AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Shami: ಮೊಹಮ್ಮದ್ ಶಮಿ ರೀ ಎಂಟ್ರಿಗೆ ಮುಹೂರ್ತ ಫಿಕ್ಸ್

Mohammed Shami: ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯೊಂದಿಗೆ ಪ್ರಮುಖ ಬೌಲರ್​ಗಳು ತಂಡವನ್ನು ಸೇರಿಕೊಳ್ಳುವ ವರದಿ ಇದೆ. ಅದರಲ್ಲೂ ಏಕದಿನ ವಿಶ್ವಕಪ್ ಬಳಿಕ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿರುವ ವೇಗಿ ಮೊಹಮ್ಮದ್ ಶಮಿ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಆಡುವ ಸಾಧ್ಯತೆಗಳು ಹೆಚ್ಚಾಗಿವೆ.

ಪೃಥ್ವಿಶಂಕರ
|

Updated on: Aug 09, 2024 | 6:40 PM

Share
ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ, ಏಕದಿನ ಮತ್ತು ಟಿ20 ಸರಣಿಗಳನ್ನು ಆಡಿತ್ತು. ಇದರಲ್ಲಿ ಟಿ20 ಸರಣಿಯಲ್ಲಿ ಗೆದ್ದುಬೀಗಿದ್ದ ಟೀಂ ಇಂಡಿಯಾ, ಏಕದಿನ ಸರಣಿಯಲ್ಲಿ ಸೋಲನ್ನು ಎದುರಿಸಬೇಕಾಗಿತ್ತು. ಇದಕ್ಕೆ ಪ್ರಮುಖ ಕಾರಣ ತಂಡದ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನ ಎನ್ನಲಾಗುತ್ತಿದೆಯಾದರೂ, ಪ್ರಮುಖ ಬೌಲರ್​ಗಳ ಅಲಭ್ಯತೆಯೂ ಒಂದು ಕಾರಣವಾಗಿತ್ತು.

ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ, ಏಕದಿನ ಮತ್ತು ಟಿ20 ಸರಣಿಗಳನ್ನು ಆಡಿತ್ತು. ಇದರಲ್ಲಿ ಟಿ20 ಸರಣಿಯಲ್ಲಿ ಗೆದ್ದುಬೀಗಿದ್ದ ಟೀಂ ಇಂಡಿಯಾ, ಏಕದಿನ ಸರಣಿಯಲ್ಲಿ ಸೋಲನ್ನು ಎದುರಿಸಬೇಕಾಗಿತ್ತು. ಇದಕ್ಕೆ ಪ್ರಮುಖ ಕಾರಣ ತಂಡದ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನ ಎನ್ನಲಾಗುತ್ತಿದೆಯಾದರೂ, ಪ್ರಮುಖ ಬೌಲರ್​ಗಳ ಅಲಭ್ಯತೆಯೂ ಒಂದು ಕಾರಣವಾಗಿತ್ತು.

1 / 6
ಈ ಸರಣಿಯಿಂದ ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದರು. ಮತ್ತೊಬ್ಬ ಅನುಭವಿ ವೇಗಿ ಮೊಹಮ್ಮದ್ ಶಮಿ ಕೂಡ ಇಂಜುರಿಯಿಂದಾಗಿ ಈಗಾಗಲೇ ತಂಡದಿಂದ ಹೊರಗುಳಿದಿದ್ದಾರೆ. ಆಲ್​ರೌಂಡರ್ ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ಸಹ ಸರಣಿಗೆ ಆಯ್ಕೆಯಾಗಿರಲಿಲ್ಲ. ಈ ಅನುಭವಿಗಳ ಅಲಭ್ಯತೆ ತಂಡವನ್ನು ಏಕದಿನ ಸರಣಿ ಸೋಲುವಂತೆ ಮಾಡಿತ್ತು.

ಈ ಸರಣಿಯಿಂದ ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದರು. ಮತ್ತೊಬ್ಬ ಅನುಭವಿ ವೇಗಿ ಮೊಹಮ್ಮದ್ ಶಮಿ ಕೂಡ ಇಂಜುರಿಯಿಂದಾಗಿ ಈಗಾಗಲೇ ತಂಡದಿಂದ ಹೊರಗುಳಿದಿದ್ದಾರೆ. ಆಲ್​ರೌಂಡರ್ ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ಸಹ ಸರಣಿಗೆ ಆಯ್ಕೆಯಾಗಿರಲಿಲ್ಲ. ಈ ಅನುಭವಿಗಳ ಅಲಭ್ಯತೆ ತಂಡವನ್ನು ಏಕದಿನ ಸರಣಿ ಸೋಲುವಂತೆ ಮಾಡಿತ್ತು.

2 / 6
ಇದೀಗ ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯೊಂದಿಗೆ ಪ್ರಮುಖ ಬೌಲರ್​ಗಳು ತಂಡವನ್ನು ಸೇರಿಕೊಳ್ಳುವ ವರದಿ ಇದೆ. ಅದರಲ್ಲೂ ಏಕದಿನ ವಿಶ್ವಕಪ್ ಬಳಿಕ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿರುವ ವೇಗಿ ಮೊಹಮ್ಮದ್ ಶಮಿ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಆಡುವ ಸಾಧ್ಯತೆಗಳು ಹೆಚ್ಚಾಗಿವೆ.

ಇದೀಗ ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯೊಂದಿಗೆ ಪ್ರಮುಖ ಬೌಲರ್​ಗಳು ತಂಡವನ್ನು ಸೇರಿಕೊಳ್ಳುವ ವರದಿ ಇದೆ. ಅದರಲ್ಲೂ ಏಕದಿನ ವಿಶ್ವಕಪ್ ಬಳಿಕ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿರುವ ವೇಗಿ ಮೊಹಮ್ಮದ್ ಶಮಿ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಆಡುವ ಸಾಧ್ಯತೆಗಳು ಹೆಚ್ಚಾಗಿವೆ.

3 / 6
ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ. ಈ ಸರಣಿಯಲ್ಲಿ ಮೊಹಮ್ಮದ್ ಶಮಿ ಕೂಡ ಆಡುವುದನ್ನು ಕಾಣಬಹುದಾಗಿದೆ. ವರದಿ ಪ್ರಕಾರ ಶಮಿ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದು, ಈಗಾಗಲೇ ಅವರು ನೆಟ್ಸ್​ನಲ್ಲಿ ಬೌಲಿಂಗ್ ಕೂಡ ಆರಂಭಿಸಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ. ಈ ಸರಣಿಯಲ್ಲಿ ಮೊಹಮ್ಮದ್ ಶಮಿ ಕೂಡ ಆಡುವುದನ್ನು ಕಾಣಬಹುದಾಗಿದೆ. ವರದಿ ಪ್ರಕಾರ ಶಮಿ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದು, ಈಗಾಗಲೇ ಅವರು ನೆಟ್ಸ್​ನಲ್ಲಿ ಬೌಲಿಂಗ್ ಕೂಡ ಆರಂಭಿಸಿದ್ದಾರೆ.

4 / 6
ಪಾದದ ಗಾಯದಿಂದ ಚೇತರಿಸಿಕೊಳ್ಳುವಲ್ಲಿ ಶಮಿ ಸಾಕಷ್ಟು ಪ್ರಗತಿ ಸಾಧಿಸಿದ್ದು, ಆಯ್ಕೆದಾರರು ಶಮಿ ಅವರ ಪ್ರಸ್ತುತ ಸ್ಥಿತಿಯ ಬಗ್ಗೆ ನಿರಂತರವಾಗಿ ಮಾಹಿತಿ ತೆಗೆದುಕೊಳ್ಳುತ್ತಿದ್ದಾರೆ. ಶಮಿ ಶೀಘ್ರದಲ್ಲೇ ದುಲೀಪ್ ಟ್ರೋಫಿಯಲ್ಲಿ ಆಡುವುದನ್ನು ಕಾಣಬಹುದು. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಶಮಿ, ತಾನು ಟೀಂ ಇಂಡಿಯಾದಲ್ಲಿ ಆಡುವುದಕ್ಕೂ ಮುನ್ನ ದೇಶಿ ಕ್ರಿಕೆಟ್​ನಲ್ಲಿ ಆಡುವುದನ್ನು ನೀವು ಕಾಣಬಹುದು ಎಂದಿದ್ದರು.

ಪಾದದ ಗಾಯದಿಂದ ಚೇತರಿಸಿಕೊಳ್ಳುವಲ್ಲಿ ಶಮಿ ಸಾಕಷ್ಟು ಪ್ರಗತಿ ಸಾಧಿಸಿದ್ದು, ಆಯ್ಕೆದಾರರು ಶಮಿ ಅವರ ಪ್ರಸ್ತುತ ಸ್ಥಿತಿಯ ಬಗ್ಗೆ ನಿರಂತರವಾಗಿ ಮಾಹಿತಿ ತೆಗೆದುಕೊಳ್ಳುತ್ತಿದ್ದಾರೆ. ಶಮಿ ಶೀಘ್ರದಲ್ಲೇ ದುಲೀಪ್ ಟ್ರೋಫಿಯಲ್ಲಿ ಆಡುವುದನ್ನು ಕಾಣಬಹುದು. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಶಮಿ, ತಾನು ಟೀಂ ಇಂಡಿಯಾದಲ್ಲಿ ಆಡುವುದಕ್ಕೂ ಮುನ್ನ ದೇಶಿ ಕ್ರಿಕೆಟ್​ನಲ್ಲಿ ಆಡುವುದನ್ನು ನೀವು ಕಾಣಬಹುದು ಎಂದಿದ್ದರು.

5 / 6
ಮೊಹಮ್ಮದ್ ಶಮಿ ಕೊನೆಯ ಬಾರಿಗೆ 2023 ರ ಏಕದಿನ ವಿಶ್ವಕಪ್‌ನಲ್ಲಿ ತಂಡದ ಪರ ಆಡಿದ್ದರು. ಈ ಟೂರ್ನಿಯಲ್ಲಿ ಶಮಿ ಅದ್ಭುತ ಬೌಲಿಂಗ್ ಪ್ರದರ್ಶಿಸಿ ಬರೋಬ್ಬರಿ 24 ವಿಕೆಟ್ ಪಡೆದು ಪಂದ್ಯಾವಳಿಯಲ್ಲಿ ಅಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.

ಮೊಹಮ್ಮದ್ ಶಮಿ ಕೊನೆಯ ಬಾರಿಗೆ 2023 ರ ಏಕದಿನ ವಿಶ್ವಕಪ್‌ನಲ್ಲಿ ತಂಡದ ಪರ ಆಡಿದ್ದರು. ಈ ಟೂರ್ನಿಯಲ್ಲಿ ಶಮಿ ಅದ್ಭುತ ಬೌಲಿಂಗ್ ಪ್ರದರ್ಶಿಸಿ ಬರೋಬ್ಬರಿ 24 ವಿಕೆಟ್ ಪಡೆದು ಪಂದ್ಯಾವಳಿಯಲ್ಲಿ ಅಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ