AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಸ್ ಧೋನಿಗೆ 15 ಕೋಟಿ ರೂ. ವಂಚನೆ..! ಎಫ್‌ಐಆರ್ ದಾಖಲಿಸಿದ ಕ್ಯಾಪ್ಟನ್ ಕೂಲ್

MS Dhoni: ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿಗೆ ಅವರ ಮಾಜಿ ಉದ್ಯಮ ಪಾಲುದಾರರಿಂದಲೇ ಕೋಟಿಗಟ್ಟಲೆ ವಂಚನೆಯಾಗಿದೆ ಎಂದು ವರದಿಯಾಗಿದೆ. ಅಲ್ಲದೆ ಧೋನಿ ತಮ್ಮ ಮಾಜಿ ಬ್ಯುಸಿನೆಸ್ ಪಾಲುದಾರರು 15 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪ ಮಾಡಿ ನ್ಯಾಯಾಲಯದ ಮೊರೆ ಹೀಗಿದ್ದಾರೆ.

ಪೃಥ್ವಿಶಂಕರ
|

Updated on: Jan 05, 2024 | 3:32 PM

Share
ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿಗೆ ಅವರ ಮಾಜಿ ಉದ್ಯಮ ಪಾಲುದಾರರಿಂದಲೇ ಕೋಟಿಗಟ್ಟಲೆ ವಂಚನೆಯಾಗಿದೆ ಎಂದು ವರದಿಯಾಗಿದೆ. ಅಲ್ಲದೆ ಧೋನಿ ತಮ್ಮ ಮಾಜಿ ಬ್ಯುಸಿನೆಸ್ ಪಾಲುದಾರರು 15 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪ ಮಾಡಿ ನ್ಯಾಯಾಲಯದ ಮೊರೆ ಹೀಗಿದ್ದಾರೆ.

ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿಗೆ ಅವರ ಮಾಜಿ ಉದ್ಯಮ ಪಾಲುದಾರರಿಂದಲೇ ಕೋಟಿಗಟ್ಟಲೆ ವಂಚನೆಯಾಗಿದೆ ಎಂದು ವರದಿಯಾಗಿದೆ. ಅಲ್ಲದೆ ಧೋನಿ ತಮ್ಮ ಮಾಜಿ ಬ್ಯುಸಿನೆಸ್ ಪಾಲುದಾರರು 15 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪ ಮಾಡಿ ನ್ಯಾಯಾಲಯದ ಮೊರೆ ಹೀಗಿದ್ದಾರೆ.

1 / 7
ವರದಿಯ ಪ್ರಕಾರ ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಸೌಮ್ಯ ಬಿಸ್ವಾಸ್ ಮತ್ತು ಮಿಹಿರ್ ದಿವಾಕರ್ ವಿರುದ್ಧ ಧೋನಿ ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ವರದಿಯ ಪ್ರಕಾರ ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಸೌಮ್ಯ ಬಿಸ್ವಾಸ್ ಮತ್ತು ಮಿಹಿರ್ ದಿವಾಕರ್ ವಿರುದ್ಧ ಧೋನಿ ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

2 / 7
ವಿಶ್ವ ಮಟ್ಟದಲ್ಲಿ ಕ್ರಿಕೆಟ್ ಅಕಾಡೆಮಿ ಸ್ಥಾಪಿಸಲು ಮಾಜಿ ಉದ್ಯಮ ಪಾಲುದಾರರಾದ ದಿವಾಕರ್ ಅವರು ಧೋನಿ ಅವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಮಿಹಿರ್ ದಿವಾಕರ್ ಅವರು ಒಪ್ಪಂದದಲ್ಲಿದ್ದ ಷರತ್ತುಗಳನ್ನು ಪಾಲಿಸಿಲ್ಲ ಎಂದು ದೂರಿನಲ್ಲಿ ಧೋನಿ ಉಲ್ಲೇಖಿಸಿದ್ದಾರೆ.

ವಿಶ್ವ ಮಟ್ಟದಲ್ಲಿ ಕ್ರಿಕೆಟ್ ಅಕಾಡೆಮಿ ಸ್ಥಾಪಿಸಲು ಮಾಜಿ ಉದ್ಯಮ ಪಾಲುದಾರರಾದ ದಿವಾಕರ್ ಅವರು ಧೋನಿ ಅವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಮಿಹಿರ್ ದಿವಾಕರ್ ಅವರು ಒಪ್ಪಂದದಲ್ಲಿದ್ದ ಷರತ್ತುಗಳನ್ನು ಪಾಲಿಸಿಲ್ಲ ಎಂದು ದೂರಿನಲ್ಲಿ ಧೋನಿ ಉಲ್ಲೇಖಿಸಿದ್ದಾರೆ.

3 / 7
ಹಾಗೆಯೇ ದಿವಾಕರ್ ಅವರು ಅರ್ಕಾ ಸ್ಪೋರ್ಟ್ಸ್ ಫ್ರಾಂಚೈಸಿ ಶುಲ್ಕ ಮತ್ತು ಷೇರು ಲಾಭವನ್ನು ಧೋನಿಯವರಿಗೆ ಪಾವತಿಸಿಲ್ಲ. ಹೀಗಾಗಿ ಧೋನಿ 15 ಆಗಸ್ಟ್ 2021 ರಂದು ಅರ್ಕಾ ಸ್ಪೋರ್ಟ್ಸ್‌ಗೆ ನೋಟಿಸ್ ಕಳುಹಿಸಿದ್ದರು. ಆ ಬಳಿಕ ಅರ್ಕಾ ಸ್ಪೋರ್ಟ್ಸ್‌ಗೆ ನೀಡಲಾಗಿದ್ದ ಹಕ್ಕುಗಳನ್ನು ರದ್ದುಗೊಳಿಸಲಾಗಿತ್ತು.

ಹಾಗೆಯೇ ದಿವಾಕರ್ ಅವರು ಅರ್ಕಾ ಸ್ಪೋರ್ಟ್ಸ್ ಫ್ರಾಂಚೈಸಿ ಶುಲ್ಕ ಮತ್ತು ಷೇರು ಲಾಭವನ್ನು ಧೋನಿಯವರಿಗೆ ಪಾವತಿಸಿಲ್ಲ. ಹೀಗಾಗಿ ಧೋನಿ 15 ಆಗಸ್ಟ್ 2021 ರಂದು ಅರ್ಕಾ ಸ್ಪೋರ್ಟ್ಸ್‌ಗೆ ನೋಟಿಸ್ ಕಳುಹಿಸಿದ್ದರು. ಆ ಬಳಿಕ ಅರ್ಕಾ ಸ್ಪೋರ್ಟ್ಸ್‌ಗೆ ನೀಡಲಾಗಿದ್ದ ಹಕ್ಕುಗಳನ್ನು ರದ್ದುಗೊಳಿಸಲಾಗಿತ್ತು.

4 / 7
ಆ ಬಳಿಕ ಧೋನಿ ತಮ್ಮ ಮಾಜಿ ಉದ್ಯಮ ಪಾಲುದಾರರ ವಿರುದ್ಧ ಹಲವಾರು ಬಾರಿ ನೋಟಿಸ್ ಕಳುಹಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ವಿಧಿ ಅಸೋಸಿಯೇಟ್ಸ್ ಮೂಲಕ ಎಂಎಸ್ ಧೋನಿ ಅವರನ್ನು ಪ್ರತಿನಿಧಿಸುತ್ತಿರುವ ದಯಾನಂದ್ ಸಿಂಗ್ ಈ ಮಾಹಿತಿ ನೀಡಿದ್ದಾರೆ.

ಆ ಬಳಿಕ ಧೋನಿ ತಮ್ಮ ಮಾಜಿ ಉದ್ಯಮ ಪಾಲುದಾರರ ವಿರುದ್ಧ ಹಲವಾರು ಬಾರಿ ನೋಟಿಸ್ ಕಳುಹಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ವಿಧಿ ಅಸೋಸಿಯೇಟ್ಸ್ ಮೂಲಕ ಎಂಎಸ್ ಧೋನಿ ಅವರನ್ನು ಪ್ರತಿನಿಧಿಸುತ್ತಿರುವ ದಯಾನಂದ್ ಸಿಂಗ್ ಈ ಮಾಹಿತಿ ನೀಡಿದ್ದಾರೆ.

5 / 7
ಇನ್ನು ಧೋನಿಯ ವೈಯಕ್ತಿಕ ಬದುಕಿನ ಬಗ್ಗೆ ಹೇಳುವುದಾದರೆ ಕ್ಯಾಪ್ಟನ್ ಕೂಲ್, ಇತ್ತೀಚೆಗೆ ದುಬೈನಲ್ಲಿ ತಮ್ಮ ಕುಟುಂಬದೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡಿದ್ದರು. ಪ್ರವಾಸದ ವೇಳೆ ಧೋನಿ ಜೊತೆ ಭಾರತದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಕೂಡ ಕಾಣಿಸಿಕೊಂಡಿದ್ದರು.

ಇನ್ನು ಧೋನಿಯ ವೈಯಕ್ತಿಕ ಬದುಕಿನ ಬಗ್ಗೆ ಹೇಳುವುದಾದರೆ ಕ್ಯಾಪ್ಟನ್ ಕೂಲ್, ಇತ್ತೀಚೆಗೆ ದುಬೈನಲ್ಲಿ ತಮ್ಮ ಕುಟುಂಬದೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡಿದ್ದರು. ಪ್ರವಾಸದ ವೇಳೆ ಧೋನಿ ಜೊತೆ ಭಾರತದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಕೂಡ ಕಾಣಿಸಿಕೊಂಡಿದ್ದರು.

6 / 7
ಧೋನಿ ತಮ್ಮ ಸ್ನೇಹಿತರು ಮತ್ತು ಕುಟುಂಬದೊಂದಿಗೆ ದುಬೈನಲ್ಲಿ ಕ್ರಿಸ್ಮಸ್ ಆಚರಿಸಿದ್ದರು. ಡಿಸೆಂಬರ್ 19 ರಂದು ಯುಎಇಯಲ್ಲಿ ಮೊದಲ ಬಾರಿಗೆ ನಡೆದ ಐಪಿಎಲ್ 2024 ಮಿನಿ ಹರಾಜಿಗಾಗಿ ದುಬೈಗೆ ಆಗಮಿಸಿದ ನಂತರ ಪಂತ್ ಎಂಎಸ್ ಧೋನಿಯೊಂದಿಗೆ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.

ಧೋನಿ ತಮ್ಮ ಸ್ನೇಹಿತರು ಮತ್ತು ಕುಟುಂಬದೊಂದಿಗೆ ದುಬೈನಲ್ಲಿ ಕ್ರಿಸ್ಮಸ್ ಆಚರಿಸಿದ್ದರು. ಡಿಸೆಂಬರ್ 19 ರಂದು ಯುಎಇಯಲ್ಲಿ ಮೊದಲ ಬಾರಿಗೆ ನಡೆದ ಐಪಿಎಲ್ 2024 ಮಿನಿ ಹರಾಜಿಗಾಗಿ ದುಬೈಗೆ ಆಗಮಿಸಿದ ನಂತರ ಪಂತ್ ಎಂಎಸ್ ಧೋನಿಯೊಂದಿಗೆ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.

7 / 7
Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ