AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಸ್​ಕೆ ಸಿಇಒ

MS Dhoni Confirmed for IPL 2026: ಹೇಂದ್ರ ಸಿಂಗ್ ಧೋನಿ ಐಪಿಎಲ್ 2026 ರಲ್ಲಿ ಆಡುವುದು ಖಚಿತವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ CEO ಕಾಸಿ ವಿಶ್ವನಾಥನ್ ಈ ಬಗ್ಗೆ ಸ್ಪಷ್ಟಪಡಿಸಿದ್ದು, ಅಭಿಮಾನಿಗಳಲ್ಲಿನ ನಿವೃತ್ತಿ ಆತಂಕ ದೂರ ಮಾಡಿದ್ದಾರೆ. ಧೋನಿ ಸ್ವತಃ ತಮ್ಮ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸಿ, ಮುಂದಿನ ಆವೃತ್ತಿಯಲ್ಲಿ ಆಡುವ ಉತ್ಸಾಹ ತೋರಿದ್ದರು.

ಪೃಥ್ವಿಶಂಕರ
|

Updated on: Nov 05, 2025 | 10:35 PM

Share
ಐಪಿಎಲ್ 2026 ಆರಂಭವಾಗಲು ಇನ್ನೂ ಸಾಕಷ್ಟು ಸಮಯ ಉಳಿದಿದೆ. ಈ ಲೀಗ್​ನ ಮಿನಿ ಹರಾಜು ಕೂಡ ಮುಂದಿನ ತಿಂಗಳು ನಡೆಯಲಿದೆ. ಇದಕ್ಕಾಗಿ ಎಲ್ಲಾ ಫ್ರಾಂಚೈಸಿಗಳು ತಯಾರಿಯಲ್ಲಿ ತೊಡಗಿವೆ. ಆದರೆ ಈ ಮಿನಿ ಹರಾಜು ನಡೆಯುವುದಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಧೋನಿ ಐಪಿಎಲ್ 2026 ರಲ್ಲಿ ಆಡುತ್ತಾರೆಯೇ ಎಂಬ ಪ್ರಶ್ನೆಗೆ ಸಿಎಸ್‌ಕೆ ಸಿಇಒ ಉತ್ತರಿಸಿದ್ದಾರೆ.

ಐಪಿಎಲ್ 2026 ಆರಂಭವಾಗಲು ಇನ್ನೂ ಸಾಕಷ್ಟು ಸಮಯ ಉಳಿದಿದೆ. ಈ ಲೀಗ್​ನ ಮಿನಿ ಹರಾಜು ಕೂಡ ಮುಂದಿನ ತಿಂಗಳು ನಡೆಯಲಿದೆ. ಇದಕ್ಕಾಗಿ ಎಲ್ಲಾ ಫ್ರಾಂಚೈಸಿಗಳು ತಯಾರಿಯಲ್ಲಿ ತೊಡಗಿವೆ. ಆದರೆ ಈ ಮಿನಿ ಹರಾಜು ನಡೆಯುವುದಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಧೋನಿ ಐಪಿಎಲ್ 2026 ರಲ್ಲಿ ಆಡುತ್ತಾರೆಯೇ ಎಂಬ ಪ್ರಶ್ನೆಗೆ ಸಿಎಸ್‌ಕೆ ಸಿಇಒ ಉತ್ತರಿಸಿದ್ದಾರೆ.

1 / 5
2026 ರ ಐಪಿಎಲ್​ನಲ್ಲಿ ಧೋನಿ ಆಡುವ ಬಗ್ಗೆ ಇದುವರೆಗೆ ಅನುಮಾನಗಳಿದ್ದವು. ಆದಾಗ್ಯೂ ಈ ಬಗ್ಗೆ ಸ್ಪಷ್ಟನೆ ನೀಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಹೊಂದುತ್ತಿಲ್ಲ ಮತ್ತು ಐಪಿಎಲ್ 2026 ರಲ್ಲಿ ಅವರು ಆಡಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು , ‘ನಾವು ಐಪಿಎಲ್ 2026 ರಲ್ಲಿ ಧೋನಿ ಆಡುವುದನ್ನು ಖಂಡಿತವಾಗಿಯೂ ನೋಡುತ್ತೇವೆ" ಎಂದಿದ್ದಾರೆ.

2026 ರ ಐಪಿಎಲ್​ನಲ್ಲಿ ಧೋನಿ ಆಡುವ ಬಗ್ಗೆ ಇದುವರೆಗೆ ಅನುಮಾನಗಳಿದ್ದವು. ಆದಾಗ್ಯೂ ಈ ಬಗ್ಗೆ ಸ್ಪಷ್ಟನೆ ನೀಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಹೊಂದುತ್ತಿಲ್ಲ ಮತ್ತು ಐಪಿಎಲ್ 2026 ರಲ್ಲಿ ಅವರು ಆಡಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು , ‘ನಾವು ಐಪಿಎಲ್ 2026 ರಲ್ಲಿ ಧೋನಿ ಆಡುವುದನ್ನು ಖಂಡಿತವಾಗಿಯೂ ನೋಡುತ್ತೇವೆ" ಎಂದಿದ್ದಾರೆ.

2 / 5
ವಾಸ್ತವವಾಗಿ 2025 ರ ಐಪಿಎಲ್​ನ ತನ್ನ ಕೊನೆಯ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಮುಗಿಸಿತು. ಇದರ ನಂತರ, ಆಗ ತಂಡದ ನಾಯಕತ್ವವಹಿಸಿದ್ದ ಎಂಎಸ್ ಧೋನಿ ತಮ್ಮ ನಿವೃತ್ತಿಯ ಬಗ್ಗೆ ಯೋಚಿಸುವುದಾಗಿ ಮತ್ತು ಮುಂದಿನ ಸೀಸನ್​ನಲ್ಲಿ ಆಡಲು ಸಿದ್ಧರಿದ್ದಾರೆಯೇ ಎಂದು ಮುಂಬರುವ ತಿಂಗಳುಗಳಲ್ಲಿ ನಿರ್ಧರಿಸುವುದಾಗಿ ಹೇಳಿದ್ದರು.

ವಾಸ್ತವವಾಗಿ 2025 ರ ಐಪಿಎಲ್​ನ ತನ್ನ ಕೊನೆಯ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಮುಗಿಸಿತು. ಇದರ ನಂತರ, ಆಗ ತಂಡದ ನಾಯಕತ್ವವಹಿಸಿದ್ದ ಎಂಎಸ್ ಧೋನಿ ತಮ್ಮ ನಿವೃತ್ತಿಯ ಬಗ್ಗೆ ಯೋಚಿಸುವುದಾಗಿ ಮತ್ತು ಮುಂದಿನ ಸೀಸನ್​ನಲ್ಲಿ ಆಡಲು ಸಿದ್ಧರಿದ್ದಾರೆಯೇ ಎಂದು ಮುಂಬರುವ ತಿಂಗಳುಗಳಲ್ಲಿ ನಿರ್ಧರಿಸುವುದಾಗಿ ಹೇಳಿದ್ದರು.

3 / 5
ಈ ವಿಷಯವನ್ನು ಪರಿಗಣಿಸಲು ತಮಗೆ ನಾಲ್ಕರಿಂದ ಐದು ತಿಂಗಳುಗಳ ಕಾಲಾವಕಾಶವಿದ್ದು, ಆತುರಪಡಲು ಬಯಸುವುದಿಲ್ಲ ಎಂದು ಧೋನಿ ಹೇಳಿದ್ದರು. ತಮ್ಮ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಲು ಪ್ರತಿ ವರ್ಷ ಶೇಕಡಾ 50 ರಷ್ಟು ಕಠಿಣ ತರಬೇತಿ ಪಡೆಯಬೇಕು ಎಂದು ಹೇಳುವ ಮೂಲಕ ಧೋನಿ ಕೂಡ 2026 ರ ಐಪಿಎಲ್ ಆಡುವ ಬಗ್ಗೆ ಉತ್ಸುಕತೆ ತೋರಿಸಿದ್ದರು.

ಈ ವಿಷಯವನ್ನು ಪರಿಗಣಿಸಲು ತಮಗೆ ನಾಲ್ಕರಿಂದ ಐದು ತಿಂಗಳುಗಳ ಕಾಲಾವಕಾಶವಿದ್ದು, ಆತುರಪಡಲು ಬಯಸುವುದಿಲ್ಲ ಎಂದು ಧೋನಿ ಹೇಳಿದ್ದರು. ತಮ್ಮ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಲು ಪ್ರತಿ ವರ್ಷ ಶೇಕಡಾ 50 ರಷ್ಟು ಕಠಿಣ ತರಬೇತಿ ಪಡೆಯಬೇಕು ಎಂದು ಹೇಳುವ ಮೂಲಕ ಧೋನಿ ಕೂಡ 2026 ರ ಐಪಿಎಲ್ ಆಡುವ ಬಗ್ಗೆ ಉತ್ಸುಕತೆ ತೋರಿಸಿದ್ದರು.

4 / 5
ವಾಸ್ತವವಾಗಿ, ಧೋನಿ ಕಳೆದ ಆವೃತ್ತಿಯಲ್ಲಿ 14 ಪಂದ್ಯಗಳ 13 ಇನ್ನಿಂಗ್ಸ್‌ಗಳಲ್ಲಿ 24.50 ರ ಸರಾಸರಿ ಮತ್ತು 135.17 ರ ಸ್ಟ್ರೈಕ್ ರೇಟ್‌ನೊಂದಿಗೆ 196 ರನ್ ಬಾರಿಸಿದ್ದರು. ಈ ಅವಧಿಯಲ್ಲಿ ಅವರ ಗರಿಷ್ಠ ಸ್ಕೋರ್ ಔಟಾಗದೆ 30 ರನ್ ಆಗಿತ್ತು. ಹಾಗೆಯೇ ಅವರು ಐದು ಪಂದ್ಯಗಳಲ್ಲಿ ಅಜೇಯರಾಗಿಯು ಉಳಿದಿದ್ದರು. ಇದು ಧೋನಿಯಲ್ಲಿ ಇನ್ನೂ ಕ್ರಿಕೆಟ್ ಉಳಿದಿದೆ ಎಂಬುದನ್ನು ಸೂಚಿಸುತ್ತಿದ್ದು, ಸಿಎಸ್​ಕೆ ಸಿಇಒ ನೀಡಿರುವ ಹೇಳಿಕೆ ಪ್ರಕಾರ ಅವರು ಮುಂದಿನ ಐಪಿಎಲ್ ಆಡುವುದು ಖಚಿತವಾಗಿದೆ.

ವಾಸ್ತವವಾಗಿ, ಧೋನಿ ಕಳೆದ ಆವೃತ್ತಿಯಲ್ಲಿ 14 ಪಂದ್ಯಗಳ 13 ಇನ್ನಿಂಗ್ಸ್‌ಗಳಲ್ಲಿ 24.50 ರ ಸರಾಸರಿ ಮತ್ತು 135.17 ರ ಸ್ಟ್ರೈಕ್ ರೇಟ್‌ನೊಂದಿಗೆ 196 ರನ್ ಬಾರಿಸಿದ್ದರು. ಈ ಅವಧಿಯಲ್ಲಿ ಅವರ ಗರಿಷ್ಠ ಸ್ಕೋರ್ ಔಟಾಗದೆ 30 ರನ್ ಆಗಿತ್ತು. ಹಾಗೆಯೇ ಅವರು ಐದು ಪಂದ್ಯಗಳಲ್ಲಿ ಅಜೇಯರಾಗಿಯು ಉಳಿದಿದ್ದರು. ಇದು ಧೋನಿಯಲ್ಲಿ ಇನ್ನೂ ಕ್ರಿಕೆಟ್ ಉಳಿದಿದೆ ಎಂಬುದನ್ನು ಸೂಚಿಸುತ್ತಿದ್ದು, ಸಿಎಸ್​ಕೆ ಸಿಇಒ ನೀಡಿರುವ ಹೇಳಿಕೆ ಪ್ರಕಾರ ಅವರು ಮುಂದಿನ ಐಪಿಎಲ್ ಆಡುವುದು ಖಚಿತವಾಗಿದೆ.

5 / 5
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು