AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

181.6 kph ವೇಗದಲ್ಲಿ ಮೊಹಮ್ಮದ್ ಸಿರಾಜ್ ಬೌಲಿಂಗ್..! ದಂಗಾದ ಪ್ರೇಕ್ಷಕರು

Australia vs India, 2nd Test: ಅಡಿಲೇಡ್​​ ಓವಲ್​​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ 180 ರನ್​​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Dec 07, 2024 | 10:08 AM

Share
ಬರೋಬ್ಬರಿ 181.6 kph... ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್​ನಲ್ಲಿ ಮೊಹಮ್ಮದ್ ಸಿರಾಜ್ ಬರೋಬ್ಬರಿ 181.6 kph ವೇಗದಲ್ಲಿ ಚೆಂಡೆಸೆದಿದ್ದಾರೆ ಎಂದು ತೋರಿಸಲಾಗಿದೆ. ಅಂದರೆ ಇದು ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಬೌಲ್. ಆದರೆ ಇಂತಹದೊಂದು ವಿಶ್ವ ದಾಖಲೆಯನ್ನು ಖುದ್ದು ಸಿರಾಜ್​ ಕೂಡ ನಂಬಲು ಸಿದ್ಧರಿರಲಿಲ್ಲ.

ಬರೋಬ್ಬರಿ 181.6 kph... ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್​ನಲ್ಲಿ ಮೊಹಮ್ಮದ್ ಸಿರಾಜ್ ಬರೋಬ್ಬರಿ 181.6 kph ವೇಗದಲ್ಲಿ ಚೆಂಡೆಸೆದಿದ್ದಾರೆ ಎಂದು ತೋರಿಸಲಾಗಿದೆ. ಅಂದರೆ ಇದು ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಬೌಲ್. ಆದರೆ ಇಂತಹದೊಂದು ವಿಶ್ವ ದಾಖಲೆಯನ್ನು ಖುದ್ದು ಸಿರಾಜ್​ ಕೂಡ ನಂಬಲು ಸಿದ್ಧರಿರಲಿಲ್ಲ.

1 / 5
ಏಕೆಂದರೆ ಅದು ಸ್ಪೀಡ್ ಗನ್ (ಸ್ಪೀಡ್ ಮೀಟರ್) ಎಡವಟ್ಟಿನಿಂದಾಗಿ ತೋರಿಸಲಾದ ವೇಗವಾಗಿತ್ತು. ಸಾಮಾನ್ಯವಾಗಿ 130-140ರ ಅಸುಪಾಸಿನಲ್ಲಿ ಚೆಂಡೆಸೆಯುವ ಸಿರಾಜ್ ಎಸೆದ 25ನೇ ಓವರ್​ನ 5ನೇ ಎಸೆತದ ವೇಗವನ್ನು ಅಡಿಲೇಡ್ ಮೈದಾನದ ಸ್ಕ್ರೀನ್​ನಲ್ಲಿ 181.6 kph ವೇಗ ಎಂದು ತಪ್ಪಾಗಿ ತೋರಿಸಲಾಗಿತ್ತು. ಇದನ್ನು ನೋಡಿ ಪ್ರೇಕ್ಷಕರು ಕೂಡ ದಂಗಾದರು.

ಏಕೆಂದರೆ ಅದು ಸ್ಪೀಡ್ ಗನ್ (ಸ್ಪೀಡ್ ಮೀಟರ್) ಎಡವಟ್ಟಿನಿಂದಾಗಿ ತೋರಿಸಲಾದ ವೇಗವಾಗಿತ್ತು. ಸಾಮಾನ್ಯವಾಗಿ 130-140ರ ಅಸುಪಾಸಿನಲ್ಲಿ ಚೆಂಡೆಸೆಯುವ ಸಿರಾಜ್ ಎಸೆದ 25ನೇ ಓವರ್​ನ 5ನೇ ಎಸೆತದ ವೇಗವನ್ನು ಅಡಿಲೇಡ್ ಮೈದಾನದ ಸ್ಕ್ರೀನ್​ನಲ್ಲಿ 181.6 kph ವೇಗ ಎಂದು ತಪ್ಪಾಗಿ ತೋರಿಸಲಾಗಿತ್ತು. ಇದನ್ನು ನೋಡಿ ಪ್ರೇಕ್ಷಕರು ಕೂಡ ದಂಗಾದರು.

2 / 5
ಆದರೆ ಆ ಬಳಿಕ ಈ ತಪ್ಪನ್ನು ಸರಿಪಡಿಸಿಕೊಳ್ಳಲಾಗಿದೆ. ಸ್ಪೀಡ್ ಗನ್​ ಎರರ್​ನಿಂದಾಗಿ ಮೊಹಮ್ಮದ್ ಸಿರಾಜ್ ಅವರ ಎಸೆತವು 181.6 kph ವೇಗದಿಂದ ಕೂಡಿತ್ತು ಎಂದು ತೋರಿಸಲಾಗಿದ್ದು, ಆದರೆ ಆ ಚೆಂಡು 135ರ ಅಸುಪಾಸಿನ ವೇಗದಲ್ಲಿ ಸಾಗಿದೆ ಎಂದು ತಿಳಿಸಲಾಗಿದೆ. ಇದರೊಂದಿಗೆ ಒಂದು ಕ್ಷಣಕ್ಕೆ ದಂಗಾದ ಪ್ರೇಕ್ಷಕರು ನಿರಾಳರಾದರು.

ಆದರೆ ಆ ಬಳಿಕ ಈ ತಪ್ಪನ್ನು ಸರಿಪಡಿಸಿಕೊಳ್ಳಲಾಗಿದೆ. ಸ್ಪೀಡ್ ಗನ್​ ಎರರ್​ನಿಂದಾಗಿ ಮೊಹಮ್ಮದ್ ಸಿರಾಜ್ ಅವರ ಎಸೆತವು 181.6 kph ವೇಗದಿಂದ ಕೂಡಿತ್ತು ಎಂದು ತೋರಿಸಲಾಗಿದ್ದು, ಆದರೆ ಆ ಚೆಂಡು 135ರ ಅಸುಪಾಸಿನ ವೇಗದಲ್ಲಿ ಸಾಗಿದೆ ಎಂದು ತಿಳಿಸಲಾಗಿದೆ. ಇದರೊಂದಿಗೆ ಒಂದು ಕ್ಷಣಕ್ಕೆ ದಂಗಾದ ಪ್ರೇಕ್ಷಕರು ನಿರಾಳರಾದರು.

3 / 5
ಅಂದಹಾಗೆ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಬೌಲಿಂಗ್ ಮಾಡಿದ ವಿಶ್ವ ದಾಖಲೆ ಪಾಕಿಸ್ತಾನದ ಶೊಯೇಬ್ ಅಖ್ತರ್ ಹೆಸರಿನಲ್ಲಿದೆ. 2003ರ ಏಕದಿನ ವಿಶ್ವಕಪ್​ನ ಇಂಗ್ಲೆಂಡ್ ವಿರುದ್ಧದ​ ಪಂದ್ಯದಲ್ಲಿ ಅಖ್ತರ್ 161.3 kph ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಅಂದಹಾಗೆ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಬೌಲಿಂಗ್ ಮಾಡಿದ ವಿಶ್ವ ದಾಖಲೆ ಪಾಕಿಸ್ತಾನದ ಶೊಯೇಬ್ ಅಖ್ತರ್ ಹೆಸರಿನಲ್ಲಿದೆ. 2003ರ ಏಕದಿನ ವಿಶ್ವಕಪ್​ನ ಇಂಗ್ಲೆಂಡ್ ವಿರುದ್ಧದ​ ಪಂದ್ಯದಲ್ಲಿ ಅಖ್ತರ್ 161.3 kph ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 5
ಇನ್ನು ಅಡಿಲೇಡ್​​ ಓವಲ್​​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ 180 ರನ್​​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ಇದೀಗ ದ್ವಿತೀಯ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಮುಂದುವರೆಸಿದೆ.

ಇನ್ನು ಅಡಿಲೇಡ್​​ ಓವಲ್​​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ 180 ರನ್​​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ಇದೀಗ ದ್ವಿತೀಯ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಮುಂದುವರೆಸಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ