AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 19 ರನ್, 3 ವಿಕೆಟ್; ಐಪಿಎಲ್​ನ ಅತ್ಯುತ್ತಮ ಪ್ರದರ್ಶನ ನೀಡಿದ ಸಿರಾಜ್

Mohammed Siraj's Stunning Spell: 2025ರ ಐಪಿಎಲ್​ನಲ್ಲಿ ಗುಜರಾತ್ ಟೈಟನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನ ಕಂಡುಬಂತು. ಮಾಜಿ ತಂಡದ ವಿರುದ್ಧ ಆಡಿದ ಸಿರಾಜ್ ಕೇವಲ 19 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರು. ಇದು ಅವರ ಐಪಿಎಲ್ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವಾಗಿದೆ. ಪಡಿಕ್ಕಲ್, ಸಾಲ್ಟ್ ಮತ್ತು ಲಿವಿಂಗ್‌ಸ್ಟೋನ್ ಅವರನ್ನು ಸಿರಾಜ್ ಕ್ಲೀನ್ ಬೌಲ್ಡ್ ಮಾಡಿದರು.

ಪೃಥ್ವಿಶಂಕರ
|

Updated on: Apr 02, 2025 | 9:54 PM

Share
2025 ರ ಐಪಿಎಲ್​ನ 14ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ 8 ವಿಕೆಟ್ ನಷ್ಟಕ್ಕೆ 169 ರನ್ ಕಲೆಹಾಕಿದೆ. ಆರ್​ಸಿಬಿ ವೇಗಕ್ಕೆ ಕಡಿವಾಣ ಹಾಕುವುದರಲ್ಲಿ ಮೊಹಮ್ಮದ್ ಸಿರಾಜ್ ಪ್ರಮುಖ ಪಾತ್ರವಹಿಸಿದರು.

2025 ರ ಐಪಿಎಲ್​ನ 14ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ 8 ವಿಕೆಟ್ ನಷ್ಟಕ್ಕೆ 169 ರನ್ ಕಲೆಹಾಕಿದೆ. ಆರ್​ಸಿಬಿ ವೇಗಕ್ಕೆ ಕಡಿವಾಣ ಹಾಕುವುದರಲ್ಲಿ ಮೊಹಮ್ಮದ್ ಸಿರಾಜ್ ಪ್ರಮುಖ ಪಾತ್ರವಹಿಸಿದರು.

1 / 7
ವಾಸ್ತವವಾಗಿ ಕಳೆದ ಆವೃತ್ತಿಯವರೆಗೂ ಆರ್​ಸಿಬಿ ತಂಡದ ಪರ ಆಡುತ್ತಿದ್ದ ಸಿರಾಜ್, ಈ ಆವೃತ್ತಿಯಲ್ಲಿ ಗುಜರಾತ್ ತಂಡದ ಪರ ಆಡುತ್ತಿದ್ದಾರೆ. ಇದರೊಂದಿಗೆ ತನ್ನ ಮಾಜಿ ತಂಡದ ವಿರುದ್ಧ ಮೊದಲ ಪಂದ್ಯವನ್ನು ಆಡುತ್ತಿರುವ ಸಿರಾಜ್​, ಮಾರಕ ಪ್ರದರ್ಶನ ನೀಡಿದ್ದಾರೆ.

ವಾಸ್ತವವಾಗಿ ಕಳೆದ ಆವೃತ್ತಿಯವರೆಗೂ ಆರ್​ಸಿಬಿ ತಂಡದ ಪರ ಆಡುತ್ತಿದ್ದ ಸಿರಾಜ್, ಈ ಆವೃತ್ತಿಯಲ್ಲಿ ಗುಜರಾತ್ ತಂಡದ ಪರ ಆಡುತ್ತಿದ್ದಾರೆ. ಇದರೊಂದಿಗೆ ತನ್ನ ಮಾಜಿ ತಂಡದ ವಿರುದ್ಧ ಮೊದಲ ಪಂದ್ಯವನ್ನು ಆಡುತ್ತಿರುವ ಸಿರಾಜ್​, ಮಾರಕ ಪ್ರದರ್ಶನ ನೀಡಿದ್ದಾರೆ.

2 / 7
ಆರ್​ಸಿಬಿ ವಿರುದ್ಧ ತಮ್ಮ ಖೋಟಾದ 4 ಓವರ್​ಗಳನ್ನು ಬೌಲ್ ಮಾಡಿದ ಸಿರಾಜ್ ಕೇವಲ 19 ರನ್ ನೀಡಿ ಪ್ರಮುಖ 3 ವಿಕೆಟ್‌ಗಳನ್ನು ಉರುಳಿಸಿದರು. ಅಚ್ಚರಿಯ ಸಂಗತಿಯೆಂದರೆ ಇದು ಐಪಿಎಲ್ ಇತಿಹಾಸದಲ್ಲಿ ಸಿರಾಜ್​ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಇದಕ್ಕೂ ಮುನ್ನ ಸಿರಾಜ್ 21 ರನ್​ಗಳಿಗೆ 4 ವಿಕೆಟ್ ಪಡೆದಿದ್ದು ಉತ್ತಮ ಪ್ರದರ್ಶನವಾಗಿತ್ತು.

ಆರ್​ಸಿಬಿ ವಿರುದ್ಧ ತಮ್ಮ ಖೋಟಾದ 4 ಓವರ್​ಗಳನ್ನು ಬೌಲ್ ಮಾಡಿದ ಸಿರಾಜ್ ಕೇವಲ 19 ರನ್ ನೀಡಿ ಪ್ರಮುಖ 3 ವಿಕೆಟ್‌ಗಳನ್ನು ಉರುಳಿಸಿದರು. ಅಚ್ಚರಿಯ ಸಂಗತಿಯೆಂದರೆ ಇದು ಐಪಿಎಲ್ ಇತಿಹಾಸದಲ್ಲಿ ಸಿರಾಜ್​ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಇದಕ್ಕೂ ಮುನ್ನ ಸಿರಾಜ್ 21 ರನ್​ಗಳಿಗೆ 4 ವಿಕೆಟ್ ಪಡೆದಿದ್ದು ಉತ್ತಮ ಪ್ರದರ್ಶನವಾಗಿತ್ತು.

3 / 7
ಇನ್ನು ಈ ಪಂದ್ಯದಲ್ಲಿ ಗುಜರಾತ್ ಪರ ಬೌಲಿಂಗ್ ಆರಂಭಿಸಿದ ಸಿರಾಜ್ ಮೊದಲ ಓವರ್​ನಲ್ಲಿ ಕೊಹ್ಲಿ ಎದುರು ಬೌಂಡರಿ ಹೊಡೆಸಿಕೊಂಡ ಸಿರಾಜ್, ಅದೇ ಓವರ್​ನಲ್ಲಿ ವಿಕೆಟ್​ನ ಅವಕಾಶವನ್ನು ಸೃಷ್ಟಿಸಿದ್ದರು. ಆದರೆ ವಿಕೆಟ್ ಕೀಪರ್ ಜೋಸ್ ಬಟ್ಲರ್, ಆರಂಭಿಕ ಫಿಲ್ ಸಾಲ್ಟ್ ಅವರ ಸುಲಭ ಕ್ಯಾಚನ್ನು ಕೈಚೆಲ್ಲಿದರು.

ಇನ್ನು ಈ ಪಂದ್ಯದಲ್ಲಿ ಗುಜರಾತ್ ಪರ ಬೌಲಿಂಗ್ ಆರಂಭಿಸಿದ ಸಿರಾಜ್ ಮೊದಲ ಓವರ್​ನಲ್ಲಿ ಕೊಹ್ಲಿ ಎದುರು ಬೌಂಡರಿ ಹೊಡೆಸಿಕೊಂಡ ಸಿರಾಜ್, ಅದೇ ಓವರ್​ನಲ್ಲಿ ವಿಕೆಟ್​ನ ಅವಕಾಶವನ್ನು ಸೃಷ್ಟಿಸಿದ್ದರು. ಆದರೆ ವಿಕೆಟ್ ಕೀಪರ್ ಜೋಸ್ ಬಟ್ಲರ್, ಆರಂಭಿಕ ಫಿಲ್ ಸಾಲ್ಟ್ ಅವರ ಸುಲಭ ಕ್ಯಾಚನ್ನು ಕೈಚೆಲ್ಲಿದರು.

4 / 7
ಆದಾಗ್ಯೂ ತಾನು ಎಸೆದ ಎರಡನೇ ಓವರ್​ನಲ್ಲೇ ಆರ್​ಸಿಬಿಗೆ ಆಘಾತ ನೀಡಿದ ಮೊಹಮ್ಮದ್ ಸಿರಾಜ್, ಕನ್ನಡಿಗ ದೇವದತ್ ಪಡಿಕ್ಕಲ್​ರನ್ನು ಕ್ಲೀನ್ ಬೌಲ್ಡ್ ಮಾಡಿದರು. ಸಿರಾಜ್ ಓವರ್​ನ ಮೊದಲ ಎಸೆತವನ್ನು ಬೌಂಡರಿಗಟ್ಟಿದ ಪಡಿಕ್ಕಲ್ ನಂತರದ ಎಸೆತದವನ್ನು ಸಹ ಬೌಂಡರಿಗಟ್ಟುವ ಯತ್ನದಲ್ಲಿ ಕ್ಲೀನ್ ಬೌಲ್ಡ್ ಆದರು.

ಆದಾಗ್ಯೂ ತಾನು ಎಸೆದ ಎರಡನೇ ಓವರ್​ನಲ್ಲೇ ಆರ್​ಸಿಬಿಗೆ ಆಘಾತ ನೀಡಿದ ಮೊಹಮ್ಮದ್ ಸಿರಾಜ್, ಕನ್ನಡಿಗ ದೇವದತ್ ಪಡಿಕ್ಕಲ್​ರನ್ನು ಕ್ಲೀನ್ ಬೌಲ್ಡ್ ಮಾಡಿದರು. ಸಿರಾಜ್ ಓವರ್​ನ ಮೊದಲ ಎಸೆತವನ್ನು ಬೌಂಡರಿಗಟ್ಟಿದ ಪಡಿಕ್ಕಲ್ ನಂತರದ ಎಸೆತದವನ್ನು ಸಹ ಬೌಂಡರಿಗಟ್ಟುವ ಯತ್ನದಲ್ಲಿ ಕ್ಲೀನ್ ಬೌಲ್ಡ್ ಆದರು.

5 / 7
ನಂತರ ತಮ್ಮ ಖೋಟಾದ ಮೂರನೇ ಓವರ್ ಬೌಲ್ ಮಾಡಿದ ಸಿರಾಜ್ ಈ ಓವರ್​ನಲ್ಲೂ ವಿಕೆಟ್ ಪಡೆದರು. ಈ ವೇಳೆ ಸಿರಾಜ್, ಮೊದಲ ಓವರ್​ನಲ್ಲಿ ಜೀವದಾನ ಪಡೆದಿದ್ದ ಫಿಲ್ ಸಾಲ್ಟ್​ರನ್ನು ಬಲಿ ಪಡೆದರು. ಈ ಓವರ್​ನಲ್ಲೂ ಸಹ ಸಿರಾಜ್​ ಎಸೆತಕ್ಕೆ ಔಟಾಗುವುದಕ್ಕೂ ಮುನ್ನ ಭರ್ಜರಿ ಸಿಕ್ಸರ್ ಸಿಡಿಸಿದ ಫಿಲ್ ಸಾಲ್ಟ್ ನಂತರದ ಎಸೆತವನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ಕ್ಲೀನ್ ಬೌಲ್ಡ್ ಆದರು.

ನಂತರ ತಮ್ಮ ಖೋಟಾದ ಮೂರನೇ ಓವರ್ ಬೌಲ್ ಮಾಡಿದ ಸಿರಾಜ್ ಈ ಓವರ್​ನಲ್ಲೂ ವಿಕೆಟ್ ಪಡೆದರು. ಈ ವೇಳೆ ಸಿರಾಜ್, ಮೊದಲ ಓವರ್​ನಲ್ಲಿ ಜೀವದಾನ ಪಡೆದಿದ್ದ ಫಿಲ್ ಸಾಲ್ಟ್​ರನ್ನು ಬಲಿ ಪಡೆದರು. ಈ ಓವರ್​ನಲ್ಲೂ ಸಹ ಸಿರಾಜ್​ ಎಸೆತಕ್ಕೆ ಔಟಾಗುವುದಕ್ಕೂ ಮುನ್ನ ಭರ್ಜರಿ ಸಿಕ್ಸರ್ ಸಿಡಿಸಿದ ಫಿಲ್ ಸಾಲ್ಟ್ ನಂತರದ ಎಸೆತವನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ಕ್ಲೀನ್ ಬೌಲ್ಡ್ ಆದರು.

6 / 7
ಕೊನೆಯಲ್ಲಿ ತಮ್ಮ ಖೋಟಾದ 4ನೇ ಓವರ್ ಬೌಲ್ ಮಾಡಲು ಬಂದ ಸಿರಾಜ್ ಈ ಓವರ್​ನಲ್ಲೂ ಪ್ರಮುಖ ವಿಕೆಟ್ ಕಬಳಿಸಿದರು. ಆರ್​ಸಿಬಿ ಪರ ಅರ್ಧಶತಕದ ಇನ್ನಿಂಗ್ಸ್ ಆಡಿದ ಲಿಯಮ್ ಲಿವಿಂಗ್‌ಸ್ಟೋನ್​ರನ್ನು ಸಿರಾಜ್ ಕ್ಲೀನ್ ಬೌಲ್ಡ್ ಮಾಡಿದರು.

ಕೊನೆಯಲ್ಲಿ ತಮ್ಮ ಖೋಟಾದ 4ನೇ ಓವರ್ ಬೌಲ್ ಮಾಡಲು ಬಂದ ಸಿರಾಜ್ ಈ ಓವರ್​ನಲ್ಲೂ ಪ್ರಮುಖ ವಿಕೆಟ್ ಕಬಳಿಸಿದರು. ಆರ್​ಸಿಬಿ ಪರ ಅರ್ಧಶತಕದ ಇನ್ನಿಂಗ್ಸ್ ಆಡಿದ ಲಿಯಮ್ ಲಿವಿಂಗ್‌ಸ್ಟೋನ್​ರನ್ನು ಸಿರಾಜ್ ಕ್ಲೀನ್ ಬೌಲ್ಡ್ ಮಾಡಿದರು.

7 / 7
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ