5 ವಿಕೆಟ್​ಗೆ 5 ದಾಖಲೆಗಳು: ಇದು ಮೊಹಮ್ಮದ್ ಶಮಿ ಮ್ಯಾಜಿಕ್

Mohammed Shami Records: ಈ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿರುವ ಮೊಹಮ್ಮದ್ ಶಮಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿದಿದೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್​ನಲ್ಲಿ 2 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಅವಾರ್ಡ್ ಪಡೆದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

| Edited By: Zahir Yusuf

Updated on: Nov 02, 2023 | 10:05 PM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 358 ರನ್​ಗಳ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು ಮೊಹಮ್ಮದ್ ಶಮಿ ದಾಳಿಗೆ ತತ್ತರಿಸಿತು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 358 ರನ್​ಗಳ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು ಮೊಹಮ್ಮದ್ ಶಮಿ ದಾಳಿಗೆ ತತ್ತರಿಸಿತು.

1 / 9
ಆರಂಭದಲ್ಲಿ ಮಿಂಚಿನ ದಾಳಿ ಸಂಘಟಿಸಿದ ಜಸ್​ಪ್ರೀತ್ ಬುಮ್ರಾ 1 ವಿಕೆಟ್ ಪಡೆದರೆ, ಬಳಿಕ ಮೊಹಮ್ಮದ್ ಸಿರಾಜ್ 3 ವಿಕೆಟ್ ಕಬಳಿಸಿದರು. ಇದಾದ ಬಳಿಕ ಮೊಹಮ್ಮದ್ ಶಮಿ ಕರಾರುವಾಕ್ ಬೌಲಿಂಗ್ ಮೂಲಕ ಸಂಚಲನ ಸೃಷ್ಟಿಸಿದರು.

ಆರಂಭದಲ್ಲಿ ಮಿಂಚಿನ ದಾಳಿ ಸಂಘಟಿಸಿದ ಜಸ್​ಪ್ರೀತ್ ಬುಮ್ರಾ 1 ವಿಕೆಟ್ ಪಡೆದರೆ, ಬಳಿಕ ಮೊಹಮ್ಮದ್ ಸಿರಾಜ್ 3 ವಿಕೆಟ್ ಕಬಳಿಸಿದರು. ಇದಾದ ಬಳಿಕ ಮೊಹಮ್ಮದ್ ಶಮಿ ಕರಾರುವಾಕ್ ಬೌಲಿಂಗ್ ಮೂಲಕ ಸಂಚಲನ ಸೃಷ್ಟಿಸಿದರು.

2 / 9
ಮೊಹಮ್ಮದ್ ಶಮಿಯ ಈ ಮಿಂಚಿನ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಶ್ರೀಲಂಕಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಕೇವಲ 5 ಓವರ್​ಗಳಲ್ಲಿ 18 ರನ್ ನೀಡಿ  ಶಮಿ 5 ವಿಕೆಟ್ ಕಬಳಿಸಿದರು. ಈ ಐದು ವಿಕೆಟ್​ಗಳೊಂದಿಗೆ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಕ್ಷಿಪ್ತ ವಿವರಗಳು ಈ ಕೆಳಗಿನಂತಿದೆ...

ಮೊಹಮ್ಮದ್ ಶಮಿಯ ಈ ಮಿಂಚಿನ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಶ್ರೀಲಂಕಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಕೇವಲ 5 ಓವರ್​ಗಳಲ್ಲಿ 18 ರನ್ ನೀಡಿ ಶಮಿ 5 ವಿಕೆಟ್ ಕಬಳಿಸಿದರು. ಈ ಐದು ವಿಕೆಟ್​ಗಳೊಂದಿಗೆ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಕ್ಷಿಪ್ತ ವಿವರಗಳು ಈ ಕೆಳಗಿನಂತಿದೆ...

3 / 9
1- ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಮೊಹಮ್ಮದ್ ಶಮಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಝಹೀರ್ ಖಾನ್ ಹಾಗೂ ಜಾವಗಲ್ ಶ್ರೀನಾಥ್ ಹೆಸರಿನಲ್ಲಿತ್ತು. ಶ್ರೀನಾಥ್ ಹಾಗೂ ಝಹೀರ್ ಖಾನ್ ತಲಾ 44 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 45 ವಿಕೆಟ್ ಉರುಳಿಸುವ ಮೂಲಕ ಟೀಮ್ ಇಂಡಿಯಾ ಪರ ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಮೊಹಮ್ಮದ್ ಶಮಿ ತಮ್ಮದಾಗಿಸಿಕೊಂಡಿದ್ದಾರೆ.

1- ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಮೊಹಮ್ಮದ್ ಶಮಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಝಹೀರ್ ಖಾನ್ ಹಾಗೂ ಜಾವಗಲ್ ಶ್ರೀನಾಥ್ ಹೆಸರಿನಲ್ಲಿತ್ತು. ಶ್ರೀನಾಥ್ ಹಾಗೂ ಝಹೀರ್ ಖಾನ್ ತಲಾ 44 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 45 ವಿಕೆಟ್ ಉರುಳಿಸುವ ಮೂಲಕ ಟೀಮ್ ಇಂಡಿಯಾ ಪರ ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಮೊಹಮ್ಮದ್ ಶಮಿ ತಮ್ಮದಾಗಿಸಿಕೊಂಡಿದ್ದಾರೆ.

4 / 9
2- ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಜಾವಗಲ್ ಶ್ರೀನಾಥ್ ಹಾಗೂ ಹರ್ಭಜನ್ ಸಿಂಗ್ ಹೆಸರಿನಲ್ಲಿತ್ತು. ಈ ಇಬ್ಬರು ಬೌಲರ್​ಗಳು ತಲಾ 3 ಬಾರಿ 5 ವಿಕೆಟ್ ಉರುಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 4ನೇ ಬಾರಿಗೆ 5 ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಶಮಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

2- ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಶಮಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಜಾವಗಲ್ ಶ್ರೀನಾಥ್ ಹಾಗೂ ಹರ್ಭಜನ್ ಸಿಂಗ್ ಹೆಸರಿನಲ್ಲಿತ್ತು. ಈ ಇಬ್ಬರು ಬೌಲರ್​ಗಳು ತಲಾ 3 ಬಾರಿ 5 ವಿಕೆಟ್ ಉರುಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 4ನೇ ಬಾರಿಗೆ 5 ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಶಮಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 9
3- ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಪಡೆದ ಭಾರತೀಯ ಬೌಲರ್ ಹಾಗೂ ವಿಶ್ವದ 2ನೇ ಬೌಲರ್​ ಎನಿಸಿಕೊಂಡಿದ್ದಾರೆ. ಶಮಿಗೂ ಮುನ್ನ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್​ ಏಕದಿನ ವಿಶ್ವಕಪ್​ನಲ್ಲಿ 3 ಬಾರಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ದಾಖಲೆಯನ್ನು ಟೀಮ್ ಇಂಡಿಯಾ ವೇಗಿ ಸರಿಗಟ್ಟಿದ್ದಾರೆ.

3- ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಪಡೆದ ಭಾರತೀಯ ಬೌಲರ್ ಹಾಗೂ ವಿಶ್ವದ 2ನೇ ಬೌಲರ್​ ಎನಿಸಿಕೊಂಡಿದ್ದಾರೆ. ಶಮಿಗೂ ಮುನ್ನ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್​ ಏಕದಿನ ವಿಶ್ವಕಪ್​ನಲ್ಲಿ 3 ಬಾರಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ದಾಖಲೆಯನ್ನು ಟೀಮ್ ಇಂಡಿಯಾ ವೇಗಿ ಸರಿಗಟ್ಟಿದ್ದಾರೆ.

6 / 9
4- ಈ ಬಾರಿಯ ವಿಶ್ವಕಪ್​ನಲ್ಲಿ ಕೇವಲ 3 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಶಮಿ ಒಟ್ಟು 14 ವಿಕೆಟ್ ಕಬಳಿಸಿದ್ದಾರೆ. ಶಮಿ ನ್ಯೂಝಿಲೆಂಡ್ ವಿರುದ್ಧ 5 ಹಾಗೂ ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಪಡೆದಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಮತ್ತೆ 5 ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತೀ ಕಡಿಮೆ ಪಂದ್ಯಗಳಿಂದ ಅತ್ಯಧಿಕ ವಿಕೆಟ್ ಪಡೆದ ಬೌಲರ್​ ಎಂಬ ದಾಖಲೆ ಶಮಿ ಹೆಸರಿಗೆ ಸೇರ್ಪಡೆಯಾಗಿದೆ.

4- ಈ ಬಾರಿಯ ವಿಶ್ವಕಪ್​ನಲ್ಲಿ ಕೇವಲ 3 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಶಮಿ ಒಟ್ಟು 14 ವಿಕೆಟ್ ಕಬಳಿಸಿದ್ದಾರೆ. ಶಮಿ ನ್ಯೂಝಿಲೆಂಡ್ ವಿರುದ್ಧ 5 ಹಾಗೂ ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಪಡೆದಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಮತ್ತೆ 5 ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತೀ ಕಡಿಮೆ ಪಂದ್ಯಗಳಿಂದ ಅತ್ಯಧಿಕ ವಿಕೆಟ್ ಪಡೆದ ಬೌಲರ್​ ಎಂಬ ದಾಖಲೆ ಶಮಿ ಹೆಸರಿಗೆ ಸೇರ್ಪಡೆಯಾಗಿದೆ.

7 / 9
5- ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಬಾರಿ 4+ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಮೊಹಮ್ಮದ್ ಶಮಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಹೆಸರಿನಲ್ಲಿತ್ತು. ಸ್ಟಾರ್ಕ್​ 6 ಬಾರಿ 4+ ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 7ನೇ ಬಾರಿ 4+ ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಶಮಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5- ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಬಾರಿ 4+ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಮೊಹಮ್ಮದ್ ಶಮಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಹೆಸರಿನಲ್ಲಿತ್ತು. ಸ್ಟಾರ್ಕ್​ 6 ಬಾರಿ 4+ ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 7ನೇ ಬಾರಿ 4+ ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಶಮಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

8 / 9
ಈ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿರುವ ಮೊಹಮ್ಮದ್ ಶಮಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿದಿದೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್​ನಲ್ಲಿ 2 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಅವಾರ್ಡ್ ಪಡೆದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿರುವ ಮೊಹಮ್ಮದ್ ಶಮಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿದಿದೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್​ನಲ್ಲಿ 2 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಅವಾರ್ಡ್ ಪಡೆದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

9 / 9
Follow us
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ