16 ಎಸೆತಗಳಲ್ಲಿ 5 ವಿಕೆಟ್: ವಿಶ್ವ ದಾಖಲೆ ಬರೆದ ಮೊಹಮ್ಮದ್ ಸಿರಾಜ್

Mohammed Siraj Records: 4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ (2) ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ಕೀಪರ್ ಕ್ಯಾಚ್ ಔಟ್ ನೀಡಿ ನಿರ್ಗಮಿಸಿದರು.

| Updated By: ಝಾಹಿರ್ ಯೂಸುಫ್

Updated on:Sep 17, 2023 | 10:49 PM

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 9
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್.

2 / 9
4ನೇ ಓವರ್​ನ ಮೊದಲ ಎಸೆತದಲ್ಲಿ  ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

3 / 9
ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.

ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.

4 / 9
ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

5 / 9
2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸಿರಾಜ್ ಸರಿಗಟ್ಟಿದ್ದಾರೆ.

2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸಿರಾಜ್ ಸರಿಗಟ್ಟಿದ್ದಾರೆ.

6 / 9
ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

7 / 9
ಅಲ್ಲದೆ ಚಾಮಿಂಡ ವಾಸ್ ಬಳಿಕ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ.

ಅಲ್ಲದೆ ಚಾಮಿಂಡ ವಾಸ್ ಬಳಿಕ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ.

8 / 9
ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

9 / 9

Published On - 5:09 pm, Sun, 17 September 23

Follow us
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್