AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಓವರ್​ಗಳಲ್ಲಿ ‘ಹ್ಯಾಟ್ರಿಕ್’ ಬರೆದ ಮೊಹಮ್ಮದ್ ಸಿರಾಜ್

Mohammed Siraj: ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಸತತ 10 ಟೆಸ್ಟ್​ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅಂದರೆ ಬಾರ್ಡರ್-ಗವಾಸ್ಕರ್ ಸರಣಿಯ ಎಲ್ಲಾ ಮ್ಯಾಚ್​ಗಳನ್ನೂ ಆಡಿದ್ದ ಸಿರಾಜ್ ಇದೀಗ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲೂ 5 ಪಂದ್ಯಗಳಲ್ಲೂ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಪ್ರಸ್ತುತ ಸರಣಿಯ ಎಲ್ಲಾ ಪಂದ್ಯವಾಡಿದ ಏಕೈಕ ವೇಗಿ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 02, 2025 | 10:25 AM

Share
ಈ ಬಾರಿಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 5 ಪಂದ್ಯಗಳಲ್ಲೂ ಕಣಕ್ಕಿಳಿದ ಏಕೈಕ ವೇಗಿ ಮೊಹಮ್ಮದ್ ಸಿರಾಜ್. ಈ ಐದು ಮ್ಯಾಚ್​ಗಳ ಮೂಲಕ ಸಿರಾಜ್ 150 ಕ್ಕಿಂತ ಹೆಚ್ಚಿನ ಓವರ್​ಗಳನ್ನು ಎಸೆದಿದ್ದಾರೆ. ಈ ಮೂಲಕ ತಮ್ಮ ಕೆರಿಯರ್​ನಲ್ಲಿ ಮೂರನೇ ಬಾರಿ ಸರಣಿವೊಂದರಲ್ಲಿ 150 ಓವರ್​ಗಳ ಸಾಧನೆ ಮಾಡಿದ್ದಾರೆ.

ಈ ಬಾರಿಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 5 ಪಂದ್ಯಗಳಲ್ಲೂ ಕಣಕ್ಕಿಳಿದ ಏಕೈಕ ವೇಗಿ ಮೊಹಮ್ಮದ್ ಸಿರಾಜ್. ಈ ಐದು ಮ್ಯಾಚ್​ಗಳ ಮೂಲಕ ಸಿರಾಜ್ 150 ಕ್ಕಿಂತ ಹೆಚ್ಚಿನ ಓವರ್​ಗಳನ್ನು ಎಸೆದಿದ್ದಾರೆ. ಈ ಮೂಲಕ ತಮ್ಮ ಕೆರಿಯರ್​ನಲ್ಲಿ ಮೂರನೇ ಬಾರಿ ಸರಣಿವೊಂದರಲ್ಲಿ 150 ಓವರ್​ಗಳ ಸಾಧನೆ ಮಾಡಿದ್ದಾರೆ.

1 / 5
ಇದಕ್ಕೂ ಮುನ್ನ ಮೊಹಮ್ಮದ್ ಸಿರಾಜ್ 2021 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 153.2 ಓವರ್​ಗಳನ್ನು ಬೌಲಿಂಗ್ ಮಾಡಿದ್ದರು. ಇದಾದ ಬಳಿಕ 2024-25 ರಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 5 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಒಟ್ಟು 157.1 ಓವರ್​ಗಳನ್ನು ಎಸೆದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ 150 ಓವರ್​ಗಳ ಗಡಿದಾಟಿದ್ದಾರೆ.

ಇದಕ್ಕೂ ಮುನ್ನ ಮೊಹಮ್ಮದ್ ಸಿರಾಜ್ 2021 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 153.2 ಓವರ್​ಗಳನ್ನು ಬೌಲಿಂಗ್ ಮಾಡಿದ್ದರು. ಇದಾದ ಬಳಿಕ 2024-25 ರಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 5 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಒಟ್ಟು 157.1 ಓವರ್​ಗಳನ್ನು ಎಸೆದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ 150 ಓವರ್​ಗಳ ಗಡಿದಾಟಿದ್ದಾರೆ.

2 / 5
ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮೊಹಮ್ಮದ್ ಸಿರಾಜ್ ಈವರೆಗೆ 155.2 ಓವರ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಸತತ ಎರಡು ಟೆಸ್ಟ್​ ಸರಣಿಗಳಲ್ಲಿ 150 ಓವರ್​ಗಳನ್ನು ಎಸೆದ ವಿಶೇಷ ಸಾಧನೆ ಮಾಡಿದ್ದಾರೆ. ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಸಿರಾಜ್ ಬೌಲಿಂಗ್ ಮಾಡಬೇಕಿದ್ದು, ಹೀಗಾಗಿ ಈ ಬಾರಿ ಅವರ ಓವರ್​ಗಳ ಸಂಖ್ಯೆ 160 ದಾಟುವುದು ಖಚಿತ.

ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮೊಹಮ್ಮದ್ ಸಿರಾಜ್ ಈವರೆಗೆ 155.2 ಓವರ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಸತತ ಎರಡು ಟೆಸ್ಟ್​ ಸರಣಿಗಳಲ್ಲಿ 150 ಓವರ್​ಗಳನ್ನು ಎಸೆದ ವಿಶೇಷ ಸಾಧನೆ ಮಾಡಿದ್ದಾರೆ. ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಸಿರಾಜ್ ಬೌಲಿಂಗ್ ಮಾಡಬೇಕಿದ್ದು, ಹೀಗಾಗಿ ಈ ಬಾರಿ ಅವರ ಓವರ್​ಗಳ ಸಂಖ್ಯೆ 160 ದಾಟುವುದು ಖಚಿತ.

3 / 5
ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 16.2 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಒಟ್ಟು 82 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಸಿರಾಜ್ ಅವರ ಭರ್ಜರಿ ಬೌಲಿಂಗ್​ನಿಂದಾಗಿ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 247 ರನ್​ಗಳಿಸಿ ಆಲೌಟ್ ಆಯಿತು. ಅಲ್ಲದೆ 4 ನಾಲ್ಕು ವಿಕೆಟ್​ಗಳೊಂದಿಗೆ ಸಿರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 200 ವಿಕೆಟ್​ಗಳನ್ನು ಪೂರೈಸಿದ್ದಾರೆ.

ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 16.2 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಒಟ್ಟು 82 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಸಿರಾಜ್ ಅವರ ಭರ್ಜರಿ ಬೌಲಿಂಗ್​ನಿಂದಾಗಿ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 247 ರನ್​ಗಳಿಸಿ ಆಲೌಟ್ ಆಯಿತು. ಅಲ್ಲದೆ 4 ನಾಲ್ಕು ವಿಕೆಟ್​ಗಳೊಂದಿಗೆ ಸಿರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 200 ವಿಕೆಟ್​ಗಳನ್ನು ಪೂರೈಸಿದ್ದಾರೆ.

4 / 5
ಟೀಮ್ ಇಂಡಿಯಾ ಪರ ಈವರೆಗೆ 75 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು 6238 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 118 ವಿಕೆಟ್​ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಇಂಗ್ಲೆಂಡ್ ಸರಣಿಯಲ್ಲಿ 18 ವಿಕೆಟ್ ಉರುಳಿಸಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ ಈವರೆಗೆ 75 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು 6238 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 118 ವಿಕೆಟ್​ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಇಂಗ್ಲೆಂಡ್ ಸರಣಿಯಲ್ಲಿ 18 ವಿಕೆಟ್ ಉರುಳಿಸಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!