AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Rizwan: ಅರ್ಧಶತಕ ಬಾರಿಸಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಝ್ವಾನ್

T20 World Cup 2024: ಕೆನಾಡ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ನ್ಯೂಯಾರ್ಕ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಢಾ ತಂಡ 106 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿ ನೆರವಿನಿಂದ ಪಾಕಿಸ್ತಾನ್ ತಂಡವು 17.3 ಓವರ್​ಗಳಲ್ಲಿ ಗುರಿ ತಲುಪಿ, 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 12, 2024 | 9:24 AM

Share
T20 World Cup 2024: ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮುಹಮ್ಮದ್ ರಿಝ್ವಾನ್ (Mohammad Rizwan) ಅರ್ಧಶತಕ ಬಾರಿಸಿದ್ದರು. ವಿಶೇಷ ಎಂದರೆ ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್​ನ ಅತ್ಯಂತ ಕೆಟ್ಟ ದಾಖಲೆಯೊಂದನ್ನು ರಿಝ್ವಾನ್ ತಮ್ಮದಾಗಿಸಿಕೊಂಡಿದ್ದಾರೆ.

T20 World Cup 2024: ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮುಹಮ್ಮದ್ ರಿಝ್ವಾನ್ (Mohammad Rizwan) ಅರ್ಧಶತಕ ಬಾರಿಸಿದ್ದರು. ವಿಶೇಷ ಎಂದರೆ ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್​ನ ಅತ್ಯಂತ ಕೆಟ್ಟ ದಾಖಲೆಯೊಂದನ್ನು ರಿಝ್ವಾನ್ ತಮ್ಮದಾಗಿಸಿಕೊಂಡಿದ್ದಾರೆ.

1 / 5
ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು.

ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಮುಹಮ್ಮದ್ ರಿಝ್ವಾನ್ ಅರ್ಧಶತಕ ಪೂರೈಸಲು ಬರೋಬ್ಬರಿ 52 ಎಸೆತಗಳನ್ನು ತೆಗೆದುಕೊಂಡಿದ್ದರು. ಇದರೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಕಳಪೆ ದಾಖಲೆ ರಿಝ್ವಾನ್ ಪಾಲಾಯಿತು.

ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಮುಹಮ್ಮದ್ ರಿಝ್ವಾನ್ ಅರ್ಧಶತಕ ಪೂರೈಸಲು ಬರೋಬ್ಬರಿ 52 ಎಸೆತಗಳನ್ನು ತೆಗೆದುಕೊಂಡಿದ್ದರು. ಇದರೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಕಳಪೆ ದಾಖಲೆ ರಿಝ್ವಾನ್ ಪಾಲಾಯಿತು.

3 / 5
ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಹೆಸರಿನಲ್ಲಿತ್ತು. 2024ರ ಟಿ20 ವಿಶ್ವಕಪ್​ನಲ್ಲಿ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ 50 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಈ ಅನಗತ್ಯ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಹೆಸರಿನಲ್ಲಿತ್ತು. 2024ರ ಟಿ20 ವಿಶ್ವಕಪ್​ನಲ್ಲಿ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ 50 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಈ ಅನಗತ್ಯ ದಾಖಲೆ ಬರೆದಿದ್ದರು.

4 / 5
ಇದೀಗ ಕೆನಡಾ ವಿರುದ್ಧ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಹಾಫ್ ಸೆಂಚುರಿ ಸಿಡಿಸಲು ಅತೀ ಹೆಚ್ಚು ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಕಳಪೆ ದಾಖಲೆ ಬರೆದಿದ್ದಾರೆ.

ಇದೀಗ ಕೆನಡಾ ವಿರುದ್ಧ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಹಾಫ್ ಸೆಂಚುರಿ ಸಿಡಿಸಲು ಅತೀ ಹೆಚ್ಚು ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಕಳಪೆ ದಾಖಲೆ ಬರೆದಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!