AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಂಡದಲ್ಲಿ ಇರದ ವಿರಾಟ್ ಕೊಹ್ಲಿಯೇ ನಂಬರ್ ೧

Virat Kohli Records: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭರ್ಜರಿ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಪ್ರಸ್ತುತ ಭಾರತ ಟಿ20 ತಂಡದಲ್ಲಿ ಇರದಿದ್ದರೂ, ಕಿಂಗ್ ಕೊಹ್ಲಿ ಇಂಡೊ-ಆಸೀಸ್ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 28, 2025 | 12:03 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 12ನೇ ಟಿ20 ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಬಾರಿಯ ಟಿ20 ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಪಂದ್ಯಗಳ ಮೂಲಕ ಅತ್ಯಧಿಕ ರನ್​ ಗಳಿಸಿದರೆ ಗ್ಲೆನ್​ ಮ್ಯಾಕ್ಸ್​ವೆಲ್ ವಿರಾಟ್ ಕೊಹ್ಲಿಯ ದಾಖಲೆ ಮುರಿಯಬಹುದು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 12ನೇ ಟಿ20 ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಬಾರಿಯ ಟಿ20 ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಪಂದ್ಯಗಳ ಮೂಲಕ ಅತ್ಯಧಿಕ ರನ್​ ಗಳಿಸಿದರೆ ಗ್ಲೆನ್​ ಮ್ಯಾಕ್ಸ್​ವೆಲ್ ವಿರಾಟ್ ಕೊಹ್ಲಿಯ ದಾಖಲೆ ಮುರಿಯಬಹುದು.

1 / 5
ಅಂದರೆ ಭಾರತ ಮತ್ತು ಆಸ್ಟ್ರೇಲಿಯಾ ನಟುವಣ ಟಿ20 ಸರಣಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 23 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 794 ರನ್ ಕಲೆಹಾಕಿದ್ದಾರೆ.

ಅಂದರೆ ಭಾರತ ಮತ್ತು ಆಸ್ಟ್ರೇಲಿಯಾ ನಟುವಣ ಟಿ20 ಸರಣಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 23 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 794 ರನ್ ಕಲೆಹಾಕಿದ್ದಾರೆ.

2 / 5
ಆದರೆ ಈ ಬಾರಿಯ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದಿಲ್ಲ. ಏಕೆಂದರೆ 2024ರ ಟಿ20 ವಿಶ್ವಕಪ್​ ಬೆನ್ನಲ್ಲೇ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ.

ಆದರೆ ಈ ಬಾರಿಯ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದಿಲ್ಲ. ಏಕೆಂದರೆ 2024ರ ಟಿ20 ವಿಶ್ವಕಪ್​ ಬೆನ್ನಲ್ಲೇ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ.

3 / 5
ಇತ್ತ ವಿರಾಟ್ ಕೊಹ್ಲಿ ನಿವೃತ್ತಿಯಾಗಿರುವ ಕಾರಣ ಮುಂಬರುವ ಪಂದ್ಯಗಳ ಮೂಲಕ ಭಾರತ-ಆಸ್ಟ್ರೇಲಿಯಾ ಟಿ20 ಸರಣಿಯ ರನ್ ಸರದಾರ ಪಟ್ಟಿಯಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್​ಗೆ ಅಗ್ರಸ್ಥಾನಕ್ಕೇರಬಹುದು. ಅದಕ್ಕಾಗಿ ಅವರು ಬರೋಬ್ಬರಿ 221 ರನ್​ಗಳನ್ನು ಕಲೆಹಾಕಬೇಕಿದೆ.

ಇತ್ತ ವಿರಾಟ್ ಕೊಹ್ಲಿ ನಿವೃತ್ತಿಯಾಗಿರುವ ಕಾರಣ ಮುಂಬರುವ ಪಂದ್ಯಗಳ ಮೂಲಕ ಭಾರತ-ಆಸ್ಟ್ರೇಲಿಯಾ ಟಿ20 ಸರಣಿಯ ರನ್ ಸರದಾರ ಪಟ್ಟಿಯಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್​ಗೆ ಅಗ್ರಸ್ಥಾನಕ್ಕೇರಬಹುದು. ಅದಕ್ಕಾಗಿ ಅವರು ಬರೋಬ್ಬರಿ 221 ರನ್​ಗಳನ್ನು ಕಲೆಹಾಕಬೇಕಿದೆ.

4 / 5
ಭಾರತದ ವಿರುದ್ಧ ಈವರೆಗೆ 22 ಟಿ20 ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಒಟ್ಟು 574 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಸಿಡಿಸಿದ್ದಾರೆ. ಅದರಂತೆ ಮುಂಬರುವ ಪಂದ್ಯಗಳಲ್ಲಿ ಮ್ಯಾಕ್ಸ್​ವೆಲ್ ಭರ್ಜರಿ ಪ್ರದರ್ಶನ ನೀಡಿ 221 ರನ್​ಗಳಿಸಿದರೆ ಇಂಡೊ-ಆಸೀಸ್ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಭಾರತದ ವಿರುದ್ಧ ಈವರೆಗೆ 22 ಟಿ20 ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಒಟ್ಟು 574 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಸಿಡಿಸಿದ್ದಾರೆ. ಅದರಂತೆ ಮುಂಬರುವ ಪಂದ್ಯಗಳಲ್ಲಿ ಮ್ಯಾಕ್ಸ್​ವೆಲ್ ಭರ್ಜರಿ ಪ್ರದರ್ಶನ ನೀಡಿ 221 ರನ್​ಗಳಿಸಿದರೆ ಇಂಡೊ-ಆಸೀಸ್ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

5 / 5

Published On - 12:03 pm, Tue, 28 October 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ