AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 15 ವಿಕೆಟ್​…. ಆಯ್ಕೆಗಾರರಿಗೆ ಚೆಂಡಿನಲ್ಲೇ ಶಮಿ ಉತ್ತರ

Mohammed Shami: ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಈವರೆಗೆ 64 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 122 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 229 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಇತ್ತೀಚೆಗೆ ಮುಗಿದ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಿಗೆ ಶಮಿಯನ್ನು ಆಯ್ಕೆ ಮಾಡಿರಲಿಲ್ಲ.

ಝಾಹಿರ್ ಯೂಸುಫ್
|

Updated on: Oct 29, 2025 | 7:19 AM

Share
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಮೊಹಮ್ಮದ್ ಶಮಿ (Mohammed Shami) ಅವರನ್ನು ಆಯ್ಕೆ ಮಾಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ ಎನ್ನಲಾಗಿತ್ತು. ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಶಮಿ ಅವರನ್ನು ಪರಿಗಣಿಸಿರಲಿಲ್ಲ. ಈ ವೇಳೆಯೂ ಆಯ್ಕೆಗಾರರಿಂದ ಕೇಳಿ ಬಂದ ಉತ್ತರ ಫಿಟ್​ನೆಸ್ ಸಮಸ್ಯೆ.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಮೊಹಮ್ಮದ್ ಶಮಿ (Mohammed Shami) ಅವರನ್ನು ಆಯ್ಕೆ ಮಾಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ ಎನ್ನಲಾಗಿತ್ತು. ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಶಮಿ ಅವರನ್ನು ಪರಿಗಣಿಸಿರಲಿಲ್ಲ. ಈ ವೇಳೆಯೂ ಆಯ್ಕೆಗಾರರಿಂದ ಕೇಳಿ ಬಂದ ಉತ್ತರ ಫಿಟ್​ನೆಸ್ ಸಮಸ್ಯೆ.

1 / 6
ಆಯ್ಕೆಗಾರರ ಈ ನಿರ್ಲಕ್ಷ್ಯದ ಹೊರತಾಗಿಯೂ ಮೊಹಮ್ಮದ್ ಶಮಿ ಈ ಬಾರಿ ರಣಜಿ ಟೂರ್ನಿಯಲ್ಲಿ ಬಂಗಾಳ ಪರ ಕಣಕ್ಕಿಳಿದಿದ್ದರು. ಅಲ್ಲದೆ ಮೊದಲ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ 75 ರನ್​ಗೆ 7 ವಿಕೆಟ್ ಕಬಳಿಸಿ ಮಿಂಚಿದ್ದರು. ಅಲ್ಲದೆ ಈ ಭರ್ಜರಿ ಪ್ರದರ್ಶನದೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಆಯ್ಕೆಗಾರರ ಈ ನಿರ್ಲಕ್ಷ್ಯದ ಹೊರತಾಗಿಯೂ ಮೊಹಮ್ಮದ್ ಶಮಿ ಈ ಬಾರಿ ರಣಜಿ ಟೂರ್ನಿಯಲ್ಲಿ ಬಂಗಾಳ ಪರ ಕಣಕ್ಕಿಳಿದಿದ್ದರು. ಅಲ್ಲದೆ ಮೊದಲ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ 75 ರನ್​ಗೆ 7 ವಿಕೆಟ್ ಕಬಳಿಸಿ ಮಿಂಚಿದ್ದರು. ಅಲ್ಲದೆ ಈ ಭರ್ಜರಿ ಪ್ರದರ್ಶನದೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

2 / 6
ಇದೀಗ ದ್ವಿತೀಯ ಪಂದ್ಯದಲ್ಲೂ ಮೊಹಮ್ಮದ್ ಶಮಿ ಮಿಂಚಿನ ದಾಳಿ ಸಂಘಟಿಸಿದ್ದಾರೆ. ಗುಜರಾತ್ ವಿರುದ್ಧದ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 44 ರನ್ ನೀಡಿ 3 ವಿಕೆಟ್ ಕಬಳಿಸಿದ ಶಮಿ, ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 38 ರನ್ ನೀಡಿ 5 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಒಟ್ಟು 8 ವಿಕೆಟ್ ಕಬಳಿಸಿ ಬಂಗಾಳ ತಂಡಕ್ಕೆ ಜಯ ತಂದು ಕೊಟ್ಟಿದ್ದಾರೆ.

ಇದೀಗ ದ್ವಿತೀಯ ಪಂದ್ಯದಲ್ಲೂ ಮೊಹಮ್ಮದ್ ಶಮಿ ಮಿಂಚಿನ ದಾಳಿ ಸಂಘಟಿಸಿದ್ದಾರೆ. ಗುಜರಾತ್ ವಿರುದ್ಧದ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 44 ರನ್ ನೀಡಿ 3 ವಿಕೆಟ್ ಕಬಳಿಸಿದ ಶಮಿ, ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 38 ರನ್ ನೀಡಿ 5 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಒಟ್ಟು 8 ವಿಕೆಟ್ ಕಬಳಿಸಿ ಬಂಗಾಳ ತಂಡಕ್ಕೆ ಜಯ ತಂದು ಕೊಟ್ಟಿದ್ದಾರೆ.

3 / 6
ಅಂದರೆ ಅನ್​ಫಿಟ್​ ಎಂದು ಸೈಡ್​ ಲೈನ್​ ಮಾಡಲಾಗಿದ್ದ ಮೊಹಮ್ಮದ್ ಶಮಿ ಈ ಬಾರಿಯ ರಣಜಿಯ ಮೊದಲೆರಡು ಪಂದ್ಯಗಳಿಂದಲೇ 15 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಚೆಂಡಿನ ಮೂಲಕವೇ ಆಯ್ಕೆಗಾರರಿಗೆ ಶಮಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಅಂದರೆ ಅನ್​ಫಿಟ್​ ಎಂದು ಸೈಡ್​ ಲೈನ್​ ಮಾಡಲಾಗಿದ್ದ ಮೊಹಮ್ಮದ್ ಶಮಿ ಈ ಬಾರಿಯ ರಣಜಿಯ ಮೊದಲೆರಡು ಪಂದ್ಯಗಳಿಂದಲೇ 15 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಚೆಂಡಿನ ಮೂಲಕವೇ ಆಯ್ಕೆಗಾರರಿಗೆ ಶಮಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

4 / 6
ಅಂದಹಾಗೆ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕೊನೆಯ ಬಾರಿ ಟೆಸ್ಟ್ ಪಂದ್ಯವಾಡಿದ್ದು 2023 ರಲ್ಲಿ. ಇದಾಗ್ಯೂ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಶಮಿ ಕಣಕ್ಕಿಳಿದಿದ್ದರು. ಹೀಗಾಗಿ ಅವರು ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ ಆಯ್ಕೆ ಸಮಿತಿಯು ಶಮಿಯನ್ನು ನಿರ್ಲಕ್ಷಿಸಿ ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಿದ್ದರು.

ಅಂದಹಾಗೆ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕೊನೆಯ ಬಾರಿ ಟೆಸ್ಟ್ ಪಂದ್ಯವಾಡಿದ್ದು 2023 ರಲ್ಲಿ. ಇದಾಗ್ಯೂ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಶಮಿ ಕಣಕ್ಕಿಳಿದಿದ್ದರು. ಹೀಗಾಗಿ ಅವರು ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ ಆಯ್ಕೆ ಸಮಿತಿಯು ಶಮಿಯನ್ನು ನಿರ್ಲಕ್ಷಿಸಿ ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಿದ್ದರು.

5 / 6
ಇದೀಗ ದೇಶೀಯ ಅಂಗಳದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿ ಮೊಹಮ್ಮದ್ ಶಮಿ ಮತ್ತೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ. ಇದೇ ಪ್ರದರ್ಶನ ಮುಂದುವರೆಸಿದರೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಮೊಹಮ್ಮದ್ ಶಮಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಬಹುದು.

ಇದೀಗ ದೇಶೀಯ ಅಂಗಳದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿ ಮೊಹಮ್ಮದ್ ಶಮಿ ಮತ್ತೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ. ಇದೇ ಪ್ರದರ್ಶನ ಮುಂದುವರೆಸಿದರೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಮೊಹಮ್ಮದ್ ಶಮಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಬಹುದು.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ