Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಶಮಿ ವಿರುದ್ಧ ಗಂಭೀರ ಆರೋಪ: ಟೀಮ್ ಇಂಡಿಯಾದಿಂದ ಬ್ಯಾನ್ ಭೀತಿ

Mohammed Shami: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮತ್ತೆ ಮೈದಾನಕ್ಕಿಳಿದಿದ್ದಾರೆ, 2023ರ ಏಕದಿನ ವಿಶ್ವಕಪ್ ಬಳಿಕ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಮಿ ಇದೀಗ ರಣಜಿ ಟೂರ್ನಿಯ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಈ ಕಂಬ್ಯಾಕ್ ಬೆನ್ನಲ್ಲೇ ಮೊಹಮ್ಮದ್ ಶಮಿ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ.

ಝಾಹಿರ್ ಯೂಸುಫ್
|

Updated on:Nov 17, 2024 | 12:31 PM

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಭಾರತೀಯ ಆಟಗಾರ ತಮ್ಮ ವಯಸ್ಸನ್ನು ಮರೆಮಾಚಿದ್ದಾರೆ ಎಂದು ವ್ಯಕ್ತಿಯೊಬ್ಬರು ಸೋಷಿಯಲ್ ಮೀಡಿಯಾ ಮೂಲಕ ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಶಮಿ ಅವರ ಡ್ರೈವಿಂಗ್ ಲೈಸನ್ಸ್ ಫೋಟೋವನ್ನು ಹಂಚಿಕೊಂಡಿದ್ದಾರೆ.

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಭಾರತೀಯ ಆಟಗಾರ ತಮ್ಮ ವಯಸ್ಸನ್ನು ಮರೆಮಾಚಿದ್ದಾರೆ ಎಂದು ವ್ಯಕ್ತಿಯೊಬ್ಬರು ಸೋಷಿಯಲ್ ಮೀಡಿಯಾ ಮೂಲಕ ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಶಮಿ ಅವರ ಡ್ರೈವಿಂಗ್ ಲೈಸನ್ಸ್ ಫೋಟೋವನ್ನು ಹಂಚಿಕೊಂಡಿದ್ದಾರೆ.

1 / 5
ಈ ಡ್ರೈವಿಂಗ್ ಲೈಸನ್ಸ್ ಪ್ರಕಾರ ಮೊಹಮ್ಮದ್ ಶಮಿ ಅವರ ವಯಸ್ಸು 42. ಆದರೆ ಅಧಿಕೃತವಾಗಿ ಅವರು ಪ್ರಸ್ತಾಪಿಸಿರುವ ವಯಸ್ಸು 34 ವರ್ಷಗಳು. ಅಂದರೆ ಇಲ್ಲಿ 8 ವರ್ಷಗಳನ್ನು ಮೊಹಮ್ಮದ್ ಶಮಿ ಮರೆ ಮಾಚಿದ್ದಾರೆ ಎಂದು ಮೋಹನ್ ಕೃಷ್ಣ ಎಂಬವರು ಆರೋಪಿಸಿದ್ದಾರೆ.

ಈ ಡ್ರೈವಿಂಗ್ ಲೈಸನ್ಸ್ ಪ್ರಕಾರ ಮೊಹಮ್ಮದ್ ಶಮಿ ಅವರ ವಯಸ್ಸು 42. ಆದರೆ ಅಧಿಕೃತವಾಗಿ ಅವರು ಪ್ರಸ್ತಾಪಿಸಿರುವ ವಯಸ್ಸು 34 ವರ್ಷಗಳು. ಅಂದರೆ ಇಲ್ಲಿ 8 ವರ್ಷಗಳನ್ನು ಮೊಹಮ್ಮದ್ ಶಮಿ ಮರೆ ಮಾಚಿದ್ದಾರೆ ಎಂದು ಮೋಹನ್ ಕೃಷ್ಣ ಎಂಬವರು ಆರೋಪಿಸಿದ್ದಾರೆ.

2 / 5
ಬಿಸಿಸಿಐ ನಿಯಮಗಳ ಪ್ರಕಾರ, ವಯಸ್ಸನ್ನು ಮರೆಮಾಚುವುದು ಗಂಭೀರ ಅಪರಾಧ. ಸಾಮಾನ್ಯವಾಗಿ ಅಂಡರ್-19 ತಂಡದಲ್ಲಿ ಸ್ಥಾನ ಪಡೆಯಲು ಆಟಗಾರರು ತಮ್ಮ ವಯಸ್ಸನ್ನು ಒಂದು ಅಥವಾ ಎರಡು ವರ್ಷ ಕಡಿಮೆ ಎಂದು ಘೋಷಿಸುತ್ತಾರೆ. ಹೀಗೆ ವಯಸ್ಸು ಬದಲಿಸಿ ಹಲವು ಆಟಗಾರರು ಈ ಹಿಂದೆ ಸಿಕ್ಕಿ ಬಿದ್ದಿದ್ದರು. ಅಲ್ಲದೆ ಅಂತಹ ಆಟಗಾರರ ವಿರುದ್ಧ ಬಿಸಿಸಿಐ ಅಮಾನತಿನೊಂದಿಗೆ ಕಠಿಣ ಕ್ರಮ ಕೈಗೊಂಡಿತು.

ಬಿಸಿಸಿಐ ನಿಯಮಗಳ ಪ್ರಕಾರ, ವಯಸ್ಸನ್ನು ಮರೆಮಾಚುವುದು ಗಂಭೀರ ಅಪರಾಧ. ಸಾಮಾನ್ಯವಾಗಿ ಅಂಡರ್-19 ತಂಡದಲ್ಲಿ ಸ್ಥಾನ ಪಡೆಯಲು ಆಟಗಾರರು ತಮ್ಮ ವಯಸ್ಸನ್ನು ಒಂದು ಅಥವಾ ಎರಡು ವರ್ಷ ಕಡಿಮೆ ಎಂದು ಘೋಷಿಸುತ್ತಾರೆ. ಹೀಗೆ ವಯಸ್ಸು ಬದಲಿಸಿ ಹಲವು ಆಟಗಾರರು ಈ ಹಿಂದೆ ಸಿಕ್ಕಿ ಬಿದ್ದಿದ್ದರು. ಅಲ್ಲದೆ ಅಂತಹ ಆಟಗಾರರ ವಿರುದ್ಧ ಬಿಸಿಸಿಐ ಅಮಾನತಿನೊಂದಿಗೆ ಕಠಿಣ ಕ್ರಮ ಕೈಗೊಂಡಿತು.

3 / 5
ಇದೀಗ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ಧ ಕೂಡ ವಯಸ್ಸು ಬದಲಾವಣೆಯ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ಮಾಡುವಂತೆ ಕೃಷ್ಣ ಮೋಹನ್ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಬಿಸಿಸಿಐ ಪುರಸ್ಕರಿಸಿದರೆ, ಶಮಿ ಅವರು ತನಿಖೆಗೆ ಒಳಪಡಲಿದ್ದಾರೆ. ಅಲ್ಲದೆ ಇದು ನಿಜವಾದರೆ ಅವರು ಬ್ಯಾನ್ ಆಗುವ ಸಾಧ್ಯತೆ ಕೂಡ ಇದೆ.

ಇದೀಗ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ಧ ಕೂಡ ವಯಸ್ಸು ಬದಲಾವಣೆಯ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ಮಾಡುವಂತೆ ಕೃಷ್ಣ ಮೋಹನ್ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಬಿಸಿಸಿಐ ಪುರಸ್ಕರಿಸಿದರೆ, ಶಮಿ ಅವರು ತನಿಖೆಗೆ ಒಳಪಡಲಿದ್ದಾರೆ. ಅಲ್ಲದೆ ಇದು ನಿಜವಾದರೆ ಅವರು ಬ್ಯಾನ್ ಆಗುವ ಸಾಧ್ಯತೆ ಕೂಡ ಇದೆ.

4 / 5
ಇತ್ತ ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ ಇದೀಗ ಗಾಯದಿಂದ ಚೇತರಿಸಿಕೊಂಡು ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅಲ್ಲದೆ ಮೊದಲ ಪಂದ್ಯದಲ್ಲೇ 7 ವಿಕೆಟ್ ಕಬಳಿಸಿ ಬಂಗಾಳ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದರ ಬೆನ್ನಲ್ಲೇ ಮೊಹಮ್ಮದ್ ಶಮಿ ವಿರುದ್ಧ ವಯಸ್ಸು ಬದಲಾವಣೆಯ ಗಂಭೀರ ಆರೋಪ ಕೇಳಿ ಬಂದಿದೆ.

ಇತ್ತ ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ ಇದೀಗ ಗಾಯದಿಂದ ಚೇತರಿಸಿಕೊಂಡು ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅಲ್ಲದೆ ಮೊದಲ ಪಂದ್ಯದಲ್ಲೇ 7 ವಿಕೆಟ್ ಕಬಳಿಸಿ ಬಂಗಾಳ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದರ ಬೆನ್ನಲ್ಲೇ ಮೊಹಮ್ಮದ್ ಶಮಿ ವಿರುದ್ಧ ವಯಸ್ಸು ಬದಲಾವಣೆಯ ಗಂಭೀರ ಆರೋಪ ಕೇಳಿ ಬಂದಿದೆ.

5 / 5

Published On - 12:30 pm, Sun, 17 November 24

Follow us
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು