AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ 9 ವರ್ಷಗಳ ಹಳೆಯ ದಾಖಲೆ ಮುರಿದ ಧೋನಿ..!

MS Dhoni: ಐಪಿಎಲ್ 2022 ಪ್ರಾರಂಭವಾಗುವ ಮೊದಲು ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ 8 ಪಂದ್ಯಗಳ ನಂತರ ಧೋನಿ ಮತ್ತೆ ತಂಡದ ನಾಯಕತ್ವ ವಹಿಸಿಕೊಂಡರು.

ಪೃಥ್ವಿಶಂಕರ
|

Updated on:May 03, 2022 | 4:09 PM

Share
ಐಪಿಎಲ್‌ ಟೂರ್ನಿ 2008ರಿಂದ ಆರಂಭವಾಗಿದ್ದು, ಧೋನಿ ಆರಂಭವಾದಾಗಿನಿಂದ ತಂಡಗಳ ನಾಯಕರಾಗಿದ್ದಾರೆ. ಆದರೆ ಧೋನಿ 2017 ರ ಆವೃತ್ತಿಯಲ್ಲಿ ಮಾತ್ರ ಪುಣೆಯ ನಾಯಕತ್ವವನ್ನು ವಹಿಸಿಕೊಂಡಿರಲಿಲ್ಲ. ಅವರು ಇದುವರೆಗೆ 205 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದು, ಇದರಲ್ಲಿ 122 ಗೆಲುವುಗಳು ಸೇರಿವೆ.

1 / 4
ತಂಡ ನಿರೀಕ್ಷಿತ ಪ್ರದರ್ಶನ ನೀಡದೇ ಇದ್ದಾಗ ತಂಡವು ಋತುವಿನ ಮಧ್ಯದಲ್ಲಿ ಮತ್ತೊಮ್ಮೆ ಅಚ್ಚರಿ ಮೂಡಿಸಿತು. ಜಡೇಜಾ ನಾಯಕತ್ವದಿಂದ ಕೆಳಗಿಳಿದ ಕಾರಣ, ಧೋನಿ ಮತ್ತೊಮ್ಮೆ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಯಿತು. ಈ ಎರಡನೇ ನಿರ್ಧಾರ ಐಪಿಎಲ್‌ನಲ್ಲೂ ದಾಖಲೆ ನಿರ್ಮಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕತ್ವವನ್ನು ಎಂಎಸ್ ಧೋನಿ ವಹಿಸಿಕೊಂಡಿದ್ದರು.

2 / 4
ಈ ನಿಟ್ಟಿನಲ್ಲಿ ಮಾಜಿ ಅನುಭವಿ ಬ್ಯಾಟ್ಸ್​ಮನ್ ರಾಹುಲ್ ದ್ರಾವಿಡ್ ಅವರ 9 ವರ್ಷಗಳ ಹಳೆಯ ದಾಖಲೆಯನ್ನು ಧೋನಿ ಮುರಿದಿದ್ದಾರೆ. 2013ರಲ್ಲಿ ಕೊನೆಯ ಬಾರಿಗೆ ಐಪಿಎಲ್‌ನಲ್ಲಿ ಆಡಿದ್ದ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದರು. ಕೊನೆಯ ಪಂದ್ಯದ ಸಮಯದಲ್ಲಿ ದ್ರಾವಿಡ್​ಗೆ 40 ವರ್ಷ 268 ದಿನ ವಯಸ್ಸಾಗಿತ್ತು. ಈಗ ಧೋನಿ ವಯಸ್ಸು 40 ವರ್ಷ 298 ದಿನಗಳು.ಈ ಮೂಲಕ ಧೋನಿ ದ್ರಾವಿಡ್​ ದಾಖಲೆಯನ್ನು ಮುರಿದಿದ್ದಾರೆ.

3 / 4
ಧೋನಿ ನಾಯಕತ್ವ ವಹಿಸಿಕೊಂಡ ನಂತರ ಸತತ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಬಲಿಷ್ಠ ಹೈದರಾಬಾದ್ ತಂಡವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಆರಂಭಿಕ ಆಟಗಾರ ರುತುರಾಜ್ ದಾಖಲೆಯ 99 ರನ್ ಸಿಡಿಸಿದ್ದರು.

4 / 4

Published On - 3:50 pm, Tue, 3 May 22

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ