AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 31 ಸಿಕ್ಸರ್; ಐಪಿಎಲ್​ನಲ್ಲಿ ದುಬಾರಿಯಾಗಿದ್ದ ಸಿರಾಜ್​ಗೆ ಟೆಸ್ಟ್ ತಂಡದಲ್ಲಿ ಆಡುವ ಬಯಕೆ; ಸಿಗುತ್ತಾ ಅವಕಾಶ?

Mohammad Siraj: ರೋಹಿತ್ ಶರ್ಮಾ ಅವರನ್ನು ಹೊಗಳಿದ ಸಿರಾಜ್, 'ರೋಹಿತ್ ಶರ್ಮಾ ಯಾವುದೇ ಆಟಗಾರನ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಾರೆ. ಬೌಲರ್ ತೊಂದರೆಗೆ ಒಳಗಾದಾಗಲೆಲ್ಲ, ಅವರು ಪ್ಲಾನ್ ಬಿ ಯೊಂದಿಗೆ ಬೌಲರ್ ಅನ್ನು ಪ್ರೋತ್ಸಾಹಿಸುತ್ತಾರೆ. ಹಾಗಾಗಿ ನಿಮ್ಮನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುವ ನಾಯಕನೊಂದಿಗೆ ಆಡುವುದು ಒಳ್ಳೆಯದು ಎಂದಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:Jun 03, 2022 | 3:35 PM

Share
ಐಪಿಎಲ್ 2022 ರಲ್ಲಿ ಮೊಹಮ್ಮದ್ ಸಿರಾಜ್ ಅವರ ಪ್ರದರ್ಶನ ತುಂಬಾ ಕಳಪೆಯಾಗಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈ ಬೌಲರ್‌ನ ಲೈನ್-ಲೆಂತ್ ತುಂಬಾ ಕೆಟ್ಟದಾಗಿತ್ತು. ಸಿರಾಜ್ 15 ಪಂದ್ಯಗಳನ್ನು ಆಡಿದ್ದರೂ ಅವರ ಖಾತೆಗೆ ಬಂದಿದ್ದು ಕೇವಲ 9 ವಿಕೆಟ್. ಅಷ್ಟೇ ಅಲ್ಲ, ಅವರ ಎಕಾನಮಿ ದರವೂ ಪ್ರತಿ ಓವರ್‌ಗೆ 10 ರನ್‌ಗಳಿಗಿಂತ ಹೆಚ್ಚಿತ್ತು. ಆದರೆ, ಇದೀಗ ಮೊಹಮ್ಮದ್ ಸಿರಾಜ್ ಬಲಿಷ್ಠ ಪುನರಾಗಮನದ ನಿರೀಕ್ಷೆಯಲ್ಲಿದ್ದಾರೆ.

ಐಪಿಎಲ್ 2022 ರಲ್ಲಿ ಮೊಹಮ್ಮದ್ ಸಿರಾಜ್ ಅವರ ಪ್ರದರ್ಶನ ತುಂಬಾ ಕಳಪೆಯಾಗಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈ ಬೌಲರ್‌ನ ಲೈನ್-ಲೆಂತ್ ತುಂಬಾ ಕೆಟ್ಟದಾಗಿತ್ತು. ಸಿರಾಜ್ 15 ಪಂದ್ಯಗಳನ್ನು ಆಡಿದ್ದರೂ ಅವರ ಖಾತೆಗೆ ಬಂದಿದ್ದು ಕೇವಲ 9 ವಿಕೆಟ್. ಅಷ್ಟೇ ಅಲ್ಲ, ಅವರ ಎಕಾನಮಿ ದರವೂ ಪ್ರತಿ ಓವರ್‌ಗೆ 10 ರನ್‌ಗಳಿಗಿಂತ ಹೆಚ್ಚಿತ್ತು. ಆದರೆ, ಇದೀಗ ಮೊಹಮ್ಮದ್ ಸಿರಾಜ್ ಬಲಿಷ್ಠ ಪುನರಾಗಮನದ ನಿರೀಕ್ಷೆಯಲ್ಲಿದ್ದಾರೆ.

1 / 5
ಮೊಹಮ್ಮದ್ ಸಿರಾಜ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ, ಆದರೆ ಅವರು ಇಂಗ್ಲೆಂಡ್ ಪ್ರವಾಸದಲ್ಲಿ ತಂಡದ ಭಾಗವಾಗಿರಬಹುದು. ಸದೃಢ ಪುನರಾಗಮನ ಬಯಸುವುದಾಗಿ ಸಿರಾಜ್ ಹೇಳಿದ್ದಾರೆ. ಇದರೊಂದಿಗೆ ಹೊಸ ನಾಯಕ ರೋಹಿತ್ ಶರ್ಮಾ ಬಗ್ಗೆಯೂ ಸಿರಾಜ್ ದೊಡ್ಡ ಮಾತು ಹೇಳಿದ್ದಾರೆ.

ಮೊಹಮ್ಮದ್ ಸಿರಾಜ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ, ಆದರೆ ಅವರು ಇಂಗ್ಲೆಂಡ್ ಪ್ರವಾಸದಲ್ಲಿ ತಂಡದ ಭಾಗವಾಗಿರಬಹುದು. ಸದೃಢ ಪುನರಾಗಮನ ಬಯಸುವುದಾಗಿ ಸಿರಾಜ್ ಹೇಳಿದ್ದಾರೆ. ಇದರೊಂದಿಗೆ ಹೊಸ ನಾಯಕ ರೋಹಿತ್ ಶರ್ಮಾ ಬಗ್ಗೆಯೂ ಸಿರಾಜ್ ದೊಡ್ಡ ಮಾತು ಹೇಳಿದ್ದಾರೆ.

2 / 5
ಬರೋಬ್ಬರಿ 31 ಸಿಕ್ಸರ್; ಐಪಿಎಲ್​ನಲ್ಲಿ ದುಬಾರಿಯಾಗಿದ್ದ ಸಿರಾಜ್​ಗೆ ಟೆಸ್ಟ್ ತಂಡದಲ್ಲಿ ಆಡುವ ಬಯಕೆ; ಸಿಗುತ್ತಾ ಅವಕಾಶ?

ರೋಹಿತ್ ಶರ್ಮಾ ಅವರನ್ನು ಹೊಗಳಿದ ಸಿರಾಜ್, 'ರೋಹಿತ್ ಶರ್ಮಾ ಯಾವುದೇ ಆಟಗಾರನ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಾರೆ. ಬೌಲರ್ ತೊಂದರೆಗೆ ಒಳಗಾದಾಗಲೆಲ್ಲ, ಅವರು ಪ್ಲಾನ್ ಬಿ ಯೊಂದಿಗೆ ಬೌಲರ್ ಅನ್ನು ಪ್ರೋತ್ಸಾಹಿಸುತ್ತಾರೆ. ಹಾಗಾಗಿ ನಿಮ್ಮನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುವ ನಾಯಕನೊಂದಿಗೆ ಆಡುವುದು ಒಳ್ಳೆಯದು ಎಂದಿದ್ದಾರೆ.

3 / 5
ಬರೋಬ್ಬರಿ 31 ಸಿಕ್ಸರ್; ಐಪಿಎಲ್​ನಲ್ಲಿ ದುಬಾರಿಯಾಗಿದ್ದ ಸಿರಾಜ್​ಗೆ ಟೆಸ್ಟ್ ತಂಡದಲ್ಲಿ ಆಡುವ ಬಯಕೆ; ಸಿಗುತ್ತಾ ಅವಕಾಶ?

ಮೊಹಮ್ಮದ್ ಸಿರಾಜ್‌ಗೆ ಸಾಕಷ್ಟು ಧೈರ್ಯ ಬೇಕು. ಏಕೆಂದರೆ ಆರ್‌ಸಿಬಿ ಈ ಆಟಗಾರನ ಮೇಲೆ 7 ಕೋಟಿ ರೂ. ಸುರಿದಿತ್ತು. ಜೊತೆಗೆ ಸಿರಾಜ್ ಅವರನ್ನು ತಂಡ ಹರಾಜಿಗೂ ಮೊದಲೆ ಉಳಿಸಿಕೊಂಡಿತ್ತು. ಆದರೆ ಅವರು IPL 2022 ರಲ್ಲಿ ತುಂಬಾ ದುಬಾರಿ ಎಂದು ಸಾಬೀತಾಯಿತು. ಈ ಆಟಗಾರ ಗರಿಷ್ಠ 31 ಸಿಕ್ಸರ್‌ಗಳನ್ನು ತಿಂದಿದ್ದು, ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಒಬ್ಬ ಬೌಲರ್ ಇಷ್ಟೊಂದು ಸಿಕ್ಸರ್ ಹೊಡೆಸಿಕೊಂಡಿದ್ದು ಇದೇ ಮೊದಲು.

4 / 5
ಬರೋಬ್ಬರಿ 31 ಸಿಕ್ಸರ್; ಐಪಿಎಲ್​ನಲ್ಲಿ ದುಬಾರಿಯಾಗಿದ್ದ ಸಿರಾಜ್​ಗೆ ಟೆಸ್ಟ್ ತಂಡದಲ್ಲಿ ಆಡುವ ಬಯಕೆ; ಸಿಗುತ್ತಾ ಅವಕಾಶ?

ಆಟಗಾರನ ಜೀವನದಲ್ಲಿ ಯಾವುದೇ ಏರಿಳಿತಗಳಿಲ್ಲದಿದ್ದರೆ ಜೀವನವು ನಿಷ್ಪ್ರಯೋಜಕವಾಗಿದೆ ಎಂದು ಸಿರಾಜ್ ಐಪಿಎಲ್‌ನಲ್ಲಿ ತಮ್ಮ ಪ್ರದರ್ಶನದ ಬಗ್ಗೆ ಹೇಳಿದರು. ಸಿರಾಜ್ ಕಳೆದ ಎರಡು ವರ್ಷಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು ಆದರೆ ಈ ಬಾರಿ ಅವರ ಪ್ರದರ್ಶನ ತೀವ್ರವಾಗಿ ಕುಸಿಯಿತು.

5 / 5

Published On - 3:35 pm, Fri, 3 June 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!