್ಸ್ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 239 ರನ್ ಕಲೆಹಾಕಿತು.

ಚಟ್ಟೋಗ್ರಾಮ್ ಚಾಲೆಂಜರ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೊಮಿಲ್ಲಾ ವಿಕ್ಟೋರಿಯನ್ಸ್ ಪರ ಕಣಕ್ಕಿಳಿದಿದ್ದ ಮೊಯೀನ್ ಅಲಿ ಆಲ್​ರೌಂಡರ್ ಆಟದೊಂದಿಗೆ ಮಿಂಚಿದರು. ಮೊದಲು ಬ್ಯಾಟ್ ಮಾಡಿದ ಕೊಮಿಲ್ಲಾ ಪರ ವಿಲ್ ಜಾಕ್ಸ್ (108) ಶತಕ ಬಾರಿಸಿದರೆ, ಮೊಯೀನ್ ಅಲಿ (53) ಅರ್ಧಶತಕ ಸಿಡಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಕೊಮಿಲ್ಲಾ ವಿಕ್ಟೋರಿಯನ್ಸ್ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 239 ರನ್ ಕಲೆಹಾಕಿತು.

2 / 7
240 ರನ್​ಗಳ ಕಠಿಣ ಗುರಿ ಪಡೆದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ಮೊದಲ ವಿಕೆಟ್​ಗೆ 80 ರನ್ ಕಲೆಹಾಕಿದರೂ ಆ ಬಳಿಕ ಮೊಯೀನ್ ಅಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದರು. 17ನೇ ಓವರ್​ನ ಮೊದಲ ಎಸೆತದಲ್ಲಿ ಶೊಹಿದುಲ್ ಇಸ್ಲಾಂ (2) ವಿಕೆಟ್ ಪಡೆದ ಮೊಯೀನ್ ಅಲಿ, 2ನೇ ಎಸೆತದಲ್ಲಿ ಅಲ್ ಅಮೀನ್ ಅವರನ್ನು ಔಟ್ ಮಾಡಿದರು. ಇನ್ನು ಮೂರನೇ ಎಸೆತದಲ್ಲಿ ಬಿಲಾಲ್ ಖಾನ್ ಅವರ ವಿಕೆಟ್ ಕಬಳಿಸಿ ಹ್ಯಾಟ್ರಿಕ್ ಸಾಧನೆ ಮಾಡಿದರು.

240 ರನ್​ಗಳ ಕಠಿಣ ಗುರಿ ಪಡೆದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ಮೊದಲ ವಿಕೆಟ್​ಗೆ 80 ರನ್ ಕಲೆಹಾಕಿದರೂ ಆ ಬಳಿಕ ಮೊಯೀನ್ ಅಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದರು. 17ನೇ ಓವರ್​ನ ಮೊದಲ ಎಸೆತದಲ್ಲಿ ಶೊಹಿದುಲ್ ಇಸ್ಲಾಂ (2) ವಿಕೆಟ್ ಪಡೆದ ಮೊಯೀನ್ ಅಲಿ, 2ನೇ ಎಸೆತದಲ್ಲಿ ಅಲ್ ಅಮೀನ್ ಅವರನ್ನು ಔಟ್ ಮಾಡಿದರು. ಇನ್ನು ಮೂರನೇ ಎಸೆತದಲ್ಲಿ ಬಿಲಾಲ್ ಖಾನ್ ಅವರ ವಿಕೆಟ್ ಕಬಳಿಸಿ ಹ್ಯಾಟ್ರಿಕ್ ಸಾಧನೆ ಮಾಡಿದರು.

3 / 7
ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ, ಹ್ಯಾಟ್ರಿಕ್ ವಿಕೆಟ್ ಪಡೆದ ವಿಶೇಷ ದಾಖಲೆಯನ್ನು ಮೊಯೀನ್ ಅಲಿ ಬರೆದರು. ಇದಕ್ಕೂ ಮುನ್ನ ಯುವರಾಜ್ ಸಿಂಗ್ ಇಂತಹದೊಂದು ಅಪರೂಪದ ದಾಖಲೆ ಬರೆದಿದ್ದರು.

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ, ಹ್ಯಾಟ್ರಿಕ್ ವಿಕೆಟ್ ಪಡೆದ ವಿಶೇಷ ದಾಖಲೆಯನ್ನು ಮೊಯೀನ್ ಅಲಿ ಬರೆದರು. ಇದಕ್ಕೂ ಮುನ್ನ ಯುವರಾಜ್ ಸಿಂಗ್ ಇಂತಹದೊಂದು ಅಪರೂಪದ ದಾಖಲೆ ಬರೆದಿದ್ದರು.

4 / 7
2009 ರಲ್ಲಿ ಆರ್​ಸಿಬಿ ವಿರುದ್ಧ ಪಂದ್ಯದಲ್ಲಿ ಕಿಂಗ್ ಇಲೆವೆನ್ ಪಂಜಾಬ್ ಪರ ಕಣಕ್ಕಿಳಿದಿದ್ದ ಯುವರಾಜ್ ಸಿಂಗ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದರು. ಅಲ್ಲದೆ ಇದೇ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಅವರು 34 ಎಸೆತಗಳಲ್ಲಿ 50 ರನ್ ಬಾರಿಸಿದ್ದರು. ಈ ಮೂಲಕ ಒಂದೇ ಪಂದ್ಯದಲ್ಲಿ ಅರ್ಧಶತಕದ ಜೊತೆಗೆ ಹ್ಯಾಟ್ರಿಕ್ ವಿಕೆಟ್ ಪಡೆದ ಅಪರೂಪದ ದಾಖಲೆಯೊಂದನ್ನು ಯುವರಾಜ್ ಸಿಂಗ್ ಬರೆದಿದ್ದರು.

2009 ರಲ್ಲಿ ಆರ್​ಸಿಬಿ ವಿರುದ್ಧ ಪಂದ್ಯದಲ್ಲಿ ಕಿಂಗ್ ಇಲೆವೆನ್ ಪಂಜಾಬ್ ಪರ ಕಣಕ್ಕಿಳಿದಿದ್ದ ಯುವರಾಜ್ ಸಿಂಗ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದರು. ಅಲ್ಲದೆ ಇದೇ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಅವರು 34 ಎಸೆತಗಳಲ್ಲಿ 50 ರನ್ ಬಾರಿಸಿದ್ದರು. ಈ ಮೂಲಕ ಒಂದೇ ಪಂದ್ಯದಲ್ಲಿ ಅರ್ಧಶತಕದ ಜೊತೆಗೆ ಹ್ಯಾಟ್ರಿಕ್ ವಿಕೆಟ್ ಪಡೆದ ಅಪರೂಪದ ದಾಖಲೆಯೊಂದನ್ನು ಯುವರಾಜ್ ಸಿಂಗ್ ಬರೆದಿದ್ದರು.

5 / 7
ಇದೀಗ ಚಟ್ಟೋಗ್ರಾಮ್ ಚಾಲೆಂಜರ್ಸ್ ವಿರುದ್ಧದ ಪಂದ್ಯದಲ್ಲಿ ಮೊಯೀನ್ ಅಲಿ 53 ರನ್​ಗಳನ್ನು ಬಾರಿಸಿ ಆ ಬಳಿಕ ಬೌಲಿಂಗ್​ನಲ್ಲಿ ಹ್ಯಾಟ್ರಿಕ್ ವಿಕೆಟ್​ ಸಾಧನೆ ಮಾಡಿದ್ದಾರೆ. ಈ ಮೂಲಕ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮೊಯೀನ್ ಅಲಿ ಸರಿಗಟ್ಟಿದ್ದಾರೆ.

ಇದೀಗ ಚಟ್ಟೋಗ್ರಾಮ್ ಚಾಲೆಂಜರ್ಸ್ ವಿರುದ್ಧದ ಪಂದ್ಯದಲ್ಲಿ ಮೊಯೀನ್ ಅಲಿ 53 ರನ್​ಗಳನ್ನು ಬಾರಿಸಿ ಆ ಬಳಿಕ ಬೌಲಿಂಗ್​ನಲ್ಲಿ ಹ್ಯಾಟ್ರಿಕ್ ವಿಕೆಟ್​ ಸಾಧನೆ ಮಾಡಿದ್ದಾರೆ. ಈ ಮೂಲಕ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮೊಯೀನ್ ಅಲಿ ಸರಿಗಟ್ಟಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಮೊಯೀನ್ ಅಲಿ ಕೇವಲ 23 ರನ್ ನೀಡಿ 4 ವಿಕೆಟ್ ಕಬಳಿಸಿದರು. ಇದರೊಂದಿಗೆ ಚಟ್ಟೋಗ್ರಾಮ್ ಚಾಲೆಂಜರ್ಸ್ 16.3 ಓವರ್​ಗಳಲ್ಲಿ 166 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಕೊಮಿಲ್ಲಾ ವಿಕ್ಟೋರಿಯನ್ಸ್ ತಂಡ 73 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಮೊಯೀನ್ ಅಲಿ ಕೇವಲ 23 ರನ್ ನೀಡಿ 4 ವಿಕೆಟ್ ಕಬಳಿಸಿದರು. ಇದರೊಂದಿಗೆ ಚಟ್ಟೋಗ್ರಾಮ್ ಚಾಲೆಂಜರ್ಸ್ 16.3 ಓವರ್​ಗಳಲ್ಲಿ 166 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಕೊಮಿಲ್ಲಾ ವಿಕ್ಟೋರಿಯನ್ಸ್ ತಂಡ 73 ರನ್​ಗಳ ಭರ್ಜರಿ ಜಯ ಸಾಧಿಸಿದೆ.

7 / 7
Follow us
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ