AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಸಿರಾಜ್​ಗೆ ಒಲಿದ ತಂಡದ ನಾಯಕತ್ವ

Mohammed Siraj Captain: ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳಿಗೆ ಸಿದ್ಧತೆಗಳು ಶುರುವಾಗಿದೆ. ಜನವರಿ 22 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಅಂದರೆ ಇದೇ ಮೊದಲ ಬಾರಿಗೆ ಸಿರಾಜ್ ಹೆಸರಿನೊಂದಿಗೆ ಕ್ಯಾಪ್ಟನ್ ಪಟ್ಟ ಸೇರಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Jan 15, 2026 | 10:32 AM

Share
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುತ್ತಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ ನಾಯಕತ್ವ ಒಲಿದಿದೆ. ಅದು ಕೂಡ ದೇಶೀಯ ಟೂರ್ನಿಯಲ್ಲಿ. ಅಂದರೆ ಮುಂಬರುವ ರಣಜಿ ಟೂರ್ನಿಯ ಪಂದ್ಯಗಳಲ್ಲಿ ಸಿರಾಜ್ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯುತ್ತಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ ನಾಯಕತ್ವ ಒಲಿದಿದೆ. ಅದು ಕೂಡ ದೇಶೀಯ ಟೂರ್ನಿಯಲ್ಲಿ. ಅಂದರೆ ಮುಂಬರುವ ರಣಜಿ ಟೂರ್ನಿಯ ಪಂದ್ಯಗಳಲ್ಲಿ ಸಿರಾಜ್ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲಿದ್ದಾರೆ.

1 / 5
ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಜನವರಿ 22 ರಿಂದ ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಹೈದರಾಬಾದ್ ತಂಡವನ್ನು ಘೋಷಿಸಲಾಗಿದ್ದು, 15 ಸದಸ್ಯರುಗಳ ಈ ತಂಡದ ನಾಯಕನಾಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲು ಸಿರಾಜ್ ಸಜ್ಜಾಗಿದ್ದಾರೆ.

ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಜನವರಿ 22 ರಿಂದ ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಹೈದರಾಬಾದ್ ತಂಡವನ್ನು ಘೋಷಿಸಲಾಗಿದ್ದು, 15 ಸದಸ್ಯರುಗಳ ಈ ತಂಡದ ನಾಯಕನಾಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲು ಸಿರಾಜ್ ಸಜ್ಜಾಗಿದ್ದಾರೆ.

2 / 5
ಇದಕ್ಕೂ ಮುನ್ನ ಹೈದರಾಬಾದ್ ತಂಡವನ್ನು ಗಹ್ಲಾಟ್ ರಾಹುಲ್ ಸಿಂಗ್ ಮುನ್ನಡೆಸಿದ್ದರು. ರಾಹುಲ್ ನಾಯಕತ್ವದಲ್ಲಿ ಹೈದರಾಬಾದ್ ತಂಡದ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಮೊಹಮ್ಮದ್ ಸಿರಾಜ್​ಗೆ ಕಪ್ತಾನನ ಸ್ಥಾನ ನೀಡಲಾಗಿದೆ.

ಇದಕ್ಕೂ ಮುನ್ನ ಹೈದರಾಬಾದ್ ತಂಡವನ್ನು ಗಹ್ಲಾಟ್ ರಾಹುಲ್ ಸಿಂಗ್ ಮುನ್ನಡೆಸಿದ್ದರು. ರಾಹುಲ್ ನಾಯಕತ್ವದಲ್ಲಿ ಹೈದರಾಬಾದ್ ತಂಡದ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಮೊಹಮ್ಮದ್ ಸಿರಾಜ್​ಗೆ ಕಪ್ತಾನನ ಸ್ಥಾನ ನೀಡಲಾಗಿದೆ.

3 / 5
ಇನ್ನು ಈ ಪ್ರಸ್ತುತ ರಣಜಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿರುವ ಹೈದರಾಬಾದ್ ತಂಡವು 4 ರಲ್ಲಿ ಸೋಲನುಭವಿಸಿದೆ. ಅಂದರೆ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಈ ಮೂಲಕ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇದೀಗ ಮೊಹಮ್ಮದ್ ಸಿರಾಜ್ ಮುಂದಾಳತ್ವದಲ್ಲಿ ಹೈದರಾಬಾದ್ ಪಡೆ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಈ ಪ್ರಸ್ತುತ ರಣಜಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿರುವ ಹೈದರಾಬಾದ್ ತಂಡವು 4 ರಲ್ಲಿ ಸೋಲನುಭವಿಸಿದೆ. ಅಂದರೆ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಈ ಮೂಲಕ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇದೀಗ ಮೊಹಮ್ಮದ್ ಸಿರಾಜ್ ಮುಂದಾಳತ್ವದಲ್ಲಿ ಹೈದರಾಬಾದ್ ಪಡೆ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

4 / 5
ಹೈದರಾಬಾದ್ ತಂಡ: ಮೊಹಮ್ಮದ್ ಸಿರಾಜ್ (ನಾಯಕ), ರಾಹುಲ್ ಸಿಂಗ್ (ಉಪನಾಯಕ), ಸಿವಿ ಮಿಲಿಂದ್, ತನಯ್ ತ್ಯಾಗರಾಜನ್, ರಕ್ಷನ್ ರೆಡ್ಡಿ, ರೋಹಿತ್ ರಾಯುಡು, ಕೆ ಹಿಮತೇಜ, ವರುಣ್ ಗೌಡ್, ಅಭಿರತ್ ರೆಡ್ಡಿ, ರಾಹುಲ್ ರಾದೇಶ್ (ವಿಕೆಟ್ ಕೀಪರ್), ಅಮನ್ ರಾವ್ ಪೆರಾಲ, ನಿತಿನ್ ಸಾಯಿ ಯಾದವ್, ಕನಾಲ ನಿತೀಶ್ ರೆಡ್ಡಿ, ಸಾಯಿ ರೆಡ್ಡಿ (ವಿಕೆಟ್ ಕೀಪರ್), ಬಿ ಪುಣ್ಣಯ್ಯ.

ಹೈದರಾಬಾದ್ ತಂಡ: ಮೊಹಮ್ಮದ್ ಸಿರಾಜ್ (ನಾಯಕ), ರಾಹುಲ್ ಸಿಂಗ್ (ಉಪನಾಯಕ), ಸಿವಿ ಮಿಲಿಂದ್, ತನಯ್ ತ್ಯಾಗರಾಜನ್, ರಕ್ಷನ್ ರೆಡ್ಡಿ, ರೋಹಿತ್ ರಾಯುಡು, ಕೆ ಹಿಮತೇಜ, ವರುಣ್ ಗೌಡ್, ಅಭಿರತ್ ರೆಡ್ಡಿ, ರಾಹುಲ್ ರಾದೇಶ್ (ವಿಕೆಟ್ ಕೀಪರ್), ಅಮನ್ ರಾವ್ ಪೆರಾಲ, ನಿತಿನ್ ಸಾಯಿ ಯಾದವ್, ಕನಾಲ ನಿತೀಶ್ ರೆಡ್ಡಿ, ಸಾಯಿ ರೆಡ್ಡಿ (ವಿಕೆಟ್ ಕೀಪರ್), ಬಿ ಪುಣ್ಣಯ್ಯ.

5 / 5

Published On - 10:30 am, Thu, 15 January 26

ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?