AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಮಿ ಸಂಚಲನ: ಕಂಬ್ಯಾಕ್ ಪಂದ್ಯದಲ್ಲೇ ಮಿಂಚಿಂಗ್

Mohammed Shami: 2023 ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ವಿಶ್ವಕಪ್​ ಬಳಿಕ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿರುವ ಮೊಹಮ್ಮದ್ ಶಮಿ ಒಂದು ವರ್ಷದ ಬಳಿಕ ಮತ್ತೆ ಮೈದಾನಕ್ಕಿಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 14, 2024 | 1:54 PM

Share
ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಬಂಗಾಳ ಪರ ಕಣಕ್ಕಿಳಿದಿರುವ ಮೊಹಮ್ಮದ್ ಶಮಿ ಕಂಬ್ಯಾಕ್ ಪಂದ್ಯದಲ್ಲೇ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಬಂಗಾಳ ಹಾಗೂ ಮಧ್ಯ ಪ್ರದೇಶ್ ತಂಡಗಳು ಮುಖಾಮುಖಿಯಾಗಿವೆ.

ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಬಂಗಾಳ ಪರ ಕಣಕ್ಕಿಳಿದಿರುವ ಮೊಹಮ್ಮದ್ ಶಮಿ ಕಂಬ್ಯಾಕ್ ಪಂದ್ಯದಲ್ಲೇ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಬಂಗಾಳ ಹಾಗೂ ಮಧ್ಯ ಪ್ರದೇಶ್ ತಂಡಗಳು ಮುಖಾಮುಖಿಯಾಗಿವೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಂಗಾಳ ತಂಡವು ಮೊದಲ ಇನಿಂಗ್ಸ್​ನಲ್ಲಿ 228 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಮಧ್ಯ ಪ್ರದೇಶ್ ತಂಡದ ಬ್ಯಾಟಿಂಗ್ ಬೆನ್ನಲುಬು ಮುರಿಯುವಲ್ಲಿ ಮೊಹಮ್ಮದ್ ಶಮಿ ಯಶಸ್ವಿಯಾದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಂಗಾಳ ತಂಡವು ಮೊದಲ ಇನಿಂಗ್ಸ್​ನಲ್ಲಿ 228 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಮಧ್ಯ ಪ್ರದೇಶ್ ತಂಡದ ಬ್ಯಾಟಿಂಗ್ ಬೆನ್ನಲುಬು ಮುರಿಯುವಲ್ಲಿ ಮೊಹಮ್ಮದ್ ಶಮಿ ಯಶಸ್ವಿಯಾದರು.

2 / 5
ಮಧ್ಯ ಪ್ರದೇಶ್ ತಂಡದ ನಾಯಕ ಶುಭಮ್ ಶರ್ಮಾ (8) ಅವರನ್ನು ಔಟ್ ಮಾಡಿ ವಿಕೆಟ್ ಖಾತೆ ತೆರೆದ ಮೊಹಮ್ಮದ್ ಶಮಿ ಆ ಬಳಿಕ ಮೂರು ವಿಕೆಟ್ ಕಬಳಿಸಿದರು. ಈ ಮೂಲಕ ಮಧ್ಯ ಪ್ರದೇಶ್ ತಂಡವನ್ನು ಕೇವಲ 167 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಮಧ್ಯ ಪ್ರದೇಶ್ ತಂಡದ ನಾಯಕ ಶುಭಮ್ ಶರ್ಮಾ (8) ಅವರನ್ನು ಔಟ್ ಮಾಡಿ ವಿಕೆಟ್ ಖಾತೆ ತೆರೆದ ಮೊಹಮ್ಮದ್ ಶಮಿ ಆ ಬಳಿಕ ಮೂರು ವಿಕೆಟ್ ಕಬಳಿಸಿದರು. ಈ ಮೂಲಕ ಮಧ್ಯ ಪ್ರದೇಶ್ ತಂಡವನ್ನು ಕೇವಲ 167 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.

3 / 5
ಇನ್ನು ಈ ಪಂದ್ಯದಲ್ಲಿ 19 ಓವರ್​ಗಳನ್ನು ಎಸೆದಿರುವ ಮೊಹಮ್ಮದ್ ಶಮಿ 54 ರನ್ ನೀಡಿ 4 ವಿಕೆಟ್ ಕಬಳಿಸಿದರು. ಇದರೊಂದಿಗೆ ಶಮಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿದಂತಾಗಿದೆ. ಅಲ್ಲದೆ ಇನ್ನೊಂದೆರಡು ಪಂದ್ಯಗಳಲ್ಲಿ ಕಣಕ್ಕಿಳಿದರೆ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಪರಿಗಣಿಸಬಹುದು.

ಇನ್ನು ಈ ಪಂದ್ಯದಲ್ಲಿ 19 ಓವರ್​ಗಳನ್ನು ಎಸೆದಿರುವ ಮೊಹಮ್ಮದ್ ಶಮಿ 54 ರನ್ ನೀಡಿ 4 ವಿಕೆಟ್ ಕಬಳಿಸಿದರು. ಇದರೊಂದಿಗೆ ಶಮಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿದಂತಾಗಿದೆ. ಅಲ್ಲದೆ ಇನ್ನೊಂದೆರಡು ಪಂದ್ಯಗಳಲ್ಲಿ ಕಣಕ್ಕಿಳಿದರೆ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಪರಿಗಣಿಸಬಹುದು.

4 / 5
ಇದಕ್ಕೂ ಮುನ್ನ ಶಮಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಗಾಯದ ಕಾರಣ ಕಳೆದೊಂದು ವರ್ಷದಿಂದ ಮೈದಾನದಿಂದ ದೂರವೇ ಉಳಿದಿದ್ದ ಅವರಿಗೆ ರಣಜಿ ಟೂರ್ನಿಯ ಮೂಲಕ ತಮ್ಮ ಫಿಟ್​ನೆಸ್ ಸಾಬೀತುಪಡಿಸುವಂತೆ ಬಿಸಿಸಿಐ ಸೂಚಿಸಿದೆ. ಅದರಂತೆ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಶಮಿ ಮೊದಲ ಪಂದ್ಯದಲ್ಲೇ 19 ಓವರ್​ಗಳನ್ನು ಎಸೆಯುವಲ್ಲಿ ಸಫಲರಾಗಿದ್ದಾರೆ. ಅಲ್ಲದೆ 4 ವಿಕೆಟ್ ಕಬಳಿಸಿ ಆಯ್ಕೆಗಾರರ ಗಮನ ಸೆಳೆದಿದ್ದಾರೆ.

ಇದಕ್ಕೂ ಮುನ್ನ ಶಮಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಗಾಯದ ಕಾರಣ ಕಳೆದೊಂದು ವರ್ಷದಿಂದ ಮೈದಾನದಿಂದ ದೂರವೇ ಉಳಿದಿದ್ದ ಅವರಿಗೆ ರಣಜಿ ಟೂರ್ನಿಯ ಮೂಲಕ ತಮ್ಮ ಫಿಟ್​ನೆಸ್ ಸಾಬೀತುಪಡಿಸುವಂತೆ ಬಿಸಿಸಿಐ ಸೂಚಿಸಿದೆ. ಅದರಂತೆ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಶಮಿ ಮೊದಲ ಪಂದ್ಯದಲ್ಲೇ 19 ಓವರ್​ಗಳನ್ನು ಎಸೆಯುವಲ್ಲಿ ಸಫಲರಾಗಿದ್ದಾರೆ. ಅಲ್ಲದೆ 4 ವಿಕೆಟ್ ಕಬಳಿಸಿ ಆಯ್ಕೆಗಾರರ ಗಮನ ಸೆಳೆದಿದ್ದಾರೆ.

5 / 5
Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ