AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suiiiiii… ಬರೋಬ್ಬರಿ 43 ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್

Mohammed Siraj: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಎಲ್ಲಾ ಇನಿಂಗ್ಸ್​ನಲ್ಲೂ ಕಾಣಿಸಿಕೊಂಡ ಏಕೈಕ ವೇಗಿ ಮೊಹಮ್ಮದ್ ಸಿರಾಜ್. ಇದರ ನಡುವೆ ಬರೋಬ್ಬರಿ 1113 ಎಸೆತಗಳನ್ನು ಸಹ ಎಸೆದಿದ್ದಾರೆ. ಈ ಮೂಲಕ ಭಾರತದ ಪರ ಒಂದೇ ಸರಣಿಯಲ್ಲಿ ಸಾವಿರಕ್ಕೂ ಎಸೆತಗಳನ್ನು ಎಸೆದ ಕೆಲವೇ ಕೆಲವು ಬೌಲರ್​ಗಳ ಪಟ್ಟಿಯಲ್ಲೂ ಸಿರಾಜ್ ಸ್ಥಾನ ಪಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on:Aug 05, 2025 | 9:04 AM

Share
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2 ಗೆಲುವು ದಾಖಲಿಸಿದೆ. ಈ ಎರಡು ಗೆಲುವುಗಳ ರೂವಾರಿ ಮೊಹಮ್ಮದ್ ಸಿರಾಜ್ (Mohammed Siraj). ಏಕೆಂದರೆ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸಿರಾಜ್ 6 ವಿಕೆಟ್ ಕಬಳಿಸಿದ್ದರು. ಇನ್ನು ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸಿ ಮಿಂಚಿದ್ದಾರೆ.

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2 ಗೆಲುವು ದಾಖಲಿಸಿದೆ. ಈ ಎರಡು ಗೆಲುವುಗಳ ರೂವಾರಿ ಮೊಹಮ್ಮದ್ ಸಿರಾಜ್ (Mohammed Siraj). ಏಕೆಂದರೆ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸಿರಾಜ್ 6 ವಿಕೆಟ್ ಕಬಳಿಸಿದ್ದರು. ಇನ್ನು ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸಿ ಮಿಂಚಿದ್ದಾರೆ.

1 / 5
ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಮೊಹಮ್ಮದ್ ಸಿರಾಜ್ 23 ವಿಕೆಟ್​ಗಳೊಂದಿಗೆ ಅಂತ್ಯಗೊಳಿಸಿದ್ದಾರೆ. ಈ 23 ವಿಕೆಟ್​ಗಳೊಂದಿಗೆ ಸಿರಾಜ್ ಕಳೆದ 10 ಪಂದ್ಯಗಳಲ್ಲಿ ಪಡೆದಿರುವ ವಿಕೆಟ್​ಗಳ ಸಂಖ್ಯೆ ಬರೋಬ್ಬರಿ 43 ಎಂದರೆ ನಂಬಲೇಬೇಕು. ಅದು ಸಹ ಸತತ ಪಂದ್ಯಗಳನ್ನಾಡುವ ಮೂಲಕ ಎಂಬುದು ಇಲ್ಲಿ ಉಲ್ಲೇಖಾರ್ಹ.

ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಮೊಹಮ್ಮದ್ ಸಿರಾಜ್ 23 ವಿಕೆಟ್​ಗಳೊಂದಿಗೆ ಅಂತ್ಯಗೊಳಿಸಿದ್ದಾರೆ. ಈ 23 ವಿಕೆಟ್​ಗಳೊಂದಿಗೆ ಸಿರಾಜ್ ಕಳೆದ 10 ಪಂದ್ಯಗಳಲ್ಲಿ ಪಡೆದಿರುವ ವಿಕೆಟ್​ಗಳ ಸಂಖ್ಯೆ ಬರೋಬ್ಬರಿ 43 ಎಂದರೆ ನಂಬಲೇಬೇಕು. ಅದು ಸಹ ಸತತ ಪಂದ್ಯಗಳನ್ನಾಡುವ ಮೂಲಕ ಎಂಬುದು ಇಲ್ಲಿ ಉಲ್ಲೇಖಾರ್ಹ.

2 / 5
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಎಲ್ಲಾ ಮ್ಯಾಚ್​ಗಳಲ್ಲೂ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 20 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎಲ್ಲಾ ಇನಿಂಗ್ಸ್​ಗಳಲ್ಲೂ ಕಾಣಿಸಿಕೊಂಡ ಏಕೈಕ ಬೌಲರ್ ಆಗಿ ಮೊಹಮ್ಮದ್ ಸಿರಾಜ್ ಹೊರಹೊಮ್ಮಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಎಲ್ಲಾ ಮ್ಯಾಚ್​ಗಳಲ್ಲೂ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 20 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎಲ್ಲಾ ಇನಿಂಗ್ಸ್​ಗಳಲ್ಲೂ ಕಾಣಿಸಿಕೊಂಡ ಏಕೈಕ ಬೌಲರ್ ಆಗಿ ಮೊಹಮ್ಮದ್ ಸಿರಾಜ್ ಹೊರಹೊಮ್ಮಿದ್ದಾರೆ.

3 / 5
ಆಂಗ್ಲರ ವಿರುದ್ಧ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು  185.3 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ 1113 ಎಸೆತಗಳಲ್ಲಿ 23 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.

ಆಂಗ್ಲರ ವಿರುದ್ಧ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು  185.3 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ 1113 ಎಸೆತಗಳಲ್ಲಿ 23 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಕಳೆದ 10 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಯನ್ನು ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ. ಹೀಗೆ ದಣಿವರಿಯದೇ ಸತತ ಪಂದ್ಯಗಳನ್ನಾಡಿರುವ ಸಿರಾಜ್ 10 ಮ್ಯಾಚ್​ಗಳ ಮೂಲಕ 43 ವಿಕೆಟ್ ಉರುಳಿಸಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ಅಷ್ಟೇ ಅಲ್ಲದೆ ಕಳೆದ 10 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಯನ್ನು ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ. ಹೀಗೆ ದಣಿವರಿಯದೇ ಸತತ ಪಂದ್ಯಗಳನ್ನಾಡಿರುವ ಸಿರಾಜ್ 10 ಮ್ಯಾಚ್​ಗಳ ಮೂಲಕ 43 ವಿಕೆಟ್ ಉರುಳಿಸಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

5 / 5

Published On - 9:04 am, Tue, 5 August 25

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ