AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಮೊಹಮ್ಮದ್ ಶಮಿ ಫಿಟ್​, ಜಸ್​ಪ್ರೀತ್ ಬುಮ್ರಾ ಡೌಟ್

Mohammed Shami: 2023ರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. ಕೇವಲ 7 ಪಂದ್ಯಗಳಲ್ಲಿ ಮಾತ್ರ ಅವಕಾಶ ಪಡೆದಿದ್ದ ಶಮಿ ಕರಾರುವಾಕ್ ದಾಳಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಈ ಮೂಲಕ ಕಳೆದ ಏಕದಿನ ವಿಶ್ವಕಪ್​​ನಲ್ಲಿ ಮೂಲಕ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದಾದ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ.

ಝಾಹಿರ್ ಯೂಸುಫ್
|

Updated on: Jan 08, 2025 | 9:53 AM

Share
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಪ್ರಾರಂಭವಾಗಲಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಆದರೆ ಮತ್ತೊಂದೆಡೆ ಸಿಡ್ನಿ ಟೆಸ್ಟ್ ಪಂದ್ಯದ ವೇಳೆಗೆ ಗಾಯಗೊಂಡಿರುವ ಜಸ್​ಪ್ರೀತ್ ಬುಮ್ರಾ ಅವರ ಲಭ್ಯತೆಯು ಅಸ್ಪಷ್ಟವಾಗಿಯೇ ಉಳಿದಿದೆ.

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಪ್ರಾರಂಭವಾಗಲಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಆದರೆ ಮತ್ತೊಂದೆಡೆ ಸಿಡ್ನಿ ಟೆಸ್ಟ್ ಪಂದ್ಯದ ವೇಳೆಗೆ ಗಾಯಗೊಂಡಿರುವ ಜಸ್​ಪ್ರೀತ್ ಬುಮ್ರಾ ಅವರ ಲಭ್ಯತೆಯು ಅಸ್ಪಷ್ಟವಾಗಿಯೇ ಉಳಿದಿದೆ.

1 / 6
2023ರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಬಾರಿಗೆ ಕಣಕ್ಕಿಳಿದಿದ್ದ ಶಮಿ ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದು, ಮತ್ತೆ ಬೌಲಿಂಗ್ ಅಭ್ಯಾಸವನ್ನು ಶುರು ಮಾಡಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಶಮಿ ಅವರನ್ನು ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

2023ರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಬಾರಿಗೆ ಕಣಕ್ಕಿಳಿದಿದ್ದ ಶಮಿ ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದು, ಮತ್ತೆ ಬೌಲಿಂಗ್ ಅಭ್ಯಾಸವನ್ನು ಶುರು ಮಾಡಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಶಮಿ ಅವರನ್ನು ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

2 / 6
ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡರೆ, ಚಾಂಪಿಯನ್ಸ್ ಟ್ರೋಫಿಯಲ್ಲೂ ಸ್ಥಾನ ಪಡೆಯುವುದು ಖಚಿತ. ಏಕೆಂದರೆ 2023ರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದು ಶಮಿ. ಕೇವಲ 7 ಪಂದ್ಯಗಳನ್ನಾಡಿದ್ದ ಅವರು ಒಟ್ಟು 24 ವಿಕೆಟ್ ಕಬಳಿಸಿ ಮಿಂಚಿದ್ದರು.

ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡರೆ, ಚಾಂಪಿಯನ್ಸ್ ಟ್ರೋಫಿಯಲ್ಲೂ ಸ್ಥಾನ ಪಡೆಯುವುದು ಖಚಿತ. ಏಕೆಂದರೆ 2023ರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದು ಶಮಿ. ಕೇವಲ 7 ಪಂದ್ಯಗಳನ್ನಾಡಿದ್ದ ಅವರು ಒಟ್ಟು 24 ವಿಕೆಟ್ ಕಬಳಿಸಿ ಮಿಂಚಿದ್ದರು.

3 / 6
ಆದರೆ ಇದೇ ಟೂರ್ನಿಯ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

ಆದರೆ ಇದೇ ಟೂರ್ನಿಯ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

4 / 6
ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಫಿಟ್​ ಆಗಿದ್ದು, ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಈ ಮೂಲಕ ಮತ್ತೆ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಫಿಟ್​ ಆಗಿದ್ದು, ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಈ ಮೂಲಕ ಮತ್ತೆ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.

5 / 6
ಇತ್ತ ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಿದ್ಧತೆಯಲ್ಲಿದ್ದರೆ, ಅತ್ತ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣ ಮುಂಬರುವ ಸರಣಿಯಿಂದ ಹೊರಗುಳಿಯುತ್ತಿದ್ದಾರೆ. ಇದಾಗ್ಯೂ ಅವರು ಐಸಿಸಿ ಟೂರ್ನಿಗೂ ಮುನ್ನ ಸಂಪೂರ್ಣ ಚೇತರಿಸಿಕೊಂಡರೆ ಚಾಂಪಿಯನ್ಸ್​ ಟ್ರೋಫಿಯಲ್ಲಿ ಶಮಿ-ಬುಮ್ರಾ ಜುಗಲ್​ಬಂಧಿಯನ್ನು ಕಾಣಬಹುದು.

ಇತ್ತ ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಿದ್ಧತೆಯಲ್ಲಿದ್ದರೆ, ಅತ್ತ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣ ಮುಂಬರುವ ಸರಣಿಯಿಂದ ಹೊರಗುಳಿಯುತ್ತಿದ್ದಾರೆ. ಇದಾಗ್ಯೂ ಅವರು ಐಸಿಸಿ ಟೂರ್ನಿಗೂ ಮುನ್ನ ಸಂಪೂರ್ಣ ಚೇತರಿಸಿಕೊಂಡರೆ ಚಾಂಪಿಯನ್ಸ್​ ಟ್ರೋಫಿಯಲ್ಲಿ ಶಮಿ-ಬುಮ್ರಾ ಜುಗಲ್​ಬಂಧಿಯನ್ನು ಕಾಣಬಹುದು.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ