AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ಇಲ್ಲದಿದ್ರೆ … ಮೊಹಮ್ಮದ್ ಸಿರಾಜ್​ಗೆ ವಿಕೆಟ್ ಇಲ್ಲ..!

Mohammed Siraj: ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಪರ ಈವರೆಗೆ 38 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 69 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಪಡೆದಿರುವುದು ಬರೋಬ್ಬರಿ 103 ವಿಕೆಟ್​ಗಳು. ಇದರಲ್ಲಿ ವಿರಾಟ್ ಕೊಹ್ಲಿ ಜೊತೆಗಿದ್ದಾಗ ಕಬಳಿಸಿದ ವಿಕೆಟ್​​ಗಳ ಸಂಖ್ಯೆ 81 .

ಝಾಹಿರ್ ಯೂಸುಫ್
|

Updated on: Jun 23, 2025 | 9:04 AM

Share
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​​ಗೆ ವಿದಾಯ ಹೇಳಿದ ಬೆನ್ನಲ್ಲೇ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 'ನನ್ನ ಸೂಪರ್​ ಹೀರೋ'ನನ್ನು ನಾನು ಇನ್ಮುಂದೆ ಮಿಸ್ ಮಾಡಿಕೊಳ್ಳಲಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್​ ಹಂಚಿಕೊಂಡಿದ್ದರು. ಈ ಪೋಸ್ಟ್​ ಎಷ್ಟು ಮಹತ್ವದ್ದು ಎಂಬುದು ಅರಿವಾಗಲು ಸಿರಾಜ್ ಅವರ ಟೆಸ್ಟ್ ಕೆರಿಯರ್​​ನ ಅಂಕಿ ಅಂಶಗಳನ್ನು ಗಮನಿಸಲೇಬೇಕು.

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​​ಗೆ ವಿದಾಯ ಹೇಳಿದ ಬೆನ್ನಲ್ಲೇ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 'ನನ್ನ ಸೂಪರ್​ ಹೀರೋ'ನನ್ನು ನಾನು ಇನ್ಮುಂದೆ ಮಿಸ್ ಮಾಡಿಕೊಳ್ಳಲಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್​ ಹಂಚಿಕೊಂಡಿದ್ದರು. ಈ ಪೋಸ್ಟ್​ ಎಷ್ಟು ಮಹತ್ವದ್ದು ಎಂಬುದು ಅರಿವಾಗಲು ಸಿರಾಜ್ ಅವರ ಟೆಸ್ಟ್ ಕೆರಿಯರ್​​ನ ಅಂಕಿ ಅಂಶಗಳನ್ನು ಗಮನಿಸಲೇಬೇಕು.

1 / 6
ಏಕೆಂದರೆ ಮೊಹಮ್ಮದ್ ಸಿರಾಜ್ ಟೆಸ್ಟ್ ಕೆರಿಯರ್ ಆರಂಭಿಸಿದ್ದು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ. ಅದರಲ್ಲೂ ಕಿಂಗ್ ಕೊಹ್ಲಿ ಗರಡಿಯಲ್ಲಿ ಪಳಗಿದ್ದ ಸಿರಾಜ್ ಅತ್ಯುತ್ತಮ ಬೌಲರ್ ಆಗಿ ರೂಪುಗೊಂಡಿದ್ದರು. ಹೀಗೆ ಸಿರಾಜ್​ನನ್ನು ಮುಂದಿಟ್ಟು ಕೊಹ್ಲಿ ರೂಪಿಸುತ್ತಿದ್ದ ತಂತ್ರಗಳು ಟೀಮ್ ಇಂಡಿಯಾಗೆ ಫಲ ನೀಡುತ್ತಿತ್ತು. ಈ ಯಶಸ್ವಿ ಪ್ರದರ್ಶನದಿಂದಾಗಿ ಮೊಹಮ್ಮದ್ ಸಿರಾಜ್ ಭಾರತ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿದ್ದರು.

ಏಕೆಂದರೆ ಮೊಹಮ್ಮದ್ ಸಿರಾಜ್ ಟೆಸ್ಟ್ ಕೆರಿಯರ್ ಆರಂಭಿಸಿದ್ದು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ. ಅದರಲ್ಲೂ ಕಿಂಗ್ ಕೊಹ್ಲಿ ಗರಡಿಯಲ್ಲಿ ಪಳಗಿದ್ದ ಸಿರಾಜ್ ಅತ್ಯುತ್ತಮ ಬೌಲರ್ ಆಗಿ ರೂಪುಗೊಂಡಿದ್ದರು. ಹೀಗೆ ಸಿರಾಜ್​ನನ್ನು ಮುಂದಿಟ್ಟು ಕೊಹ್ಲಿ ರೂಪಿಸುತ್ತಿದ್ದ ತಂತ್ರಗಳು ಟೀಮ್ ಇಂಡಿಯಾಗೆ ಫಲ ನೀಡುತ್ತಿತ್ತು. ಈ ಯಶಸ್ವಿ ಪ್ರದರ್ಶನದಿಂದಾಗಿ ಮೊಹಮ್ಮದ್ ಸಿರಾಜ್ ಭಾರತ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿದ್ದರು.

2 / 6
ಹೀಗೆ ಭಾರತ ತಂಡದ ಖಾಯಂ ಸದಸ್ಯರಾದರೂ ವಿರಾಟ್ ಕೊಹ್ಲಿಯ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ ಎಂಬುದೇ ಸತ್ಯ. ಅಂದರೆ ಕಿಂಗ್ ಕೊಹ್ಲಿ ಇದ್ದಾಗ ಮಾತ್ರ ಸಿರಾಜ್ ಅತ್ಯುತ್ತಮ ದಾಳಿ ಸಂಘಟಿಸಿದ್ದಾರೆ. ಅವರು ಇಲ್ಲದಿದ್ದರೆ, ವಿಕೆಟ್ ಪಡೆಯಲು ಹರಸಾಹಸ ಪಟ್ಟಿದ್ದಾರೆ. ಅದು ಈಗ ಇಂಗ್ಲೆಂಡ್​ನಲ್ಲೂ ಮುಂದುವರೆದಿದೆ.

ಹೀಗೆ ಭಾರತ ತಂಡದ ಖಾಯಂ ಸದಸ್ಯರಾದರೂ ವಿರಾಟ್ ಕೊಹ್ಲಿಯ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ ಎಂಬುದೇ ಸತ್ಯ. ಅಂದರೆ ಕಿಂಗ್ ಕೊಹ್ಲಿ ಇದ್ದಾಗ ಮಾತ್ರ ಸಿರಾಜ್ ಅತ್ಯುತ್ತಮ ದಾಳಿ ಸಂಘಟಿಸಿದ್ದಾರೆ. ಅವರು ಇಲ್ಲದಿದ್ದರೆ, ವಿಕೆಟ್ ಪಡೆಯಲು ಹರಸಾಹಸ ಪಟ್ಟಿದ್ದಾರೆ. ಅದು ಈಗ ಇಂಗ್ಲೆಂಡ್​ನಲ್ಲೂ ಮುಂದುವರೆದಿದೆ.

3 / 6
 ವಿರಾಟ್ ಕೊಹ್ಲಿ ತಂಡದಲ್ಲಿದ್ದಾಗ ಮೊಹಮ್ಮದ್ ಸಿರಾಜ್ 51 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಸಿರಾಜ್ ಪಡೆದಿರುವುದು ಬರೋಬ್ಬರಿ 81 ವಿಕೆಟ್​​ಗಳು. ಅಂದರೆ ಕೊಹ್ಲಿ ಜೊತೆಗಿದ್ದಾಗ ಸಿರಾಜ್ 49ರ ಸ್ಟ್ರೈಕ್ ರೇಟ್​ನಲ್ಲಿ ವಿಕೆಟ್ ಕಬಳಿಸಿದ್ದಾರೆ.

 ವಿರಾಟ್ ಕೊಹ್ಲಿ ತಂಡದಲ್ಲಿದ್ದಾಗ ಮೊಹಮ್ಮದ್ ಸಿರಾಜ್ 51 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಸಿರಾಜ್ ಪಡೆದಿರುವುದು ಬರೋಬ್ಬರಿ 81 ವಿಕೆಟ್​​ಗಳು. ಅಂದರೆ ಕೊಹ್ಲಿ ಜೊತೆಗಿದ್ದಾಗ ಸಿರಾಜ್ 49ರ ಸ್ಟ್ರೈಕ್ ರೇಟ್​ನಲ್ಲಿ ವಿಕೆಟ್ ಕಬಳಿಸಿದ್ದಾರೆ.

4 / 6
ಮತ್ತೊಂದೆಡೆ ವಿರಾಟ್ ಕೊಹ್ಲಿಯ ಅನುಪಸ್ಥಿತಿಯ ನಡುವೆ ಮೊಹಮ್ಮದ್ ಸಿರಾಜ್ 18 ಟೆಸ್ಟ್ ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಪಡೆದಿರುವುದು ಕೇವಲ 20 ವಿಕೆಟ್ ಮಾತ್ರ. ಅಲ್ಲದೆ ಕೊಹ್ಲಿ ಇಲ್ಲದಿದ್ದಾಗ ಸಿರಾಜ್ ಅವರ ಬೌಲಿಂಗ್ ಸ್ಟ್ರೈಕ್ ರೇಟ್ 71 ಎಂದರೆ ನಂಬಲೇಬೇಕು. ಅಂದರೆ ಒಂದು ವಿಕೆಟ್ ಪಡೆಯಲು ಕನಿಷ್ಠ 71 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

ಮತ್ತೊಂದೆಡೆ ವಿರಾಟ್ ಕೊಹ್ಲಿಯ ಅನುಪಸ್ಥಿತಿಯ ನಡುವೆ ಮೊಹಮ್ಮದ್ ಸಿರಾಜ್ 18 ಟೆಸ್ಟ್ ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಪಡೆದಿರುವುದು ಕೇವಲ 20 ವಿಕೆಟ್ ಮಾತ್ರ. ಅಲ್ಲದೆ ಕೊಹ್ಲಿ ಇಲ್ಲದಿದ್ದಾಗ ಸಿರಾಜ್ ಅವರ ಬೌಲಿಂಗ್ ಸ್ಟ್ರೈಕ್ ರೇಟ್ 71 ಎಂದರೆ ನಂಬಲೇಬೇಕು. ಅಂದರೆ ಒಂದು ವಿಕೆಟ್ ಪಡೆಯಲು ಕನಿಷ್ಠ 71 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

5 / 6
ಈ ಅಂಕಿ ಅಂಶಗಳೇ ಮೊಹಮ್ಮದ್ ಸಿರಾಜ್ ಪಾಲಿಗೆ ವಿರಾಟ್ ಕೊಹ್ಲಿ ನಾಯಕತ್ವ ಎಷ್ಟು ಮುಖ್ಯವಾಗಿತ್ತು ಎಂಬುದನ್ನು ತೋರಿಸುತ್ತದೆ. ಹೀಗಾಗಿಯೇ ಕೊಹ್ಲಿ ಟೆಸ್ಟ್​ ನಿವೃತ್ತಿ ಘೋಷಿಸಿದಾಗ ನನ್ನ ಸೂಪರ್​ ಹೀರೋನನ್ನು ನಾನು ಇನ್ಮುಂದೆ ಮಿಸ್ ಮಾಡಿಕೊಳ್ಳಲಿದ್ದೇನೆ ಎಂದಿರಬಹುದು.

ಈ ಅಂಕಿ ಅಂಶಗಳೇ ಮೊಹಮ್ಮದ್ ಸಿರಾಜ್ ಪಾಲಿಗೆ ವಿರಾಟ್ ಕೊಹ್ಲಿ ನಾಯಕತ್ವ ಎಷ್ಟು ಮುಖ್ಯವಾಗಿತ್ತು ಎಂಬುದನ್ನು ತೋರಿಸುತ್ತದೆ. ಹೀಗಾಗಿಯೇ ಕೊಹ್ಲಿ ಟೆಸ್ಟ್​ ನಿವೃತ್ತಿ ಘೋಷಿಸಿದಾಗ ನನ್ನ ಸೂಪರ್​ ಹೀರೋನನ್ನು ನಾನು ಇನ್ಮುಂದೆ ಮಿಸ್ ಮಾಡಿಕೊಳ್ಳಲಿದ್ದೇನೆ ಎಂದಿರಬಹುದು.

6 / 6
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು