AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Knee Surgery: ಮೊಣಕಾಲು ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಆರೋಗ್ಯ ಹೇಗಿದೆ? ಫೋಟೋ ನೋಡಿ

MS Dhoni Knee Surgery: ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ, ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಪೃಥ್ವಿಶಂಕರ
|

Updated on: Jun 04, 2023 | 3:42 PM

Share
ಮೊಣಕಾಲು ನೋವಿನಲ್ಲೇ ಇಡೀ ಐಪಿಎಲ್ ಆಡಿ ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ, ಒಂದು ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಹೇಗಿದ್ದಾರೆ ಎಂಬ ಪ್ರಶ್ನೆಗೆ ಫೋಟೋವೊಂದು ಉತ್ತರ ನೀಡಿದೆ.

ಮೊಣಕಾಲು ನೋವಿನಲ್ಲೇ ಇಡೀ ಐಪಿಎಲ್ ಆಡಿ ಚೆನ್ನೈ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಧೋನಿ, ಒಂದು ದಿನದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಹೇಗಿದ್ದಾರೆ ಎಂಬ ಪ್ರಶ್ನೆಗೆ ಫೋಟೋವೊಂದು ಉತ್ತರ ನೀಡಿದೆ.

1 / 5
ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆ ನಂತರ ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಮಾರ್ಚ್ 31 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಲೀಗ್‌ನ ಮೊದಲ ಪಂದ್ಯದಲ್ಲಿ ಧೋನಿ ಈ ಗಾಯಕ್ಕೆ ಒಳಗಾಗಿದ್ದರು. ಆ ನಂತರ ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆ ಮಾಡಿಸಿಕೊಂಡಿದ್ದ ಧೋನಿ ಜೂನ್ 1 ರ ಬೆಳಿಗ್ಗೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

2 / 5
ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೇ ಬೇಕಾಗಬಹುದು ಎಂದು ವರದಿಗಳು ಹೇಳಿದ್ದವು. ಆದರೆ ಗೆಳೆಯನೊಂದಿಗೆ ಧೋನಿ ತಿಂಡಿ ತಿನ್ನುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೋನಿ ಆರೋಗ್ಯವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದುನ್ನು ಈ ಫೋಟೋದಲ್ಲಿ ಗಮನಿಸಬಹುದಾಗಿದೆ.

ಶಸ್ತ್ರಚಿಕಿತ್ಸೆಯ ಬಳಿಕ ಧೋನಿ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೇ ಬೇಕಾಗಬಹುದು ಎಂದು ವರದಿಗಳು ಹೇಳಿದ್ದವು. ಆದರೆ ಗೆಳೆಯನೊಂದಿಗೆ ಧೋನಿ ತಿಂಡಿ ತಿನ್ನುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೋನಿ ಆರೋಗ್ಯವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದುನ್ನು ಈ ಫೋಟೋದಲ್ಲಿ ಗಮನಿಸಬಹುದಾಗಿದೆ.

3 / 5
ಧೋನಿಗೆ ಖ್ಯಾತ ಕ್ರೀಡಾ ಔಷಧ ತಜ್ಞ ಡಾ. ಡಾ.ದಿನ್ಶಾ ಪರ್ದಿವಾಲಾ ಯಶಸ್ವಿ ಸರ್ಜರಿ ಮಾಡಿದ್ದರು. ಡಾ.ಪರ್ದಿವಾಲಾ ಈ ಹಿಂದೆ ರಿಷಬ್ ಪಂತ್, ನೀರಜ್ ಚೋಪ್ರಾಗೂ ಚಿಕಿತ್ಸೆ ನೀಡಿದ್ದಾರೆ.

ಧೋನಿಗೆ ಖ್ಯಾತ ಕ್ರೀಡಾ ಔಷಧ ತಜ್ಞ ಡಾ. ಡಾ.ದಿನ್ಶಾ ಪರ್ದಿವಾಲಾ ಯಶಸ್ವಿ ಸರ್ಜರಿ ಮಾಡಿದ್ದರು. ಡಾ.ಪರ್ದಿವಾಲಾ ಈ ಹಿಂದೆ ರಿಷಬ್ ಪಂತ್, ನೀರಜ್ ಚೋಪ್ರಾಗೂ ಚಿಕಿತ್ಸೆ ನೀಡಿದ್ದಾರೆ.

4 / 5
ಇನ್ನು ಚೆನ್ನೈ ತಂಡವನ್ನು ಯಶಸ್ವಿ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಫೈನಲ್ ಪಂದ್ಯ ಮುಗಿದ ಬಳಿಕ ಉತ್ತರಿಸಿದ್ದ ಧೋನಿ, ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳಲ್ಲು ಇನ್ನು ಸಾಕಷ್ಟು ಸಮಯವಿದೆ ಎಂದಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

ಇನ್ನು ಚೆನ್ನೈ ತಂಡವನ್ನು ಯಶಸ್ವಿ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿತ್ತು. ಆದರೆ ಈ ಪ್ರಶ್ನೆಗೆ ಫೈನಲ್ ಪಂದ್ಯ ಮುಗಿದ ಬಳಿಕ ಉತ್ತರಿಸಿದ್ದ ಧೋನಿ, ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳಲ್ಲು ಇನ್ನು ಸಾಕಷ್ಟು ಸಮಯವಿದೆ ಎಂದಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

5 / 5
Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?