Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವೃತ್ತಿಜೀವನದಲ್ಲಿ ಮೊದಲ ಬಾರಿಗೆ ‘ಹಗುರ’ ಮನಸು ಮಾಡಿದ ಕ್ಯಾಪ್ಟನ್ ಕೂಲ್ ಧೋನಿ

MS Dhoni: ಐಪಿಎಲ್ 2025 ರ ಸಲುವಾಗಿ ಎಂ.ಎಸ್. ಧೋನಿ ತಮ್ಮ ಬ್ಯಾಟ್‌ನ ತೂಕವನ್ನು 20 ಗ್ರಾಂ ಕಡಿಮೆ ಮಾಡಿದ್ದಾರೆ. ಮೀರತ್‌ನ ಸ್ಯಾನ್ಸ್‌ಪರೀಲ್ಸ್ ಕಂಪನಿಯು ಅವರಿಗೆ ನಾಲ್ಕು ಹೊಸ ಬ್ಯಾಟ್‌ಗಳನ್ನು ಒದಗಿಸಿದೆ. ಈ ಹೊಸ ಬ್ಯಾಟ್‌ಗಳು ಸುಮಾರು 1230 ಗ್ರಾಂ ತೂಗುತ್ತವೆ. ಧೋನಿ ಫೆಬ್ರವರಿ ಅಂತ್ಯದಲ್ಲಿ ಸಿಎಸ್‌ಕೆ ತಂಡ ಸೇರಲಿದ್ದಾರೆ ಎಂಬ ಮಾಹಿತಿ ಇದೆ.

ಪೃಥ್ವಿಶಂಕರ
|

Updated on: Feb 25, 2025 | 8:19 PM

18ನೇ ಆವೃತ್ತಿಯ ಐಪಿಎಲ್ ಇದೇ ಮಾರ್ಚ್​ 22 ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಳು ಮುಖಾಮುಖಿಯಾಗಲಿವೆ. ಆ ಬಳಿಕ ಆವೃತ್ತಿಯ ಮೂರನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ಸಿಎಸ್​ಕೆ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ.

18ನೇ ಆವೃತ್ತಿಯ ಐಪಿಎಲ್ ಇದೇ ಮಾರ್ಚ್​ 22 ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಳು ಮುಖಾಮುಖಿಯಾಗಲಿವೆ. ಆ ಬಳಿಕ ಆವೃತ್ತಿಯ ಮೂರನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ಸಿಎಸ್​ಕೆ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ.

1 / 6
ಉಭಯ ತಂಡಗಳ ಈ ಹೈವೋಲ್ಟೇಜ್ ಕಾಳಗ ಚೆನ್ನೈ ಸೂಪರ್​ ಕಿಂಗ್ಸ್​ನ ತವರು ನೆಲದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯವಿದೆ. ಈ ನಡುವೆ ಸಿಎಸ್​ಕೆ ತಂಡದ ಮಾಜಿ ನಾಯಕ ಎಂಎಸ್ ಧೋನಿಯ ಬಗ್ಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಈ ಆವೃತ್ತಿಯಲ್ಲಿ ಧೋನಿ ಆಡುವುದು ಈಗಾಗಲೇ ಖಚಿತವಾಗಿದೆ.

ಉಭಯ ತಂಡಗಳ ಈ ಹೈವೋಲ್ಟೇಜ್ ಕಾಳಗ ಚೆನ್ನೈ ಸೂಪರ್​ ಕಿಂಗ್ಸ್​ನ ತವರು ನೆಲದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯವಿದೆ. ಈ ನಡುವೆ ಸಿಎಸ್​ಕೆ ತಂಡದ ಮಾಜಿ ನಾಯಕ ಎಂಎಸ್ ಧೋನಿಯ ಬಗ್ಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಈ ಆವೃತ್ತಿಯಲ್ಲಿ ಧೋನಿ ಆಡುವುದು ಈಗಾಗಲೇ ಖಚಿತವಾಗಿದೆ.

2 / 6
ಇದೀಗ ಈ ಆವೃತ್ತಿಯಲ್ಲಿ ಧೋನಿ ಬಳಸಲಿರುವ ಬ್ಯಾಟ್​ನ ಬಗ್ಗೆ ಮಹತ್ವದ ಸುದ್ದಿ ಹೊರಬಿದ್ದಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಎಂಎಸ್ ಧೋನಿ ಐಪಿಎಲ್ 2025 ಗಾಗಿ ತಮ್ಮ ಬ್ಯಾಟ್‌ನ ತೂಕವನ್ನು 20 ಗ್ರಾಂ ಕಡಿಮೆ ಮಾಡಿಕೊಂಡಿದ್ದಾರೆ.

ಇದೀಗ ಈ ಆವೃತ್ತಿಯಲ್ಲಿ ಧೋನಿ ಬಳಸಲಿರುವ ಬ್ಯಾಟ್​ನ ಬಗ್ಗೆ ಮಹತ್ವದ ಸುದ್ದಿ ಹೊರಬಿದ್ದಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಎಂಎಸ್ ಧೋನಿ ಐಪಿಎಲ್ 2025 ಗಾಗಿ ತಮ್ಮ ಬ್ಯಾಟ್‌ನ ತೂಕವನ್ನು 20 ಗ್ರಾಂ ಕಡಿಮೆ ಮಾಡಿಕೊಂಡಿದ್ದಾರೆ.

3 / 6
ವಾಸ್ತವವಾಗಿ ಧೋನಿ ತಮ್ಮ ವೃತ್ತಿಜೀವನದ ಆರಂಭದ ದಿನಗಳಿಂದಲೂ ಸುಮಾರು 1200 ಗ್ರಾಂ ತೂಕದ ಬ್ಯಾಟ್ ಬಳಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆ ಬಳಿಕ ಟೀಂ ಇಂಡಿಯಾ ಪರ ಆಡಲು ಆರಂಭಿಸಿದ ಬಳಿಕ 1300 ಗ್ರಾಂ ತೂಕದ ಬ್ಯಾಟ್‌ಗಳನ್ನು ಬಳಸುತ್ತಿದ್ದ ಧೋನಿ ಇದೀಗ ತಮ್ಮ ಬ್ಯಾಟ್​ನ ತೂಕವನ್ನು ಕೊಂಚ ಇಳಿಸಿಕೊಂಡಿದ್ದಾರೆ.

ವಾಸ್ತವವಾಗಿ ಧೋನಿ ತಮ್ಮ ವೃತ್ತಿಜೀವನದ ಆರಂಭದ ದಿನಗಳಿಂದಲೂ ಸುಮಾರು 1200 ಗ್ರಾಂ ತೂಕದ ಬ್ಯಾಟ್ ಬಳಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆ ಬಳಿಕ ಟೀಂ ಇಂಡಿಯಾ ಪರ ಆಡಲು ಆರಂಭಿಸಿದ ಬಳಿಕ 1300 ಗ್ರಾಂ ತೂಕದ ಬ್ಯಾಟ್‌ಗಳನ್ನು ಬಳಸುತ್ತಿದ್ದ ಧೋನಿ ಇದೀಗ ತಮ್ಮ ಬ್ಯಾಟ್​ನ ತೂಕವನ್ನು ಕೊಂಚ ಇಳಿಸಿಕೊಂಡಿದ್ದಾರೆ.

4 / 6
ವರದಿಗಳ ಪ್ರಕಾರ, ಮೀರತ್ ಮೂಲದ ಕ್ರಿಕೆಟ್ ತಯಾರಿಕಾ ಕಂಪನಿ ಸ್ಯಾನ್ಸ್‌ಪರೀಲ್ಸ್ ಗ್ರೀನ್‌ಲ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್ ಇತ್ತೀಚೆಗೆ ಧೋನಿಗೆ ನಾಲ್ಕು ಬ್ಯಾಟ್‌ಗಳನ್ನು ವಿತರಿಸಿದೆ. ಧೋನಿ ಮನೆಗೆ ಬಂದಿರುವ ಈ ಹೊಸ ಬ್ಯಾಟ್ ಸುಮಾರು 1230 ಗ್ರಾಂ ತೂಗುತ್ತಿದ್ದು, ಅವುಗಳ ಗಾತ್ರವು ಮೊದಲಿನಂತೆಯೇ ಇದೆ ಎಂದು ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ, ಮೀರತ್ ಮೂಲದ ಕ್ರಿಕೆಟ್ ತಯಾರಿಕಾ ಕಂಪನಿ ಸ್ಯಾನ್ಸ್‌ಪರೀಲ್ಸ್ ಗ್ರೀನ್‌ಲ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್ ಇತ್ತೀಚೆಗೆ ಧೋನಿಗೆ ನಾಲ್ಕು ಬ್ಯಾಟ್‌ಗಳನ್ನು ವಿತರಿಸಿದೆ. ಧೋನಿ ಮನೆಗೆ ಬಂದಿರುವ ಈ ಹೊಸ ಬ್ಯಾಟ್ ಸುಮಾರು 1230 ಗ್ರಾಂ ತೂಗುತ್ತಿದ್ದು, ಅವುಗಳ ಗಾತ್ರವು ಮೊದಲಿನಂತೆಯೇ ಇದೆ ಎಂದು ಮೂಲಗಳು ತಿಳಿಸಿವೆ.

5 / 6
ಫೆಬ್ರವರಿ ಅಂತ್ಯದ ವೇಳೆಗೆ ಧೋನಿ ಸಿಎಸ್​ಕೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಸಿಎಸ್​​ಕೆಯ ತರಬೇತಿ ವೇಳಾಪಟ್ಟಿಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ತರಬೇತಿಗೆ ಸಂಬಂಧಿಸಿದಂತೆ, ಮಾರ್ಚ್ 9 ರವರೆಗೆ ಎಂಎ ಚಿದಂಬರಂ ಕ್ರೀಡಾಂಗಣವನ್ನು ಬಳಸಲು ಸಾಧ್ಯವಿಲ್ಲ ಎಂದು ಸಿಎಸ್‌ಕೆ ಆಡಳಿತ ಮಂಡಳಿ ತಿಳಿಸಿದೆ. ಏಕೆಂದರೆ ಐಪಿಎಲ್ 2025 ರ ದೃಷ್ಟಿಯಿಂದ, ಬಿಸಿಸಿಐ ಕ್ರೀಡಾಂಗಣವನ್ನು ಉತ್ತಮ ಸ್ಥಿತಿಯಲ್ಲಿಡಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

ಫೆಬ್ರವರಿ ಅಂತ್ಯದ ವೇಳೆಗೆ ಧೋನಿ ಸಿಎಸ್​ಕೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಸಿಎಸ್​​ಕೆಯ ತರಬೇತಿ ವೇಳಾಪಟ್ಟಿಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ತರಬೇತಿಗೆ ಸಂಬಂಧಿಸಿದಂತೆ, ಮಾರ್ಚ್ 9 ರವರೆಗೆ ಎಂಎ ಚಿದಂಬರಂ ಕ್ರೀಡಾಂಗಣವನ್ನು ಬಳಸಲು ಸಾಧ್ಯವಿಲ್ಲ ಎಂದು ಸಿಎಸ್‌ಕೆ ಆಡಳಿತ ಮಂಡಳಿ ತಿಳಿಸಿದೆ. ಏಕೆಂದರೆ ಐಪಿಎಲ್ 2025 ರ ದೃಷ್ಟಿಯಿಂದ, ಬಿಸಿಸಿಐ ಕ್ರೀಡಾಂಗಣವನ್ನು ಉತ್ತಮ ಸ್ಥಿತಿಯಲ್ಲಿಡಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

6 / 6
Follow us
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು