AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಪೋಸ್ಟ್ ಮ್ಯಾಚ್​ನಲ್ಲಿ ಡುಪ್ಲೆಸಿಸ್-ಮ್ಯಾಕ್ಸ್​ವೆಲ್ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಎಂಎಸ್ ಧೋನಿ

CKS vs RCB, IPL 2023: ಆರ್​ಸಿಬಿ-ಸಿಎಸ್​ಕೆ ಪಂದ್ಯ ಮುಗಿದ ಬಳಿಕ ಚೆನ್ನೈ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಆರ್​ಸಿಬಿ ಪರ ಮ್ಯಾಕ್ಸ್​ವೆಲ್ ಮತ್ತು ಫಾಫ್ ಡುಪ್ಲೆಸಿಸ್ ನೀಡಿದ ಬ್ಯಾಟಿಂಗ್ ಪ್ರದರ್ಶನವನ್ನು ಹಾಡಿಹೊಗಳಿದ್ದಾರೆ.

Vinay Bhat
|

Updated on:Apr 18, 2023 | 10:12 AM

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ 2023 ರ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ರನ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಸಿಎಸ್​ಕೆ ಮೂರನೇ ಸ್ಥಾನಕ್ಕೇರಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ 2023 ರ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ರನ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಸಿಎಸ್​ಕೆ ಮೂರನೇ ಸ್ಥಾನಕ್ಕೇರಿದೆ.

1 / 7
ಡೆವೋನ್ ಕಾನ್ವೆ ಅವರ 83 ರನ್, ಶಿವಂ ದುಬೆ ಅವರ ಸ್ಫೋಟಕ 52 ರನ್​ಗಳ ನೆರವಿನಿಂದ ಚೆನ್ನೈ 226 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ಪರ ಗ್ಲೆನ್ ಮ್ಯಾಕ್ಸ್​ವೆಲ್ (76) ಹಾಗೂ ನಾಯಕ ಫಾಫ್ ಡುಪ್ಲೆಸಿಸ್ (62) ಅಬ್ಬರಿದ ಬ್ಯಾಟಿಂಗ್ ನಡೆಸಿ ಗೆಲುವಿಗೆ ಹೋರಾಡಿದರೂ ಇವರ ಪತನದ ಬಳಿಕ ತಂಡ ದಿಢೀರ್ ಕುಸಿತ ಕಂಡಿತು.

ಡೆವೋನ್ ಕಾನ್ವೆ ಅವರ 83 ರನ್, ಶಿವಂ ದುಬೆ ಅವರ ಸ್ಫೋಟಕ 52 ರನ್​ಗಳ ನೆರವಿನಿಂದ ಚೆನ್ನೈ 226 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ಪರ ಗ್ಲೆನ್ ಮ್ಯಾಕ್ಸ್​ವೆಲ್ (76) ಹಾಗೂ ನಾಯಕ ಫಾಫ್ ಡುಪ್ಲೆಸಿಸ್ (62) ಅಬ್ಬರಿದ ಬ್ಯಾಟಿಂಗ್ ನಡೆಸಿ ಗೆಲುವಿಗೆ ಹೋರಾಡಿದರೂ ಇವರ ಪತನದ ಬಳಿಕ ತಂಡ ದಿಢೀರ್ ಕುಸಿತ ಕಂಡಿತು.

2 / 7
ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಆರ್​ಸಿಬಿ ಪರ ಮ್ಯಾಕ್ಸ್​ವೆಲ್ ಮತ್ತು ಫಾಫ್ ಡುಪ್ಲೆಸಿಸ್ ನೀಡಿದ ಬ್ಯಾಟಿಂಗ್ ಪ್ರದರ್ಶನವನ್ನು ಹಾಡಿಹೊಗಳಿದ್ದಾರೆ.

ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಆರ್​ಸಿಬಿ ಪರ ಮ್ಯಾಕ್ಸ್​ವೆಲ್ ಮತ್ತು ಫಾಫ್ ಡುಪ್ಲೆಸಿಸ್ ನೀಡಿದ ಬ್ಯಾಟಿಂಗ್ ಪ್ರದರ್ಶನವನ್ನು ಹಾಡಿಹೊಗಳಿದ್ದಾರೆ.

3 / 7
ಯಾವಾಗ ನೀವು 220 ರನ್​ಗಳ ಟಾರ್ಗೆಟ್ ನೀಡುತ್ತಿರೊ ಆಗ ಗುರಿ ಬೆನ್ನಟ್ಟುವ ತಂಡ ಸತತವಾಗಿ ದೊಡ್ಡ ಹೊಡೆತಗಳನ್ನು ಹೊಡೆಯುತ್ತಲೇ ಇರಬೇಕು. ಒಂದುವೇಳೆ ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಔಟಾಗದೆ ಅದೇ ಮಾದರಿಯಲ್ಲಿ ಬ್ಯಾಟ್ ಬೀಸುತ್ತಿದ್ದರೆ ಆರ್​ಸಿಬಿ 18ನೇ ಓವರ್​ನಲ್ಲೇ ಗೆಲುವು ಸಾಧಿಸುತ್ತಿತ್ತು ಎಂದು ಧೋನಿ ಹೇಳಿದ್ದಾರೆ.

ಯಾವಾಗ ನೀವು 220 ರನ್​ಗಳ ಟಾರ್ಗೆಟ್ ನೀಡುತ್ತಿರೊ ಆಗ ಗುರಿ ಬೆನ್ನಟ್ಟುವ ತಂಡ ಸತತವಾಗಿ ದೊಡ್ಡ ಹೊಡೆತಗಳನ್ನು ಹೊಡೆಯುತ್ತಲೇ ಇರಬೇಕು. ಒಂದುವೇಳೆ ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಔಟಾಗದೆ ಅದೇ ಮಾದರಿಯಲ್ಲಿ ಬ್ಯಾಟ್ ಬೀಸುತ್ತಿದ್ದರೆ ಆರ್​ಸಿಬಿ 18ನೇ ಓವರ್​ನಲ್ಲೇ ಗೆಲುವು ಸಾಧಿಸುತ್ತಿತ್ತು ಎಂದು ಧೋನಿ ಹೇಳಿದ್ದಾರೆ.

4 / 7
ನಾನು ವಿಕೆಟ್ ಹಿಂದಿನಿಂದ ಮೌಲ್ಯಮಾಪನ ಮಾಡುತ್ತಲೇ ಇರುತ್ತೇನೆ. ಯಾವತ್ತೂ ಫಲಿತಾಂಶದ ಬಗ್ಗೆ ಯೋಚಿಸುವುದಿಲ್ಲ. ಬದಲಾಗಿ ಆ ಸಂದರ್ಭಕ್ಕೆ ಏನು ಉತ್ತಮವಾಗಿ ಮಾಡಬಹುದು ಎಂಬುದನ್ನಷ್ಟೆ ಯೋಚಿಸುತ್ತಿರುತ್ತೇನೆ. ಡೆತ್ ಓವರ್ ಯುವ ಬೌಲರ್​ಗಳಿಗೆ ಕಷ್ಟಕರವಾಗಿದೆ. ಈ ಸಮಯದಲ್ಲಿ ಸುತ್ತಲೂ ಇಬ್ಬನಿ ಇರುತ್ತದೆ. ಹೀಗಿದ್ದರೂ ಅವರು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಎಂಬುದು ಧೋನಿ ಮಾತು.

ನಾನು ವಿಕೆಟ್ ಹಿಂದಿನಿಂದ ಮೌಲ್ಯಮಾಪನ ಮಾಡುತ್ತಲೇ ಇರುತ್ತೇನೆ. ಯಾವತ್ತೂ ಫಲಿತಾಂಶದ ಬಗ್ಗೆ ಯೋಚಿಸುವುದಿಲ್ಲ. ಬದಲಾಗಿ ಆ ಸಂದರ್ಭಕ್ಕೆ ಏನು ಉತ್ತಮವಾಗಿ ಮಾಡಬಹುದು ಎಂಬುದನ್ನಷ್ಟೆ ಯೋಚಿಸುತ್ತಿರುತ್ತೇನೆ. ಡೆತ್ ಓವರ್ ಯುವ ಬೌಲರ್​ಗಳಿಗೆ ಕಷ್ಟಕರವಾಗಿದೆ. ಈ ಸಮಯದಲ್ಲಿ ಸುತ್ತಲೂ ಇಬ್ಬನಿ ಇರುತ್ತದೆ. ಹೀಗಿದ್ದರೂ ಅವರು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಎಂಬುದು ಧೋನಿ ಮಾತು.

5 / 7
ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಬಗ್ಗೆ ಮಾತನಾಡಿದ ಧೋನಿ, ದುಬೆ ಅತ್ಯುತ್ತಮ ಶಾಟ್ ಹೊಡೆಯುವ ಆಟಗಾರರಲ್ಲಿ ಒಬ್ಬ. ವೇಗದ ಬೌಲಿಂಗ್​ನಲ್ಲಿ ಆತನಿಗೆ ಕೊಂಚ ಸಮಸ್ಯೆಯಿದೆ. ಆದರೆ, ಸ್ಪಿನ್ನರ್​ಗಳಿಗೆ ತುಂಬಾ ಚೆನ್ನಾಗಿ ಆಡುತ್ತಾರೆ. ದುಬೆಯನ್ನು ಆಡಿಸುವಾಗ ನಮ್ಮಲ್ಲಿ ವಿಶೇಷ ಯೋಜನೆಗಳು ಇರುತ್ತವೆ ಎಂದು ಹೇಳಿದ್ದಾರೆ.

ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಬಗ್ಗೆ ಮಾತನಾಡಿದ ಧೋನಿ, ದುಬೆ ಅತ್ಯುತ್ತಮ ಶಾಟ್ ಹೊಡೆಯುವ ಆಟಗಾರರಲ್ಲಿ ಒಬ್ಬ. ವೇಗದ ಬೌಲಿಂಗ್​ನಲ್ಲಿ ಆತನಿಗೆ ಕೊಂಚ ಸಮಸ್ಯೆಯಿದೆ. ಆದರೆ, ಸ್ಪಿನ್ನರ್​ಗಳಿಗೆ ತುಂಬಾ ಚೆನ್ನಾಗಿ ಆಡುತ್ತಾರೆ. ದುಬೆಯನ್ನು ಆಡಿಸುವಾಗ ನಮ್ಮಲ್ಲಿ ವಿಶೇಷ ಯೋಜನೆಗಳು ಇರುತ್ತವೆ ಎಂದು ಹೇಳಿದ್ದಾರೆ.

6 / 7
ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಕೂಡ ಸಿಎಸ್​ಕೆ ಬೌಲರ್​ಗಳ ಪ್ರದರ್ಶನಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಕೊನೆಯ 5 ಓವರ್‌ಗಳಲ್ಲಿ ಪಂದ್ಯ ಮುಗಿಸಲು ಅತ್ಯುತ್ತಮ ವೇದಿಕೆ ರೂಪಿಸಲಾಗಿತ್ತು. ಆದರೆ, ಸಿಎಸ್‌ಕೆ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ ನಮಗೆ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದು ಫಾಫ್ ಮಾತು.

ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಕೂಡ ಸಿಎಸ್​ಕೆ ಬೌಲರ್​ಗಳ ಪ್ರದರ್ಶನಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಕೊನೆಯ 5 ಓವರ್‌ಗಳಲ್ಲಿ ಪಂದ್ಯ ಮುಗಿಸಲು ಅತ್ಯುತ್ತಮ ವೇದಿಕೆ ರೂಪಿಸಲಾಗಿತ್ತು. ಆದರೆ, ಸಿಎಸ್‌ಕೆ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ ನಮಗೆ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದು ಫಾಫ್ ಮಾತು.

7 / 7

Published On - 10:12 am, Tue, 18 April 23

Follow us
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು