AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಸಿರಾಜ್​ಗೆ ಬರೋಬ್ಬರಿ 80 ಲಕ್ಷ ರೂ..!

Mohammed Siraj: ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಪರ ಕಳೆದ 10 ಟೆಸ್ಟ್ ಪಂದ್ಯಗಳಲ್ಲಿ ಸತತವಾಗಿ ಕಣಕ್ಕಿಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ 5 ಪಂದ್ಯಗಳ ಮೂಲಕ 20 ವಿಕೆಟ್ ಪಡೆದಿದ್ದ ಸಿರಾಜ್, ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 5 ಮ್ಯಾಚ್​ಗಳ ಮೂಲಕ 23 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 06, 2025 | 8:23 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಐದು ಪಂದ್ಯಗಳ ಈ ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಅದರಲ್ಲೂ ನಿರ್ಣಾಯಕವಾಗಿದ್ದ ಕೊನೆಯ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ರೋಚಕ ಗೆಲುವು ತಂದುಕೊಟ್ಟಿದ್ದರು.

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಐದು ಪಂದ್ಯಗಳ ಈ ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಅದರಲ್ಲೂ ನಿರ್ಣಾಯಕವಾಗಿದ್ದ ಕೊನೆಯ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ರೋಚಕ ಗೆಲುವು ತಂದುಕೊಟ್ಟಿದ್ದರು.

1 / 5
ಹೀಗೆ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ ಮೊಹಮ್ಮದ್ ಸಿರಾಜ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಈ ಪ್ರಶಸ್ತಿಯೊಂದಿಗೆ ಸಿರಾಜ್​ಗೆ ಬಿಸಿಸಿಐ ಕಡೆಯಿಂದಲೂ ವಿಶೇಷ ಬೋನಸ್ ಸಿಗಲಿದೆ. ಅಂದರೆ ಟೀಮ್ ಇಂಡಿಯಾ ಬೌಲರ್​ ಟೆಸ್ಟ್​ನಲ್ಲಿ 5 ವಿಕೆಟ್ ಕಬಳಿಸಿದರೆ ಅವರಿಗೆ 5 ಲಕ್ಷ ರೂ. ಬಹುಮಾನ ಮೊತ್ತವನ್ನು ನೀಡಲಾಗುತ್ತದೆ.

ಹೀಗೆ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ ಮೊಹಮ್ಮದ್ ಸಿರಾಜ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಈ ಪ್ರಶಸ್ತಿಯೊಂದಿಗೆ ಸಿರಾಜ್​ಗೆ ಬಿಸಿಸಿಐ ಕಡೆಯಿಂದಲೂ ವಿಶೇಷ ಬೋನಸ್ ಸಿಗಲಿದೆ. ಅಂದರೆ ಟೀಮ್ ಇಂಡಿಯಾ ಬೌಲರ್​ ಟೆಸ್ಟ್​ನಲ್ಲಿ 5 ವಿಕೆಟ್ ಕಬಳಿಸಿದರೆ ಅವರಿಗೆ 5 ಲಕ್ಷ ರೂ. ಬಹುಮಾನ ಮೊತ್ತವನ್ನು ನೀಡಲಾಗುತ್ತದೆ.

2 / 5
ಅದರಂತೆ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿ ಮಿಂಚಿರುವ ಮೊಹಮ್ಮದ್ ಸಿರಾಜ್​ಗೆ ಬಿಸಿಸಿಐ 5 ಲಕ್ಷ ರೂ. ನೀಡಲಿದೆ. ಇದರ ಜೊತೆಗೆ 75 ಲಕ್ಷ ರೂ. ಪಂದ್ಯ ಶುಲ್ಕವನ್ನು ಸಹ ಪಡೆಯಲಿದ್ದಾರೆ. ಅಂದರೆ ಟೀಮ್ ಇಂಡಿಯಾ ಪರ ಟೆಸ್ಟ್ ಆಡುವ ಆಟಗಾರನಿಗೆ ಪ್ರತಿ ಪಂದ್ಯಕ್ಕೆ 15 ಲಕ್ಷ ರೂ. ನೀಡಲಾಗುತ್ತದೆ.

ಅದರಂತೆ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ಕಬಳಿಸಿ ಮಿಂಚಿರುವ ಮೊಹಮ್ಮದ್ ಸಿರಾಜ್​ಗೆ ಬಿಸಿಸಿಐ 5 ಲಕ್ಷ ರೂ. ನೀಡಲಿದೆ. ಇದರ ಜೊತೆಗೆ 75 ಲಕ್ಷ ರೂ. ಪಂದ್ಯ ಶುಲ್ಕವನ್ನು ಸಹ ಪಡೆಯಲಿದ್ದಾರೆ. ಅಂದರೆ ಟೀಮ್ ಇಂಡಿಯಾ ಪರ ಟೆಸ್ಟ್ ಆಡುವ ಆಟಗಾರನಿಗೆ ಪ್ರತಿ ಪಂದ್ಯಕ್ಕೆ 15 ಲಕ್ಷ ರೂ. ನೀಡಲಾಗುತ್ತದೆ.

3 / 5
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮೊಹಮ್ಮದ್ ಸಿರಾಜ್ 5 ಪಂದ್ಯಗಳಲ್ಲೂ ಕಣಕ್ಕಿಳಿದಿದ್ದರು. ಅದರಂತೆ ಈ ಸರಣಿಯ ಮೂಲಕ ಪಡೆಯಲಿರುವುದು ಬರೋಬ್ಬರಿ 75 ಲಕ್ಷ ರೂ. ಇದರ ಜೊತೆಗೆ ಕೊನೆಯ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿ 5 ವಿಕೆಟ್ ಕಬಳಿಸಿರುವ ಕಾರಣ ಹೆಚ್ಚುವರಿ 5 ಲಕ್ಷ ರೂ. ಅನ್ನು ಸಹ ಬಹುಮಾನವಾಗಿ ಪಡೆಯಲಿದ್ದಾರೆ. ಈ ಮೂಲಕ ಒಂದೇ ಸರಣಿಯ ಮೂಲಕ ಸಿರಾಜ್ 80 ಲಕ್ಷ ರೂ. ಜೇಬಿಗಿಳಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮೊಹಮ್ಮದ್ ಸಿರಾಜ್ 5 ಪಂದ್ಯಗಳಲ್ಲೂ ಕಣಕ್ಕಿಳಿದಿದ್ದರು. ಅದರಂತೆ ಈ ಸರಣಿಯ ಮೂಲಕ ಪಡೆಯಲಿರುವುದು ಬರೋಬ್ಬರಿ 75 ಲಕ್ಷ ರೂ. ಇದರ ಜೊತೆಗೆ ಕೊನೆಯ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿ 5 ವಿಕೆಟ್ ಕಬಳಿಸಿರುವ ಕಾರಣ ಹೆಚ್ಚುವರಿ 5 ಲಕ್ಷ ರೂ. ಅನ್ನು ಸಹ ಬಹುಮಾನವಾಗಿ ಪಡೆಯಲಿದ್ದಾರೆ. ಈ ಮೂಲಕ ಒಂದೇ ಸರಣಿಯ ಮೂಲಕ ಸಿರಾಜ್ 80 ಲಕ್ಷ ರೂ. ಜೇಬಿಗಿಳಿಸಿಕೊಂಡಿದ್ದಾರೆ.

4 / 5
ಇನ್ನು ಈ ಸರಣಿಯಲ್ಲಿ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು  185.3 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ 1113 ಎಸೆತಗಳಲ್ಲಿ 23 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಸರಣಿಯಲ್ಲಿ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು  185.3 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ 1113 ಎಸೆತಗಳಲ್ಲಿ 23 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!