AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

900 ವಿಕೆಟ್‌ಗಳನ್ನು ಪೂರ್ಣಗೊಳಿಸಿದ ಮೊಹಮ್ಮದ್ ಶಮಿ

Duleep Trophy 2026: ದುಲೀಪ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಐತಿಹಾಸಿಕ ಮೈಲಿಗಲ್ಲನ್ನು ತಲುಪಿದ್ದಾರೆ. ಕೇಂದ್ರ ವಲಯದ ವಿರುದ್ಧ 2 ವಿಕೆಟ್ ಪಡೆದ ಶಮಿ ವೃತ್ತಿಪರ ಕ್ರಿಕೆಟ್‌ನಲ್ಲಿ 900 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಪ್ರಥಮ ದರ್ಜೆ, ಲಿಸ್ಟ್ ಎ ಮತ್ತು ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಆರನೇ ಭಾರತೀಯ ವೇಗದ ಬೌಲರ್ ಇವರಾಗಿದ್ದಾರೆ.

ಪೃಥ್ವಿಶಂಕರ
|

Updated on: Aug 30, 2026 | 6:51 PM

Share
ದೇಶೀ ಟೂರ್ನಿ ದುಲೀಪ್ ಟ್ರೋಫಿಯ ಸೆಮಿಫೈನಲ್ ಪಂದ್ಯಗಳು ಇಂದಿನಿಂದ ಬೆಂಗಳೂರಿನಲ್ಲಿ ಆರಂಭವಾಗಿವೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪೂರ್ವ ವಲಯ ಹಾಗೂ ಕೇಂದ್ರಿಯ ವಲಯ ತಂಡಗಳು ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಪೂರ್ವ ವಲಯ ತಂಡದ ಪರ ಆಡುತ್ತಿರುವ ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ತಮ್ಮ ವೃತ್ತಿಜೀವನದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ(PC-PTI).

ದೇಶೀ ಟೂರ್ನಿ ದುಲೀಪ್ ಟ್ರೋಫಿಯ ಸೆಮಿಫೈನಲ್ ಪಂದ್ಯಗಳು ಇಂದಿನಿಂದ ಬೆಂಗಳೂರಿನಲ್ಲಿ ಆರಂಭವಾಗಿವೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪೂರ್ವ ವಲಯ ಹಾಗೂ ಕೇಂದ್ರಿಯ ವಲಯ ತಂಡಗಳು ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಪೂರ್ವ ವಲಯ ತಂಡದ ಪರ ಆಡುತ್ತಿರುವ ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ತಮ್ಮ ವೃತ್ತಿಜೀವನದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ(PC-PTI).

1 / 5
ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೇಂದ್ರ ವಲಯ ತಂಡ ಮೊದಲ ದಿನದಾಟದಂತ್ಯಕ್ಕೆ ತನ್ನೇಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 266 ರನ್ ಕಲೆಹಾಕಿದೆ.  ಕೇಂದ್ರ ವಲಯ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಮೊಹಮ್ಮದ್ ಶಮಿ 16 ಓವರ್‌ಗಳನ್ನು ಬೌಲ್ ಮಾಡಿ 42 ರನ್ ನೀಡಿ 2 ವಿಕೆಟ್‌ಗಳನ್ನು ಪಡೆದರು(PC-PTI).

ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೇಂದ್ರ ವಲಯ ತಂಡ ಮೊದಲ ದಿನದಾಟದಂತ್ಯಕ್ಕೆ ತನ್ನೇಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 266 ರನ್ ಕಲೆಹಾಕಿದೆ. ಕೇಂದ್ರ ವಲಯ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಮೊಹಮ್ಮದ್ ಶಮಿ 16 ಓವರ್‌ಗಳನ್ನು ಬೌಲ್ ಮಾಡಿ 42 ರನ್ ನೀಡಿ 2 ವಿಕೆಟ್‌ಗಳನ್ನು ಪಡೆದರು(PC-PTI).

2 / 5
ಈ ಎರಡು ವಿಕೆಟ್‌ಗಳೊಂದಿಗೆ, ಮೊಹಮ್ಮದ್ ಶಮಿ ವೃತ್ತಿಪರ ಕ್ರಿಕೆಟ್‌ನಲ್ಲಿ 900 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಈ ಮೈಲಿಗಲ್ಲನ್ನು ತಲುಪುವ ಮೂಲಕ, ಶಮಿ ಪ್ರಥಮ ದರ್ಜೆ, ಲಿಸ್ಟ್ ಎ ಮತ್ತು ಟಿ20 ಕ್ರಿಕೆಟ್‌ನಲ್ಲಿ 900 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಭಾರತೀಯ ವೇಗದ ಬೌಲರ್‌ಗಳ ಗಣ್ಯರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ಆರನೇ ಭಾರತೀಯ ವೇಗದ ಬೌಲರ್ ಎನಿಸಿಕೊಂಡಿದ್ದಾರೆ(PC-PTI).

ಈ ಎರಡು ವಿಕೆಟ್‌ಗಳೊಂದಿಗೆ, ಮೊಹಮ್ಮದ್ ಶಮಿ ವೃತ್ತಿಪರ ಕ್ರಿಕೆಟ್‌ನಲ್ಲಿ 900 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಈ ಮೈಲಿಗಲ್ಲನ್ನು ತಲುಪುವ ಮೂಲಕ, ಶಮಿ ಪ್ರಥಮ ದರ್ಜೆ, ಲಿಸ್ಟ್ ಎ ಮತ್ತು ಟಿ20 ಕ್ರಿಕೆಟ್‌ನಲ್ಲಿ 900 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಭಾರತೀಯ ವೇಗದ ಬೌಲರ್‌ಗಳ ಗಣ್ಯರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ಆರನೇ ಭಾರತೀಯ ವೇಗದ ಬೌಲರ್ ಎನಿಸಿಕೊಂಡಿದ್ದಾರೆ(PC-PTI).

3 / 5
ದೇಶೀಯ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಶಮಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 379 ವಿಕೆಟ್‌ಗಳು, ಲಿಸ್ಟ್ ಎ ಕ್ರಿಕೆಟ್‌ನಲ್ಲಿ 283 ಮತ್ತು ಟಿ20 ಕ್ರಿಕೆಟ್‌ನಲ್ಲಿ 280 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ 900 ವೃತ್ತಿಪರ ವಿಕೆಟ್‌ಗಳಲ್ಲಿ 462 ವಿಕೆಟ್‌ಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಂ ಇಂಡಿಯಾ ಪರ ಉರುಳಿಸಿದ್ದಾರೆ(PC-PTI).

ದೇಶೀಯ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಶಮಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 379 ವಿಕೆಟ್‌ಗಳು, ಲಿಸ್ಟ್ ಎ ಕ್ರಿಕೆಟ್‌ನಲ್ಲಿ 283 ಮತ್ತು ಟಿ20 ಕ್ರಿಕೆಟ್‌ನಲ್ಲಿ 280 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ 900 ವೃತ್ತಿಪರ ವಿಕೆಟ್‌ಗಳಲ್ಲಿ 462 ವಿಕೆಟ್‌ಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಂ ಇಂಡಿಯಾ ಪರ ಉರುಳಿಸಿದ್ದಾರೆ(PC-PTI).

4 / 5
2010 ರಲ್ಲಿ ತಮ್ಮ ವೃತ್ತಿಪರ ವೃತ್ತಿಜೀವನವನ್ನು ಪ್ರಾರಂಭಿಸಿದ ಮೊಹಮ್ಮದ್ ಶಮಿ 2013 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದರು. ಅಲ್ಲಿಂದ ತಂಡದಲ್ಲಿ ಖಾಯಂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದ ಮೊಹಮ್ಮದ್ ಶಮಿ 2025 ರಿಂದ ಟೀಂ ಇಂಡಿಯಾ ಪರ ಒಂದೇ ಒಂದು ಪಂದ್ಯವನ್ನು ಆಡಿಲ್ಲ. ಅಲ್ಲದೆ ಸಿಕ್ಕಿರುವ ಮಾಹಿತಿ ಪ್ರಕಾರ, ಶಮಿ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಭಾಗಶಃ ಮುಗಿದಿದೆ ಎಂತಲೇ ಹೇಳಲಾಗುತ್ತಿದೆ(PC-PTI).

2010 ರಲ್ಲಿ ತಮ್ಮ ವೃತ್ತಿಪರ ವೃತ್ತಿಜೀವನವನ್ನು ಪ್ರಾರಂಭಿಸಿದ ಮೊಹಮ್ಮದ್ ಶಮಿ 2013 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದರು. ಅಲ್ಲಿಂದ ತಂಡದಲ್ಲಿ ಖಾಯಂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದ ಮೊಹಮ್ಮದ್ ಶಮಿ 2025 ರಿಂದ ಟೀಂ ಇಂಡಿಯಾ ಪರ ಒಂದೇ ಒಂದು ಪಂದ್ಯವನ್ನು ಆಡಿಲ್ಲ. ಅಲ್ಲದೆ ಸಿಕ್ಕಿರುವ ಮಾಹಿತಿ ಪ್ರಕಾರ, ಶಮಿ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಭಾಗಶಃ ಮುಗಿದಿದೆ ಎಂತಲೇ ಹೇಳಲಾಗುತ್ತಿದೆ(PC-PTI).

5 / 5
Follow Us
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ