IPL 2022: ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ 9 ವರ್ಷಗಳ ಹಳೆಯ ದಾಖಲೆ ಮುರಿದ ಧೋನಿ..!

MS Dhoni: ಐಪಿಎಲ್ 2022 ಪ್ರಾರಂಭವಾಗುವ ಮೊದಲು ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ 8 ಪಂದ್ಯಗಳ ನಂತರ ಧೋನಿ ಮತ್ತೆ ತಂಡದ ನಾಯಕತ್ವ ವಹಿಸಿಕೊಂಡರು.

|

Updated on:May 03, 2022 | 4:09 PM

ಐಪಿಎಲ್‌ ಟೂರ್ನಿ 2008ರಿಂದ ಆರಂಭವಾಗಿದ್ದು, ಧೋನಿ ಆರಂಭವಾದಾಗಿನಿಂದ ತಂಡಗಳ ನಾಯಕರಾಗಿದ್ದಾರೆ. ಆದರೆ ಧೋನಿ 2017 ರ ಆವೃತ್ತಿಯಲ್ಲಿ ಮಾತ್ರ ಪುಣೆಯ ನಾಯಕತ್ವವನ್ನು ವಹಿಸಿಕೊಂಡಿರಲಿಲ್ಲ. ಅವರು ಇದುವರೆಗೆ 205 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದು, ಇದರಲ್ಲಿ 122 ಗೆಲುವುಗಳು ಸೇರಿವೆ.

1 / 4
ತಂಡ ನಿರೀಕ್ಷಿತ ಪ್ರದರ್ಶನ ನೀಡದೇ ಇದ್ದಾಗ ತಂಡವು ಋತುವಿನ ಮಧ್ಯದಲ್ಲಿ ಮತ್ತೊಮ್ಮೆ ಅಚ್ಚರಿ ಮೂಡಿಸಿತು. ಜಡೇಜಾ ನಾಯಕತ್ವದಿಂದ ಕೆಳಗಿಳಿದ ಕಾರಣ, ಧೋನಿ ಮತ್ತೊಮ್ಮೆ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಯಿತು. ಈ ಎರಡನೇ ನಿರ್ಧಾರ ಐಪಿಎಲ್‌ನಲ್ಲೂ ದಾಖಲೆ ನಿರ್ಮಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕತ್ವವನ್ನು ಎಂಎಸ್ ಧೋನಿ ವಹಿಸಿಕೊಂಡಿದ್ದರು.

2 / 4
ಈ ನಿಟ್ಟಿನಲ್ಲಿ ಮಾಜಿ ಅನುಭವಿ ಬ್ಯಾಟ್ಸ್​ಮನ್ ರಾಹುಲ್ ದ್ರಾವಿಡ್ ಅವರ 9 ವರ್ಷಗಳ ಹಳೆಯ ದಾಖಲೆಯನ್ನು ಧೋನಿ ಮುರಿದಿದ್ದಾರೆ. 2013ರಲ್ಲಿ ಕೊನೆಯ ಬಾರಿಗೆ ಐಪಿಎಲ್‌ನಲ್ಲಿ ಆಡಿದ್ದ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದರು. ಕೊನೆಯ ಪಂದ್ಯದ ಸಮಯದಲ್ಲಿ ದ್ರಾವಿಡ್​ಗೆ 40 ವರ್ಷ 268 ದಿನ ವಯಸ್ಸಾಗಿತ್ತು. ಈಗ ಧೋನಿ ವಯಸ್ಸು 40 ವರ್ಷ 298 ದಿನಗಳು.ಈ ಮೂಲಕ ಧೋನಿ ದ್ರಾವಿಡ್​ ದಾಖಲೆಯನ್ನು ಮುರಿದಿದ್ದಾರೆ.

3 / 4
ಧೋನಿ ನಾಯಕತ್ವ ವಹಿಸಿಕೊಂಡ ನಂತರ ಸತತ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಬಲಿಷ್ಠ ಹೈದರಾಬಾದ್ ತಂಡವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಆರಂಭಿಕ ಆಟಗಾರ ರುತುರಾಜ್ ದಾಖಲೆಯ 99 ರನ್ ಸಿಡಿಸಿದ್ದರು.

4 / 4

Published On - 3:50 pm, Tue, 3 May 22

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್