AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಧೋನಿಯ ಕೊನೆಯ ಐಪಿಎಲ್ ಪಂದ್ಯ; ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್

Dhoni's IPL Future: ಚೆನ್ನೈ ಸೂಪರ್ ಕಿಂಗ್ಸ್‌ನ ಸಿಇಒ ಕಾಶಿ ವಿಶ್ವನಾಥ್ ಅವರು ಮಹೇಂದ್ರ ಸಿಂಗ್ ಧೋನಿ ಅವರ ಐಪಿಎಲ್ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ. ಧೋನಿ ಮುಂದಿನ ವರ್ಷಗಳಲ್ಲಿ ಆಡುತ್ತಾರೋ, ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಧೋನಿ ತಮ್ಮ ಕೊನೆಯ ಪಂದ್ಯವನ್ನು ಚೆನ್ನೈನಲ್ಲಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸಿಎಸ್‌ಕೆ ಧೋನಿ ಆಡಲು ಬಯಸುವವರೆಗೆ ಅವರಿಗೆ ಬಾಗಿಲು ತೆರೆದಿಡುತ್ತದೆ ಎಂದು ಕಾಶಿ ವಿಶ್ವನಾಥ್ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Nov 11, 2024 | 9:59 PM

Share
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ವರ್ಷಗಳೇ ಕಳೆದಿವೆ. ಆದಾಗ್ಯೂ ಐಪಿಎಲ್​ನಲ್ಲಿ ಆಡುವ ಮೂಲಕ ಧೋನಿ, ತಮ್ಮ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿದ್ದಾರೆ. ಆದರೆ ಕಳೆದ ಎರಡು ಆವೃತ್ತಿಗಳಿಂದ ಧೋನಿ, ಐಪಿಎಲ್​ಗೂ ಗುಡ್​ಬೈ ಹೇಳುವ ಬಗ್ಗೆ ಗಾಳಿ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಧೋನಿಯಾಗಲಿ, ಸಿಎಸ್​ಕೆ ಫ್ರಾಂಚೈಸಿಯಾಗಲಿ ಇದುವರೆಗೆ ಏನನ್ನೂ ಹೇಳಿರಲಿಲ್ಲ. ಇದೀಗ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥ್ ಈ ಬಗ್ಗೆ ಮೌನ ಮುರಿದಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ವರ್ಷಗಳೇ ಕಳೆದಿವೆ. ಆದಾಗ್ಯೂ ಐಪಿಎಲ್​ನಲ್ಲಿ ಆಡುವ ಮೂಲಕ ಧೋನಿ, ತಮ್ಮ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿದ್ದಾರೆ. ಆದರೆ ಕಳೆದ ಎರಡು ಆವೃತ್ತಿಗಳಿಂದ ಧೋನಿ, ಐಪಿಎಲ್​ಗೂ ಗುಡ್​ಬೈ ಹೇಳುವ ಬಗ್ಗೆ ಗಾಳಿ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಧೋನಿಯಾಗಲಿ, ಸಿಎಸ್​ಕೆ ಫ್ರಾಂಚೈಸಿಯಾಗಲಿ ಇದುವರೆಗೆ ಏನನ್ನೂ ಹೇಳಿರಲಿಲ್ಲ. ಇದೀಗ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥ್ ಈ ಬಗ್ಗೆ ಮೌನ ಮುರಿದಿದ್ದಾರೆ.

1 / 5
ಮಹೇಂದ್ರ ಸಿಂಗ್ ಧೋನಿ ಅವರ ಐಪಿಎಲ್ ಭವಿಷ್ಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥ್, ಧೋನಿ ಮತ್ತಷ್ಟು ಆಡುತ್ತಾರೋ ಅಥವಾ ಐಪಿಎಲ್ 2025 ಅವರ ಕೊನೆಯ ಸೀಸನ್ ಆಗಲಿದೆಯೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಆದರೆ ಧೋನಿ ತಮ್ಮ ಕೊನೆಯ ಪಂದ್ಯವನ್ನು ಚೆನ್ನೈನಲ್ಲಿ ಆಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ

ಮಹೇಂದ್ರ ಸಿಂಗ್ ಧೋನಿ ಅವರ ಐಪಿಎಲ್ ಭವಿಷ್ಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥ್, ಧೋನಿ ಮತ್ತಷ್ಟು ಆಡುತ್ತಾರೋ ಅಥವಾ ಐಪಿಎಲ್ 2025 ಅವರ ಕೊನೆಯ ಸೀಸನ್ ಆಗಲಿದೆಯೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಆದರೆ ಧೋನಿ ತಮ್ಮ ಕೊನೆಯ ಪಂದ್ಯವನ್ನು ಚೆನ್ನೈನಲ್ಲಿ ಆಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ

2 / 5
ಮಹಿ ಭಾಯಿ ಅವರು ಯಾವುದೇ ವಿಚಾರವನ್ನು ಹೆಚ್ಚಾಗಿ ಯಾರ ಬಳಿಯೂ ಹಂಚಿಕೊಳ್ಳುವುದಿಲ್ಲ. ಹೆಚ್ಚಿಗೆ ಅವರು ತಮ್ಮಲ್ಲಿಯೇ ಎಲ್ಲಾ ವಿಚಾರವನ್ನು ಇಂಟುಕೊಂಡಿರುತ್ತಾರೆ. ಆದರೆ ತಾವು ನಿರ್ಧಾರ ತೆಗೆದುಕೊಂಡ ಆ ಕ್ಷಣವೇ ಅದನ್ನು ಹೊರಹಾಕುತ್ತಾರೆ. ಸಿಎಸ್‌ಕೆ ಮೇಲಿನ ಅವರ ಉತ್ಸಾಹ ಮತ್ತು ಅವರ ಅಭಿಮಾನಿಗಳಿಗಾಗಿ, ಧೋನಿ ಅವರು ತಮ್ಮ ಕೊನೆಯ ಪಂದ್ಯವನ್ನು ಚೆನ್ನೈನಲ್ಲಿ ಆಡುವುದಾಗಿ ಅನೇಕ ಸಂದರ್ಶನಗಳಲ್ಲಿ ಹೇಳಿದ್ದಾರೆ.

ಮಹಿ ಭಾಯಿ ಅವರು ಯಾವುದೇ ವಿಚಾರವನ್ನು ಹೆಚ್ಚಾಗಿ ಯಾರ ಬಳಿಯೂ ಹಂಚಿಕೊಳ್ಳುವುದಿಲ್ಲ. ಹೆಚ್ಚಿಗೆ ಅವರು ತಮ್ಮಲ್ಲಿಯೇ ಎಲ್ಲಾ ವಿಚಾರವನ್ನು ಇಂಟುಕೊಂಡಿರುತ್ತಾರೆ. ಆದರೆ ತಾವು ನಿರ್ಧಾರ ತೆಗೆದುಕೊಂಡ ಆ ಕ್ಷಣವೇ ಅದನ್ನು ಹೊರಹಾಕುತ್ತಾರೆ. ಸಿಎಸ್‌ಕೆ ಮೇಲಿನ ಅವರ ಉತ್ಸಾಹ ಮತ್ತು ಅವರ ಅಭಿಮಾನಿಗಳಿಗಾಗಿ, ಧೋನಿ ಅವರು ತಮ್ಮ ಕೊನೆಯ ಪಂದ್ಯವನ್ನು ಚೆನ್ನೈನಲ್ಲಿ ಆಡುವುದಾಗಿ ಅನೇಕ ಸಂದರ್ಶನಗಳಲ್ಲಿ ಹೇಳಿದ್ದಾರೆ.

3 / 5
ಅವರು ಸಾಧ್ಯವಾದಷ್ಟು ಆಡಬೇಕೆಂದು ನಾವು ಬಯಸುತ್ತೇವೆ. ಧೋನಿ ಎಲ್ಲಿಯವರೆಗೆ ಆಡಲು ಬಯಸುತ್ತಾರೋ ಅಲ್ಲಿಯವರೆಗೆ ಅವರಿಗೆ ಸಿಎಸ್‌ಕೆ ಬಾಗಿಲು ತೆರೆದಿರುತ್ತದೆ. ನಾನು ಅವರನ್ನು ತಿಳಿದಿರುವ ಮತ್ತು ಅವರ ಬದ್ಧತೆಯನ್ನು ನೋಡಿ, ಅವರು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದಿದ್ದಾರೆ.

ಅವರು ಸಾಧ್ಯವಾದಷ್ಟು ಆಡಬೇಕೆಂದು ನಾವು ಬಯಸುತ್ತೇವೆ. ಧೋನಿ ಎಲ್ಲಿಯವರೆಗೆ ಆಡಲು ಬಯಸುತ್ತಾರೋ ಅಲ್ಲಿಯವರೆಗೆ ಅವರಿಗೆ ಸಿಎಸ್‌ಕೆ ಬಾಗಿಲು ತೆರೆದಿರುತ್ತದೆ. ನಾನು ಅವರನ್ನು ತಿಳಿದಿರುವ ಮತ್ತು ಅವರ ಬದ್ಧತೆಯನ್ನು ನೋಡಿ, ಅವರು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದಿದ್ದಾರೆ.

4 / 5
ಇನ್ನು ಸಿಎಸ್​ಕೆ ಫ್ರಾಂಚೈಸಿ ಮೆಗಾ ಹರಾಜಿಗೂ ಮುನ್ನ ಧೋನಿಯನ್ನು ಹೊರತುಪಡಿಸಿ ನಾಯಕ ರುತುರಾಜ್ ಗಾಯಕ್ವಾಡ್ (18 ಕೋಟಿ ರೂ.), ಮತಿಶಾ ಪತಿರಾನ (13 ಕೋಟಿ ರೂ.), ಶಿವಂ ದುಬೆ (ರೂ. 12 ಕೋಟಿ) ಮತ್ತು ರವೀಂದ್ರ ಜಡೇಜಾ (ರೂ. 18 ಕೋಟಿ) ಅವರನ್ನು ಉಳಿಸಿಕೊಂಡಿತ್ತು. ಐವರನ್ನು ಉಳಿಸಿಕೊಂಡಿರುವ ಸಿಎಸ್​ಕೆ ತನ್ನ ಪರ್ಸ್‌ನಿಂದ 65 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದು, 55 ಕೋಟಿ ರೂ. ಇಟ್ಟುಕೊಂಡು ಮೆಗಾ ಹರಾಜಿಗೆ ಪ್ರವೇಶಿಸಲಿದೆ.

ಇನ್ನು ಸಿಎಸ್​ಕೆ ಫ್ರಾಂಚೈಸಿ ಮೆಗಾ ಹರಾಜಿಗೂ ಮುನ್ನ ಧೋನಿಯನ್ನು ಹೊರತುಪಡಿಸಿ ನಾಯಕ ರುತುರಾಜ್ ಗಾಯಕ್ವಾಡ್ (18 ಕೋಟಿ ರೂ.), ಮತಿಶಾ ಪತಿರಾನ (13 ಕೋಟಿ ರೂ.), ಶಿವಂ ದುಬೆ (ರೂ. 12 ಕೋಟಿ) ಮತ್ತು ರವೀಂದ್ರ ಜಡೇಜಾ (ರೂ. 18 ಕೋಟಿ) ಅವರನ್ನು ಉಳಿಸಿಕೊಂಡಿತ್ತು. ಐವರನ್ನು ಉಳಿಸಿಕೊಂಡಿರುವ ಸಿಎಸ್​ಕೆ ತನ್ನ ಪರ್ಸ್‌ನಿಂದ 65 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದು, 55 ಕೋಟಿ ರೂ. ಇಟ್ಟುಕೊಂಡು ಮೆಗಾ ಹರಾಜಿಗೆ ಪ್ರವೇಶಿಸಲಿದೆ.

5 / 5
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ