AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ಸದ್ಯಕ್ಕಿಲ್ಲ ಮೊಹಮ್ಮದ್ ಶಮಿಗೆ ಚಾನ್ಸ್

Mohammed Shami: 2023 ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ವಿಶ್ವಕಪ್​ ಬಳಿಕ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿರುವ ಮೊಹಮ್ಮದ್ ಶಮಿ ಒಂದು ವರ್ಷದ ಬಳಿಕ ಮತ್ತೆ ಮೈದಾನಕ್ಕಿಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 19, 2024 | 8:07 AM

Share
ರಣಜಿ ಟೂರ್ನಿ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿರುವ ಮೊಹಮ್ಮದ್ ಶಮಿ ಸದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಬಂಗಾಳ ಪರ ಕಣಕ್ಕಿಳಿಯಲಿದ್ದಾರೆ.

ರಣಜಿ ಟೂರ್ನಿ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿರುವ ಮೊಹಮ್ಮದ್ ಶಮಿ ಸದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಬಂಗಾಳ ಪರ ಕಣಕ್ಕಿಳಿಯಲಿದ್ದಾರೆ.

1 / 5
ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಶಮಿ ಇತ್ತೀಚೆಗೆ ನಡೆದ ಮಧ್ಯಪ್ರದೇಶ್ ವಿರುದ್ಧದ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​​ಗೆ ಮರಳಿದ್ದರು. ಈ ಪಂದ್ಯದಲ್ಲಿ ಬಂಗಾಳ ಪರ ಕಣಕ್ಕಿಳಿದಿದ್ದ ಶಮಿ ಒಟ್ಟು 7 ವಿಕೆಟ್ ಕಬಳಿಸಿ ಮಿಂಚಿದ್ದರು.

ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಶಮಿ ಇತ್ತೀಚೆಗೆ ನಡೆದ ಮಧ್ಯಪ್ರದೇಶ್ ವಿರುದ್ಧದ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​​ಗೆ ಮರಳಿದ್ದರು. ಈ ಪಂದ್ಯದಲ್ಲಿ ಬಂಗಾಳ ಪರ ಕಣಕ್ಕಿಳಿದಿದ್ದ ಶಮಿ ಒಟ್ಟು 7 ವಿಕೆಟ್ ಕಬಳಿಸಿ ಮಿಂಚಿದ್ದರು.

2 / 5
ಈ ಮೂಲಕ ತಮ್ಮ ಫಿಟ್​ನೆಸ್ ಹಾಗೂ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ್ದ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಪರಿಗಣಿಸಲಾಗುತ್ತದೆ ಎಂದು ವರದಿಗಳಾಗಿದ್ದವು. ಆದರೀಗ ಇನ್ನೊಂದಷ್ಟು ಪಂದ್ಯಗಳನ್ನಾಡುವಂತೆ ಬಿಸಿಸಿಐ ಮೊಹಮ್ಮದ್ ಶಮಿಗೆ ಸೂಚಿಸಿದೆ. ಅದರಂತೆ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಶಮಿ ಬಂಗಾಳ ಪರ ಕಣಕ್ಕಿಳಿಯಲಿದ್ದಾರೆ.

ಈ ಮೂಲಕ ತಮ್ಮ ಫಿಟ್​ನೆಸ್ ಹಾಗೂ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ್ದ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಪರಿಗಣಿಸಲಾಗುತ್ತದೆ ಎಂದು ವರದಿಗಳಾಗಿದ್ದವು. ಆದರೀಗ ಇನ್ನೊಂದಷ್ಟು ಪಂದ್ಯಗಳನ್ನಾಡುವಂತೆ ಬಿಸಿಸಿಐ ಮೊಹಮ್ಮದ್ ಶಮಿಗೆ ಸೂಚಿಸಿದೆ. ಅದರಂತೆ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಶಮಿ ಬಂಗಾಳ ಪರ ಕಣಕ್ಕಿಳಿಯಲಿದ್ದಾರೆ.

3 / 5
ಹೀಗಾಗಿ ಮೊಹಮ್ಮದ್ ಶಮಿ ಅವರು ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುವುದು ಮತ್ತಷ್ಟು ವಿಳಂಬವಾಗುವುದು ಖಚಿತವಾಗಿದೆ. ಇನ್ನು ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೂ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಪರಿಗಣಿಸಬಹುದು. ಅದರಂತೆ ಅವರು ಮೂರನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

ಹೀಗಾಗಿ ಮೊಹಮ್ಮದ್ ಶಮಿ ಅವರು ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುವುದು ಮತ್ತಷ್ಟು ವಿಳಂಬವಾಗುವುದು ಖಚಿತವಾಗಿದೆ. ಇನ್ನು ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೂ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಪರಿಗಣಿಸಬಹುದು. ಅದರಂತೆ ಅವರು ಮೂರನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

4 / 5
2023 ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಅಲ್ಲದೆ ವಿಶ್ವಕಪ್​ ಬಳಿಕ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಅವರು ಒಂದು ವರ್ಷಗಳ ಕಾಲ ಯಾವುದೇ ಸ್ಪರ್ಧಾತ್ಮಕ ಪಂದ್ಯವಾಡಿರಲಿಲ್ಲ. ಇದೀಗ ರಣಜಿ ಟೂರ್ನಿಯ ಮೂಲಕ ಕಂಬ್ಯಾಕ್ ಮಾಡಿರುವ ಶಮಿ, ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೂ ಕಾಣಿಸಿಕೊಳ್ಳಲಿದ್ದಾರೆ.

2023 ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಅಲ್ಲದೆ ವಿಶ್ವಕಪ್​ ಬಳಿಕ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಅವರು ಒಂದು ವರ್ಷಗಳ ಕಾಲ ಯಾವುದೇ ಸ್ಪರ್ಧಾತ್ಮಕ ಪಂದ್ಯವಾಡಿರಲಿಲ್ಲ. ಇದೀಗ ರಣಜಿ ಟೂರ್ನಿಯ ಮೂಲಕ ಕಂಬ್ಯಾಕ್ ಮಾಡಿರುವ ಶಮಿ, ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೂ ಕಾಣಿಸಿಕೊಳ್ಳಲಿದ್ದಾರೆ.

5 / 5

Published On - 8:06 am, Tue, 19 November 24

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು