AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಸ್​ಕೆ ಸಿಇಒ

MS Dhoni Confirmed for IPL 2026: ಹೇಂದ್ರ ಸಿಂಗ್ ಧೋನಿ ಐಪಿಎಲ್ 2026 ರಲ್ಲಿ ಆಡುವುದು ಖಚಿತವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ CEO ಕಾಸಿ ವಿಶ್ವನಾಥನ್ ಈ ಬಗ್ಗೆ ಸ್ಪಷ್ಟಪಡಿಸಿದ್ದು, ಅಭಿಮಾನಿಗಳಲ್ಲಿನ ನಿವೃತ್ತಿ ಆತಂಕ ದೂರ ಮಾಡಿದ್ದಾರೆ. ಧೋನಿ ಸ್ವತಃ ತಮ್ಮ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸಿ, ಮುಂದಿನ ಆವೃತ್ತಿಯಲ್ಲಿ ಆಡುವ ಉತ್ಸಾಹ ತೋರಿದ್ದರು.

ಪೃಥ್ವಿಶಂಕರ
|

Updated on: Nov 05, 2025 | 10:35 PM

Share
ಐಪಿಎಲ್ 2026 ಆರಂಭವಾಗಲು ಇನ್ನೂ ಸಾಕಷ್ಟು ಸಮಯ ಉಳಿದಿದೆ. ಈ ಲೀಗ್​ನ ಮಿನಿ ಹರಾಜು ಕೂಡ ಮುಂದಿನ ತಿಂಗಳು ನಡೆಯಲಿದೆ. ಇದಕ್ಕಾಗಿ ಎಲ್ಲಾ ಫ್ರಾಂಚೈಸಿಗಳು ತಯಾರಿಯಲ್ಲಿ ತೊಡಗಿವೆ. ಆದರೆ ಈ ಮಿನಿ ಹರಾಜು ನಡೆಯುವುದಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಧೋನಿ ಐಪಿಎಲ್ 2026 ರಲ್ಲಿ ಆಡುತ್ತಾರೆಯೇ ಎಂಬ ಪ್ರಶ್ನೆಗೆ ಸಿಎಸ್‌ಕೆ ಸಿಇಒ ಉತ್ತರಿಸಿದ್ದಾರೆ.

ಐಪಿಎಲ್ 2026 ಆರಂಭವಾಗಲು ಇನ್ನೂ ಸಾಕಷ್ಟು ಸಮಯ ಉಳಿದಿದೆ. ಈ ಲೀಗ್​ನ ಮಿನಿ ಹರಾಜು ಕೂಡ ಮುಂದಿನ ತಿಂಗಳು ನಡೆಯಲಿದೆ. ಇದಕ್ಕಾಗಿ ಎಲ್ಲಾ ಫ್ರಾಂಚೈಸಿಗಳು ತಯಾರಿಯಲ್ಲಿ ತೊಡಗಿವೆ. ಆದರೆ ಈ ಮಿನಿ ಹರಾಜು ನಡೆಯುವುದಕ್ಕೂ ಮುನ್ನವೇ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಧೋನಿ ಐಪಿಎಲ್ 2026 ರಲ್ಲಿ ಆಡುತ್ತಾರೆಯೇ ಎಂಬ ಪ್ರಶ್ನೆಗೆ ಸಿಎಸ್‌ಕೆ ಸಿಇಒ ಉತ್ತರಿಸಿದ್ದಾರೆ.

1 / 5
2026 ರ ಐಪಿಎಲ್​ನಲ್ಲಿ ಧೋನಿ ಆಡುವ ಬಗ್ಗೆ ಇದುವರೆಗೆ ಅನುಮಾನಗಳಿದ್ದವು. ಆದಾಗ್ಯೂ ಈ ಬಗ್ಗೆ ಸ್ಪಷ್ಟನೆ ನೀಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಹೊಂದುತ್ತಿಲ್ಲ ಮತ್ತು ಐಪಿಎಲ್ 2026 ರಲ್ಲಿ ಅವರು ಆಡಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು , ‘ನಾವು ಐಪಿಎಲ್ 2026 ರಲ್ಲಿ ಧೋನಿ ಆಡುವುದನ್ನು ಖಂಡಿತವಾಗಿಯೂ ನೋಡುತ್ತೇವೆ" ಎಂದಿದ್ದಾರೆ.

2026 ರ ಐಪಿಎಲ್​ನಲ್ಲಿ ಧೋನಿ ಆಡುವ ಬಗ್ಗೆ ಇದುವರೆಗೆ ಅನುಮಾನಗಳಿದ್ದವು. ಆದಾಗ್ಯೂ ಈ ಬಗ್ಗೆ ಸ್ಪಷ್ಟನೆ ನೀಡಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಹೊಂದುತ್ತಿಲ್ಲ ಮತ್ತು ಐಪಿಎಲ್ 2026 ರಲ್ಲಿ ಅವರು ಆಡಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು , ‘ನಾವು ಐಪಿಎಲ್ 2026 ರಲ್ಲಿ ಧೋನಿ ಆಡುವುದನ್ನು ಖಂಡಿತವಾಗಿಯೂ ನೋಡುತ್ತೇವೆ" ಎಂದಿದ್ದಾರೆ.

2 / 5
ವಾಸ್ತವವಾಗಿ 2025 ರ ಐಪಿಎಲ್​ನ ತನ್ನ ಕೊನೆಯ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಮುಗಿಸಿತು. ಇದರ ನಂತರ, ಆಗ ತಂಡದ ನಾಯಕತ್ವವಹಿಸಿದ್ದ ಎಂಎಸ್ ಧೋನಿ ತಮ್ಮ ನಿವೃತ್ತಿಯ ಬಗ್ಗೆ ಯೋಚಿಸುವುದಾಗಿ ಮತ್ತು ಮುಂದಿನ ಸೀಸನ್​ನಲ್ಲಿ ಆಡಲು ಸಿದ್ಧರಿದ್ದಾರೆಯೇ ಎಂದು ಮುಂಬರುವ ತಿಂಗಳುಗಳಲ್ಲಿ ನಿರ್ಧರಿಸುವುದಾಗಿ ಹೇಳಿದ್ದರು.

ವಾಸ್ತವವಾಗಿ 2025 ರ ಐಪಿಎಲ್​ನ ತನ್ನ ಕೊನೆಯ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಮುಗಿಸಿತು. ಇದರ ನಂತರ, ಆಗ ತಂಡದ ನಾಯಕತ್ವವಹಿಸಿದ್ದ ಎಂಎಸ್ ಧೋನಿ ತಮ್ಮ ನಿವೃತ್ತಿಯ ಬಗ್ಗೆ ಯೋಚಿಸುವುದಾಗಿ ಮತ್ತು ಮುಂದಿನ ಸೀಸನ್​ನಲ್ಲಿ ಆಡಲು ಸಿದ್ಧರಿದ್ದಾರೆಯೇ ಎಂದು ಮುಂಬರುವ ತಿಂಗಳುಗಳಲ್ಲಿ ನಿರ್ಧರಿಸುವುದಾಗಿ ಹೇಳಿದ್ದರು.

3 / 5
ಈ ವಿಷಯವನ್ನು ಪರಿಗಣಿಸಲು ತಮಗೆ ನಾಲ್ಕರಿಂದ ಐದು ತಿಂಗಳುಗಳ ಕಾಲಾವಕಾಶವಿದ್ದು, ಆತುರಪಡಲು ಬಯಸುವುದಿಲ್ಲ ಎಂದು ಧೋನಿ ಹೇಳಿದ್ದರು. ತಮ್ಮ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಲು ಪ್ರತಿ ವರ್ಷ ಶೇಕಡಾ 50 ರಷ್ಟು ಕಠಿಣ ತರಬೇತಿ ಪಡೆಯಬೇಕು ಎಂದು ಹೇಳುವ ಮೂಲಕ ಧೋನಿ ಕೂಡ 2026 ರ ಐಪಿಎಲ್ ಆಡುವ ಬಗ್ಗೆ ಉತ್ಸುಕತೆ ತೋರಿಸಿದ್ದರು.

ಈ ವಿಷಯವನ್ನು ಪರಿಗಣಿಸಲು ತಮಗೆ ನಾಲ್ಕರಿಂದ ಐದು ತಿಂಗಳುಗಳ ಕಾಲಾವಕಾಶವಿದ್ದು, ಆತುರಪಡಲು ಬಯಸುವುದಿಲ್ಲ ಎಂದು ಧೋನಿ ಹೇಳಿದ್ದರು. ತಮ್ಮ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಲು ಪ್ರತಿ ವರ್ಷ ಶೇಕಡಾ 50 ರಷ್ಟು ಕಠಿಣ ತರಬೇತಿ ಪಡೆಯಬೇಕು ಎಂದು ಹೇಳುವ ಮೂಲಕ ಧೋನಿ ಕೂಡ 2026 ರ ಐಪಿಎಲ್ ಆಡುವ ಬಗ್ಗೆ ಉತ್ಸುಕತೆ ತೋರಿಸಿದ್ದರು.

4 / 5
ವಾಸ್ತವವಾಗಿ, ಧೋನಿ ಕಳೆದ ಆವೃತ್ತಿಯಲ್ಲಿ 14 ಪಂದ್ಯಗಳ 13 ಇನ್ನಿಂಗ್ಸ್‌ಗಳಲ್ಲಿ 24.50 ರ ಸರಾಸರಿ ಮತ್ತು 135.17 ರ ಸ್ಟ್ರೈಕ್ ರೇಟ್‌ನೊಂದಿಗೆ 196 ರನ್ ಬಾರಿಸಿದ್ದರು. ಈ ಅವಧಿಯಲ್ಲಿ ಅವರ ಗರಿಷ್ಠ ಸ್ಕೋರ್ ಔಟಾಗದೆ 30 ರನ್ ಆಗಿತ್ತು. ಹಾಗೆಯೇ ಅವರು ಐದು ಪಂದ್ಯಗಳಲ್ಲಿ ಅಜೇಯರಾಗಿಯು ಉಳಿದಿದ್ದರು. ಇದು ಧೋನಿಯಲ್ಲಿ ಇನ್ನೂ ಕ್ರಿಕೆಟ್ ಉಳಿದಿದೆ ಎಂಬುದನ್ನು ಸೂಚಿಸುತ್ತಿದ್ದು, ಸಿಎಸ್​ಕೆ ಸಿಇಒ ನೀಡಿರುವ ಹೇಳಿಕೆ ಪ್ರಕಾರ ಅವರು ಮುಂದಿನ ಐಪಿಎಲ್ ಆಡುವುದು ಖಚಿತವಾಗಿದೆ.

ವಾಸ್ತವವಾಗಿ, ಧೋನಿ ಕಳೆದ ಆವೃತ್ತಿಯಲ್ಲಿ 14 ಪಂದ್ಯಗಳ 13 ಇನ್ನಿಂಗ್ಸ್‌ಗಳಲ್ಲಿ 24.50 ರ ಸರಾಸರಿ ಮತ್ತು 135.17 ರ ಸ್ಟ್ರೈಕ್ ರೇಟ್‌ನೊಂದಿಗೆ 196 ರನ್ ಬಾರಿಸಿದ್ದರು. ಈ ಅವಧಿಯಲ್ಲಿ ಅವರ ಗರಿಷ್ಠ ಸ್ಕೋರ್ ಔಟಾಗದೆ 30 ರನ್ ಆಗಿತ್ತು. ಹಾಗೆಯೇ ಅವರು ಐದು ಪಂದ್ಯಗಳಲ್ಲಿ ಅಜೇಯರಾಗಿಯು ಉಳಿದಿದ್ದರು. ಇದು ಧೋನಿಯಲ್ಲಿ ಇನ್ನೂ ಕ್ರಿಕೆಟ್ ಉಳಿದಿದೆ ಎಂಬುದನ್ನು ಸೂಚಿಸುತ್ತಿದ್ದು, ಸಿಎಸ್​ಕೆ ಸಿಇಒ ನೀಡಿರುವ ಹೇಳಿಕೆ ಪ್ರಕಾರ ಅವರು ಮುಂದಿನ ಐಪಿಎಲ್ ಆಡುವುದು ಖಚಿತವಾಗಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!