AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಪೋಸ್ಟ್ ಮ್ಯಾಚ್​ನಲ್ಲಿ ಡುಪ್ಲೆಸಿಸ್-ಮ್ಯಾಕ್ಸ್​ವೆಲ್ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಎಂಎಸ್ ಧೋನಿ

CKS vs RCB, IPL 2023: ಆರ್​ಸಿಬಿ-ಸಿಎಸ್​ಕೆ ಪಂದ್ಯ ಮುಗಿದ ಬಳಿಕ ಚೆನ್ನೈ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಆರ್​ಸಿಬಿ ಪರ ಮ್ಯಾಕ್ಸ್​ವೆಲ್ ಮತ್ತು ಫಾಫ್ ಡುಪ್ಲೆಸಿಸ್ ನೀಡಿದ ಬ್ಯಾಟಿಂಗ್ ಪ್ರದರ್ಶನವನ್ನು ಹಾಡಿಹೊಗಳಿದ್ದಾರೆ.

Vinay Bhat
|

Updated on:Apr 18, 2023 | 10:12 AM

Share
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ 2023 ರ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ರನ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಸಿಎಸ್​ಕೆ ಮೂರನೇ ಸ್ಥಾನಕ್ಕೇರಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ 2023 ರ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ರನ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಸಿಎಸ್​ಕೆ ಮೂರನೇ ಸ್ಥಾನಕ್ಕೇರಿದೆ.

1 / 7
ಡೆವೋನ್ ಕಾನ್ವೆ ಅವರ 83 ರನ್, ಶಿವಂ ದುಬೆ ಅವರ ಸ್ಫೋಟಕ 52 ರನ್​ಗಳ ನೆರವಿನಿಂದ ಚೆನ್ನೈ 226 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ಪರ ಗ್ಲೆನ್ ಮ್ಯಾಕ್ಸ್​ವೆಲ್ (76) ಹಾಗೂ ನಾಯಕ ಫಾಫ್ ಡುಪ್ಲೆಸಿಸ್ (62) ಅಬ್ಬರಿದ ಬ್ಯಾಟಿಂಗ್ ನಡೆಸಿ ಗೆಲುವಿಗೆ ಹೋರಾಡಿದರೂ ಇವರ ಪತನದ ಬಳಿಕ ತಂಡ ದಿಢೀರ್ ಕುಸಿತ ಕಂಡಿತು.

ಡೆವೋನ್ ಕಾನ್ವೆ ಅವರ 83 ರನ್, ಶಿವಂ ದುಬೆ ಅವರ ಸ್ಫೋಟಕ 52 ರನ್​ಗಳ ನೆರವಿನಿಂದ ಚೆನ್ನೈ 226 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ಪರ ಗ್ಲೆನ್ ಮ್ಯಾಕ್ಸ್​ವೆಲ್ (76) ಹಾಗೂ ನಾಯಕ ಫಾಫ್ ಡುಪ್ಲೆಸಿಸ್ (62) ಅಬ್ಬರಿದ ಬ್ಯಾಟಿಂಗ್ ನಡೆಸಿ ಗೆಲುವಿಗೆ ಹೋರಾಡಿದರೂ ಇವರ ಪತನದ ಬಳಿಕ ತಂಡ ದಿಢೀರ್ ಕುಸಿತ ಕಂಡಿತು.

2 / 7
ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಆರ್​ಸಿಬಿ ಪರ ಮ್ಯಾಕ್ಸ್​ವೆಲ್ ಮತ್ತು ಫಾಫ್ ಡುಪ್ಲೆಸಿಸ್ ನೀಡಿದ ಬ್ಯಾಟಿಂಗ್ ಪ್ರದರ್ಶನವನ್ನು ಹಾಡಿಹೊಗಳಿದ್ದಾರೆ.

ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಆರ್​ಸಿಬಿ ಪರ ಮ್ಯಾಕ್ಸ್​ವೆಲ್ ಮತ್ತು ಫಾಫ್ ಡುಪ್ಲೆಸಿಸ್ ನೀಡಿದ ಬ್ಯಾಟಿಂಗ್ ಪ್ರದರ್ಶನವನ್ನು ಹಾಡಿಹೊಗಳಿದ್ದಾರೆ.

3 / 7
ಯಾವಾಗ ನೀವು 220 ರನ್​ಗಳ ಟಾರ್ಗೆಟ್ ನೀಡುತ್ತಿರೊ ಆಗ ಗುರಿ ಬೆನ್ನಟ್ಟುವ ತಂಡ ಸತತವಾಗಿ ದೊಡ್ಡ ಹೊಡೆತಗಳನ್ನು ಹೊಡೆಯುತ್ತಲೇ ಇರಬೇಕು. ಒಂದುವೇಳೆ ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಔಟಾಗದೆ ಅದೇ ಮಾದರಿಯಲ್ಲಿ ಬ್ಯಾಟ್ ಬೀಸುತ್ತಿದ್ದರೆ ಆರ್​ಸಿಬಿ 18ನೇ ಓವರ್​ನಲ್ಲೇ ಗೆಲುವು ಸಾಧಿಸುತ್ತಿತ್ತು ಎಂದು ಧೋನಿ ಹೇಳಿದ್ದಾರೆ.

ಯಾವಾಗ ನೀವು 220 ರನ್​ಗಳ ಟಾರ್ಗೆಟ್ ನೀಡುತ್ತಿರೊ ಆಗ ಗುರಿ ಬೆನ್ನಟ್ಟುವ ತಂಡ ಸತತವಾಗಿ ದೊಡ್ಡ ಹೊಡೆತಗಳನ್ನು ಹೊಡೆಯುತ್ತಲೇ ಇರಬೇಕು. ಒಂದುವೇಳೆ ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಔಟಾಗದೆ ಅದೇ ಮಾದರಿಯಲ್ಲಿ ಬ್ಯಾಟ್ ಬೀಸುತ್ತಿದ್ದರೆ ಆರ್​ಸಿಬಿ 18ನೇ ಓವರ್​ನಲ್ಲೇ ಗೆಲುವು ಸಾಧಿಸುತ್ತಿತ್ತು ಎಂದು ಧೋನಿ ಹೇಳಿದ್ದಾರೆ.

4 / 7
ನಾನು ವಿಕೆಟ್ ಹಿಂದಿನಿಂದ ಮೌಲ್ಯಮಾಪನ ಮಾಡುತ್ತಲೇ ಇರುತ್ತೇನೆ. ಯಾವತ್ತೂ ಫಲಿತಾಂಶದ ಬಗ್ಗೆ ಯೋಚಿಸುವುದಿಲ್ಲ. ಬದಲಾಗಿ ಆ ಸಂದರ್ಭಕ್ಕೆ ಏನು ಉತ್ತಮವಾಗಿ ಮಾಡಬಹುದು ಎಂಬುದನ್ನಷ್ಟೆ ಯೋಚಿಸುತ್ತಿರುತ್ತೇನೆ. ಡೆತ್ ಓವರ್ ಯುವ ಬೌಲರ್​ಗಳಿಗೆ ಕಷ್ಟಕರವಾಗಿದೆ. ಈ ಸಮಯದಲ್ಲಿ ಸುತ್ತಲೂ ಇಬ್ಬನಿ ಇರುತ್ತದೆ. ಹೀಗಿದ್ದರೂ ಅವರು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಎಂಬುದು ಧೋನಿ ಮಾತು.

ನಾನು ವಿಕೆಟ್ ಹಿಂದಿನಿಂದ ಮೌಲ್ಯಮಾಪನ ಮಾಡುತ್ತಲೇ ಇರುತ್ತೇನೆ. ಯಾವತ್ತೂ ಫಲಿತಾಂಶದ ಬಗ್ಗೆ ಯೋಚಿಸುವುದಿಲ್ಲ. ಬದಲಾಗಿ ಆ ಸಂದರ್ಭಕ್ಕೆ ಏನು ಉತ್ತಮವಾಗಿ ಮಾಡಬಹುದು ಎಂಬುದನ್ನಷ್ಟೆ ಯೋಚಿಸುತ್ತಿರುತ್ತೇನೆ. ಡೆತ್ ಓವರ್ ಯುವ ಬೌಲರ್​ಗಳಿಗೆ ಕಷ್ಟಕರವಾಗಿದೆ. ಈ ಸಮಯದಲ್ಲಿ ಸುತ್ತಲೂ ಇಬ್ಬನಿ ಇರುತ್ತದೆ. ಹೀಗಿದ್ದರೂ ಅವರು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಎಂಬುದು ಧೋನಿ ಮಾತು.

5 / 7
ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಬಗ್ಗೆ ಮಾತನಾಡಿದ ಧೋನಿ, ದುಬೆ ಅತ್ಯುತ್ತಮ ಶಾಟ್ ಹೊಡೆಯುವ ಆಟಗಾರರಲ್ಲಿ ಒಬ್ಬ. ವೇಗದ ಬೌಲಿಂಗ್​ನಲ್ಲಿ ಆತನಿಗೆ ಕೊಂಚ ಸಮಸ್ಯೆಯಿದೆ. ಆದರೆ, ಸ್ಪಿನ್ನರ್​ಗಳಿಗೆ ತುಂಬಾ ಚೆನ್ನಾಗಿ ಆಡುತ್ತಾರೆ. ದುಬೆಯನ್ನು ಆಡಿಸುವಾಗ ನಮ್ಮಲ್ಲಿ ವಿಶೇಷ ಯೋಜನೆಗಳು ಇರುತ್ತವೆ ಎಂದು ಹೇಳಿದ್ದಾರೆ.

ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಬಗ್ಗೆ ಮಾತನಾಡಿದ ಧೋನಿ, ದುಬೆ ಅತ್ಯುತ್ತಮ ಶಾಟ್ ಹೊಡೆಯುವ ಆಟಗಾರರಲ್ಲಿ ಒಬ್ಬ. ವೇಗದ ಬೌಲಿಂಗ್​ನಲ್ಲಿ ಆತನಿಗೆ ಕೊಂಚ ಸಮಸ್ಯೆಯಿದೆ. ಆದರೆ, ಸ್ಪಿನ್ನರ್​ಗಳಿಗೆ ತುಂಬಾ ಚೆನ್ನಾಗಿ ಆಡುತ್ತಾರೆ. ದುಬೆಯನ್ನು ಆಡಿಸುವಾಗ ನಮ್ಮಲ್ಲಿ ವಿಶೇಷ ಯೋಜನೆಗಳು ಇರುತ್ತವೆ ಎಂದು ಹೇಳಿದ್ದಾರೆ.

6 / 7
ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಕೂಡ ಸಿಎಸ್​ಕೆ ಬೌಲರ್​ಗಳ ಪ್ರದರ್ಶನಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಕೊನೆಯ 5 ಓವರ್‌ಗಳಲ್ಲಿ ಪಂದ್ಯ ಮುಗಿಸಲು ಅತ್ಯುತ್ತಮ ವೇದಿಕೆ ರೂಪಿಸಲಾಗಿತ್ತು. ಆದರೆ, ಸಿಎಸ್‌ಕೆ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ ನಮಗೆ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದು ಫಾಫ್ ಮಾತು.

ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಕೂಡ ಸಿಎಸ್​ಕೆ ಬೌಲರ್​ಗಳ ಪ್ರದರ್ಶನಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಕೊನೆಯ 5 ಓವರ್‌ಗಳಲ್ಲಿ ಪಂದ್ಯ ಮುಗಿಸಲು ಅತ್ಯುತ್ತಮ ವೇದಿಕೆ ರೂಪಿಸಲಾಗಿತ್ತು. ಆದರೆ, ಸಿಎಸ್‌ಕೆ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ ನಮಗೆ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದು ಫಾಫ್ ಮಾತು.

7 / 7

Published On - 10:12 am, Tue, 18 April 23

‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಸೆಲ್ಫೀಗೆ ಮುಂದಾದವನ ಅಟ್ಟಾಡಿಸಿ ಮೆಟ್ಟಿದ ಕಾಡಾನೆ, ಆಮೇಲೇನಾಯ್ತು ನೋಡಿ
ಸೆಲ್ಫೀಗೆ ಮುಂದಾದವನ ಅಟ್ಟಾಡಿಸಿ ಮೆಟ್ಟಿದ ಕಾಡಾನೆ, ಆಮೇಲೇನಾಯ್ತು ನೋಡಿ
VIDEO: ಮ್ಯಾಕ್ಸ್​ವೆಲ್ ಮ್ಯಾಜಿಕ್... ಎಂತಹ ಅದ್ಭುತ ಕ್ಯಾಚ್
VIDEO: ಮ್ಯಾಕ್ಸ್​ವೆಲ್ ಮ್ಯಾಜಿಕ್... ಎಂತಹ ಅದ್ಭುತ ಕ್ಯಾಚ್
ಮೆಟ್ರೋ ಹಳದಿ ಮಾರ್ಗ ಶುರು: ಪ್ರಯಾಣಿಕರು ಏನಂದ್ರು ನೋಡಿ
ಮೆಟ್ರೋ ಹಳದಿ ಮಾರ್ಗ ಶುರು: ಪ್ರಯಾಣಿಕರು ಏನಂದ್ರು ನೋಡಿ
ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು
ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ